Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ, ಪಾಕ್‌ನಿಂದ ಎಕೆ 47 ಖರೀದಿ – ಬಿಷ್ಣೋಯ್‌ ಗ್ಯಾಂಗ್‌ ಪ್ಲ್ಯಾನ್‌ ಹೇಗಿತ್ತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ, ಪಾಕ್‌ನಿಂದ ಎಕೆ 47 ಖರೀದಿ – ಬಿಷ್ಣೋಯ್‌ ಗ್ಯಾಂಗ್‌ ಪ್ಲ್ಯಾನ್‌ ಹೇಗಿತ್ತು?

Cinema

ಸಲ್ಮಾನ್‌ ಹತ್ಯೆಗೆ 25 ಲಕ್ಷ ಸುಪಾರಿ, ಪಾಕ್‌ನಿಂದ ಎಕೆ 47 ಖರೀದಿ – ಬಿಷ್ಣೋಯ್‌ ಗ್ಯಾಂಗ್‌ ಪ್ಲ್ಯಾನ್‌ ಹೇಗಿತ್ತು?

Public TV
Last updated: October 17, 2024 7:53 pm
Public TV
Share
2 Min Read
salman khan 2
SHARE

– ಐವರು ಆರೋಪಿಗಳ ವಿರುದ್ಧ ಮುಂಬೈ ಪೊಲೀಸರಿಂದ ಚಾರ್ಜ್‌ಶೀಟ್‌
– ಆಗಸ್ಟ್ 2023 ಮತ್ತು ಏಪ್ರಿಲ್ 2024 ರ ನಡುವೆ ಹತ್ಯೆಗೆ ಪ್ಲ್ಯಾನ್‌

ಮುಂಬೈ: ನಟ ಸಲ್ಮಾನ್ ಖಾನ್ (Salman Khan) ಅವರನ್ನು ಮಹಾರಾಷ್ಟ್ರದ ಪನ್ವೇಲ್‌ನಲ್ಲಿರುವ ಅವರ ಫಾರ್ಮ್‌ಹೌಸ್ ಬಳಿ ಹತ್ಯೆ ಮಾಡಲು 25 ಲಕ್ಷ ರೂ. ಸುಪಾರಿ ಪಡೆಯಲಾಗಿತ್ತು ಎಂಬ ಶಾಕಿಂಗ್‌ ವಿಚಾರ ಮುಂಬೈ ಪೊಲೀಸರ (Mumbai Police) ತನಿಖೆಯಿಂದ ಬೆಳಕಿಗೆ ಬಂದಿದೆ.

ಸಲ್ಮಾನ್‌ ಖಾನ್‌ ಹತ್ಯೆ ಯತ್ನ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಮಹಾರಾಷ್ಟ್ರದ ನವಿ ಮುಂಬೈ ಪೊಲೀಸರು ಐವರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ.

ಸಲ್ಮಾನ್‌ ಹತ್ಯೆಗೆ ಸದ್ಯ ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ (Lawrence Bishnoi) ನೇತೃತ್ವದ ಗ್ಯಾಂಗ್ ಸುಪಾರಿ ಪಡೆದುಕೊಂಡಿದೆ ಎಂದು ಹೇಳಿದೆ. ಇದನ್ನೂ ಓದಿ: ಗಮನಿಸಿ, ರೈಲ್ವೇ ಮುಂಗಡ ಟಿಕೆಟ್‌ ಬುಕ್ಕಿಂಗ್‌ ಅವಧಿ 120 ದಿನದಿಂದ 60 ದಿನಕ್ಕೆ ಕಡಿತ

Jailed gangster Lawrence Bishnoi today claimed responsibility for the killing of Khalistani terrorist Sukhdool Singh in Canada

ಚಾರ್ಜ್‌ಶೀಟ್‌ನಲ್ಲಿ ಏನಿದೆ?
ಆರೋಪಿಗಳು ಪಾಕಿಸ್ತಾನದಿಂದ (Pakistan) ಅತ್ಯಾಧುನಿಕ ಶಸ್ತ್ರಾಸ್ತ್ರಗಳಾದ ಎಕೆ 47, ಎಕೆ 92 ಮತ್ತು ಎಂ 16 ಮತ್ತು ಟರ್ಕಿ ನಿರ್ಮಿತ ಜಿಗಾನಾ ಆಯುಧವನ್ನು ಖರೀದಿಸಲು ಸಿದ್ಧತೆ ನಡೆಸಿತ್ತು. ಆರೋಪಿಗಳು ಸಲ್ಮಾನ್ ಖಾನ್ ಅವರ ಹತ್ಯೆಗೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹುಡುಗರನ್ನು ನೇಮಿಸಿಕೊಂಡಿದ್ದಾರೆ. ಅವರೆಲ್ಲರೂ ಪುಣೆ, ರಾಯಗಡ, ನವಿ ಮುಂಬೈ, ಥಾಣೆ ಮತ್ತು ಗುಜರಾತ್‌ನಲ್ಲಿ ತಲೆಮರೆಸಿಕೊಂಡಿದ್ದಾರೆ.

