Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: RSS ಅಂದ್ರೆ ‘ರೂಮರ್ಸ್‌ ಸ್ಪ್ರೆಡಿಂಗ್ ಸಂಘ್’: ಬಿ.ಕೆ.ಹರಿಪ್ರಸಾದ್ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | RSS ಅಂದ್ರೆ ‘ರೂಮರ್ಸ್‌ ಸ್ಪ್ರೆಡಿಂಗ್ ಸಂಘ್’: ಬಿ.ಕೆ.ಹರಿಪ್ರಸಾದ್ ಕಿಡಿ

Bengaluru City

RSS ಅಂದ್ರೆ ‘ರೂಮರ್ಸ್‌ ಸ್ಪ್ರೆಡಿಂಗ್ ಸಂಘ್’: ಬಿ.ಕೆ.ಹರಿಪ್ರಸಾದ್ ಕಿಡಿ

Public TV
Last updated: October 17, 2024 2:41 pm
Public TV
Share
3 Min Read
BK Hariprasad
SHARE

– ಸಂಘಪರಿವಾರದಿಂದ ಹೋರಾಟ ಮಾಡಿದವರು ಒಂದೋ ಜೈಲಿಗೆ ಹೋಗ್ಬೇಕು, ಇಲ್ಲ ಸ್ಮಶಾನ ಸೇರಬೇಕು

ಬೆಂಗಳೂರು: ಆರ್‌ಎಸ್‌ಎಸ್ ಅಂದ್ರೆ ‘ರೂಮರ್ಸ್‌ ಸ್ಪ್ರೆಡಿಂಗ್ ಸಂಘ್’ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ (B.K.Hariprasad) ಹೇಳಿಕೆ ನೀಡಿದರು.

ನಗರದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ (RSS) ಅಂದ್ರೆ ‘ರೂಮರ್ಸ್‌ ಸ್ಪ್ರೆಡ್ಡಿಂಗ್ ಸಂಘ್’. ಅವರು ಕಳ್ಳನನ್ನು ಸುಳ್ಳ ಮಾಡ್ತಾರೆ, ಸುಳ್ಳನನ್ನು ಸತ್ಯವಂತ ಮಾಡ್ತಾರೆ. ಬಡವರು, ಅಮಾಯಕರನ್ನು ಧರ್ಮದ ಹೆಸರಲ್ಲಿ ದಾರಿ ತಪ್ಪಿಸುತ್ತಾರೆ ಎಂದು ಟೀಕಿಸಿದರು.

RSS
ಸಾಂದರ್ಭಿಕ ಚಿತ್ರ

ಎಬಿವಿಪಿಯವರು ಮೊದಲು ಮುಸ್ಲಿಮರ ಬಗ್ಗೆ ಹೇಳೋದಿಲ್ಲ. ಶೂದ್ರ ಹುಡುಗರು ಸಿಕ್ಕಿದರೆ ಮೊದಲು ರಾಷ್ಟ್ರ ಕಟ್ಟಬೇಕು ಅಂತಾರೆ. ಆಮೇಲೆ ನಿಧಾನವಾಗಿ ಅವರ ತಲೆಯಲ್ಲಿ ಮುಸ್ಲಿಂ ದ್ವೇಷದ ಗೊಬ್ಬರ ತುಂಬುತ್ತಾರೆ. ದೇಶಭಕ್ತರು ಎನ್ನುವ ಆರ್‌ಎಸ್‌ಎಸ್‌ನವರು ತ್ರಿವರ್ಣ ಧ್ವಜಕ್ಕೆ ಗೌರವ ಕೊಡಲ್ಲ. 52 ವರ್ಷ ಆರ್‌ಎಸ್‌ಎಸ್ ಕಚೇರಿ ಮೇಲೆ ಧ್ವಜ ಹಾರಿಸಿಲ್ಲ. ನಾವೆಲ್ಲ ಸಾಫ್ಟ್ ಹಿಂದುತ್ವದವರಲ್ಲ, ನಾವೆಲ್ಲ ಹಿಂದೂಗಳು. ನಮ್ಮ ಕಾಂಗ್ರೆಸ್‌ನಲ್ಲಿ ಕೆಲವರು ಸಾಫ್ಟ್ ಹಿಂದುತ್ವವಾದಿಗಳಿದ್ದಾರೆ ಎಂದರು.

ಬಿಜೆಪಿಯ ದೀನ್ ದಯಾಳ್ ಉಪಾಧ್ಯಾಯವರನ್ನು ಕೊಂದವರು ಯಾರು? ಅವರ ಕೊಲೆ ಮಾಡಿದ್ದು, ಯಾರು ಅಂತಾ ಸಂಘಪರಿವಾರ ಹೇಳಬೇಕು. ದೀನ್ ದಯಾಳ್ ಉಪಾಧ್ಯಾಯ ಕೊಲೆ ಆಗಿದ್ದು ಜನ ಸಂಘದ ಕಡೆಯೇ ತೋರಿಸುತ್ತದೆ. ಇದರ ಬಗ್ಗೆ ಯಾರೂ ಸ್ಪಷ್ಟವಾಗಿ ಹೇಳುತ್ತಲೇ ಇಲ್ಲ ಬಿಜೆಪಿಯವರು. ಆರ್‌ಎಸ್‌ಎಸ್ ಕಾಲಾಳುಗಳೆಲ್ಲ ಬಡವರೇ. ಅಧಿಕಾರ, ಸಂಪತ್ತು ಪಡೆಯುವವರು ಬೇರೆ, ಜೈಲಿಗೆ ಹೋಗುವವರು ಬೇರೆಯೇ. ಸಂಘ ಪರಿವಾರದ ಸಹವಾಸದಿಂದ ಹೋರಾಟ ಮಾಡಿದವರು ಒಂದೋ ಜೈಲಿಗೆ ಹೋಗಬೇಕು, ಇಲ್ಲ ಸ್ಮಶಾನ ಸೇರಬೇಕು. ಬೊಮ್ಮಾಯಿ ಮಗ, ಯಡಿಯೂರಪ್ಪ ಮಗ ಏನಾದರೂ ಬೀದಿಯಲ್ಲಿ ಹೋರಾಟ ಮಾಡಿದ್ರಾ? ಹೋರಾಟ ಮಾಡೋದೆಲ್ಲ ಪುನೀತ್ ಕೆರೆಹಳ್ಳಿ ಥರದವರು. ಬಿಸಿಸಿಐ ಅಧ್ಯಕ್ಷ ಆಗೋದು ಜಯ್ ಶಾ ಎಂದು ಟಾಂಗ್ ಕೊಟ್ಟರು.

ABVP 1 1

ರಾಷ್ಟ್ರ ಇವತ್ತು ಕವಲು ದಾರಿಯಲ್ಲಿದೆ. ಗಾಂಧೀಯವರ ಚಿಂತನೆ ಪರಿಪಾಲನೆ ಒಂದೆಡೆ. ಗೋಡ್ಸೆ ವೈಭವೀಕರಿಸುವುದು ಮತ್ತೊಂದು ಕಡೆ. ಸ್ವಾತಂತ್ರ‍್ಯ ಪೂರ್ವದಲ್ಲಿ ಬ್ರಿಟಿಷರು ದೋಚುತ್ತಿದ್ದರು. ರಾಜ ಮಹಾರಾಜರು ಆಸ್ತಿ ಸಂಪಾದಿಸುತ್ತಿದ್ದರು. ಚರ್ಚಿಲ್ ಭಾರತಕ್ಕೆ ಸ್ವಾತಂತ್ರ‍್ಯ ಕೊಟ್ಟಿದ್ದೇವೆ. ಆದರೆ ಅವರು ಹಸಿವಿನಿಂದ ಸಾಯ್ತಾರೆ ಎಂದಿದ್ದರು. ಆದರೆ ಭವ್ಯ ಭಾರತ ಕಟ್ಟುವ ಕೆಲಸ ಆಗಿದೆ. ಕಟ್ಟಕಡೆಯ ವ್ಯಕ್ತಿಗೂ ಸವಲತ್ತು ಸಿಕ್ಕಿವೆ ಎಂದು ತಿಳಿಸಿದರು.

ಹಿಂದೂ ರಾಷ್ಟ್ರ ಕಟ್ಟುವ ಮಾತನಾಡ್ತಾರೆ. ಇವತ್ತು ಪರಿಸ್ಥಿತಿ ಎಲ್ಲಿಗೆ ಹೋಗಿದೆ ನೋಡ್ತಿದ್ದೇವೆ. ನಾನು ಎಬಿವಿಪಿ, ಆರ್‌ಎಸ್‌ಎಸ್ ವಿರುದ್ಧ ಇದ್ದವನು. ವಿದ್ಯಾರ್ಥಿ ಸಂಘಟನೆಯಿಂದಲೇ ಬೆಳೆದವನು. ಕಾಂಗ್ರೆಸ್‌ನಲ್ಲಿ ಆಗ ಮೂರು ಗುಂಪು ಇದ್ದವು. ಅರಸು ಅವರದ್ದು ಒಂದು, ಗುಂಡೂರಾವ್ ಮತ್ತೊಂದು. ಉಳಿದವರದ್ದು ಇನ್ನೊಂದು ಗುಂಪು ಇತ್ತು. ಆದರೂ ನಮ್ಮದು ಕಾಂಗ್ರೆಸ್ ಗುಂಪು ಅಷ್ಟೇ. ಎಂದೂ ನಿಯಮ, ಸಿದ್ಧಾಂತ ಬಿಟ್ಟು ಹೋಗಲಿಲ್ಲ ಎಂದರು.

ಸುಳ್ಳು ಇತಿಹಾಸವನ್ನ ಹೇಳಿಕೊಂಡು ಓಡಾಡ್ತಾರೆ. ಹಿಂದೆ ಎಬಿವಿಪಿ ಇಂದಿನಷ್ಟು ಕೆಟ್ಟದ್ದಾಗಿರಲಿಲ್ಲ. ಹಿಂದೂ, ಮುಸ್ಲಿಂ ಅಂತಾ ಇವತ್ತು ತಂದಿಟ್ಟಿದ್ದಾರೆ. ಗೋಲ್ವಾಲ್ಕರ್ ಬಂಚ್ ಆಫ್ ಥಾಟ್ಸ್ ಬರೆದಿದ್ದರು. ಅದರಲ್ಲಿ ಹಿಂದೂ, ಜಾತಿಯ ಬಗ್ಗೆ ಬರೆದಿದ್ದರು. ಚಿಂತನಗಂಗಾದಲ್ಲಿ 175ನೇ ಪೇಜ್‌ನಲ್ಲಿದೆ. ಅದರಲ್ಲಿ ದ್ವೇಷದ ಬಗ್ಗೆ ಉಲ್ಲೇಖಿಸಿದ್ದಾರೆ. ಕ್ರಿಶ್ಚಿಯನ್, ಮುಸ್ಲಿಮರ ಬಗ್ಗೆ ದ್ವೇಷ ಸಾಧಿಸಿದ್ದರು. ಸ್ವಾತಂತ್ರಕ್ಕಾಗಿ ಪ್ರಾಣಕೊಟ್ಟವರು ಅಲ್ಪಸಂಖ್ಯಾತರು, ಮುಸ್ಲಿಮರು, ಸಿಖ್ಖರು ಹೆಚ್ಚು ತ್ಯಾಗ ಮಾಡಿದ್ದವರು. ನಾವು ಸಾಫ್ಟ್ ಹಿಂದುತ್ವವಾದಿಗಳಲ್ಲ. ನಾವು ಹಿಂದೂಗಳೇ, ಆದರೆ ಹಿಂದುತ್ವವಾದಿಗಳಲ್ಲ. 10 ವರ್ಷ ಆಯ್ತು ಆಯೋಗ್ಯರು ಅಧಿಕಾರದಲ್ಲಿ ಕುಳಿತು. ಸುಭಾಷ್ ಚಂದ್ರಬೋಸ್ ಸಾವಿನ ತನಿಖೆ ಮಾಡಲಿಲ್ಲ. ಸುಭಾಷ್ ಚಂದ್ರರು, ಶಾಸ್ತ್ರಿಯವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ನಾನು ಹೇಳುವುದು ಸಾಕಷ್ಟಿದೆ. ಈಗ ಮಾತನಾಡಿದರೆ ಚುನಾವಣೆ ಮೇಲೆ ಎಫೆಕ್ಟ್ ಆಗಬಹುದು. ಹಾಗಾಗಿ ಮುಂದೆ ಮಾತನಾಡ್ತೇನೆ ಎಂದರು.

