Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಿಎಂ ಫಸಲ್ ಭಿಮಾ ಯೋಜನೆಯಡಿ ಚಿತ್ರದುರ್ಗ ರೈತರಿಗೆ 559.91 ಕೋಟಿ ರೂ. ವಿಮೆ ಹಣ: ರಾಮನಾಥ್ ಠಾಕೂರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಪಿಎಂ ಫಸಲ್ ಭಿಮಾ ಯೋಜನೆಯಡಿ ಚಿತ್ರದುರ್ಗ ರೈತರಿಗೆ 559.91 ಕೋಟಿ ರೂ. ವಿಮೆ ಹಣ: ರಾಮನಾಥ್ ಠಾಕೂರ್

Chitradurga

ಪಿಎಂ ಫಸಲ್ ಭಿಮಾ ಯೋಜನೆಯಡಿ ಚಿತ್ರದುರ್ಗ ರೈತರಿಗೆ 559.91 ಕೋಟಿ ರೂ. ವಿಮೆ ಹಣ: ರಾಮನಾಥ್ ಠಾಕೂರ್

Public TV
Last updated: December 16, 2025 3:36 pm
Public TV
Share
3 Min Read
Ram Nath Thakur
SHARE

ನವದೆಹಲಿ: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ (Pradhan Mantri Fasal Bima Yojana) 2020-21ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಚಿತ್ರದುರ್ಗ (Chitradurga) ಜಿಲ್ಲೆಯಲ್ಲಿ ರೈತರಿಗೆ 559.91 ಕೋಟಿ ರೂ. ವಿಮೆ ಹಣ ದೊರಕಿದೆ. ಜಿಲ್ಲೆಯ 5,81,527 ಲಕ್ಷ ರೈತರು 80 ಕೋಟಿಯಷ್ಟು ರೈತರ ಪಾಲಿನ ವಿಮಾ ಹಣವನ್ನು ಪಾವತಿಸಿದ್ದಾರೆ ಎಂದು ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ಹೇಳಿದ್ದಾರೆ.

ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಗೆ ಸಂಬಂಧಿಸಿದಂತೆ 2024-25ನೇ ಸಾಲಿಗೆ ಬೆಳೆ ವಿಮೆ ದಾವೆಗಳ ಕುರಿತು ರೈತರಿಂದ ಯಾವುದೇ ದೂರುಗಳನ್ನು ಸರ್ಕಾರ ಸ್ವೀಕರಿಸಿದೆಯೇ? ಬೆಳೆ ಹಾನಿಯನ್ನು ನಿಖರವಾಗಿ ಅಂದಾಜು ಮಾಡಲು ಸರ್ಕಾರ ಯಾವ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದೆ? ಕಳೆದ ಐದು ವರ್ಷಗಳಲ್ಲಿ ಕರ್ನಾಟಕದ ರೈತರಿಗೆ ಜಿಲ್ಲಾವಾರು ನೀಡಲಾದ ಬೆಳೆ ವಿಮೆಯ ವಿವರಗಳೇನು? ರೈತರಿಗೆ ಬೆಳೆ ವಿಮಾ ದಾವೆಗಳನ್ನು ಸಮಯಕ್ಕೆ ಸರಿಯಾಗಿ ಹಾಗೂ ಶೀಘ್ರವಾಗಿ ಪಾವತಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ವಿವರಗಳೇನು? ಎಂದು ಸಂಸದ ಗೊವಿಂದ ಕಾರಜೋಳ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರದ ಕೃಷಿ ಸಚಿವರಿಗೆ ಪ್ರಶ್ನೆ ಕೇಳಿದರು. ಇದನ್ನೂ ಓದಿ: ಸೈಕಲ್‌ ಆಟವಾಡುತ್ತಾ ನೀರಿನ ಸಂಪ್‌ಗೆ ಬಿದ್ದು 4 ವರ್ಷದ ಬಾಲಕ ಸಾವು

ಸಂಸದರ ಪ್ರಶ್ನೆಗೆ ಉತ್ತರ ನೀಡಿದ ರಾಮನಾಥ್ ಠಾಕೂರ್, ಚಿತ್ರದುರ್ಗ ಜಿಲ್ಲೆಯಲ್ಲಿ 2,48,212 ಲಕ್ಷ ರೈತರಿಗೆ 559.91 ಕೋಟಿ ರೂ. ವಿಮಾ ಹಣ ದೊರಕಿದೆ. ಅದೇ ರೀತಿ ರಾಜ್ಯದಲ್ಲಿ 1,29,95,086 ಕೋಟಿ ರೈತರು ವಿಮೆಗೆ ನೊಂದಣಿ ಮಾಡಿಸಿಕೊಂಡಿದ್ದು, 1,584 ಕೋಟಿ ವಿಮೆ ಪ್ರೀಮಿಯಮ್ ಪಾವತಿಸಿರುತ್ತಾರೆ. ರಾಜ್ಯದ ರೈತರಿಗೆ 10,000 ಕೋಟಿಯಷ್ಟು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ವಿಮೆ ಪರಿಹಾರ ಸಿಕ್ಕಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯ ಕಾರ್ಯಾಚರಕಾ ಮಾರ್ಗಸೂಚಿಗಳ ಪ್ರಕಾರ, ಸಂಬಂಧಿಸಿದ ರಾಜ್ಯ ಸರ್ಕಾರದಿಂದ ಅಗತ್ಯವಾದ ಉತ್ಪಾದನಾ ಮಾಹಿತಿಯನ್ನು ಸ್ವೀಕರಿಸಿದ ದಿನದಿಂದ 21 ದಿನಗಳ ಒಳಗಾಗಿ ಬಹುತೇಕ ದಾವೆಗಳನ್ನು ವಿಮಾ ಕಂಪನಿಗಳು ಪರಿಹರಿಸುತ್ತವೆ. ಆದರೆ, ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಜಾರಿಗೆ ಬಂದ ನಂತರದ ಅವಧಿಯಲ್ಲಿ ಕೆಲವು ಸಂದರ್ಭಗಳಲ್ಲಿ ದಾವೆಗಳ ಪಾವತಿಗೆ ಸಂಬಂಧಿಸಿದಂತೆ ದೂರುಗಳು ಬಂದಿವೆ ಎಂದರು. ಇದನ್ನೂ ಓದಿ: ಪ.ಬಂಗಾಳದಲ್ಲಿ SIR- 58 ಲಕ್ಷ ಮತದಾರರ ಹೆಸರುಗಳನ್ನು ಅಳಿಸಲು ಪ್ರಸ್ತಾಪ

ರಾಜ್ಯ ಸರ್ಕಾರದ ಸಬ್ಸಿಡಿ ಪಾಲು ಬಿಡುಗಡೆಯಲ್ಲಿ ವಿಳಂಬ, ಬ್ಯಾಂಕುಗಳಿಂದ ವಿಮಾ ಪ್ರಸ್ತಾವನೆಗಳನ್ನು ತಪ್ಪಾಗಿ ಅಥವಾ ತಡವಾಗಿ ಸಲ್ಲಿಸಿದ ಕಾರಣ ದಾವೆಗಳ ಪಾವತಿಯಲ್ಲಿ ವಿಳಂಬ ಅಥವಾ ಕಡಿಮೆ ಪಾವತಿ ಹಾಗೂ ಉತ್ಪಾದನಾ ಮಾಹಿತಿಯಲ್ಲಿನ ವ್ಯತ್ಯಾಸ ಮತ್ತು ಅದರಿಂದ ಉಂಟಾದ ರಾಜ್ಯ ಸರ್ಕಾರ ಹಾಗೂ ವಿಮಾ ಕಂಪನಿಗಳ ನಡುವಿನ ವಿವಾದಗಳು ವಿಳಂಬಕ್ಕೆ ಕಾರಣವಾಗಿವೆ ಎಂದು ಹೇಳಿದರು. ಇದನ್ನೂ ಓದಿ: ಹೊಸ ರೂಲ್ಸ್‌ಗೆ ವಿರೋಧ – ಏರ್ಪೋರ್ಟ್ ಅಥಾರಿಟಿ ವಿರುದ್ಧ ಸಿಡಿದೆದ್ದ ಟ್ಯಾಕ್ಸಿ ಚಾಲಕರು

ವಿಮಾ ಕಂಪನಿಗಳು ನಿಗಧಿತ ಅವಧಿಯೊಳಗೆ ಪಾವತಿ ಮಾಡದಿದ್ದಲ್ಲಿ 12%ನಷ್ಟು ದಂಡವನ್ನು ಸ್ವಯಂಚಾಲಿತವಾಗಿ ಲೆಕ್ಕಹಾಕಿ ಮುಂಗಾರು 2024ರಿಂದ ರಾಷ್ಟ್ರೀಯ ಬೆಳೆ ವಿಮೆ ಪೋರ್ಟಲ್ ಮೂಲಕ ದಂಡ ವಿಧಿಸಲಾಗುತ್ತದೆ. ಇದೇ ರೀತಿಯಲ್ಲಿ ರಾಜ್ಯ ಸರ್ಕಾರವೂ ತನ್ನ ಪ್ರೀಮಿಯಮ್ ಸಬ್ಸಿಡಿಯನ್ನು ನಿಗದಿತ ಅವಧಿಯಲ್ಲಿ ಬಿಡುಗಡೆ ಮಾಡದೇ ವಿಳಂಬ ಮಾಡಿದಲ್ಲಿ ರಾಜ್ಯ ಸರ್ಕಾರಕ್ಕೂ ಸಹ 12%ನಷ್ಟು ದಂಡವನ್ನು ಹಾಕುವ ವ್ಯವಸ್ಥೆ ಈ ಯೋಜನೆಯಲ್ಲಿ ಇದೆ ಎಂದು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು| ಆರ್ಯನ್‌ ಖಾನ್‌ ಬಂದಿದ್ದ, ಶಿಲ್ಪಾ ಶೆಟ್ಟಿ ಒಡೆತನದ ಪಬ್‌ಗಳ ವಿರುದ್ಧ FIR

ರಾಜ್ಯ ಸರ್ಕಾರಗಳು, ಜಾರಿಗೆ ತರುವ ವಿಮಾ ಕಂಪನಿಗಳು, ಹಣಕಾಸು ಸಂಸ್ಥೆಗಳು ಮತ್ತು ಸಾಮಾನ್ಯ ಸೇವಾ ಕೇಂದ್ರಗಳ ಜಾಲದ ಮೂಲಕ ರೈತರು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ಸದಸ್ಯರಿಗೆ ಈ ಯೋಜನೆಯ ಪ್ರಮುಖ ಅಂಶಗಳ ಬಗ್ಗೆ ಅರಿವು ಮೂಡಿಸಲು ನಡೆಸುತ್ತಿರುವ ಜಾಗೃತಿ ಚಟುವಟಿಕೆಗಳಿಗೆ ಕೇಂದ್ರ ಸರ್ಕಾರ ಸಕ್ರಿಯ ಬೆಂಬಲ ನೀಡಿದೆ. ಬೆಳೆ ವಿಮಾ ವಾರ/ಫಸಲ್ ಭಿಮಾ ಸಪ್ತಾಹ ಎಂಬ ಸಂರಚಿತ ಜಾಗೃತಿ ಅಭಿಯಾನವನ್ನು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು ಮುಂಗಾರು 2021ರಿಂದ ಆರಂಭಿಸಿದೆ. ಇದರ ಜೊತೆಗೆ ಯೋಜನೆಯ ಜಾರಿಗೆ ಸಂಬಂಧಿಸಿದ ವಿವಿಧ ಅಂಶಗಳ ಬಗ್ಗೆ ರೈತರ ಜ್ಞಾನವರ್ಧನೆಗಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಫಸಲ್ ಭಿಮಾ ಪಾಠಶಾಲೆಗಳನ್ನು ಆಯೋಜಿಸಲಾಗುತ್ತಿದೆ. ಈ ಯೋಜನೆಯಡಿ ನೋಂದಾಯಿತ ರೈತರಿಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿಶೇಷ ಶಿಬಿರಗಳ ಮೂಲಕ ಬೆಳೆ ವಿಮೆ ಪಾಲಿಸಿಯ ಮುದ್ರಿತ ಪ್ರತಿಗಳನ್ನು ವಿತರಿಸಲಾಗುತ್ತಿದೆ ಎಂದು ಸಚಿವರು ಉತ್ತರಿಸಿದ್ದಾರೆ. ಇದನ್ನೂ ಓದಿ: ವೀಡಿಯೋ ಕಾಲ್‌ನಲ್ಲಿ ಕೆನಡಾದಿಂದ ಉಡುಪಿ ಮೂಲದ ಯುವತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಯುವಕ

TAGGED:Chitradurgafarmersgovinda karajolaNew DelhiPM Fasal Bima YojanaRam Nath Thakurಗೋವಿಂದ ಕಾರಜೋಳಚಿತ್ರದುರ್ಗನವದೆಹಲಿಪಿಎಂ ಫಸಲ್ ಭಿಮಾ ಯೋಜನೆರಾಮನಾಥ ಠಾಕೂರ್
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

DK Shivakumar 1 1
Bengaluru City

ಅಡುಗೆ ಅನಿಲ ಕೊರತೆ – ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಕೆಶಿ

Public TV
By Public TV
1 minute ago
indian national killed as iran suicide boat hits us owned tanker safesea vishnu off iraq
Latest

ಇರಾನ್‌ ದಾಳಿಗೆ ಹೊತ್ತಿ ಉರಿದ ಅಮೆರಿಕದ ಟ್ಯಾಂಕರ್‌

Public TV
By Public TV
11 minutes ago
Eshwar Khandre
Bengaluru City

ಸಫಾರಿ ಸ್ಥಗಿತ, ಪುನಾರಂಭ ಸಮರ್ಥಿಸಿಕೊಂಡ ಈಶ್ವರ್‌ ಖಂಡ್ರೆ

Public TV
By Public TV
15 minutes ago
Vessel carrying Saudi crude reaches mumbai India first tanker to arrive from Strait of Hormuz since Iran war Shenlong Suezmax
Latest

ಹಾರ್ಮುಜ್ ಜಲಸಂಧಿಯಲ್ಲಿ ಅದೃಶ್ಯವಾಗಿ ಭಾರತಕ್ಕೆ ಬಂತು ಕಚ್ಚಾ ತೈಲ ಹೊತ್ತ ಹಡಗು

Public TV
By Public TV
32 minutes ago
Bengaluru Hotel Bill
Bengaluru City

ಹೋಟೆಲ್‌ನಲ್ಲಿ ಬ್ರೇಕ್‌ಫಾಸ್ಟ್ ಮಾಡಿದವರಿಗೆ 30 ರೂ. ಗ್ಯಾಸ್‌ ಸಪ್ಲೈ ಚಾರ್ಜ್‌ – ಗ್ರಾಹಕರ ಆಕ್ರೋಶ

Public TV
By Public TV
1 hour ago
Medical Student Accident
Bengaluru City

ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ – MBBS ವಿದ್ಯಾರ್ಥಿನಿ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?