ಸಲ್ಮಾನ್ ಖಾನ್ ಅವರನ್ನು ಕೊಲ್ಲುವ ಯೋಜನೆಯನ್ನು ಆಗಸ್ಟ್ 2023 ಮತ್ತು ಏಪ್ರಿಲ್ 2024 ರ ನಡುವೆ ರೂಪಿಸಲಾಗಿತ್ತು. ಸುಮಾರು 60 ರಿಂದ 70 ಜನರು ಬಾಂದ್ರಾ ಮನೆ, ಪನ್ವೆಲ್ ಫಾರ್ಮ್‌ಹೌಸ್ ಮತ್ತು ಗೋರೆಗಾಂವ್ ಫಿಲ್ಮ್ ಸಿಟಿಯಲ್ಲಿ ಸಲ್ಮಾನ್ ಖಾನ್ ಅವರ ಚಲನವಲನಗಳನ್ನು ಗಮನಿಸುತ್ತಿದ್ದರು. ಇದನ್ನೂ ಓದಿ: 4 ದಿನದಲ್ಲಿ 20ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್‌ ಬೆದರಿಕೆ – ಲಂಡನ್‌, ಜರ್ಮನಿಯಲ್ಲಿ ಐಪಿ ಅಡ್ರೆಸ್‌ ಪತ್ತೆ

ಪಾಣಿಪತ್‌ನಿಂದ ಬಂಧಿತನಾಗಿದ್ದ ಸುಖಾ ಶೂಟರ್ ಅಜಯ್ ಕಶ್ಯಪ್ ಅಲಿಯಾಸ್ ಎಕೆ ಮತ್ತು ನಾಲ್ಕು ಮಂದಿ ಈ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ. ಬಿಗಿ ಭದ್ರತೆ ಮತ್ತು ಬುಲೆಟ್ ಪ್ರೂಫ್ ವಾಹನಗಳು ಇರುವ ಕಾರಣ ಸಲ್ಮಾನ್‌ ಖಾನ್‌ ಅವರ ಕೊಲೆಯನ್ನು ನಡೆಸಲು ಅತ್ಯಾಧುನಿಕ ಆಯುಧಗಳು ಬೇಕಾಗುತ್ತವೆ ಎಂಬ ನಿರ್ಧಾರಕ್ಕೆ ತಂಡ ಬಂದಿತ್ತು.

gangster Lawrence Bishnoi 2

ಸುಖಾ ಪಾಕಿಸ್ತಾನ ಮೂಲದ ಶಸ್ತ್ರಾಸ್ತ್ರ ವ್ಯಾಪಾರಿ ಡೋಗರ್‌ ಜೊತೆ ವೀಡಿಯೊ ಕರೆ ಮೂಲಕ ಸಂಪರ್ಕಿಸಿದ್ದ. AK-47 ಮತ್ತು ಇತರ ಸುಧಾರಿತ ಶಸ್ತ್ರಾಸ್ತ್ರಗಳನ್ನು ಹೊಂದಿಸುವ ಸಲುವಾಗಿ ಮಾತುಕತೆ ನಡೆದಿತ್ತು. ಡೋಗರ್‌ ಶಸ್ತ್ರಾಸ್ತ್ರಗಳನ್ನು ಪೂರೈಸಲು ಒಪ್ಪಿಕೊಂಡಿದ್ದ. ಸುಖಾ 50 ಪ್ರತಿಶತ ಹಣವನ್ನು ಮುಂಗಡ ಪಾವತಿಸುತ್ತೇನೆ ಮತ್ತು ಉಳಿದ ಮೊತ್ತವನ್ನು ಭಾರತದಲ್ಲಿ ವಿತರಿಸಲಾಗುವುದು ಎಂದು ಭರವಸೆ ನೀಡಿದ್ದ.

ಎಲ್ಲಾ ಶೂಟರ್‌ಗಳು ಕೃತ್ಯ ಎಸಗಲು ಕೆನಡಾ ಮೂಲದ ದರೋಡೆಕೋರ ಗೋಲ್ಡಿ ಬ್ರಾರ್ ಮತ್ತು ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್‌ ಅವರ ಅನುಮತಿಗಾಗಿ ಕಾಯುತ್ತಿದ್ದರು.

