ಅಭಿಮಾನಿಗಳಿಗೆ ಧನ್ಯವಾದ ತಿಳಿಸಿ ದಿಟ್ಟ ನಿರ್ಧಾರ ಬಿಚ್ಚಿಟ್ಟ ನಟ ಯಶ್

Public TV
1 Min Read
yash 3 2

ಬೆಂಗಳೂರು: ಸಿನಿಮಾ ರಂಗದಲ್ಲಿ ಅನೇಕ ದಾಖಲೆಗಳನ್ನು ಮುರಿದು, ದೇಶ ವಿದೇಶದಲ್ಲಿ ಭಾರೀ ಸದ್ದು ಮಾಡಿದ ಕೆಜಿಎಫ್ ಸಿನಿಮಾ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದೆ. ಹೀಗಾಗಿ ಲೈವ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ನಟ ರಾಕಿಂಗ್ ಸ್ಟಾರ್ ಯಶ್ ಎಲ್ಲರಿಗೂ ಧನ್ಯವಾದ ತಿಳಿಸಿ ದಿಟ್ಟ ನಿರ್ಧಾರ ಬಿಚ್ಚಿಟ್ಟಿದ್ದಾರೆ.

ವಿಡಿಯೋವನ್ನು ಟ್ವೀಟ್ ಮಾಡಿರುವ ಯಶ್, ಜನವರಿ 8ರಂದು ನನ್ನ ಹುಟ್ಟುಹಬ್ಬ. ಕಳೆದ ಕೆಲವು ವರ್ಷಗಳಿಂದ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸುತ್ತಾ ಬಂದಿದ್ದಾರೆ. ಆದರೆ ಈ ವರ್ಷ ಜನ್ಮದಿನವನ್ನು ಆಚರಿಸುತ್ತಿಲ್ಲ. ಇದಕ್ಕೆ ಅಭಿಮಾನಿಗಳು ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ನಮ್ಮ ಕುಟುಂಬದ ಹಿರಿಯರಾದ ರೆಬಲ್ ಸ್ಟಾರ್ ಅಂಬರೀಷ್ ಅವರು ಕೆಲ ದಿನಗಳ ಹಿಂದಷ್ಟೇ ನಮ್ಮನ್ನ ಅಗಲಿದ್ದಾರೆ. ಅವರಿಗೆ ಗೌರವ ಸೂಚಿಸುವ ಉದ್ದೇಶದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾರು ಅನ್ಯತಾ ಭಾವಿಸಬೇಡಿ ಎಂದು ಕೇಳಿಕೊಂಡಿದ್ದಾರೆ.

ಯಶೋ ಯಾತ್ರೆ ಮೂಲಕ ನಿಮ್ಮ ಗ್ರಾಮಗಳಿಗೆ, ನಗರಗಳಿಗೆ ಭೇಟಿ ನೀಡುತ್ತೇವೆ. ಅಲ್ಲಿಯವರೆಗೂ ಸಹಕಾರ ನೀಡಿ ಎಂದ ಅವರು, ನನ್ನ ಅಭಿಪ್ರಾಯ ಹಾಗೂ ಭಾವನೆಯನ್ನು ಗೌರವಿಸುತ್ತೀರಾ ಎಂದು ನಂಬಿರುವೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಈ ವರ್ಷದಲ್ಲಿ ಸಾಧನೆಗಳು ನಿಮ್ಮದಾಗಲಿ ಎಂದು ಹಾರೈಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *