Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಹಿತ್‌ ವೆಮುಲಾ ದಲಿತ ವಿದ್ಯಾರ್ಥಿಯಲ್ಲ – ತನಿಖೆ ಪೂರ್ಣ, ಹೈಕೋರ್ಟ್‌ಗೆ ಅಂತಿಮ ವರದಿ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ರೋಹಿತ್‌ ವೆಮುಲಾ ದಲಿತ ವಿದ್ಯಾರ್ಥಿಯಲ್ಲ – ತನಿಖೆ ಪೂರ್ಣ, ಹೈಕೋರ್ಟ್‌ಗೆ ಅಂತಿಮ ವರದಿ ಸಲ್ಲಿಕೆ

Court

ರೋಹಿತ್‌ ವೆಮುಲಾ ದಲಿತ ವಿದ್ಯಾರ್ಥಿಯಲ್ಲ – ತನಿಖೆ ಪೂರ್ಣ, ಹೈಕೋರ್ಟ್‌ಗೆ ಅಂತಿಮ ವರದಿ ಸಲ್ಲಿಕೆ

Public TV
Last updated: May 3, 2024 8:42 pm
Public TV
Share
3 Min Read
rohith vemula
SHARE

– ಎಲ್ಲಾ ಆರೋಪಿಗಳಿಗೆ ಕ್ಲೀನ್‌ ಚಿಟ್‌
– ತೆಲಂಗಾಣ ಪೊಲೀಸರಿಂದ ನ್ಯಾಯಾಲಯಕ್ಕೆ ವರದಿ ಸಲ್ಲಿಕೆ

ಹೈದರಾಬಾದ್‌: ರೋಹಿತ್‌ ವೆಮುಲಾ (Rohit Vemula) ದಲಿತ ವಿದ್ಯಾರ್ಥಿಯಲ್ಲ. ತನ್ನ ಜಾತಿಯ (Caste)  ಗುರುತು ಬಹಿರಂಗವಾಗಬಹುದು ಎಂಬ  ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತೆಲಂಗಾಣ ಪೊಲೀಸರು (Telangana Police)  ಹೈಕೋರ್ಟ್‌ಗೆ ತಿಳಿಸಿ ಪ್ರಕರಣದ ತನಿಖೆಯನ್ನು ಕೊನೆಗೊಳಿಸಿದ್ದಾರೆ.

2016ರ ಜನವರಿಯಲ್ಲಿ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ರೋಹಿತ್ ವೆಮುಲಾ ಅವರ ಆತ್ಮಹತ್ಯೆ ಬಳಿಕ ವಿಶ್ವವಿದ್ಯಾನಿಲಯಗಳಲ್ಲಿ ದಲಿತರ ಮೇಲಿನ ತಾರತಮ್ಯದ ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾರಣವಾಗಿತ್ತು.

ವೆಮುಲಾ ಕುಟುಂಬ ದಲಿತರು (Dalit) ಎಂಬುದನ್ನು ಸಾಬೀತು ಪಡಿಸಲು ಯಾವುದೇ ಸಾಕ್ಷ್ಯಾಧಾರಗಳು ಸಿಗದ ಕಾರಣ ಪೊಲೀಸರು ಈಗ ಪ್ರಕರಣದ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ವೆಮುಲಾ ಕುಟುಂಬದ ಜಾತಿ ಪ್ರಮಾಣ ಪತ್ರ ನಕಲಿಯಾಗಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಅಂತಿಮ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಗಾಂಧಿ ಕುಟುಂಬಕ್ಕೆ ರಾಯ್‌ಬರೇಲಿ ನಂಟು – ಇಲ್ಲಿದೆ ಕುತೂಹಲಕಾರಿ ಘಟ್ಟಗಳು

rohith vemula protest 2

ಹೈಕೋರ್ಟ್‌ ಈಗ ಕೆಳ ನ್ಯಾಯಾಲಯದಲ್ಲಿ ಈ ವರದಿಗೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸುವಂತೆ  ವೆಮುಲಾ ಕುಟುಂಬಸ್ಥರಿಗೆ ಸೂಚಿಸಿದೆ.