ಸಲ್ಮಾನ್‌ ಖಾನ್‌ ಅವರನ್ನು ಹತ್ಯೆ ನಡೆಸಿದ ಬಳಿಕ ಎಲ್ಲರೂ ಕನ್ಯಾಕುಮಾರಿಯಲ್ಲಿ ಸೇರಬೇಕು. ನಂತರ ಬೋಟ್‌ ಮೂಲಕ ಶ್ರೀಲಂಕಾಗೆ ತೆರಳಿ ಅಲ್ಲಿಂದ ಭಾರತ ಭಾರತೀಯ ತನಿಖಾ ಸಂಸ್ಥೆಗಳು ತಲುಪಲು ಸಾಧ್ಯವಾಗದ ದೇಶಕ್ಕೆ ತೆರಳಲು ಪ್ಲ್ಯಾನ್‌ ಮಾಡಿದ್ದರು.

ಬಾಂದ್ರಾದಲ್ಲಿರುವ ಸಲ್ಮಾನ್‌ ಖಾನ್‌ ಮನೆಯ ಹೊರಗೆ ಗುಂಡಿನ ದಾಳಿ ನಡೆಸಿದ ಪ್ರಕರಣದ ತನಿಖೆ ಇಳಿದಾಗ ಹತ್ಯೆಯ ಸಂಚು ಬಯಲಾಗಿದೆ ಎಂದು ಪೊಲೀಸರು ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ.

 

TAGGED:bollywoodcinemacourtLawrence Bishnoisalman khanಜೈಲುಮುಂಬೈ ಪೊಲೀಸ್ಲಾರೆನ್ಸ್ ಬಿಷ್ಣೋಯ್ಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema news

Samantha Ruth Prabhu 2
ನಿರ್ದೇಶಕ ರಾಜ್ ನಿಡಿಮೋರು ಜೊತೆ ಹೊಸ ಜೀವನಕ್ಕೆ ಕಾಲಿಟ್ಟ ನಟಿ ಸಮಂತಾ
Cinema Latest Main Post South cinema
Darshan The Devil 1
ಡಿಬಾಸ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌ – ‘ದಿ ಡೆವಿಲ್’ ಟ್ರೈಲರ್ ರಿಲೀಸ್‌ಗೆ ಮುಹೂರ್ತ ಫಿಕ್ಸ್!
Cinema Latest Sandalwood Top Stories
Gilli VS Raghu BBK 12
ಬಿಗ್‌ಬಾಸ್ ಮನೇಲಿ ಗಿಲ್ಲಿ V/S ರಘು.. ಜೋರಾಯ್ತು ಜಗಳ
Cinema Latest Top Stories TV Shows
bigg boss season 12 kannada Jhanvi is out of Bigg Boss
ಬಿಗ್‌ ಬಾಸ್‌ ಮನೆಯಿಂದ ಜಾನ್ವಿ ಔಟ್‌
Cinema Karnataka Latest Main Post TV Shows

You Might Also Like

HC Balakrishna
Districts

ಶ್ರೀಗಳ ಆಶೀರ್ವಾದ ಇಲ್ದೇ ದೇವೇಗೌಡ್ರು, ಕುಮಾರಸ್ವಾಮಿ ಸಿಎಂ ಆದ್ರಾ? – ಹೆಚ್‌ಸಿ ಬಾಲಕೃಷ್ಣ

Public TV
By Public TV
1 minute ago
mahadevappa
Davanagere

ಸಿದ್ದರಾಮಯ್ಯನವರೇ ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತಾರೆ: ಮಹದೇವಪ್ಪ

Public TV
By Public TV
9 minutes ago
G Parameshwar
Districts

ಕೋಡಿಮಠಕ್ಕೆ ದಿಢೀರ್ ಭೇಟಿ ಕೊಟ್ಟ ಜಿ.ಪರಮೇಶ್ವರ್

Public TV
By Public TV
25 minutes ago
Renuka Chowdhury
Latest

ಸಾಕು ನಾಯಿಯೊಂದಿಗೆ ಸಂಸತ್ತಿಗೆ ಬಂದ ʻಕೈʼ ಸಂಸದೆ – ಮೊದಲ ದಿನವೇ ವಿವಾದ

Public TV
By Public TV
37 minutes ago
Modi Priyanka Gandhi
Latest

ಜನರ ಅಗತ್ಯ ಸಮಸ್ಯೆಗಳನ್ನ ಚರ್ಚಿಸಲು ಅವಕಾಶ ಕೊಡದಿರುವುದು ನಾಟಕ – ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

Public TV
By Public TV
1 hour ago
piyush goyal electric car
Automobile

2030ರ ವೇಳೆಗೆ ಭಾರತದಲ್ಲಿ ಒಂದೇ ಒಂದು ಪೆಟ್ರೋಲ್, ಡೀಸೆಲ್ ಕಾರು ಮಾರಾಟವಾಗಲ್ಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?