Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಜಬ್ ವಿಚಾರದಲ್ಲಿ ಆರ್‌ಎಸ್‌ಎಸ್‌, ಭಜರಂಗದಳ, ಎಸ್‍ಡಿಪಿಐ ಕುಮ್ಮಕ್ಕು ಇದೆ ಈ ಎಲ್ಲಾ ಸಂಘಟನೆಗಳನ್ನು ನಿಷೇಧಿಸಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಿಜಬ್ ವಿಚಾರದಲ್ಲಿ ಆರ್‌ಎಸ್‌ಎಸ್‌, ಭಜರಂಗದಳ, ಎಸ್‍ಡಿಪಿಐ ಕುಮ್ಮಕ್ಕು ಇದೆ ಈ ಎಲ್ಲಾ ಸಂಘಟನೆಗಳನ್ನು ನಿಷೇಧಿಸಿ: ಸಿದ್ದರಾಮಯ್ಯ

Bengaluru City

ಹಿಜಬ್ ವಿಚಾರದಲ್ಲಿ ಆರ್‌ಎಸ್‌ಎಸ್‌, ಭಜರಂಗದಳ, ಎಸ್‍ಡಿಪಿಐ ಕುಮ್ಮಕ್ಕು ಇದೆ ಈ ಎಲ್ಲಾ ಸಂಘಟನೆಗಳನ್ನು ನಿಷೇಧಿಸಿ: ಸಿದ್ದರಾಮಯ್ಯ

Public TV
Last updated: April 1, 2022 4:11 pm
Public TV
Share
5 Min Read
SIDDRAMIHA
SHARE

-ದೇಶದ ಉಳಿವಿಗಾಗಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರೋಣ

ಬೆಂಗಳೂರು: ಹಿಜಬ್ ವಿಚಾರದಲ್ಲಿ ಆರ್‌ಎಸ್‌ಎಸ್‌, ಭಜರಂಗದಳ, ಎಸ್‍ಡಿಪಿಐ ಕುಮ್ಮಕ್ಕು ಇದೆ. ಈ ಕಾರಣಕ್ಕಾಗಿ ಕೋಮು ಸೌಹಾರ್ದತೆ ಹಾಳು ಮಾಡುತ್ತಿರುವ ಈ ಎಲ್ಲಾ ಸಂಘಟನೆಗಳನ್ನು ನಿಷೇಧಿಸಿ ಎಂದು ಸದನದಲ್ಲಿ ಹೇಳಿದ್ದೆ ಎಂದು ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ತಿಳಿಸಿದರು.