ಸಿಕಂದರಾಬಾದ್‌ನ ಮಾಜಿ ಸಂಸದ ಬಂಡಾರು ದತ್ತಾತ್ರೇಯ, ಎಂಎಲ್‌ಸಿ ಎನ್. ರಾಮಚಂದರ್ ರಾವ್, ಹೈದರಾಬಾದ್ ವಿಶ್ವವಿದ್ಯಾಲಯದ ಉಪಕುಲಪತಿ ಅಪ್ಪಾ ರಾವ್, ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಎಬಿವಿಪಿ ಮುಖಂಡರು ಸೇರಿದಂತೆ ಹಲವಾರನ್ನು ಪ್ರಕರಣದ ಆರೋಪಿಗಳನ್ನಾಗಿ ಮಾಡಲಾಗಿತ್ತು.ಈಗ ಪೊಲೀಸರು ಎಲ್ಲರನ್ನು ಆರೋಪದಿಂದ ಕೈ ಬಿಟ್ಟಿದ್ದಾರೆ.

ರೋಹಿತ್ ಅವರ ಸಹೋದರ ರಾಜಾ ವೇಮುಲಾ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ಇದೊಂದು ಅಸಂಬದ್ಧ ವರದಿ. ನನ್ನ ಭಾವನೆಗಳನ್ನು ಹೇಗೆ ವ್ಯಕ್ತಪಡಿಸಬೇಕೆಂದು ನನಗೆ ತಿಳಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇ 4 ರಂದು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಭೇಟಿ ಮಾಡಲು ಕುಟುಂಬ ಮುಂದಾಗಿದೆ. 2017 ರಲ್ಲಿ ಪೊಲೀಸರು ತನಿಖೆಯನ್ನು ನಿಲ್ಲಿಸಿದ್ದಾರೆ ಮತ್ತು ಜಾತಿ ದೃಢೀಕರಣದ ವಿಷಯದಲ್ಲಿ 15 ಸಾಕ್ಷಿಗಳ ಹೇಳಿಕೆಗಳನ್ನು ನಿರ್ಲಕ್ಷಿಸಿದ್ದಾರೆ ಎಂದು ಅವರು ಟೀಕಿಸಿದರು. ಇದನ್ನೂ ಓದಿ: ಚುನಾವಣೆ ಕಾರಣಕ್ಕೆ ಮೇ 7 ರಂದು ಕೇಜ್ರಿವಾಲ್‌ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ: ಸುಪ್ರೀಂ

rohith vemula protest 1

2015ರಲ್ಲಿ ನಡೆದ ಪ್ರಕರಣ ಏನು? ಆರೋಪ ಏನು?
26 ವರ್ಷದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೆಮುಲಾ ಸೇರಿದಂತೆ ವಿವಿಯ ಐದು ವಿದ್ಯಾರ್ಥಿಗಳು ಪ್ರತಿಭಟನೆಯೊಂದರ ವೇಳೆ ಎಬಿವಿಪಿ ವಿದ್ಯಾರ್ಥಿ ನಾಯಕರ  ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿ ಬಂದಿತ್ತು. ನಂತರ ಐವರನ್ನೂ ಕಾಲೇಜಿನಿಂದ ಅಮಾನತು ಮಾಡಲಾಗಿತ್ತು. ವಿವಿ ವಿಚಾರಣೆ ಬಳಿಕ ರೋಹಿತ್ ಸೇರಿ ಎಲ್ಲರನ್ನೂ ಆರೋಪ ಮುಕ್ತಗೊಳಿಸಲಾಗಿತ್ತು.

ಸಿಕಂದರಬಾದ್ ಬಿಜೆಪಿ ಸಂಸದ ಹಾಗೂ ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಿ, ವಿವಿ ಜಾತಿವಾದಿಗಳ, ಉಗ್ರವಾದಿಗಳ, ದೇಶವಿರೋಧಿ ರಾಜಕೀಯದ ಬೀಡಾಗಿದ್ದು, ಎಬಿವಿಪಿ ಮುಖಂಡನ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳದೆ ವಿವಿ ಮೂಕಪ್ರೇಕ್ಷಕನಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಗೆ ಪತ್ರ ಬರೆದು ದೂರು ನೀಡಿದ್ದರು.

