ಪಾರ್ಟಿ ವೇಳೆ ರೌಡಿಶೀಟರ್ ನ ಹತ್ಯೆಗೈದಿದ್ದ ಆರೋಪಿಗಳು ಅಂದರ್

Public TV
1 Min Read
ARREST

ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್ ನನ್ನು ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಪೋಲಿಸರು ಯಶಸ್ವಿಯಾಗಿದ್ದಾರೆ.

ಆದರ್ಶ್, ಕಾರ್ತಿಕ್, ಸುನೀಲ್, ನಂಜಪ್ಪ ಹಾಗೂ ಪವನ್ ಬಂಧಿತ ಆರೋಪಿಗಳು. ಇವರು ಮಚ್ಚು ಲಾಂಗ್‍ಗಳಿಂದ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ರೌಡಿ ಶೀಟರ್ ಆಗಿದ್ದ ನಾಗರಾಜ್ ನನ್ನು ಕೊಲೆ ಮಾಡಿ ಪರಾರಿಯಾಗಿದ್ದರು.

ವಿವಿ ಪುರಂ ಪೋಲಿಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದ ನಾಗರಾಜ್ ತನ್ನ ಗೆಳೆಯರೊಂದಿಗೆ ಡಿಸೆಂಬರ್ 11ರಂದು ಬನ್ನೇರುಘಟ್ಟ ಬಳಿಯ ಮೈಲಸಂದ್ರದಲ್ಲಿರುವ ಗ್ರೀನ್ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಪಾರ್ಟಿ ಮಾಡುತ್ತಿದ್ದನು. ಈ ವೇಳೆ ಏಕಾಏಕಿ ಲಾಂಗು-ಮಚ್ಚುಗಳ ಜೊತೆ ಎಂಟ್ರಿ ಕೊಟ್ಟ ಹಂತಕರು ನಾಗರಾಜ್ ನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು.

ಈ ಪ್ರಕರಣ ದಾಖಲಿಸಿಕೊಂಡ ಬನ್ನೇರುಘಟ್ಟ ಪೋಲಿಸರು ಹತ್ಯೆಯಾದ ಆರು ದಿನದಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಳಿಕ ಬಂಧಿತ ಆರೋಪಿಗಳನ್ನು ಹೆಡೆಮುರಿ ಕಟ್ಟಿ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳಿಸುವಲ್ಲಿ ಬನ್ನೇರುಘಟ್ಟ ಪೋಲಿಸರು ಯಶಸ್ವಿಯಾಗಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *