Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಎಸ್‌ಎಸ್‌ Vs ಸರ್ಕಾರ – ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಆರ್‌ಎಸ್‌ಎಸ್‌ Vs ಸರ್ಕಾರ – ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು?

Court

ಆರ್‌ಎಸ್‌ಎಸ್‌ Vs ಸರ್ಕಾರ – ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು?

Public TV
Last updated: October 19, 2025 11:52 am
Public TV
Share
3 Min Read
Kalaburagi Dharwad Benches of the High Court
SHARE

ಕಲಬುರಗಿ: ಚಿತ್ತಾಪುರದಲ್ಲಿ (Chittapur) ಆರ್‌ಎಸ್‌ಎಸ್‌ ಪಥಸಂಚಲನ (RSS Route March) ವಿಚಾರ ಈಗ ಹೈಕೋರ್ಟ್‌ (High Court) ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ವಾದವನ್ನು ಕೋರ್ಟ್‌ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ.

ಐಟಿ, ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ತಾಲೂಕು ಆಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಕೋರ್ಟ್‌ ಇಂದು ಯಾವುದೇ ಆದೇಶ ಪ್ರಕಟಿಸದೇ ಮುಂದಿನ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿದೆ.

ವಿಚಾರಣೆ ಸಂದರ್ಭದಲ್ಲಿ ಆರ್‌ಎಸ್‌ಎಸ್‌ ಪರ ವಕೀಲರು ನ.2 ರಂದು ಪಥಸಂಚಲನ ನಡೆಸಲು ಅನುಮತಿ ನೀಡುವಂತೆ ಕೇಳಿದ್ದಾರೆ. ಇದನ್ನೂ ಓದಿ: ಕಾನೂನು ಸುವ್ಯವಸ್ಥೆ ಹಾಳಾಗಬಹುದು – ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಇಲ್ಲ

ವಿಚಾರಣೆಯಲ್ಲಿ ಏನಾಯ್ತು?
ಅರ್ಜಿದಾರ ಅಶೋಕ್‌ ಪಾಟೀಲ್‌ ಪರವಾಗಿ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ ವಾದಿಸಿದರು. ಈ ವೇಳೆ ಆರಂಭದಲ್ಲಿ ಪೀಠ ಪಥಸಂಚಲನಕ್ಕೆ ಅನುಮತಿ ಕೋರಿ ಯಾವ ಪ್ರಾಧಿಕಾರಕ್ಕೆ ಅನುಮತಿ ಕೇಳಬೇಕು? ಯಾವ ಕಾನೂನಿನ ಅಡಿ ಅನುಮತಿ ಕೋರಬೇಕು ಎಂಬ ವಿಚಾರದ ಬಗ್ಗೆ ಮಾತ್ರ ವಾದಿಸಿ ಎಂದು ಸೂಚಿಸಿತು.

ಇದಕ್ಕೆ ಅರುಣ್‌ ಶಾಮ್‌ ಅ.17ಕ್ಕೆ ಚಿತ್ತಾಪುರದ ಕಾರ್ಯಕಾರಿ ಮ್ಯಾಜಿಸ್ಟ್ರೇಟ್‌ಗೆ ಅನುಮತಿ ಕೋರಲಾಗಿತ್ತು. ಆದರೆ ಅ.18 ರಂದು ಈ ಮನವಿಯನ್ನು ತಿರಸ್ಕರಿಸಿದ್ದಾರೆ ಎಂದು ಪೀಠದ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಒಂದು ಗುಂಪು ಪಂಥಸಂಚಲನ ನಡೆಸಲು ಅವಕಾಶವಿದೆಯೇ? ಅದು ಪ್ರತಿಭಟನೆಯೇ ಆಗಿರಬೇಕಿಂದಿಲ್ಲ. ಅದು ಮೌನ ಪ್ರತಿಭಟನೆಯಾಗಿರಬಹುದು? ಜನರಲ್ಲಿ ಜಾಗೃತಿ ಮೂಡಿಸಲು ಇಚ್ಛಿಸಬಹುದು? ಇದಕ್ಕೆ ಅನುಮತಿ ಬೇಕೆ? ಹಾಗಾದರೆ ಯಾರಿಂದ ಅನುಮತಿ ಪಡೆಯಬೇಕು? ಯಾವ ಕಾನೂನು ಜಾರಿಯಲ್ಲಿದೆ. ಯಾವ ಕಾನೂನಿನ ನಿಬಂಧನೆಗೆ ನಾವು ಒಳಪಟ್ಟಿದ್ದೇವೆ. ಯಾರಿಗೆ ಅನುಮತಿ ಕೇಳಬೇಕು ಎಂಬುದು ಗೊತ್ತಾಗಬೇಕು. ಇಲ್ಲವಾದಲ್ಲಿ ನಾವು ನಿಯಮವಿಲ್ಲದ ಆಡಳಿತಕ್ಕೆ ಒಳಪಡುತ್ತೇವೆ ಎಂದು ಹೇಳಿತು.