Chikkodi hijab

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಆಡಿಟೋರಿಯಂನ ರಾಜೀವ್ ಭವನದಲ್ಲಿ ಎಐಸಿಸಿಯ ನಿಕಟಪೂರ್ವ ಅಧ್ಯಕ್ಷರಾದ ರಾಹುಲ್ ಗಾಂಧಿಯವರ ಉಪಸ್ಥಿತಿಯಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರ ಮನಸ್ಸು ಮಾಡಿದ್ದರೆ ಆರಂಭದಲ್ಲೇ ಹಿಜಬ್ ವಿವಾದವನ್ನು ಬಗೆಹರಿಸಿ, ದೇಶಾದ್ಯಂತ ವ್ಯಾಪಿಸದಂತೆ ತಡೆಯಬಹುದಿತ್ತು.  ಆರ್‌ಎಸ್‌ಎಸ್‌, ಭಜರಂಗದಳ, ಹಿಂದೂ ಮಹಾಸಭಾದವರು ಸರ್ಕಾರದ ಕುಮ್ಮಕ್ಕಿನಿಂದ ದೊಡ್ಡ ವಿಷಯವನ್ನಾಗಿ ವಿದ್ಯಾರ್ಥಿಗಳ ಮುಂದಿಟ್ಟು, ಮುಸ್ಲಿಮರನ್ನು ಖಳನಾಯಕರನ್ನಾಗಿ ಬಿಂಬಿಸಿದ್ದಾರೆ. ಇದರಲ್ಲಿ ಎಸ್‍ಡಿಪಿಐ ಕುಮ್ಮಕ್ಕು ಕೂಡ ಇದೆ. ರಾಜ್ಯದಲ್ಲಿ ಬಿಜೆಪಿಯ ಅನೈತಿಕ ಸರ್ಕಾರವಿದೆ. ಬಿಜೆಪಿ ಪಕ್ಷ 2008, 2018 ಈ ಎರಡೂ ಬಾರಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿಲ್ಲ. 2008 ರಲ್ಲಿ ಆಪರೇಷನ್ ಕಮಲದ ಮೂಲಕ ಯಡಿಯೂರಪ್ಪ ಅವರು ಅಧಿಕಾರ ಹಿಡಿದರು, ಮತ್ತೆ 2018 ರಲ್ಲಿ ಬಹುಮತ ಸಾಬೀತು ಮಾಡಲಾಗದೆ ಒಂದೇ ವಾರಕ್ಕೆ ರಾಜೀನಾಮೆ ನೀಡಿ, ಆ ನಂತರ ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಮುಖ್ಯಮಂತ್ರಿ ಸ್ಥಾನಕ್ಕೇರಿದರು. ಈ ಸರ್ಕಾರದ ಅವಧಿಯಲ್ಲಿ ಎರಡು ವರ್ಷ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದರು, ಈಗ ಬಸವರಾಜ ಬೊಮ್ಮಾಯಿ ಆ ಸ್ಥಾನದಲ್ಲಿ ಇದ್ದಾರೆ. ಇದೊಂದು ಜನವಿರೋಧಿ, ಭ್ರಷ್ಟ ಸರ್ಕಾರ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೇಶದಲ್ಲೇ ಅತಿದೊಡ್ಡ ಭ್ರಷ್ಟ ಸರ್ಕಾರ ಕರ್ನಾಟಕದಲ್ಲಿದೆ: ರಾಹುಲ್ ಕಿಡಿ

MODI 2

ದೇಶದ ಯುವಕರು, ಮಹಿಳೆಯರು, ಮಕ್ಕಳು, ಬಡವರು, ದಲಿತರು, ಹಿಂದುಳಿದ ಸಮುದಾಯಗಳ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಾಗಲೀ, ರಾಜ್ಯದ ಮುಖ್ಯಮಂತ್ರಿಯಾಗಲೀ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲ್ಲ. ಜನರ ಸಮಸ್ಯೆಗಳ ಬದಲಾಗಿ ಸಮಾಜವನ್ನು ವಿಭಜನೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಚುನಾವಣೆ ಹತ್ತಿರ ಬಂದಿರುವುದರಿಂದ ಹೆಚ್ಚು ಹೆಚ್ಚು ಕೋಮು ವೈಷಮ್ಯದ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ. ನಾವು ಸಂವಿಧಾನವನ್ನು ಧರ್ಮವಾಗಿ ನಂಬಿರುವವರು, ನಮಗೆ ಸಂವಿಧಾನವೇ ಸಂಜೀವಿನಿ. ಈ ದೇಶದ ಪ್ರತಿಯೊಬ್ಬ ವ್ಯಕ್ತಿಯೂ ಸಂವಿಧಾನದ ಆಶಯಗಳಂತೆ ಜೀವನ ಮಾಡಬೇಕು ಎಂದರು. ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಗ್ರಾಹಕರಿಗೆ ಎಲ್‌ಪಿಜಿ ಶಾಕ್- ಬರೋಬ್ಬರಿ 250 ರೂ. ಏರಿಕೆ

