Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆರ್‌ಎಸ್‌ಎಸ್‌ Vs ಸರ್ಕಾರ – ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ಆರ್‌ಎಸ್‌ಎಸ್‌ Vs ಸರ್ಕಾರ – ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು?

Court

ಆರ್‌ಎಸ್‌ಎಸ್‌ Vs ಸರ್ಕಾರ – ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ಒಪ್ಪಿದ ಲಾಯರ್‌ | ಹೈಕೋರ್ಟ್‌ನಲ್ಲಿ ಏನಾಯಿತು?

Public TV
Last updated: October 19, 2025 11:52 am
Public TV
Share
3 Min Read
Kalaburagi Dharwad Benches of the High Court
SHARE

ಕಲಬುರಗಿ: ಚಿತ್ತಾಪುರದಲ್ಲಿ (Chittapur) ಆರ್‌ಎಸ್‌ಎಸ್‌ ಪಥಸಂಚಲನ (RSS Route March) ವಿಚಾರ ಈಗ ಹೈಕೋರ್ಟ್‌ (High Court) ಮೆಟ್ಟಿಲೇರಿದೆ. ಆರ್‌ಎಸ್‌ಎಸ್‌ ವಾದವನ್ನು ಕೋರ್ಟ್‌ ಪುರಸ್ಕರಿಸಿದರೆ ನ.2 ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಯುವ ಸಾಧ್ಯತೆಯಿದೆ.

ಐಟಿ, ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ತವರು ಕ್ಷೇತ್ರವಾದ ಚಿತ್ತಾಪುರದಲ್ಲಿ ಇಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಮುಂದಾಗಿತ್ತು. ಆದರೆ ತಾಲೂಕು ಆಡಳಿತ ಅನುಮತಿ ನೀಡದ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಹೈಕೋರ್ಟ್‌ನಲ್ಲಿ ತುರ್ತು ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಪುರಸ್ಕರಿಸಿ ವಿಚಾರಣೆ ನಡೆಸಿದ ಕೋರ್ಟ್‌ ಇಂದು ಯಾವುದೇ ಆದೇಶ ಪ್ರಕಟಿಸದೇ ಮುಂದಿನ ವಿಚಾರಣೆಯನ್ನು ಅ.24ಕ್ಕೆ ಮುಂದೂಡಿದೆ.

ವಿಚಾರಣೆ ಸಂದರ್ಭದಲ್ಲಿ ಆರ್‌ಎಸ್‌ಎಸ್‌ ಪರ ವಕೀಲರು ನ.2 ರಂದು ಪಥಸಂಚಲನ ನಡೆಸಲು ಅನುಮತಿ ನೀಡುವಂತೆ ಕೇಳಿದ್ದಾರೆ. ಇದನ್ನೂ ಓದಿ: ಕಾನೂನು ಸುವ್ಯವಸ್ಥೆ ಹಾಳಾಗಬಹುದು – ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಇಲ್ಲ

ವಿಚಾರಣೆಯಲ್ಲಿ ಏನಾಯ್ತು?
ಅರ್ಜಿದಾರ ಅಶೋಕ್‌ ಪಾಟೀಲ್‌ ಪರವಾಗಿ ಹಿರಿಯ ವಕೀಲ ಎಂ ಅರುಣ್‌ ಶ್ಯಾಮ್‌ ವಾದಿಸಿದರು. ಈ ವೇಳೆ ಆರಂಭದಲ್ಲಿ ಪೀಠ ಪಥಸಂಚಲನಕ್ಕೆ ಅನುಮತಿ ಕೋರಿ ಯಾವ ಪ್ರಾಧಿಕಾರಕ್ಕೆ ಅನುಮತಿ ಕೇಳಬೇಕು? ಯಾವ ಕಾನೂನಿನ ಅಡಿ ಅನುಮತಿ ಕೋರಬೇಕು ಎಂಬ ವಿಚಾರದ ಬಗ್ಗೆ ಮಾತ್ರ ವಾದಿಸಿ ಎಂದು ಸೂಚಿಸಿತು.

ಇದಕ್ಕೆ ಅರುಣ್‌ ಶಾಮ್‌ ಅ.17ಕ್ಕೆ ಚಿತ್ತಾಪುರದ ಕಾರ್ಯಕಾರಿ ಮ್ಯಾಜಿಸ್ಟ್ರೇಟ್‌ಗೆ ಅನುಮತಿ ಕೋರಲಾಗಿತ್ತು. ಆದರೆ ಅ.18 ರಂದು ಈ ಮನವಿಯನ್ನು ತಿರಸ್ಕರಿಸಿದ್ದಾರೆ ಎಂದು ಪೀಠದ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ಒಂದು ಗುಂಪು ಪಂಥಸಂಚಲನ ನಡೆಸಲು ಅವಕಾಶವಿದೆಯೇ? ಅದು ಪ್ರತಿಭಟನೆಯೇ ಆಗಿರಬೇಕಿಂದಿಲ್ಲ. ಅದು ಮೌನ ಪ್ರತಿಭಟನೆಯಾಗಿರಬಹುದು? ಜನರಲ್ಲಿ ಜಾಗೃತಿ ಮೂಡಿಸಲು ಇಚ್ಛಿಸಬಹುದು? ಇದಕ್ಕೆ ಅನುಮತಿ ಬೇಕೆ? ಹಾಗಾದರೆ ಯಾರಿಂದ ಅನುಮತಿ ಪಡೆಯಬೇಕು? ಯಾವ ಕಾನೂನು ಜಾರಿಯಲ್ಲಿದೆ. ಯಾವ ಕಾನೂನಿನ ನಿಬಂಧನೆಗೆ ನಾವು ಒಳಪಟ್ಟಿದ್ದೇವೆ. ಯಾರಿಗೆ ಅನುಮತಿ ಕೇಳಬೇಕು ಎಂಬುದು ಗೊತ್ತಾಗಬೇಕು. ಇಲ್ಲವಾದಲ್ಲಿ ನಾವು ನಿಯಮವಿಲ್ಲದ ಆಡಳಿತಕ್ಕೆ ಒಳಪಡುತ್ತೇವೆ ಎಂದು ಹೇಳಿತು.

ಇದಕ್ಕೆ ಅರುಣ್‌ ಶ್ಯಾಮ್‌ ಅವರು ಪಥಸಂಚನವನ್ನು ರದ್ದುಪಡಿಸುವುದು ಅವರ ಉದ್ದೇಶವಾಗಿತ್ತು. ಹೀಗಾಗಿ ಅವರು ಅನುಮತಿ ನಿರಾಕರಿಸಿದ್ದಾರೆ ಎಂದು ಉತ್ತರಿಸಿದರು.

ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ವಾದಿಸಿ, ಬೇರೊಂದು ಸಂಘಟನೆ ಇಂದು ಪಥಸಂಚಲಕ್ಕೆ ಅನುಮತಿ ಕೋರಿದೆ. ಹೀಗಾಗಿ ತಾಲೂಕು ಆಡಳಿತ ಯಾವುದೇ ಸಂಘಟನೆಗೆ ಪಥಸಂಚಲನ ನಡೆಸಲು ಅನುಮತಿ ನೀಡಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ:  ಪ್ರಿಯಾಂಕ್‌ ಕ್ಷೇತ್ರ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ – 12 ಪ್ರಶ್ನೆ ಕೇಳಿದ ಸರ್ಕಾರ

ಇದಕ್ಕೆ ಪೀಠ ಎರಡೂ ಸಂಘಟನೆಗಳಿಗೆ ಬೇರೆ ಬೇರೆ ದಿನ ಅನುಮತಿ ನೀಡಿ ಎಂದಾಗ ಅರುಣ್‌ ಶ್ಯಾಮ್‌ ಇದು ಸಾಧ್ಯವಿಲ್ಲ. ಬೇರೆ ಸ್ಥಳ ನೀಡಬಹುದು ಎಂದು ಮನವಿ ಮಾಡಿದರು. ಕೊನೆಗೆ ನವೆಂಬರ್‌ 2 ರಂದು ಆರ್‌ಎಸ್‌ಎಸ್‌ ಪಥಸಂಚಲನ ನಡೆಸಲು ಅನುಮತಿಸಿದರೆ ಉತ್ತಮ. ಅಷ್ಟೇ ಅಲ್ಲದೇ ರಾಜ್ಯದ್ಯಂತ ಇದೂವರೆಗೆ 250 ಕಡೆ ಪಥಸಂಚಲನ ನಡೆಸಲಾಗಿದೆ. ಎಲ್ಲಿಯೂ ಸಮಸ್ಯೆಯಾಗಿಲ್ಲ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲಾಗುವುದು ಎಂದು ಅರುಣ್‌ ಶ್ಯಾಮ್‌ ಮುಚ್ಚಳಿಕೆ ನೀಡಿದರು.

