Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಏರ್ ಶೋ ಅಗ್ನಿ ಅವಘಡದಲ್ಲಿ ಕಾರು ಕಳೆದುಕೊಂಡವರು ಹೇಗೆ ಇನ್ಸೂರೆನ್ಸ್ ಪಡೆಯಬಹುದು – ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

Public TV
Last updated: February 23, 2019 6:42 pm
Public TV
Share
3 Min Read
CAR 2 2
SHARE

ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಶೋ ವೇಳೆ ಉಂಟಾಗಿದ್ದ ಅಗ್ನಿ ಅವಘಡದಲ್ಲಿ 500ಕ್ಕೂ ಹೆಚ್ಚು ಕಾರುಗಳು ಬೆಂಕಿಗೆ ಸಿಕ್ಕಿ ಸುಟ್ಟು ಕರಕಲಾಗಿದ್ದು, ಹಲವರು ಲಕ್ಷಾಂತರ ರೂ. ಮೌಲ್ಯದ ಕಾರುಗಳನ್ನು ಕಳೆದುಕೊಂಡಿದ್ದಾರೆ. ಆದರೆ ಕಾರು ಕಳೆದುಕೊಂಡ ಸಾರ್ವಜನಿಕರ ನೆರವಿಗೆ ರಾಜ್ಯ ಸಾರಿಗೆ ಆಗಮಿಸಿದ್ದು, ಸಂತ್ರಸ್ತರಿಗೆ ಸಿಗಬೇಕಾದ ಎಲ್ಲಾ ದಾಖಲೆಗಳನ್ನು ನೀಡಲಾಗುತ್ತದೆ. ಕಾನೂನಿ ನಿಯಮಗಳ ಪ್ರಕಾರ ದಾಖಲೆ ಸಲ್ಲಿಸಿ ಪರಿಹಾರ ಪಡೆಯಿರಿ ಎಂದು ಇಲಾಖೆಯ ಜಂಟಿ ನಿರ್ದೇಶಕರಾದ ಜ್ಞಾನೇಂದ್ರ ಕುಮಾರ್ ಮಾಹಿತಿ ನೀಡಿದ್ದಾರೆ.

ಅನಿರೀಕ್ಷಿತವಾಗಿ ಅವಘಡ ನಡೆದಿದ್ದು, ಇಂತಹ ಪರಿಸ್ಥಿತಿಯಲ್ಲಿ ವಿಮೆ ಪಡೆಯಲು ಸಾಧ್ಯವಿದೆ. ಇದಕ್ಕೆ ವಾಹನದ ಮಾಲೀಕರು ಪೊಲೀಸರಿಗೆ ದೂರು ನೀಡಬೇಕು. ದೂರು ನೀಡುವ ಸಂದರ್ಭದಲ್ಲಿ ವಾಹನ ದಾಖಲೆಗಳನ್ನು ನೀಡಬೇಕಾಗುತ್ತದೆ. ಆದರೆ ಅಧಿಕೃತ ದಾಖಲೆ ಇಲ್ಲದಿದ್ದರೆ ಆರ್‍ಟಿಒ ಕಚೇರಿಗೆ ತೆರಳಿ ನಕಲು ದಾಖಲೆಗಳನ್ನು ಪಡೆದು ದೂರು ಸಲ್ಲಿಸಬಹುದಾಗಿದೆ. ಪೊಲೀಸ್ ದೂರನ್ನು ಅಗತ್ಯ ದಾಖಲಾತಿಗಳೊಂದಿಗೆ ವಿಮೆ ಸಂಸ್ಥೆಗೆ ನೀಡಿದರೆ ನಿಯಮಗಳ ಅನುಸಾರ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

AIR SHOW FIRE copy 1

ಸಾಮಾನ್ಯವಾಗಿ ವಾಹನ ಖರೀದಿ ಮಾಡಿ 15 ವರ್ಷ ಆಗಿದ್ದರೆ ರಿನೀವಲ್ (ವಿಮೆ ನವೀಕರಣ) ಮಾಡಿಸಬೇಕು. ಹಳದಿ ಬೋರ್ಡ್ ವಾಹನ ಆದರೆ ವಾಹನದ ಕಂಡಿಷನ್ ಪ್ರಮಾಣ ಪತ್ರ ನೀಡಬೇಕು. ಎಲ್ಲಾ ದಾಖಲೆಗಳು ಅವಧಿಯ ಒಳಗೆ ಇರಬೇಕಾಗುತ್ತದೆ. ವಿಮಾ ಸಂಸ್ಥೆಗಳು ಕೇಳುವ ಎಲ್ಲಾ ದಾಖಲೆಗಳನ್ನು ಸಾರಿಗೆ ಇಲಾಖೆ ನೀಡುತ್ತದೆ. ಒನ್ ಟೈಮ್ ಆಪಿಯರೇನ್ಸ್ ನಲ್ಲೇ ಇದನ್ನು ನೀಡಲು ಸದ್ಯ ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸಹಾಯ ಕೇಂದ್ರ: ವಾಹನ ಮಾಲೀಕರ ಅನುಕೂಲಕ್ಕಾಗಿ ವಾಹನ ನೊಂದಣಿ ಮತ್ತು ಚಾಲನಾ ಪತ್ರ ವಿವರಗಳನ್ನು ಪಡೆಯಲು ಬೇಕಾದ ವಿಧಾನಗಳನ್ನು ತಿಳಿದುಕೊಳ್ಳಲು ಸಾರಿಗೆ ಇಲಾಖೆ ಸಹಾಯವಾನಿಯನ್ನು ಆರಂಭಿಸಿದೆ. ಯಲಹಂಕದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಸಹಾಯ ಕೇಂದ್ರ ಆರಂಭಿಸಲಾಗಿದ್ದು, 080-2972 9908 ಹಾಗೂ ಮೊಬೈಲ್ ಸಂಖ್ಯೆ 94498 64050 ನಂಬರ್ ಗಳನ್ನು ಸಂಪರ್ಕಿಸಬಹುದು. ನಾಳೆ ಭಾನುವಾರ ಸರ್ಕಾರಿ ರಜಾ ದಿನವವಾದರೂ ಕೂಡ ಸಹಾಯ ಕೇಂದ್ರ ತೆರೆದಿರುತ್ತದೆ ಎಂಬ ಮಾಹಿತಿ ಲಭಿಸಿದೆ.

AIR SHOW FIRE 2

ವಾಹನ ವಿಮೆ ನಿಯಮವೇನು?
ವಾಹನ ವಿಮೆಯಲ್ಲಿ ಒಟ್ಟು ಮೂರು ವಿಧಗಳಿದ್ದು, ಪ್ರಮುಖ ಕಾರು ತಯಾರಿಕಾ ಕಂಪನಿಗಳು ಮಾರುಕಟ್ಟೆಯಲ್ಲಿ ಲಭ್ಯವಿರುವ ವಿಮಾ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡು ವಿಮಾ ಪಾಲಿಸಿಯನ್ನು ಗ್ರಾಹಕರಿಗೆ ನೀಡುತ್ತಾರೆ. ರಸ್ತೆ ಅಪಘಾತ, ಅಗ್ನಿ ಆಕಸ್ಮಿಕ, ಸಿಡಿಲು, ಗಲಭೆ, ಭೂಕಂಪ, ಚಂಡಮಾರುತ ಸೇರಿದಂತೆ ಕಳ್ಳತನ ಇತ್ಯಾದಿ ಸಂದರ್ಭಗಳನ್ನು ವಿಮೆಯಲ್ಲಿ ಸೇರಿರುತ್ತೆ. ವಿಮೆ ಸಂಪೂರ್ಣವಾಗಿ ವಿಮೆ ಮೊತ್ತ ಮತ್ತು ವಾಹನದ ಬಗೆಯ ಮೇಲೆ ನಿಂತಿರುತ್ತೆ.

ಎಲ್ಲ ವಾಹನಗಳಿಗೂ ಸಿಗಲ್ಲ ಇನ್ಯೂರೆನ್ಸ್..!
ಅಪಘಾತದಲ್ಲಿ ಸಂದರ್ಭದಲ್ಲಿ ವಿಮೆ ಮಾಡಿಸಿದ ಎಲ್ಲಾ ವಾಹನಗಳಿಗೂ ಶೇ. 100 ರಷ್ಟು ಹಣ ಹಿಂದಿರುವುದಿಲ್ಲ. ಕಾರು ವಿಮೆಯಲ್ಲಿ ಒಟ್ಟು ಮೂರು ವಿಧಗಳಿದ್ದು, ಕಾಂಪ್ರಹೆನ್ಸೀವ್ ವಿಮೆ (ಸಮಗ್ರ ವಿಮೆ), ಥರ್ಡ್ ಪಾರ್ಟಿ ವಿಮೆ ಹಾಗೂ ಇತ್ತೀಚೆಗೆ ಬಂಪರ್ ಟು ಬಂಪರ್ ವಿಮೆ ಚಾಲ್ತಿಯಲ್ಲಿದೆ.

