ಹೊಂಚು ಹಾಕಿ ರೌಡಿಶೀಟರ್‌ನನ್ನು ಕೊಚ್ಚಿ ಕೊಲೆಗೈದ್ರು!

Public TV
1 Min Read
Police Jeep 1

ಬೆಂಗಳೂರು: ಹಳೆ ವೈಷಮ್ಯಕ್ಕೆ ರೌಡಿಶೀಟರ್​ನೋರ್ವನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಸುಹೇಬ್ ಪಾಷಾ ಕೊಲೆಯಾದ ವ್ಯಕ್ತಿ. ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಗುಡ್ಡದಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ ಸುಮಾರು 4:30ರ ವೇಳೆಗೆ ಸುಹೇಬ್‍ನನ್ನು ಕೊಲೆ ಮಾಡಲಾಗಿದೆ. ಈ ಹಿಂದೆ ಹಲವು ಪ್ರಕರಣದಲ್ಲಿ ಸುಹೇಬ್ ಪಾಷಾ ಭಾಗಿಯಾಗಿದ್ದನು. ಇದೇ ಕಾರಣಕ್ಕಾಗಿ ಸುಹೇಬ್‍ನನ್ನು ಕೊಲೆ ಮಾಡಲು ಎದುರಾಳಿ ಗ್ಯಾಂಗ್ ಹೊಂಚು ಹಾಕಿ, ಕಾದು ಕುಳಿತಿತ್ತು. ಇಂದು ಮುಂಜಾನೆ ಸುಹೇಬ್ ಎದೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪಾರಾರಿಯಾಗಿದ್ದಾರೆ.

ವಿಚಾರ ತಿಳಿದ ಜೆಜೆಆರ್ ನಗರ ಪೊಲೀಸರು ಮೃತದೇಹವನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ಮರಣೊತ್ತರ ಪರೀಕ್ಷೆ ಮಾಡಿಸಿದ್ದಾರೆ. ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302(ಕೊಲೆ) ಅಡಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *