Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಗುಂಪು ಘರ್ಷಣೆ ಭಾರತೀಯ ಮೂಲದ್ದಲ್ಲ, ಭಾರತವನ್ನು ಅವಮಾನಿಸಲು ಇದನ್ನು ಬಳಸಬೇಡಿ – ಮೋಹನ್ ಭಾಗವತ್

Public TV
Last updated: October 8, 2019 1:55 pm
Public TV
Share
3 Min Read
mohan bhagavat web
SHARE

ಮುಂಬೈ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಇಂದು ವಿಜಯದಶಮಿಯ ಅಂಗವಾಗಿ ಮಹಾರಾಷ್ಟ್ರದ ನಾಗಪುರದ ಕೇಂದ್ರ ಕಚೇರಿಯಲ್ಲಿ ಆಯುಧ ಪೂಜೆಯನ್ನು ನೆರವೇರಿಸಿದರು.

ಸ್ವಯಂ ಸೇವಕರು ಡ್ರಿಲ್ ಮೂಲಕ ಪಥಸಂಚಲನ ನಡೆಸಿದ ನಂತರ ಮೋಹನ್ ಭಾಗವತ್ ಅವರು ಆಯುಧ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿದರು. ಪೂಜೆಯ ಬಳಿಕ ರೇಶಿಂಬಾಗ್ ಮೈದಾನದಲ್ಲಿ ಸ್ವಯಂ ಸೇವಕರನ್ನು ಉದ್ದೇಶಿಸಿ ಮೋಹನ್ ಭಾಗವತ್ ಭಾಷಣ ಮಾಡಿದರು.

ಗುಂಪು ಘರ್ಷಣೆ(ಲಿಂಚಿಂಗ್) ಭಾರತದಲ್ಲ. ಇದು ಕೇವಲ ಒಂದು ನಿರ್ಧಿಷ್ಟ ಸಮುದಾಯದ ಜನರನ್ನು ಮಾತ್ರ ಗುರಿಯಾಗಿಸುವುದಿಲ್ಲ. ಹಿಮ್ಮುಖವಾಗಿಯೂ ಪರಿಣಾಮ ಬೀರುತ್ತದೆ. ಅಭಿಪ್ರಾಯ ಬೇಧ ಏನೇ ಇರಲಿ ಅಥವಾ ಯಾವುದೇ ಪ್ರಚೋದನಕಾರಿ ಕ್ರಮಗಳು ನಡೆದಿರಲಿ. ಇದರ ಹೊರತಾಗಿಯೂ ಸಮಾಜ ಸಂವಿಧಾನದ ಮಿತಿಯಲ್ಲಿ ಉಳಿಯಬೇಕು ಎಂದು ಮೋಹನ್ ಭಾಗವತ್ ಅಭಿಪ್ರಾಯಪಟ್ಟರು.

RSS Chief Mohan Bhagwat in Nagpur: Branding some incidents of social violence as lynching are actually meant to defame our country, Hindu society & create fear among some communities. #Maharashtra pic.twitter.com/eSP9BlJnMb

— ANI (@ANI) October 8, 2019

ಗುಂಪು ಘರ್ಷಣೆ ಎಂಬುದು ಭಾರತೀಯ ಮೂಲದ ಪದವಲ್ಲ. ಅದರ ಮೂಲವು ಪ್ರತ್ಯೇಕ ಧಾರ್ಮಿಕ ಪಠ್ಯದಲ್ಲಿನ ಕಥೆಯಿಂದ ಬಂದಿದೆ. ನಾವು ಭಾರತೀಯರು ಸಹೋದರತ್ವವನ್ನು ನಂಬುತ್ತೇವೆ. ಭಾರತೀಯರ ಮೇಲೆ ಅಂತಹ ನಿಯಮಗಳನ್ನು ಹೇರಬೇಡಿ. ಲಿಂಚಿಂಗ್ ಸ್ವತಃ ಪಾಶ್ಚಿಮಾತ್ಯ ಮೂಲದ್ದಾಗಿದೆ. ದೇಶವನ್ನು ಅವಮಾನಿಸಲು ಭಾರತೀಯರ ವಿಷಯದಲ್ಲಿ ಇದನ್ನು ಬಳಸಬಾರದು ಎಂದು ಮನವಿ ಮಾಡಿಕೊಂಡರು.