ರಾಜ್ಯ ಬಿಜೆಪಿ ಸರ್ಕಾರ ಕೋಮು ಸಂಘರ್ಷಕ್ಕೆ ದಾರಿ ಮಾಡಿಕೊಡುವಂತಾ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ. ಮೊದಲಿಗೆ ಗೋಹತ್ಯೆ ನಿಷೇಧ ಕಾನೂನು ಜಾರಿ ಮಾಡಿದರು, ಆ ನಂತರ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡಿದರು, ಈಗ ಹಿಜಬ್, ಭಗವದ್ಗೀತೆ, ಹಲಾಲ್ ವಿಚಾರಗಳನ್ನು ಪ್ರಸ್ತಾಪ ಮಾಡಿದ್ದಾರೆ. ಸಂವಿಧಾನ, ಪ್ರಜಾಪ್ರಭುತ್ವ, ಬಹುತ್ವದ ಬಗ್ಗೆ ಗೌರವ ಇಲ್ಲದ ಕಾರಣಕ್ಕೆ ಬಿಜೆಪಿಯವರು ಇಂತಹಾ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದ್ದಾರೆ. ಆ ಮೂಲಕ ಯುವಕರ ಮನಸ್ಸಲ್ಲಿ ದ್ವೇಷದ ವಿಷಬೀಜ ಬಿತ್ತುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷ ಸಂವಿಧಾನದಲ್ಲಿ ನಂಬಿಕೆ ಮತ್ತು ಬದ್ಧತೆಯನ್ನು ಹೊಂದಿರುವ ಪಕ್ಷ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಹಿಷ್ಣುತೆ, ಸಹಬಾಳ್ವೆ, ಸರ್ವಧರ್ಮ ಸಮನ್ವಯತೆಯ ತತ್ವಗಳಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಹಿಜಬ್ ಒಂದು ವಿವಾದವಾಗುವಂತಾ ವಿಷಯವೇ ಆಗಿರಲಿಲ್ಲ. ನೂರಾರು ವರ್ಷಗಳಿಂದ ಮುಸ್ಲಿಂ ಸಮುದಾಯದವರು ಆಚರಿಸಿಕೊಂಡು ಬಂದ ಪದ್ಧತಿ ಆಗಿತ್ತು. ಈ ಕೆಲಸವನ್ನು ಸರ್ಕಾರ ಮಾಡಲ್ಲ, ಕಾರಣ ಈ ಎಲ್ಲಾ ಸಂಘಟನೆಗಳು ಇದ್ದಾಗ ಮಾತ್ರ ಸಮಾಜದಲ್ಲಿ ಬಾಂಧವ್ಯವನ್ನು ಹಾಳು ಮಾಡಲು ಸಾಧ್ಯವಾಗುತ್ತೆ. ಮತ ಧ್ರುವೀಕರಣಕ್ಕಾಗಿ ಈ ಎಲ್ಲಾ ವಿಚಾರಗಳನ್ನು ಮುಂದಿನ ಒಂದು ವರ್ಷಗಳ ವರೆಗೆ ಜನರ ಮುಂದಿಡುವ ಕೆಲಸ ಬಿಜೆಪಿಯವರು ಮಾಡುತ್ತಾರೆ. ಕಾಂಗ್ರೆಸಿಗರಾದ ನಾವು ಸಮಾಜದ ಹಿಂದುಳಿದ, ದಲಿತ, ಅಲ್ಪಸಂಖ್ಯಾತ, ಶೋಷಿತ ಜನರಿಗೆ ರಕ್ಷಣೆ ಕೊಡಬೇಕು. ಈ ವಿಚಾರ ಮಾತಾಡಿದ್ರೆ ಯಾರೇನು ತಪ್ಪು ತಿಳಿಯುತ್ತಾರೋ ಎಂಬ ಆಲೋಚನೆಗಳಿದ್ದರೆ ಅದನ್ನು ನಾವೆಲ್ಲ ಮೊದಲು ಬಿಡಬೇಕು. ನಮಗೆ ಜಾತ್ಯಾತೀತತೆಯಲ್ಲಿ ಸ್ಪಷ್ಟತೆ ಇರಬೇಕು ಎಂದರು.