ಈ ಪತ್ರದ ಬಳಿಕ ಮಾನವ ಸಂಪನ್ಮೂಲ ಸಚಿವಾಲಯ ವಿವಿಗೆ ಪತ್ರ ಬರೆದು ವಿದ್ಯಾರ್ಥಿಗಳ ಮೇಲೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಶ್ನೆ ಮಾಡಿತ್ತು. ಪತ್ರದ ಹಿನ್ನೆಲೆಯಲ್ಲಿ ವಿವಿ ಡಿ. 21ರಂದು ರೋಹಿತ್ ಮತ್ತು ಇತರ ನಾಲ್ವರನ್ನು ಅಮಾನತುಗೊಳಿಸಿ, ಹಾಸ್ಟೆಲ್ ಮತ್ತು ಕೆಫೆಟೇರಿಯಾದಿಂದಲೂ ಹೊರ ಹಾಕಿತ್ತು. ಅಮಾನತು ಮಾಡಿದ್ದಕ್ಕೆ 2016ರ ಜನವರಿ 17 ರಂದು ರೋಹಿತ್‌ ವೆಮುಲಾ ಮನನೊಂದು ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ವಿರೋಧ ಪಕ್ಷಗಳು ದೇಶವ್ಯಾಪಿ ಪ್ರತಿಭಟನೆ ನಡೆಸಿದ್ದವು.

ರೋಹಿತ್‌ ವೆಮುಲಾ ಪಿಎಚ್‌ಡಿ ಸಂಶೋಧನೆ ಮಾಡುತ್ತಿದ್ದಾಗ ಪ್ರತಿ ತಿಂಗಳು 25 ಸಾವಿರ ರೂ. ಫೆಲೋಶಿಪ್‌ ಪಡೆಯುತ್ತಿದ್ದರು. ನಿಗದಿತ ಸಮಯದಲ್ಲಿ ಕೆಲಸ ಪೂರ್ಣಗೊಳ್ಳದ ಕಾರಣ ವೆಮುಲಾಗೆ ಬರುತ್ತಿದ್ದ ಫೆಲೋಶಿಪ್‌ ನಿಲ್ಲಿಸಲಾಗಿತ್ತು.

TAGGED:dalithigh courtRohit Vemulaತೆಲಂಗಾಣದಲಿತರೋಹಿತ್‌ ವೆಮುಲಾಹೈಕೋರ್ಟ್
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

DK Shivakumar 9
Haveri

ಮುಂದಿನ ಚುನಾವಣೆಯಲ್ಲಿ ನಮಗೆ 141 ಸೀಟು ಬರುತ್ತೆ, ಬರೆದಿಟ್ಟುಕೊಳ್ಳಿ: ಡಿಕೆಶಿ

Public TV
By Public TV
26 minutes ago
Mahashivratri Fasting Vrat
Bengaluru City

Mahashivratri 2026: ಉಪವಾಸ ವ್ರತ ಹೇಗೆ ತೆಗೆದುಕೊಳ್ಳಬೇಕು?- ಯಾವಾಗ ಉಪವಾಸ ಮುರಿಯಬೇಕು?

Public TV
By Public TV
1 hour ago
Basavaraj Bommai
Bengaluru City

ಬಡವರ ತಲೆ ಮೇಲೆ ಆರ್ಥಿಕ ಭಾರ ಹೇರಿದ ಶೂನ್ಯ ಸಾಧನೆ ಸಮಾವೇಶ: ಬಸವರಾಜ ಬೊಮ್ಮಾಯಿ

Public TV
By Public TV
1 hour ago
kisan
Bengaluru City

ಕರ್ನಾಟಕದ 22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

Public TV
By Public TV
1 hour ago
Siddaramaiah 1 3
Districts

ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲೂ ರಾಜ್ಯ ದಾಖಲೆ ವೇಗದಲ್ಲಿ ಸಾಗುತ್ತಿದೆ: ಸಿಎಂ

Public TV
By Public TV
2 hours ago
Priyank Kharge 1
Bengaluru City

ತಾಂತ್ರಿಕ ತೊಡಕುಗಳ ನಿವಾರಣೆ ಮೂಲಕ ಇ-ಸ್ವತ್ತು ವಿತರಣೆಗೆ ವೇಗ: ಸಚಿವ ಪ್ರಿಯಾಂಕ್ ಖರ್ಗೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?