ಇದಕ್ಕೆ ಅರುಣ್‌ ಶ್ಯಾಮ್‌ ಅವರು ಪಥಸಂಚನವನ್ನು ರದ್ದುಪಡಿಸುವುದು ಅವರ ಉದ್ದೇಶವಾಗಿತ್ತು. ಹೀಗಾಗಿ ಅವರು ಅನುಮತಿ ನಿರಾಕರಿಸಿದ್ದಾರೆ ಎಂದು ಉತ್ತರಿಸಿದರು.

ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ವಾದಿಸಿ, ಬೇರೊಂದು ಸಂಘಟನೆ ಇಂದು ಪಥಸಂಚಲಕ್ಕೆ ಅನುಮತಿ ಕೋರಿದೆ. ಹೀಗಾಗಿ ತಾಲೂಕು ಆಡಳಿತ ಯಾವುದೇ ಸಂಘಟನೆಗೆ ಪಥಸಂಚಲನ ನಡೆಸಲು ಅನುಮತಿ ನೀಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ:  ಪ್ರಿಯಾಂಕ್‌ ಕ್ಷೇತ್ರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ – 12 ಪ್ರಶ್ನೆ ಕೇಳಿದ ಸರ್ಕಾರ

ಇದಕ್ಕೆ ಪೀಠ ಎರಡೂ ಸಂಘಟನೆಗಳಿಗೆ ಬೇರೆ ಬೇರೆ ದಿನ ಅನುಮತಿ ನೀಡಿ ಎಂದಾಗ ಅರುಣ್‌ ಶ್ಯಾಮ್‌ ಇದು ಸಾಧ್ಯವಿಲ್ಲ. ಬೇರೆ ಸ್ಥಳ ನೀಡಬಹುದು ಎಂದು ಮನವಿ ಮಾಡಿದರು. ಕೊನೆಗೆ ನವೆಂಬರ್‌ 2 ರಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಅನುಮತಿಸಿದರೆ ಉತ್ತಮ. ಅಷ್ಟೇ ಅಲ್ಲದೇ ರಾಜ್ಯದ್ಯಂತ ಇದೂವರೆಗೆ 250 ಕಡೆ ಪಥಸಂಚಲನ ನಡೆಸಲಾಗಿದೆ. ಎಲ್ಲಿಯೂ ಸಮಸ್ಯೆಯಾಗಿಲ್ಲ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲಾಗುವುದು ಎಂದು ಅರುಣ್‌ ಶ್ಯಾಮ್‌ ಮುಚ್ಚಳಿಕೆ ನೀಡಿದರು.

