Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಫೇಕ್‌ ನ್ಯೂಸ್‌ ಬಗ್ಗೆ ಹಿಟ್‌ಮ್ಯಾನ್‌ ಸ್ಪಷ್ಟನೆ – ಟಿ20 ವಿಶ್ವಕಪ್‌ಗೆ ಹೀಗಿದೆ ಭಾರತದ ಸಂಭಾವ್ಯ ತಂಡ!

Public TV
Last updated: April 18, 2024 4:44 pm
Public TV
Share
3 Min Read
Rohit Sharma 2 2
SHARE

ಮುಂಬೈ: ವೆಸ್ಟ್‌ ಇಂಡೀಸ್‌ ಮತ್ತು ಅಮೆರಿಕ ಜಂಟಿ ಆತಿಥ್ಯದಲ್ಲಿ 2024ರ ಐಸಿಸಿ ಟಿ20 ವಿಶ್ವಕಪ್‌ (T20 World Cup 2024) ಟೂರ್ನಿ ನಡೆಯಲಿದೆ. ಈ ಟೂರ್ನಿಗೆ ಭಾರತ ತಂಡವನ್ನು ಏಪ್ರಿಲ್‌ ಅಂತ್ಯದಲ್ಲಿ ಅಜಿತ್‌ ಅಗರ್ಕರ್‌ ಸಾರಥ್ಯದ ಆಯ್ಕೆ ಸಮಿತಿ ಪ್ರಕಟಿಸುವ ಸಾಧ್ಯತೆ ಇದೆ. ಈ ನಡುವೆ ಬಿಸಿಸಿಐ (BCCI) ಈಗಾಗಲೇ ಭಾರತ ತಂಡದ 15 ಸಂಭಾವ್ಯ ಆಟಗಾರರ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: T20 World Cup 2024 ವೇಳಾಪಟ್ಟಿ ಬಿಡುಗಡೆ; ಜೂ.9ಕ್ಕೆ ನ್ಯೂಯಾರ್ಕ್‌ನಲ್ಲಿ ಇಂಡೋ-ಪಾಕ್‌ ಕದನ

TEAM INDIA

ಟಿ20 ವಿಶ್ವಕಪ್‌ ಟೂರ್ನಿಯ ನಿಮಿತ್ತ 2024ರ ಐಪಿಎಲ್‌ (IPL 2024) ಟೂರ್ನಿಯು ಎಲ್ಲಾ ಆಟಗಾರರಿಗೆ ಅತ್ಯಂತ ಮಹತ್ವದ್ದಾಗಿದೆ. ಈ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಆಟಗಾರರನ್ನ ಟಿ20 ವಿಶ್ವಕಪ್‌ ಟೂರ್ನಿಗೆ ಭಾರತ ತಂಡ ಪರಿಗಣಿಸುವ ಸಾಧ್ಯತೆಯಿದೆ. ಅಂದ ಹಾಗೆ ರೋಹಿತ್‌ ಶರ್ಮಾ (Rohit Sharma) ತಂಡವನ್ನು ಮುನ್ನಡೆಸುವುದು ಬಹುತೇಕ ಖಚಿತವಾಗಿದ್ದು, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್, ಜಸ್ಪ್ರೀತ್‌ ಬುಮ್ರಾ ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಇದನ್ನೂ ಓದಿ: RCBಗೆ ‘ಹೆಡ್ಡೇಕ್’- ತನ್ನದೇ ದಾಖಲೆ ಮುರಿದು IPLನಲ್ಲಿ ಮತ್ತೆ ಇತಿಹಾಸ ನಿರ್ಮಿಸಿದ ಹೈದರಾಬಾದ್

