ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಅನಗವಾಡಿ ಗ್ರಾಮದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ (Road Accident) ಓರ್ವ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಬ್ಬು ತುಂಬಿದ ಟ್ರ್ಯಾಕ್ಟರ್ಗೆ ಸ್ವಿಫ್ಟ್ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಜಾಗದಲ್ಲೇ ಹಿಂದೂ ದೇವಾಲಯವಿತ್ತು – ಪುರಾತತ್ವ ಇಲಾಖೆ ವರದಿ ಬಹಿರಂಗ
ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಹೊನಗನಳ್ಳಿ ಮೂಲದ ನಾಲ್ವರು ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಹೋಗಿ ಬರುತ್ತಿದ್ದ ವೇಳೆ ಅನಗವಾಡಿ ಗ್ರಾಮದ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ಘಟನೆ ನಡೆದಿದೆ.
ಕಾರು ಚಾಲಕನನ್ನು ಮಲ್ಲು ಪೂಜಾರಿ ಎಂದು ಗುರುತಿಸಲಾಗಿದೆ. ಕಾರು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಬೀಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದನ್ನೂ ಓದಿ: Padma Awards 2024: ಕರ್ನಾಟಕದ 9 ಮಂದಿ ಸೇರಿ 132 ಜನರಿಗೆ ‘ಪದ್ಮ’ ಪ್ರಶಸ್ತಿ – ಸಂಪೂರ್ಣ ಪಟ್ಟಿ ಇಲ್ಲಿದೆ..