ತುಮಕೂರು: ಚಿಕ್ಕನಾಯಕನಹಳ್ಳಿ (Chikkanayakanahalli) ತಾಲೂಕಿನ ಗಣಿ ಬಾಧಿತ ಪ್ರದೇಶದ ಅಭಿವೃದ್ಧಿಗೆ 1,200 ಕೋಟಿ ರೂ. ಹಂಚಿಕೆಯಾಗಿದೆ. 150 ಮನೆ ಮಂಜೂರಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ (G Parameshwar) ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಶಾಲೆಗಳ ಅಭಿವೃದ್ಧಿಗೆ 90 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, 78 ಕೋಟಿ ರೂ. ವೆಚ್ಚದ ಕಾಮಗಾರಿಗೆ ಅನುಮೋದನೆ ದೊರೆತಿದೆ. ನಿಗದಿತ ಅವಧಿಯಲ್ಲಿ ಎಲ್ಲಾ ಕಾಮಗಾರಿ ಪೂರ್ಣಗೊಳಿಸಬೇಕು. ಸರ್ಕಾರದಿಂದ ಬಡವರಿಗೆ ಮನೆ ಹಂಚಿಕೆ ಮಾಡಲಾಗುತ್ತಿದೆ. ನಿವೇಶನ, ಮನೆ ಇಲ್ಲದವರನ್ನು ಗುರುತಿಸಿ ಎಂದು ನಿರ್ದೇಶಿಸಿದರು. ಇದನ್ನೂ ಓದಿ: ಟ್ರಂಪ್ಗೆ ಕತಾರ್ನಿಂದ 3,400 ಕೋಟಿ ಮೌಲ್ಯದ ಐಷಾರಾಮಿ ವಿಮಾನ ಗಿಫ್ಟ್ – ವಿಶೇಷತೆ ಏನು?
ಶಾಸಕ ಸಿ.ಬಿ.ಸುರೇಶ್ ಬಾಬು, ಹೇಮಾವತಿ ನಾಲೆ ಕಾಮಗಾರಿಗೆ 150 ಕೋಟಿ ರೂ. ಮಂಜೂರು ಮಾಡಬೇಕು. ಖಾಲಿ ಇರುವ ವೈದ್ಯಾಧಿಕಾರಿ ಹುದ್ದೆ ಭರ್ತಿಗೆ ಕ್ರಮಕೈಗೊಳ್ಳಬೇಕು. ದಸೂಡಿ ಭಾಗಕ್ಕೆ ಪಶು ಆಸ್ಪತ್ರೆ ಮಂಜೂರು ಮಾಡಬೇಕು. ತಾಲೂಕಿನಲ್ಲಿ ಕಾಲುಬಾಯಿ ರೋಗಕ್ಕೆ ಸರಿಯಾಗಿ ಔಷಧಿ ಸಿಗುತ್ತಿಲ’ ಎಂಬ ವಿಚಾರ ಪ್ರಸ್ತಾಪಿಸಿದರು. ಇದನ್ನೂ ಓದಿ: ಮತ್ತಷ್ಟು ಸುದರ್ಶನ ಚಕ್ರಕ್ಕೆ ಬೇಡಿಕೆ ಇಟ್ಟ ಭಾರತ!