Aero India copy

ಸಮಗ್ರ ವಿಮೆಯಲ್ಲಿ ಗಾಡಿಯ ಮೌಲ್ಯ ಹಾಗೂ ವಿಮೆಯ ಮೊತ್ತದ ಮೇಲೆ ವಿಮೆ ಮೊತ್ತ ಸಿಗುತ್ತೆ. ಗಾಡಿ ಹೊಸತಾಗಿದ್ದರೆ ಬಹುತೇಕ ವಿಮಾ ಮೊತ್ತ ಹೆಚ್ಚಿರುತ್ತೆ. ಆದರೆ ಕಾಂಪ್ರೋಹೆನ್ಸಿವ್ ಇನ್ಸೂರೆನ್ಸ್ ಪಾಲಿಸಿಯಲ್ಲಿ ದುರಂತ ಸಂಭವಿಸಿದಾಗ ಕಾರಿನ ರಬ್ಬರ್, ನೈಲಾನ್ ಹಾಗೂ ಪ್ಲಾಸ್ಟಿಕ್ ವಸ್ತುಗಳಿಗೆ ಕೇವಲ ಫಿಫ್ಟಿ ಪರ್ಸೆಂಟ್ ವಿಮೆ, ಫೈಬರ್ ಗ್ಲಾಸ್‍ಗಳಿಗೆ ಶೇ. 30ರಷ್ಟು ವಿಮೆ ಹಾಗೂ ಗಾಜಿನಿಂದ ತಯಾರಿಸಲಾದ ಭಾಗಗಳಿಗೆ ಯಾವುದೇ ಇನ್ಸೂರೆನ್ಸ್ ಸಿಗುವುದಿಲ್ಲ. ಈ ಸಂದರ್ಭದಲ್ಲಿ ಅರ್ಧ ಹಣ ಮಾತ್ರ ಗ್ರಾಹಕರಿಗೆ ಲಭ್ಯವಾಗುತ್ತದೆ. ಗಾಡಿ ಒಂದು ವರ್ಷದ ಒಳಗಿದ್ದರೆ ಮಾತ್ರ ಬಹುತೇಕರಿಗೆ ಈ ಪಾಲಿಸಿನಲ್ಲಿ ದುಡ್ಡು ಸಿಗಬಹುದು. ಗಾಡಿ ಹಳೆಯದಾಗಿದ್ರೆ ಅರ್ಧದಷ್ಟೇ ಹಣ ಸಿಗುವ ಸಾಧ್ಯತೆಗಳಿವೆ.

ಥರ್ಡ್ ಪಾರ್ಟಿ ಇನೂರೆನ್ಸ್:
ದೊಡ್ಡ ಮೊತ್ತದ ವಿಮೆ ಕಟ್ಟಲಾರದವರು ಸಾಮಾನ್ಯ ಥರ್ಡ್ ಪಾರ್ಟಿ ಇನೂರೆನ್ಸ್ ಹೊಂದಿರುತ್ತಾರೆ. ಹಳೆಯ ಕಾರು ಹೊಂದಿರುವವರು, ಹಳೆಯ ಕಾರು ಖರೀದಿಸುವವರು ಭಾದ್ಯತಾ ವಿಮೆಯನ್ನು ಮಾಡಿಕೊಂಡಿರುತ್ತಾರೆ. ಈ ವಿಮೆ ಮಾಡಿಕೊಂಡರೆ ಬಹುತೇಕ ಅರ್ಧದಷ್ಟು ವಿಮೆ ಮಾತ್ರ ಸಿಗಲಿದೆ. ಅತ್ಯಂತ ಕಡಿಮೆ ವಿಮೆಯ ದುಡ್ಡು ವಾಪಾಸು ಸಿಗುತ್ತೆ.

