ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದ್ರೆ ದಂಡ ಕಟ್ಟಲೇಬೇಕು. ಈ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇನ್ನುಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟು ಸೇದಿದರೆ ಮತ್ತು ಗುಟ್ಕಾ ಉಗುಳಿದರೆ 1,000 ರೂ. ದಂಡ ಕಟ್ಟಬೇಕು.
ರಾಜ್ಯ ಸರ್ಕಾರ ಮಸೂದೆ ತಂದಿತ್ತು. ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ಮಸೂದೆ2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ 23ರಂದು ಅಂಕಿತ ಹಾಕಿದರು. ಈ ಸಂಬಂಧ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ, ಕಾಯ್ದೆ ಜಾರಿಗೆ ತರಲಾಗಿದೆ. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ 7 ಜಿಲ್ಲೆಗಳಲ್ಲಿ ಏಕಾಏಕಿ ದಾಳಿ!
ಇನ್ನು 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ, ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕಾಯ್ದೆ ಉಲ್ಲಂಘಿಸಿದವರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ. ಇದನ್ನೂ ಓದಿ: ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ
ಅಲ್ಲದೆ ಹೋಟೆಲ್ಗಳು, ಪಬ್, ಬಾರ್ ಅಥವಾ ರೆಸ್ಟೋರೆಂಟ್ಗಳಲ್ಲಿ ಹುಕ್ಕಾ ಸೇವೆನೆಗೂ ಅವಕಾಶ ಇಲ್ಲ. ನಿಷೇಧವನ್ನು ಉಲ್ಲಂಘಿಸಿದವರಿಗೆ 50,000 ದಿಂದ 1 ಲಕ್ಷದವರೆಗೆ ದಂಡ ಮತ್ತು ಒಂದು ವರ್ಷದಿಂದ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶವಿದೆ. ಇದನ್ನೂ ಓದಿ: Nelamangala | ಕೆಕೆಆರ್ಟಿಸಿ ಬಸ್ಗೆ ಹಿಂಬದಿಯಿಂದ ಕಾರು ಡಿಕ್ಕಿ – ಓರ್ವ ಸಾವು