Team India 4

ಫೇಕ್‌ ನ್ಯೂಸ್‌ ಬಗ್ಗೆ ಹಿಟ್‌ಮ್ಯಾನ್‌ ಸ್ಪಷ್ಟನೆ:
2024ರ ಟಿ20 ವಿಶ್ಚಕಪ್‌ ಟೂರ್ನಿಯಲ್ಲಿ ರೋಹಿತ್‌ ಜೊತೆಗೆ ಆರಂಭಿಕನಾಗಿ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಈ ಬಗ್ಗೆ ಅಜಿತ್‌ ಅಗರ್ಕರ್‌ ಹಾಗೂ ರಾಹುಲ್‌ ದ್ರಾವಿಡ್‌ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವರದಿಗಳು ಕೇಳಿಬರುತ್ತಿದ್ದಂತೆ ಅದಕ್ಕೆ ರೋಹಿತ್‌ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಯಾರನ್ನೂ ಭೇಟಿ ಮಾಡಿಲ್ಲ, ಈಗ ಹರಿದಾಡುತ್ತಿರುವ ಮಾಹಿತಿಗಳೆಲ್ಲವೂ ಸುಳ್ಳು. ಅಜಿತ್‌ ಅಗರ್ಕರ್‌ ದುಬೈನಲ್ಲಿ ಗಾಲ್ಫ್‌ ಆಡ್ತಿದ್ದಾರೆ, ದ್ರಾವಿಡ್‌ (Rahul Dravid) ಬೆಂಗಳೂರಿನಲ್ಲಿ ತಮ್ಮ ಮಕ್ಕಳ ಆಟ ನೋಡುತ್ತಿದ್ದಾರೆ. ಅಜಿತ್, ದ್ರಾವಿಡ್‌ ಅಥವಾ ನನ್ನಿಂದ ಬಂದರೆ ಮಾತ್ರ ಅದು ಅಧಿಕೃತವಾಗಿರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊನೇ ಓವರ್‌ನಲ್ಲಿ 26 ರನ್‌ ಚಚ್ಚಿಸಿಕೊಂಡ ಪಾಂಡ್ಯ – ಹಾರ್ದಿಕ್‌ ಕಳಪೆ ಬೌಲಿಂಗ್‌ಗೆ ಫುಲ್‌ ಕ್ಲಾಸ್‌

Team India 2 1

ಪಾಂಡ್ಯ ಆಯ್ಕೆ ಸ್ಪಷ್ಟತೆ ಇಲ್ಲ:
ಆಲ್‌ರೌಂಡರ್‌ಗಳ ಸ್ಥಾನಕ್ಕೆ ಹಾರ್ದಿಕ್‌ ಪಾಂಡ್ಯ, ಶಿವಂ ದುಬೆ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ನಡುವೆ ಪೈಪೋಟಿ ನಡೆದಿದೆ. ಸಿಎಸ್‌ಕೆ ತಂಡದ ಪರ ಅಬ್ಬರಿಸುತ್ತಿರುವ ಶಿವಂ ದುಬೆ ಅವರನ್ನ ಆಯ್ಕೆ ಮಾಡುವ ವಿಷಯದಲ್ಲೂ ಬಿಸಿಸಿಐ ಸ್ಪಷ್ಟತೆ ಹೊಂದಿದೆ. ಏಕೆಂದರೆ ಚೆನ್ನೈ ಸೂಪರ್‌ ಕಿಂಗ್ಸ್ ತಂಡದಲ್ಲಿ ದುಬೆ ಬ್ಯಾಟಿಂಗ್‌ನಲ್ಲಿ ಗಮನ ಸೆಳೆದಿದ್ದಾರೆ. ಅಲ್ಲದೇ ಐಪಿಎಲ್‌ಗೂ ಮುನ್ನ ಅಫ್ಘಾಸ್ತಾನದ ವಿರುದ್ಧದ ಟಿ20 ಸರಣಿಯಲ್ಲಿ ಶಿವಂ ದುಬೆ ಬ್ಯಾಕ್‌ ಟು ಬ್ಯಾಕ್‌ ಫಿಫ್ಟಿ ಸಿಡಿಸಿ ಗಮನ ಸೆಳೆದಿದ್ದರು. ಆದ್ರೆ ಕಳಪೆ ಬೌಲಿಂಗ್‌ ಫಾರ್ಮ್‌ನಲ್ಲಿರುವ ಹಾರ್ದಿಕ್‌ ಪಾಂಡ್ಯ ಅವರು 6 ಪಂದ್ಯಗಳಲ್ಲಿ ಒಂದೇ ಒಂದು ಫಿಫ್ಟಿಯನ್ನೂ ಬಾರಿಸಿಲ್ಲ. ಹಾಗಾಗಿ ಅವರ ಆಯ್ಕೆ ಬಗ್ಗೆ ಇನ್ನೂ ಸ್ಪಷ್ಟತೆಯಿಲ್ಲ ಎಂದು ಹೇಳಲಾಗಿದೆ.