ಕೊನೆಗೆ ಕೋರ್ಟ್‌ ಯಾವ ರಸ್ತೆ ಮಾರ್ಗ ಪಥಸಂಚಲನ ನಡೆಯಲಿದೆ? ಎಷ್ಟು ಜನ ಭಾಗವಹಿಸುತ್ತಾರೆ ಎಂಬುದನ್ನು ಅರ್ಜಿದಾರರು ಸರ್ಕಾರಕ್ಕೆ ನೀಡಬೇಕು. ಹೊಸದಾಗಿ ಅರ್ಜಿ ಸಲ್ಲಿಸಿ ಪಥ ಸಂಚಲನದ ಮಾಹಿತಿ, ದಿನಾಂಕ ಎಲ್ಲಾ ವಿವರಗಳನ್ನು ಒಳಗೊಂಡ ಮನವಿಯನ್ನು ಅರ್ಜಿದಾರರು ಜಿಲ್ಲಾಧಿಕಾರಿಗೆ ನೀಡಬೇಕು. ಇದರ ಪ್ರತಿಯನ್ನು ಅರ್ಜಿದಾರರು ತಹಶೀಲ್ದಾರ್‌, ಸ್ಥಳೀಯ ಪೊಲೀಸರಿಗೆ ನೀಡಬೇಕು ಎಂದು ಸೂಚಿಸಿತು.

ಎಲ್ಲಾ ಮಾಹಿತಿಯನ್ನು ಪರಿಗಣಿಸಿ ಸರ್ಕಾರ ವರದಿ ಸಲ್ಲಿಸಬೇಕು. ಇಂದು ಅರ್ಜಿಗೆ ಸಂಬಂಧಿಸಿದಂತೆ ಮೆರಿಟ್‌ ಮೇಲೆ ಯಾವುದೇ ಆದೇಶ ನೀಡುವುದಿಲ್ಲ. ಸರ್ಕಾರದ ವರದಿ ಆಧರಿಸಿ ಪ್ರಕರಣ ಪರಿಗಣಿಸಲಾಗುವುದು ಎಂದು ಸೂಚಿಸಿದ ನ್ಯಾಯಾಲಯ ಅ. 24ರ ಮಧ್ಯಾಹ್ನ 3:30 ವಿಚಾರಣೆಯನ್ನು ಮುಂದೂಡಿತು.

TAGGED:ChittapurKalaburagikarnatakarssಆರ್‍ಎಸ್‍ಎಸ್ಕರ್ನಾಟಕಕಲಬುರಗಿಚಿತ್ತಾಪುರಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

UP teen murder case
Crime

ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

Public TV
By Public TV
3 minutes ago
SN Narayanaswamy Bangarpet MLA
Bengaluru City

ಸಂಪುಟ ಪುನರ್ ರಚನೆ ಮಾಡಲು ಹೈಕಮಾಂಡ್‌ಗೆ ಮನವಿ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
11 minutes ago
Sharad Pawar
Latest

ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಆಸ್ಪತ್ರೆಗೆ ದಾಖಲು

Public TV
By Public TV
41 minutes ago
Mohammed Nalapad ED Raid
Bengaluru City

ಬಿಟ್ ಕಾಯಿನ್ ಕೇಸಲ್ಲಿ ನಲಪಾಡ್‌ಗೆ ಶಾಕ್ – ಸತತ 21 ಗಂಟೆಗಳ ಸುದೀರ್ಘ ಶೋಧ ಕಾರ್ಯ ಮುಗಿಸಿದ ಇಡಿ

Public TV
By Public TV
2 hours ago
karnataka High Court
Court

SSLC ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

Public TV
By Public TV
2 hours ago
Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ಪಬ್ಲಿಕ್‌ ಟಿವಿ ‘ವಿದ್ಯಾಪೀಠ’ಕ್ಕೆ ಬನ್ನಿ.. ಲ್ಯಾಪ್‌ಟಾಪ್‌ ಗೆಲ್ಲಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?