RAHUL GANDHI

ಈ ದೇಶ ಯಾವುದೋ ಒಂದು ಜಾತಿ ಧರ್ಮದ ಜನರ ದೇಶವಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್, ಬೌದ್ಧರು, ಸಿಖ್ಖರು ಹೀಗೆ ಎಲ್ಲ ಧರ್ಮಗಳ ಜನರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ದಕ್ಕಿದೆ. ಈ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಬೇಕಾದರೆ ಎಲ್ಲ ವರ್ಗದ ಜನರಿಗೆ ನ್ಯಾಯ ಕೊಡಬೇಕು. ನಾವು ಸಂವಿಧಾನದ ಜಾತ್ಯಾತೀತ ಸಿದ್ದಾಂತದ ರಕ್ಷಣೆಗೆ ಇನ್ನಷ್ಟು ಆಕ್ರಮಣಶೀಲತೆಯಿಂದ ಕೆಲಸ ಮಾಡಬೇಕು. ಈ ವಿಚಾರದಲ್ಲಿ ಸೋನಿಯಾ ಗಾಂಧಿ ಅವರಾಗಲೀ, ರಾಹುಲ್ ಗಾಂಧಿಯವರಾಗಲೀ ಯಾವುದೇ ರೀತಿಯ ರಾಜಿಗೆ ಸಿದ್ಧರಿಲ್ಲ. ಯುವಕರನ್ನು ಪಕ್ಷಕ್ಕೆ ಕರೆತಂದು ಅವರಿಗೆ ಹೆಚ್ಚಿನ ಜವಬ್ದಾರಿ ನೀಡುವ ಕೆಲಸ ಮಾಡಬೇಕು ಎಂದು ರಾಹುಲ್ ಗಾಂಧಿಯವರು ಸದಾ ಹೇಳುತ್ತಿರುತ್ತಾರೆ. ಇದನ್ನೂ ಓದಿ: ಪುನೀತ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ – ಕನ್ನಡದಲ್ಲಿ ಅಪ್ಪುಗೆ ನಮನ ಸಲ್ಲಿಸಿದ ಕಾಂಗ್ರೆಸ್ ನಾಯಕ

ಶಾಂತಿ, ಕಾನೂನು ಸುವ್ಯವಸ್ಥೆ ಇಲ್ಲದ ದೇಶ, ರಾಜ್ಯ ಎಂದಿಗೂ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. ದೇಶ ಅಭಿವೃದ್ಧಿ ಆಗಬೇಕಾದರೆ ಸಮಾಜದಲ್ಲಿ ಸಾಮರಸ್ಯ ಇರಬೇಕು. ಈ ಸಾಮರಸ್ಯ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಬೇಕು. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 135-140 ಸ್ಥಾನಗಳನ್ನು ಗೆಲ್ಲಲೇಬೇಕು, ಆ ಮೂಲಕ ಕೋಮುವಾದಿಗಳನ್ನು ಅಧಿಕಾರದಿಂದ ಕಿತ್ತು ಬಿಸಾಕಬೇಕು. ಹೀಗಾಗಿ ಆ ವ್ಯಕ್ತಿ, ಈ ವ್ಯಕ್ತಿ ಎಂದು ವೈಯಕ್ತಿಕ ಚಿಂತನೆ ಮಾಡದೆ ಎಲ್ಲರೂ ಒಟ್ಟಾಗಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹೋರಾಟ ಮಾಡಬೇಕು. ಪ್ರತಿ ಜಿಲ್ಲೆಯಲ್ಲಿ ಎಲ್ಲರೂ ತಮ್ಮ ಸಲಹೆ ಸೂಚನೆಗಳನ್ನು ಪಕ್ಷಕ್ಕೆ ನೀಡಿ, ನಿಮ್ಮ ಅಭಿಪ್ರಾಯವನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಚುನಾವಣೆಗೆ ಆರು ತಿಂಗಳು ಮೊದಲೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಆಗ ಅವರು ತಮ್ಮೆಲ್ಲ ಸಂಪನ್ಮೂಲಗಳನ್ನು ಕ್ರೋಢೀಕರಿಸಿಕೊಂಡು ಪರಿಣಾಮಕಾರಿಯಾಗಿ ಚುನಾವಣೆ ಎದುರಿಸಲು ಸಾಧ್ಯವಾಗುತ್ತೆ ಎಂದು ರಾಹುಲ್ ಗಾಂಧಿ ಅವರ ಬಳಿ ಮನವಿ ಮಾಡಿದ್ದೇವೆ. ಅದಕ್ಕವರು ಒಪ್ಪಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

ರಾಷ್ಟ್ರೀಯ ನಾಯಕರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನ ಯಶಸ್ವಿಯಾಗಿದೆ. ಈ ಅಭಿಯಾನದ ಯಶಸ್ಸಿಗೆ ಕಾರಣೀಕರ್ತರಾದ ಪಕ್ಷದ ಎಲ್ಲಾ ಶಾಸಕರು, ಮುಖಂಡರು, ಕಾರ್ಯಕರ್ತರಿಗೆ ನನ್ನ ಧನ್ಯವಾದಗಳು. ನಮ್ಮ ಪಕ್ಷದ ಗೆಲುವಿಗೆ ಇದಷ್ಟೇ ಸಾಲದು, ಇದರ ಜೊತೆಗೆ ನಾವೆಲ್ಲ ಮನೆ ಮನೆಗೆ ತೆರಳಿ ಬಿಜೆಪಿಯ ಕೋಮುವಾದದ ನಾಟಕವನ್ನು ಜನರಿಗೆ ಅರ್ಥಮಾಡಿಸುವ ಕೆಲಸ ಮಾಡಬೇಕು. ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ರಾಜ್ಯ ಸರ್ಕಾರದ 40% ಕಮಿಷನ್ ದಂಧೆಯ ಬಗ್ಗೆ ಪ್ರಧಾನಿಗಳಿಗೆ ಪತ್ರ ಬರೆದು ಆರು ತಿಂಗಳಾಯ್ತು, ಚೌಕಿದಾರ್ ಮೋದಿ ಅವರು ಈ ವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ರಾಜ್ಯ ಸರ್ಕಾರದ 40% ಕಮಿಷನ್ ಹಗರಣವನ್ನು ಸದನದಲ್ಲಿ ಪ್ರಸ್ತಾಪ ಮಾಡಲು ಅವಕಾಶ ನೀಡಿಲ್ಲ. ಬಿಜೆಪಿ ಶಾಸಕರೇ ತಮ್ಮ ಪಕ್ಷದ ಸಚಿವರ ಭ್ರಷ್ಟಾಚಾರದ ಬಗ್ಗೆ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಆದರೆ ಸರ್ಕಾರ ಭಂಡತನದಿಂದ ವರ್ತಿಸುತ್ತಿದೆ.

ಇಂತಹ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ 24/7 ಹೋರಾಟವನ್ನು ಇಂದಿನಿಂದಲೇ ಆರಂಭಿಸೋಣ. ಸಮಾಜ, ದೇಶದ ಉಳಿವಿಗಾಗಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರೋಣ ಎಂದು ಕರೆ ನೀಡಿದರು.

TAGGED:Bajrang Dalhijab rownarendra modirssSDPIsiddaramaiahಕಾಂಗ್ರೆಸ್ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories
Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood

You Might Also Like

Bowring Hospital
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ನಿಸ್ವಾರ್ಥ ಸೇವೆ ಸಲ್ಲಿಸಿದ ವೈದ್ಯರು, ಶವಾಗಾರ ಸಿಬ್ಬಂದಿಗೆ ಸನ್ಮಾನ

Public TV
By Public TV
6 minutes ago
West Bengal TMC BJP Clash
Crime

ಪಶ್ಚಿಮ ಬಂಗಾಳದಲ್ಲಿ ಮತ್ತೆ ಟಿಎಂಸಿ – ಬಿಜೆಪಿ ನಡುವೆ ಘರ್ಷಣೆ

Public TV
By Public TV
19 minutes ago
Mumbai Watermelon Death
Latest

ಮುಂಬೈ ಕುಟುಂಬದ ಸಾವಿಗೆ ಕಲ್ಲಂಗಡಿ ಕಾರಣವಲ್ಲ – ಮೃತರ ದೇಹದಲ್ಲಿ ಮಾರ್ಫಿನ್ ಅಂಶ ಪತ್ತೆ

Public TV
By Public TV
25 minutes ago
BN Lavanya
Bengaluru City

ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಎಸ್ಪಿ ಲಾವಣ್ಯ ಸಾವು

Public TV
By Public TV
1 hour ago
Kolar Photographer Suicide
Crime

ಮನೆಯಲ್ಲೇ ಬೆಂಕಿ ಹಚ್ಚಿಕೊಂಡು ಫೋಟೋಗ್ರಾಫರ್ ಆತ್ಮಹತ್ಯೆ

Public TV
By Public TV
2 hours ago
BY Vijayendra 1
Districts

ಮೇ 8ರಂದು ಮಿನಿ ದಸರಾ ಮಾದರಿಯಲ್ಲಿ ಯಡಿಯೂರಪ್ಪನವರ ಪುರ ಪ್ರವೇಶ: ವಿಜಯೇಂದ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?