Team India 6

ಶಾರ್ಟ್‌ಲಿಸ್ಟ್‌ ವಿಕೆಟ್‌ ಕೀಪರ್ಸ್‌:
ವಿಕೆಟ್‌ ಕೀಪರ್‌-ಬ್ಯಾಟ್ಸ್‌ಮನ್‌ಗಳ ಸ್ಥಾನಕ್ಕೆ ರಿಷಭ್‌ ಪಂತ್‌, ಕೆ.ಎಲ್‌ ರಾಹುಲ್‌ ಹಾಗೂ ಸಂಜು ಸ್ಯಾಮ್ಸನ್‌ ಅವರನ್ನು ಬಿಸಿಸಿಐ ಶಾರ್ಟ್‌ ಲಿಸ್ಟ್‌ ಮಾಡಿದೆ. ಇದರಲ್ಲಿ ಒಬ್ಬರನ್ನು ಮೊದಲ ಆಯ್ಕೆಯ ವಿಕೆಟ್‌ ಕೀಪರ್‌ ಆಯ್ಕೆ ಮಾಡಬಹುದು. ಕಳೆದ ವರ್ಷ ಏಕದಿನ ಏಷ್ಯಾಕಪ್‌, ಏಕದಿನ ವಿಶ್ವಕಪ್‌ ಟೂರ್ನಿಗಳಿಂದ ವಂಚಿತರಾಗಿದ್ದ ಸಂಜು ಸ್ಯಾಮ್ಸನ್‌ ಈ ಬಾರಿಯಾದರೂ ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆದುಕೊಳ್ಳುತ್ತಾರಾ ಎಂಬುದನ್ನ ಕಾದು ನೋಡಬೇಕಿದೆ. ಇದನ್ನೂ ಓದಿ: IPL 2024: ಮಕ್ಕಳ ಶಾಲಾ ಶುಲ್ಕಕ್ಕೆ ಕೂಡಿಟ್ಟ ಹಣದಲ್ಲೇ ಟಿಕೆಟ್‌ ಖರೀದಿಸಿದ ಧೋನಿ ಅಭಿಮಾನಿ!

Team India

20 ಸದಸ್ಯರ ಭಾರತ ಸಂಭಾವ್ಯ ತಂಡ:
ಬ್ಯಾಟರ್ಸ್‌: ರೋಹಿತ್‌ ಶರ್ಮಾ, ಯಶಸ್ವಿ ಜೈಸ್ವಾಲ್‌, ಶುಭಮನ್ ಗಿಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ರಿಂಕು ಸಿಂಗ್‌
ಆಲ್‌ರೌಂಡರ್‌ಗಳು: ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಶಿವಂ ದುಬೆ, ಅಕ್ಷರ್‌ ಪಟೇಲ್‌
ಸ್ಪಿನ್ನರ್‌ಗಳು: ಕುಲ್ದೀಪ್‌ ಯಾದವ್‌, ಯಜುವೇಂದ್ರ ಚಾಹಲ್‌, ರವಿ ಬಿಷ್ಣೋಯಿ
ವಿಕೆಟ್‌ ಕೀಪರ್‌-ಬ್ಯಾಟರ್ಸ್‌: ರಿಷಭ್‌ ಪಂತ್‌, ಕೆ.ಎಲ್‌ ರಾಹುಲ್‌, ಸಂಜು ಸ್ಯಾಮ್ಸನ್‌
ವೇಗಿಗಳು: ಜಸ್ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌, ಅರ್ಷ್‌ದೀಪ್‌ ಸಿಂಗ್, ಅವೇಶ್‌ ಖಾನ್‌

