ಭೀಮಾತೀರದಲ್ಲಿ ಮತ್ತೆ ಗುಂಡಿನ ಮೊರೆತ – ಪಿಎಸ್‍ಐ ಮೇಲೆ ಫೈರಿಂಗ್ ಮಾಡಿದ ಹಂತಕ ಸಾವು

Public TV
1 Min Read
BIJ 1

ವಿಜಯಪುರ: ಭೀಮಾ ತೀರದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದ್ದು, ಪೊಲೀಸರ ಗುಂಡೇಟಿಗೆ ಹಂತಕ ಬಲಿಯಾಗಿದ್ದಾನೆ.

ಚಡಚಣ ಪಿಎಸ್‍ಐ ಗೋಪಾಲ್ ಹಳ್ಳೂರ್ ಅವರ ಮೇಲೆ ಭೀಮಾ ತೀರದ ಹಂತಕ ಧರ್ಮರಾಜ್ ಚಡಚಣ ಫೈರಿಂಗ್ ಮಾಡಿದ್ದಾನೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಕೊಂಕಣಗಾಂವ್ ಗ್ರಾಮದ ಬಳಿ ಇಂದು ಬೆಳಗ್ಗೆ 5-30 ರ ಸುಮಾರಿಗೆ ಗುಂಡಿನ ದಾಳಿ ನಡೆದಿದೆ.

BIJ 6 2

ಹಂತಕ ಮನೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟಿದ್ದಾನೆ ಎನ್ನುವ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಇಂದು ಬೆಳಗ್ಗೆ ದಾಳಿ ನಡೆಸಿದ್ದರು. ಈ ವೇಳೆ ಹಂತಕನೇ ಪೊಲೀಸರಿಗೆ ಗುಂಡು ಹಾರಿಸಿ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದ್ದಾನೆ. ಪೊಲೀಸ್ ಹಾಗೂ ಹಂತಕನ ಮಧ್ಯೆ ಗುಂಡಿನ ಚಕಮಕಿ ನಡೆದಿದೆ.

ಧರ್ಮರಾಜ್ ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ಇದಕ್ಕೆ ಪ್ರತ್ಯುತ್ತರವಾಗಿ ಪಿಎಸ್‍ಐ ಗೋಪಾಲ್ ಹಳ್ಳೂರ್ ಕೂಡ ಧರ್ಮರಾಜ್ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ಗುಂಡೇಟಿನಿಂದ ಗಾಯಗೊಂಡ ಪಿಎಸ್‍ಐ ಗೋಪಾಲ್ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

BIJ 5 2

BIJ 7 1

BIJ 8 1

BIJ 9 1

BIJ 10

BIJ 11

BIJ 13

BIJ 14

BIJ 3 2

BIJ 4 2

BIJ 15

BIJ 16

BIJ 17

BIJ 18

BIJ 19

BIJ 20

BIJ 21

BIJ 22

BIJ 23

BIJ 24

Share This Article