ವಿಜಯಪುರ: ಬೆಳ್ಳಂಬೆಳಗ್ಗೆ ಕಬ್ಬು (sugar kane) ಸಾಗಿಸುತ್ತಿದ್ದ ಟ್ಯಾಕ್ಟರ್ಗೆ ಹಿಂಬದಿಯಿಂದ ಕ್ರೂಸರ್ (Cruiser) ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ನಲ್ಲಿದ್ದ ಬೆಳಗಾವಿ (Belagavi) ಜಿಲ್ಲೆಯ ಅಥಣಿ ಮೂಲದ ದಂಪತಿ ಮೃತಪಟ್ಟಿದ್ದಾರೆ.
ಇತರೆ ಒಂಬತ್ತು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಮಹಾರಾಷ್ಟ್ರದ (Maharastra) ಸೊಲ್ಲಾಪುರಕ್ಕೆ ರವಾನೆ ಮಾಡಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಧೂಳಖೇಡ್ ಬಳಿಯ ಎನ್ಎಚ್ 50 ರಲ್ಲಿ ಘಟನೆ ಸಂಭವಿಸಿದೆ. ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಮೃತ ದಂಪತಿ. ಇದನ್ನೂ ಓದಿ: ಅಪ್ಪು ಗಂಧದಗುಡಿ ರಿಲೀಸ್ಗೆ ಕೌಂಟ್ಡೌನ್- ಮೊದಲ ಬಾರಿಗೆ ಅಶ್ವಿನಿ ವಿಶೇಷ ಸಂದರ್ಶನ
ಬೆಳಗಾವಿ (Belagavi) ಜಿಲ್ಲೆಯ ಅಥಣಿ ಮೂಲದ ಇವರೆಲ್ಲಾ ಕ್ರೂಸರ್ನಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು. ಆಗ ಈ ದುರಂತ ಸಂಭವಿಸಿದೆ. ಸ್ಥಳಕ್ಕೆ ಝಳಕಿ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.