TAGGED:Rohit SharmaSanju SamsonT20 World CupTeam indiavirat kohliಟಿ20 ವಿಶ್ವಕಪ್ಟೀಂ ಇಂಡಿಯಾರೋಹಿತ್ ಶರ್ಮಾವಿರಾಟ್ ಕೊಹ್ಲಿಸಂಜು ಸ್ಯಾಮ್ಸನ್
Share This Article
Facebook Whatsapp Whatsapp Telegram

Cinema Updates

vivek oberoi
ಯಶ್ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ವಿವೇಕ್ ಒಬೆರಾಯ್?
8 hours ago
prabhas tripti dimri
‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ
9 hours ago
karunya ram
ಕಾಮಾಕ್ಯ ದೇಗುಲಕ್ಕೆ ನಟಿ ಕಾರುಣ್ಯ ರಾಮ್ ಭೇಟಿ
10 hours ago
RAGINI 4
‘ಜಾವಾ’ ಸಿನಿಮಾದಲ್ಲಿ ರಾಗಿಣಿ ಬೋಲ್ಡ್ ಅವತಾರ- ಪೋಸ್ಟರ್ ರಿವೀಲ್
11 hours ago

You Might Also Like

SRH
Cricket

ಸನ್‌ ರೈಸರ್ಸ್‌ಗೆ 110 ರನ್‌ಗಳ ಭರ್ಜರಿ ಗೆಲುವು – ಸೋಲಿನ ವಿದಾಯ ಹೇಳಿದ ಕೆಕೆಆರ್‌

Public TV
By Public TV
3 hours ago
Pakistan Rain
Latest

ಪಾಕಿಸ್ತಾನದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ – 20 ಜನ ಸಾವು, 150ಕ್ಕೂ ಹೆಚ್ಚು ಮಂದಿಗೆ ಗಾಯ!

Public TV
By Public TV
4 hours ago
Shiekh Hasina
Latest

ಬಾಂಗ್ಲಾದೇಶವನ್ನ ಅಮೆರಿಕಕ್ಕೆ ಮಾರಾಟ ಮಾಡಿದ್ದಾರೆ – ಯೂನಸ್ ವಿರುದ್ಧ ಶೇಖ್ ಹಸೀನಾ ಬಾಂಬ್‌

Public TV
By Public TV
4 hours ago
Corona
Bengaluru City

ಮತ್ತೆ ವಕ್ಕರಿಸಿಕೊಂಡ ಕೊರೊನಾ – ಸೋಮವಾರದಿಂದ ಟೆಸ್ಟ್ ಹೆಚ್ಚಳ, ಮುಂಜಾಗ್ರತೆ ವಹಿಸುವಂತೆ ಕರೆ

Public TV
By Public TV
5 hours ago
Heinrich Klaasen
Cricket

ಕ್ಲಾಸೆನ್‌ ಕ್ಲಾಸಿಕ್‌ ಶತಕ – ಸನ್‌ ರೈಸರ್ಸ್‌ ಆರ್ಭಟಕ್ಕೆ ದಾಖಲೆಗಳು ಧೂಳಿಪಟ

Public TV
By Public TV
6 hours ago
Udupi Rain 1
Districts

ಉಡುಪಿಯಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ – ರೆಡ್ ಅಲರ್ಟ್ ಘೋಷಣೆ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?