ಜಮ್ಮು ಕಾಶ್ಮೀರದ 370ನೇ ವಿಧಿ ರದ್ದುಗೊಳಿಸಿರುವ ಸರ್ಕಾರದ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಶ್ಲಾಘಿಸಿದರು. ಕೆಲ ಪಟ್ಟಭದ್ರ ಹಿತಾಸಕ್ತಿಗಳು ಭಾರತ ಸದೃಢವಾಗಿರುವುದನ್ನು ಬಯಸುವುದಿಲ್ಲ. 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ಸರ್ಕಾರವು ನಮ್ಮ ನಿರೀಕ್ಷೆಗಳನ್ನು ಈಡೇರಿಸುವ ಧೈರ್ಯವನ್ನು ಹೊಂದಿದೆ ಎಂದು ತೋರಿಸಿದೆ. ದೇಶ ಹಿತದೃಷ್ಟಿಯಿಂದ ಜನರ ಭಾವನೆ ಹಾಗೂ ಆಶಯಗಳನ್ನು ಗೌರವಿಸುತ್ತದೆ ಎಂದು ಮತ್ತೊಮ್ಮೆ ಸಾಬೀತುಪಡಿಸಿದೆ ವಿಶ್ವಾಸ ವ್ಯಕ್ತಪಡಿಸಿದರು.

ಪ್ರತಿಯೊಬ್ಬ ವ್ಯಕ್ತಿಯೂ ಕಾನೂನಿನಡಿಯಲ್ಲಿ ಬದುಕಬೇಕು, ಸಾಮರಸ್ಯ ಮೂಡಿಸಬೇಕು. ಆ ಸಂಸ್ಕಾರದೊಂದಿಗೆ ಸ್ವಯಂ ಸೇವಕರನ್ನು ಬೆಳೆಸಲಾಗುತ್ತದೆ ಎಂದು ತಿಳಿಸಿದರು.

Move against Art 370 proved re-elected regime's wishes in interest of country: Mohan Bhagwat

Read @ANI Story| https://t.co/TIxmYWl0Ta pic.twitter.com/ndutx7jAnJ

— ANI Digital (@ani_digital) October 8, 2019

ಕಳೆದ ಕೆಲವು ವರ್ಷಗಳಿಂದ ಭಾರತದ ಚಿಂತನೆ ಪ್ರಕ್ರಿಯೆಯ ದಿಕ್ಕಿನಲ್ಲಿ ಪರಿವರ್ತನೆ ಕಂಡುಬಂದಿದೆ. ಜಗತ್ತಿನಲ್ಲಿ ಹಾಗೂ ದೇಶದಲ್ಲಿನ ಹಲವರು ಇದನ್ನು ಬಯಸುವುದಿಲ್ಲ. ಅಭಿವೃದ್ಧಿ ಹೊಂದಿದ ಭಾರತ ಪಟ್ಟಭದ್ರ ಹಿತಾಸಕ್ತಿಗಳ ಮನಸ್ಸಿನಲ್ಲಿ ಭಯವನ್ನುಂಟು ಮಾಡುತ್ತದೆ. ಅಂತಹ ಶಕ್ತಿಗಳು ಭಾರತ ಬಲಶಾಲಿಯಾಗುವುದನ್ನು ಬಯಸುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರ ಮತ್ತು ಆಡಳಿತದಲ್ಲಿ ವ್ಯಕ್ತಿಗಳು ಹೊರಡಿಸಿದ ಹೇಳಿಕೆಗಳನ್ನು ಸಹ ಪಟ್ಟಭದ್ರ ಹಿತಾಸಕ್ತಿಗಳಿಂದ ಕೆಟ್ಟದಕ್ಕೆ ಅನುಕೂಲವಾಗುವಂತೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಇಂತಹವುಗಳನ್ನು ನಾವು ಗುರುತಿಸುವಲ್ಲಿ ನಾವು ಜಾಗರೂಕರಾಗಿರಬೇಕು ಮತ್ತು ಅವುಗಳನ್ನು ಬೌದ್ಧಿಕ ಮತ್ತು ಸಾಮಾಜಿಕ ಮಟ್ಟದಲ್ಲಿ ಎದುರಿಸಬೇಕು ಎಂದು ಎಚ್ಚರಿಸಿದ್ದಾರೆ.

2019ರ ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಅವರು, ಇಷ್ಟು ದೊಡ್ಡ ದೇಶದಲ್ಲಿ ಮತದಾನ ಸುಗಮವಾಗಿ ನಡೆಯುತ್ತದೆಯೇ ಎಂದು ತಿಳಿಯಲು ಅಂತರಾಷ್ಟ್ರೀಯ ಸಮುದಾಯ ಆಸಕ್ತಿ ಹೊಂದಿದೆ. ಭಾರತದ ಪ್ರಜಾಪ್ರಭುತ್ವ ಯಾವುದೇ ದೇಶದಿಂದ ಆಮದು ಮಾಡಿಕೊಂಡಿದ್ದಲ್ಲ, ಶತಮಾನಗಳಿಂದಲೂ ಇಲ್ಲಿ ಪ್ರಚಲಿತದಲ್ಲಿದ್ದದ್ದು ಎಂದು ಭಾಗವತ್ ತಿಳಿಸಿದರು.

RSS Chief Mohan Bhagwat in Nagpur: In such incidents, RSS members do not get involved rather they try to stop it. Par iss sabko ko tarah tarah se pesh karke, use jhagda banane ka kaam chal raha hai. Ek shadyantra chal raha hai, yeh sabko samajhna chaiye. #Maharashtra https://t.co/TBuKHRxr2n

— ANI (@ANI) October 8, 2019

ಭಾರತದ ಗಡಿಗಳು ಹಿಂದೆಂದಿಗಿಂತಲೂ ಸುರಕ್ಷಿತವಾಗಿವೆ. ಆದರೆ ಕರಾವಳಿ ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನಹರಿಸಬೇಕಿದೆ. ಭೂ ಗಡಿಗಳಲ್ಲಿ ಸೈನಿಕರು ಹಾಗೂ ಚೆಕ್ ಪೋಸ್ಟ್ ಗಳ ಸಂಖ್ಯೆ ಮತ್ತು ಕಡಲ ಗಡಿಯುದ್ದಕ್ಕೂ ವಿಶೇಷ ದ್ವೀಪಗಳಲ್ಲಿ ಕಣ್ಗಾವಲು ಹೆಚ್ಚಿಸಬೇಕು ಎಂದು ಸಲಹೆ ನೀಡಿದರು.

ಆರ್ಥಿಕ ಕ್ಷೇತ್ರದ ಕುರಿತು ಕಳವಳ ವ್ಯಕ್ತಪಡಿಸಿದ ಅವರು, ವಿಶ್ವ ಆರ್ಥಿಕತೆಯ ನಿಧಾನಗತಿಯು ಇತರ ಎಲ್ಲ ದೇಶಗಳ ಮೇಲೆ ಪರಿಣಾಮ ಬೀರಿದೆ. ಪರಿಸ್ಥಿತಿ ನಿಭಾಯಿಸಲು ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ. ನಮ್ಮ ಸಮಾಜ ಉದ್ಯಮಶೀಲವಾಗಿದ್ದು, ಈ ಸವಾಲನ್ನು ನಿವಾರಿಸುವ ಸಾಮಥ್ರ್ಯ ಹೊಂದಿದೆ ಎಂದು ಭರವಸೆ ವ್ಯಕ್ತಪಡಿಸಿದರು.

ಮೋಹನ್ ಭಾಗವತ್ ಅವರ ಭಾಷಣವನ್ನು ಆರ್ ಎಸ್‍ಎಸ್ ತನ್ನದೇ ಆದ ಇಂಟರ್ನೆಟ್ ಆಧಾರಿತ ರೇಡಿಯೋ ಚಾನೆಲ್ ಪ್ರಸಾರ ಮಾಡಿದೆ. ಅಲ್ಲದೆ ಸರಸಂಘಚಾಲಕರಿಗೆ ದಸರಾ ಹಬ್ಬ ಮಹತ್ವದ್ದಾಗಿದ್ದು, 1925ರಲ್ಲಿ ಇದೇ ದಿನದಂದು ಆರ್‍ಎಸ್‍ಎಸ್ ಸ್ಥಾಪನೆಯಾಗಿದೆ. ಹೀಗಾಗಿ ಆರ್ ಎಸ್‍ಎಸ್ ಕಾರ್ಯಕರ್ತರಿಗೆ ಇದು ವಿಶೇಷ ದಿನವಾಗಿದೆ.

RSS Chief Mohan Bhagwat at an event organised on the occasion of #VijayaDashami in Nagpur:The move of the re-elected regime to nullify #Article370 has once again proved that it has courage to fulfill those expectations&respect people’s sentiments&wishes in interest of the country pic.twitter.com/v5lzx7Qu3i

— ANI (@ANI) October 8, 2019

ಈ ವರ್ಷದ ಆರ್ ಎಸ್‍ಎಸ್ ದಸರಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಐಟಿ ಕಂಪನಿ ಎಚ್‍ಸಿಎಲ್ ಟೆಕ್ನಾಲಜೀಸ್‍ನ ಸಂಸ್ಥಾಪಕ ಶಿವ ನಾಡರ್ ಭಾಗವಹಿಸಿದ್ದರು. ಕೇಂದ್ರ ಸಚಿವ ನಿತಿನ್ ಗಡ್ಕರಿ, ಜನರಲ್ ವಿ.ಕೆ. ಸಿಂಗ್(ನಿವೃತ್ತ) ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಇತರರು ಪಾಲ್ಗೊಂಡಿದ್ದರು.

TAGGED:Ayudha PujaDasaramohan bhagwatPublic TVrssಆಯುಧ ಪೂಜಾಆರ್‍ಎಸ್‍ಎಸ್ದಸರಾಪಬ್ಲಿಕ್ ಟಿವಿಮೋಹನ್ ಭಾಗವತ್
Share This Article
Facebook Whatsapp Whatsapp Telegram

Cinema Updates

Ananth Nag MODI
ಹೈ ಟೀ ಸಮಾರಂಭದಲ್ಲಿ ಮೋದಿ ಭೇಟಿಯಾದ ಅನಂತ್‌ನಾಗ್‌
7 hours ago
Vikram Sugumaran
ನಿರ್ಮಾಪಕರಿಗೆ ಕತೆ ಹೇಳಿ ವಾಪಸ್ ಆಗುತ್ತಿದ್ದಾಗ ಹೃದಯಾಘಾತ – ತಮಿಳು ನಿರ್ದೇಶಕ ವಿಕ್ರಂ ಸುಗುಮಾರನ್ ನಿಧನ
9 hours ago
Vaishnavi Gowda Seetha Rama Serial Anukool Mishra
ಸೀರಿಯಲ್ ನಟಿ ವೈಷ್ಣವಿ ಗೌಡ ಮದುವೆ ಶಾಸ್ತ್ರಗಳು ಆರಂಭ‌
11 hours ago
shivarame gowda
ಕಮಲ್ ಹೇಳಿಕೆ ನೋಡಿದ್ರೆ.. ಕನ್ನಡಿಗರೆಲ್ಲಾ ತಮಿಳಿಗೆ ಹುಟ್ಟಿದ್ದಾರೆ ಅನ್ನೋ ರೀತಿಯಿದೆ – ಶಿವರಾಮೇಗೌಡ ಲೇವಡಿ
12 hours ago

You Might Also Like

RCB vs PBKS
Cricket

IPL Final | ಚೊಚ್ಚಲ ಐಪಿಎಲ್‌ ಟ್ರೋಫಿಗಾಗಿ ಮದಗಜಗಳ ಗುದ್ದಾಟ – ಆರ್‌ಸಿಬಿಯೇ ಗೆಲ್ಲುವ ಫೆವರೆಟ್‌

Public TV
By Public TV
3 hours ago
pathrode
Food

ಮಳೆಗಾಲಕ್ಕೆ ಮಲೆನಾಡು ಸ್ಪೆಷಲ್‌ – ಟೇಸ್ಟಿ ಪತ್ರೊಡೆ ರೆಸಿಪಿ!

Public TV
By Public TV
5 hours ago
Vladimir Putin
Latest

ಶಾಂತಿ ಸಭೆ ಮೊಟಕು – ಬೇಷರತ್‌ ಕದನ ವಿರಾಮ ಮಾತುಕತೆ ತಿರಸ್ಕರಿಸಿದ ರಷ್ಯಾ

Public TV
By Public TV
5 hours ago
02 1
Big Bulletin

ಬಿಗ್‌ ಬುಲೆಟಿನ್‌ 02 June 2025 ಭಾಗ- 1

Public TV
By Public TV
6 hours ago
03 1
Big Bulletin

ಬಿಗ್‌ ಬುಲೆಟಿನ್‌ 02 June 2025 ಭಾಗ- 2

Public TV
By Public TV
6 hours ago
04 NEW
Big Bulletin

ಬಿಗ್‌ ಬುಲೆಟಿನ್‌ 02 June 2025 ಭಾಗ- 3

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?