ಕೊನೆಗೆ ಕೋರ್ಟ್‌ ಯಾವ ರಸ್ತೆ ಮಾರ್ಗ ಪಥಸಂಚಲನ ನಡೆಯಲಿದೆ? ಎಷ್ಟು ಜನ ಭಾಗವಹಿಸುತ್ತಾರೆ ಎಂಬುದನ್ನು ಅರ್ಜಿದಾರರು ಸರ್ಕಾರಕ್ಕೆ ನೀಡಬೇಕು. ಹೊಸದಾಗಿ ಅರ್ಜಿ ಸಲ್ಲಿಸಿ ಪಥ ಸಂಚಲನದ ಮಾಹಿತಿ, ದಿನಾಂಕ ಎಲ್ಲಾ ವಿವರಗಳನ್ನು ಒಳಗೊಂಡ ಮನವಿಯನ್ನು ಅರ್ಜಿದಾರರು ಜಿಲ್ಲಾಧಿಕಾರಿಗೆ ನೀಡಬೇಕು. ಇದರ ಪ್ರತಿಯನ್ನು ಅರ್ಜಿದಾರರು ತಹಶೀಲ್ದಾರ್‌, ಸ್ಥಳೀಯ ಪೊಲೀಸರಿಗೆ ನೀಡಬೇಕು ಎಂದು ಸೂಚಿಸಿತು.

ಎಲ್ಲಾ ಮಾಹಿತಿಯನ್ನು ಪರಿಗಣಿಸಿ ಸರ್ಕಾರ ವರದಿ ಸಲ್ಲಿಸಬೇಕು. ಇಂದು ಅರ್ಜಿಗೆ ಸಂಬಂಧಿಸಿದಂತೆ ಮೆರಿಟ್‌ ಮೇಲೆ ಯಾವುದೇ ಆದೇಶ ನೀಡುವುದಿಲ್ಲ. ಸರ್ಕಾರದ ವರದಿ ಆಧರಿಸಿ ಪ್ರಕರಣ ಪರಿಗಣಿಸಲಾಗುವುದು ಎಂದು ಸೂಚಿಸಿದ ನ್ಯಾಯಾಲಯ ಅ. 24ರ ಮಧ್ಯಾಹ್ನ 3:30 ವಿಚಾರಣೆಯನ್ನು ಮುಂದೂಡಿತು.

TAGGED:ChittapurKalaburagikarnatakarssಆರ್‍ಎಸ್‍ಎಸ್ಕರ್ನಾಟಕಕಲಬುರಗಿಚಿತ್ತಾಪುರಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

CLP Meeting
Bengaluru City

ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕರ ಗಲಾಟೆ; ಕೈಕೈ ಮಿಲಾಯಿಸುವ ಹಂತಕ್ಕೆ ಜಗಳ

Public TV
By Public TV
5 hours ago
pm modi kerala
Latest

ಮಧ್ಯಪ್ರಾಚ್ಯ ಯುದ್ಧ ವಿಚಾರವನ್ನ ಕಾಂಗ್ರೆಸ್ ರಾಜಕೀಯಗೊಳಿಸುತ್ತಿದೆ: ಮೋದಿ ಕಿಡಿ

Public TV
By Public TV
6 hours ago
karwar district police office
Latest

ಉತ್ತರ ಕನ್ನಡದ 50% ಪೊಲೀಸರಿಗೆ ಸಂಬಳವಾಗದೇ ಪರದಾಟ

Public TV
By Public TV
6 hours ago
UP Brain Dead Woman back to life after ambulance hits pothole 1
Latest

ಬ್ರೈನ್ ಡೆಡ್ ಆಗಿದ್ದ ಮಹಿಳೆಗೆ ರಸ್ತೆಗುಂಡಿಯಿಂದ ಬಂತು ಪ್ರಜ್ಞೆ

Public TV
By Public TV
8 hours ago
Chandru Lamani
Bengaluru City

ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಷರತ್ತುಬದ್ಧ ಜಾಮೀನು

Public TV
By Public TV
8 hours ago
Central government delegation KEA
Bengaluru City

ಕೆಇಎ ಪರೀಕ್ಷಾ ವ್ಯವಸ್ಥೆ ಅಧ್ಯಯನಕ್ಕೆ ಬಂದ ಕೇಂದ್ರ ಸರ್ಕಾರದ ನಿಯೋಗ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?