NANO CAR copy

ಬಂಪರ್ ಟು ಬಂಪರ್ ಟು ಇನ್ಸೂರೆನ್ಸ್:
ಬಹುತೇಕ ಲಕ್ಸುರಿ ಗಾಡಿಗಳು ಬಂಪರ್ ಟು ಬಂಪರ್ ಇನ್ಸುರೆನ್ಸ್ ಮಾಡಿಕೊಂಡಿರುತ್ತಾರೆ. ಈ ಇನ್ಸೂರೆನ್ಸ್ ಮಾಡಿಕೊಂಡರೆ ಬಹುತೇಕ 100% ವಿಮೆ ಪಾವತಿಯಾಗುತ್ತೆ. ಆದರೆ ವಾಹನ ತೀರಾ ಹಳೆಯದಾಗಿದರೆ ಈ ಇನ್ಯೂರೆನ್ಸ್ ಕೂಡ ಲಾಭವಿಲ್ಲ. ನೈಸರ್ಗಿಕ ವಿಪತ್ತು ಎಂದು ಎಂದು ಈ ಘಟನೆಯನ್ನು ಘೋಷಣೆ ಮಾಡಿದರೆ ಬಹುತೇಕ ಎಲ್ಲಾ ವಾಹನಗಳಿಗೆ ಶೇ.100 ರಷ್ಟು ವಿಮೆ ಸಿಗಲಿದೆ. ಇಲ್ಲದಿದ್ದರೆ ಆಯಾಯ ವಿಮೆಯ ಮೇಲೆ ಹಾಗೂ ಇನ್ಸೂರೆನ್ಸ್ ಬೆಲೆಯ ಮೇಲೆಯೆ ವಿಮೆ ದೊರೆಯಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Air ShowbengalurucarCentral GovernmentFire DisasterinsurancePublic TV Carruleಇನ್ಸೂರೆನ್ಸ್ಏರ್ ಶೋಕಾರುನಿಯಮಬೆಂಗಳೂರುವಿಮೆ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Anchor Anushree 2
ಅನುಶ್ರೀ ಕಲ್ಯಾಣದಲ್ಲಿ ರಾರಾಜಿಸಿದ ಅಪ್ಪು ಫೋಟೋ
Cinema Latest Sandalwood Top Stories
Anushree 1 copy
ಏಕಾಂಗಿ ನಿರೂಪಣೆ ಬಳಿಕ ಹೊಸ ಮನ್ವಂತರಕ್ಕೆ ಕಾಲಿಟ್ಟ ಆ್ಯಂಕರ್ ಅನುಶ್ರೀ
Cinema Latest Main Post Sandalwood
Anchor Anushree
ಬಹುಕಾಲದ ಗೆಳೆಯನ ಜೊತೆ ಸಪ್ತಪದಿ ತುಳಿಯಲಿರುವ ಅನುಶ್ರೀ
Cinema Sandalwood
Anushree
ಅನುಶ್ರೀ-ರೋಷನ್‌ ಹಳದಿ ಶಾಸ್ತ್ರದ ಫೋಟೋಸ್‌ ವೈರಲ್‌ – ಆ.28ರಂದು ಹಸೆಮಣೆ ಏರಲಿರುವ ನಿರೂಪಕಿ
Bengaluru City Cinema Latest Main Post Sandalwood
radhika pandit ganesh chaturthi
ತವರು ಮನೆಯಲ್ಲಿ ರಾಧಿಕಾ ಪಂಡಿತ್ ಗೌರಿ-ಗಣೇಶ ಹಬ್ಬ; ಕೊಂಕಣಿ ಖಾದ್ಯದ ಲಿಸ್ಟ್ ಅಬ್ಬಬ್ಬಾ!
Cinema Latest Sandalwood Top Stories

You Might Also Like

HD KUMARSWAMY
Bengaluru City

ಧರ್ಮಸ್ಥಳ ಕೇಸ್‌ನಲ್ಲಿ ಸರ್ಕಾರದ ನಡವಳಿಕೆಗೆ ಮಂಜುನಾಥ ಸ್ವಾಮಿಯೇ ಶಿಕ್ಷೆ ಕೊಡ್ತಾನೆ: ಹೆಚ್‌ಡಿಕೆ

Public TV
By Public TV
3 minutes ago
DK Shivakumar 9
Bengaluru City

ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ನಾನು ಮಾತನಾಡದಿರುವುದೇ ಉತ್ತಮ: ಡಿಕೆಶಿ

Public TV
By Public TV
27 minutes ago
Davanagere Cyber Crime ARUN
Crime

ದಾವಣಗೆರೆ | ಶಿಕ್ಷಕನ ಬ್ಯಾಂಕ್ ಖಾತೆಯಿಂದ 22 ಲಕ್ಷ ಎಗರಿಸಿದ್ದ ಆರೋಪಿ ಅರೆಸ್ಟ್

Public TV
By Public TV
56 minutes ago
America Shootout
Crime

ಅಮೆರಿಕದ ಚರ್ಚ್ ಮೇಲೆ ಶೂಟೌಟ್ – ಗನ್‌ನಲ್ಲಿ ಬರೆದಿತ್ತು Nuke India

Public TV
By Public TV
1 hour ago
Weather 1
Bengaluru City

ರಾಜ್ಯದಲ್ಲಿ ಸೆ.3ರವರೆಗೂ ಮಳೆ ಮುನ್ಸೂಚನೆ

Public TV
By Public TV
1 hour ago
Channaraj Hattiholi
Belgaum

ಡಿಸಿಸಿ ಬ್ಯಾಂಕ್ ಚುನಾವಣಾ ಕಣದಿಂದ ಹಿಂದೆ ಸರಿದ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?