ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅವರು ಕುಸಿದು ಬಿದ್ದ ತಮ್ಮ ಅಭಿಮಾನಿಯನ್ನು ಕೈ ಹಿಡಿದು ಎತ್ತಿ ಮಾನವೀಯತೆ ಮೆರೆದಿದ್ದಾರೆ.
ನೆಲಮಂಗಲದ ಮಾದವಾರದ ನೈಸ್ ಮೈದಾನದಲ್ಲಿ ನಡೆಯುತ್ತಿರುವ ದಾಸನಪುರ ಕ್ರಿಕೆಟ್ ಲೀಗ್ ಪಂದ್ಯಕ್ಕೆ ಚಾಲನೆ ನೀಡಲು ಯಶ್ ಆಗಮಿಸಿದ್ದರು. ಈ ವೇಳೆ ನಟ ಯಶ್ ಅವರನ್ನು ನೋಡಲು ಅಭಿಮಾನಿಗಳಿಂದ ನೂಕು ನುಗ್ಗಲು ಉಂಟಾಯಿತು.
ಈ ವೇಳೆ ಅಭಿಮಾನಿಯೊಬ್ಬರು ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಯಶ್, ಕೂಡಲೇ ಅವರನ್ನು ಕೈ ಹಿಡಿದು ಮೇಲಕ್ಕೆ ಎತ್ತಿ ಮಾನವೀಯತೆ ಮೆರೆದಿದ್ದಾರೆ. ಬಳಿಕ ಕುಸಿದು ಬಿದ್ದ ಅಭಿಮಾನಿ ಜೊತೆ ಸೆಲ್ಫಿ ತೆಗೆದುಕೊಂಡು ಯಶ್ ಅವರ ಆಸೆಯನ್ನು ಪೂರೈಸಿದ್ದಾರೆ.
ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ಆಯೋಜಿಸಿರುವ ದಾಸನಪುರ ಕ್ರಿಕೆಟ್ ಪ್ರೀಮಿಯರ್ ಲೀಗ್ಗೆ ನಟಿ ಹರಿಪ್ರಿಯಾ ಹಾಗೂ ಕ್ರಿಕೆಟಿಗ ದೊಡ್ಡ ಗಣೇಶ್ ಚಾಲನೆ ನೀಡಿದ್ದರು. ಯಶ್ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv