ಬೆಂಗಳೂರು: ದಾಖಲೆಯಿಲ್ಲದ 76 ಲಕ್ಷ ರೂ.ಹಣವನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಗಳವಾರ ರಾತ್ರಿ 76 ಲಕ್ಷ ರೂ. ನಗದಿನೊಂದಿಗೆ ಇಬ್ಬರು ವ್ಯಕ್ತಿಗಳು ಶಾಂತಿ ನಗರ ಬಸ್ ನಿಲ್ದಾಣದಲ್ಲಿ ನಿಂತಿದ್ದರು. ಖಚಿತ ಮಾಹಿತಿ ಅಧಾರಿಸಿ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಆಪ್ತನ ನೆನೆದು ಕಣ್ಣೀರಿಟ್ಟ ಬೊಮ್ಮಾಯಿ – ತಲೆ ಸವರಿ ಭಾವುಕರಾದ ಸಿಎಂ
ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈಗ ಹಣದ ಮೂಲದ ಬಗ್ಗೆ ಇಬ್ಬರನ್ನು ವಿಚಾರಣೆ ನಡೆಸುತ್ತಿದ್ದಾರೆ.