TAGGED:B.K hariprasadbengalururssಆರ್‍ಎಸ್‍ಎಸ್ಬಿ.ಕೆ ಹರಿಪ್ರಸಾದ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Keerthy Suresh
ಕೀರ್ತಿ ಇಟ್ಟ ಗುರಿಗೆ ಫೋಟೋಗ್ರಾಫರ್ ಕಣ್ಣೇ ಹೋಯ್ತು..!
Cinema Latest South cinema
Kerala Court 2
ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು
Cinema Court Latest Main Post National South cinema
Salman Khan Sharukh Khan
ಸಲ್ಮಾನ್-ಶಾರುಖ್ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್.. ಶೀಘ್ರದಲ್ಲೇ ಪಠಾಣ್-2!
Bollywood Cinema Latest Top Stories
Rishab Shetty
ಕಾಗದದ ಮೇಲೆ ಹುಟ್ಟಿದ ಪಾತ್ರ ಜೀವ ಪಡೆದಾಗ… `ಕಾಂತಾರ’ದ ಆತ್ಮಕಥೆ ಬಿಚ್ಚಿಟ್ಟ ರಿಷಬ್
Cinema Latest Sandalwood Top Stories

You Might Also Like

Harshanand Guttedar
Districts

ಕೈ ವೋಟ್‌ಚೋರಿ ಸಮಾವೇಶಕ್ಕೂ ಮುನ್ನಾ ಅಧಿಕಾರಿಗಳನ್ನು ಬಳಸಿ ನಮ್ಮ ವಿರುದ್ಧ ಚಾರ್ಜ್‌ಶೀಟ್‌: ಹರ್ಷಾನಂದ್‌ ಗುತ್ತೇದಾರ್‌

Public TV
By Public TV
14 minutes ago
bpl card 1
Bagalkot

ಬಿಪಿಎಲ್ ಪರಿಷ್ಕರಣೆ – ಆಕ್ಷೇಪಣೆಗೆ ಎರಡೇ ದಿನ ಮಾತ್ರ ಬಾಕಿ!

Public TV
By Public TV
1 hour ago
In a first since partition Pakistan brings course on Sanskrit to launch program on Bhagavad Gita
Latest

ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿವಿಯಲ್ಲಿ ಸಂಸ್ಕೃತ ಕೋರ್ಸ್

Public TV
By Public TV
2 hours ago
nice road
Bengaluru City

ನೈಸ್‌ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್‌ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿ

Public TV
By Public TV
2 hours ago
Subhash Guttedar
Bengaluru City

ಆಳಂದದಲ್ಲಿ ಗುತ್ತೇದಾರ್ ಸೂತ್ರದಂತೆ ಮತಗಳವು – ಎಸ್‌ಐಟಿಯಿಂದ ಚಾರ್ಜ್‌ಶೀಟ್‌

Public TV
By Public TV
2 hours ago
Shivamogga Crime Murder MANJUNATH
Crime

ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ ಭದ್ರಾವತಿಯಲ್ಲಿ ಡಬಲ್‌ ಮರ್ಡರ್‌ – ಐವರು ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?