ಶರ್ಟ್ ಗೆ ಇಂಕ್ ಚೆಲ್ಲಿ ರೈತರ ದುಡ್ಡನ್ನು ಎಗರಿಸಿದ್ರು ಕಳ್ಳರು! ವಿಡಿಯೋ

Public TV
1 Min Read
MND THEFT

ಮಂಡ್ಯ: ಕಳ್ಳರು ಹಾಡಹಗಲೇ ರೈತರೊಬ್ಬರ 15 ಸಾವಿರ ರೂ. ಹಣವನ್ನು ದೋಚಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿ ನಡೆದಿದೆ.

ರೈತ ನಿಂಗೇಗೌಡ ಎಂಬುವವರು ವಿಜಯ ಬ್ಯಾಂಕ್‍ನಿಂದ ಹಣ ಡ್ರಾ ಮಾಡಿ ಬರುತ್ತಿದ್ದರು. ಈ ವೇಳೆ ನಿಂಗೇಗೌಡರನ್ನು ಹಿಂಬಾಲಿಸಿದ ಕಳ್ಳರು ಶರ್ಟ್ ಮೇಲೆ ಉಪಾಯವಾಗಿ ಇಂಕ್ ಚೆಲ್ಲಿದ್ದಾರೆ. ನಂತರ ಬಟ್ಟೆಯನ್ನು ಕ್ಲೀನ್ ಮಾಡುವ ನೆಪದಲ್ಲಿ ಬಂದು ನಿಂಗೇಗೌಡರ ಶರ್ಟ್ ನಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು,  ಮಂಗಳವಾರ ಬೆಳಗ್ಗೆ 11:30ರ ಸುಮಾರಿಗೆ ಕೆಆರ್ ಪೇಟೆ ಪಟ್ಟಣದ ಲೋಕೇಶ್ ಬುಕ್ ಹೌಸ್ ಎದುರು ಘಟನೆ ನಡೆದಿದೆ. ಕೆಆರ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

https://www.youtube.com/watch?v=UT32WNCGirk

Share This Article
Leave a Comment

Leave a Reply

Your email address will not be published. Required fields are marked *