Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರುದ್ರ ಗರುಡ ಪುರಾಣ; ಭಿನ್ನ ಕಥೆಯ ಚುಂಗು ಹಿಡಿದು ಬಂದ್ರು ನಂದೀಶ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರುದ್ರ ಗರುಡ ಪುರಾಣ; ಭಿನ್ನ ಕಥೆಯ ಚುಂಗು ಹಿಡಿದು ಬಂದ್ರು ನಂದೀಶ್!

Cinema

ರುದ್ರ ಗರುಡ ಪುರಾಣ; ಭಿನ್ನ ಕಥೆಯ ಚುಂಗು ಹಿಡಿದು ಬಂದ್ರು ನಂದೀಶ್!

Public TV
Last updated: January 21, 2025 11:33 pm
Public TV
Share
3 Min Read
rudra garuda purana nandish
SHARE

ಈ ವರ್ಷದ ಆರಂಭದಲ್ಲಿಯೇ ಕನ್ನಡ ಚಿತ್ರರಂಗದ ದಿಕ್ಕಿಂದ ಹೊಸತನದ ಗಾಳಿ ಬಲವಾಗಿ ಬೀಸಲಾರಂಭಿಸಿದೆ. ಮಾಮೂಲು ಹಾದಿಯಾಚೆ ಹೆಜ್ಜೆಯಿಡುವ ಛಾತಿ ಹೊಂದಿರುವ ಒಂದಷ್ಟು ಯುವ ಪ್ರತಿಭಾನ್ವಿತರು ಅಚ್ಚರಿ ಮೂಡಿಸಲು ಸಜ್ಜುಗೊಂಡಿದ್ದಾರೆ. ಆ ಸಾಲಿನಲ್ಲಿ ಮುಂಚೂಣಿಯಲ್ಲಿರುವವರು `ರುದ್ರ ಗರುಡ ಪುರಾಣ’ (Rudra Garuda Purana) ಚಿತ್ರದ ನಿರ್ದೇಶಕ ನಂದೀಶ್. ರಿಷಿ ನಾಯಕನಾಗಿ ನಟಿಸಿರುವ ರುದ್ರ ಗರುಡ ಪುರಾಣ ಇದೇ ಜ.24 ರಂದು ಅದ್ದೂರಿಯಾಗಿ ಬಿಡುಗಡೆಗೊಳ್ಳಲಿದೆ. ಈ ಮೂಲಕ ಜೇಕಬ್ ವರ್ಗಿಸ್ ಗರಡಿಯಲ್ಲಿ ಪಳಗಿಕೊಂಡಿರುವ ನಂದೀಶ್ ಭಿನ್ನ ಕಥಾನಕದ ಮೂಲಕ ಪ್ರೇಕ್ಷಕರನ್ನು ಮುಖಾಮುಖಿಯಾಗಲು ತಯಾರಾಗಿದ್ದಾರೆ.

ಪೃಥ್ವಿ ಸೇರಿದಂತೆ ಒಂದಷ್ಟು ಚೆಂದದ ಚಿತ್ರಗಳನ್ನು ಕನ್ನಡಕ್ಕೆ ಕೊಡಮಾಡಿರುವವರು ಜೇಕಬ್ ವರ್ಗೀಸ್. ಅವರ ನಿರ್ದೇಶನದ ಶೈಲಿಯಿಂದ ಪ್ರೇರಣೆಗೊಂಡು, ಹೊಸ ಬಗೆಯ ಕಲಿಕೆಯ ಉದ್ದೇಶದಿಂದಲೇ ದಶಕದ ಹಿಂದೆ ಜೇಕಬ್ ಅವರೊಂದಿಗೆ ಸೇರಿಕೊಂಡಿದ್ದವರು ನಂದೀಶ್. ಹಾಸನ ಮೂಲದ ನಂದೀಶ್ ಹೀಗೊಂದು ಹದಿನೇಳು ವರ್ಷದಿಂದೀಚೆಗೆ ಚಿತ್ರರಂಗದ ಭಾಗವಾಗಿದ್ದಾರೆ. ಒಂದು ಸಿನಿಮಾವನ್ನು ಯಶಸ್ವಿಯಾಗಿಸಲು ಬೇಕಾಗಿರುವ ಅತ್ಯಂತ ಸೂಕ್ಷ್ಮ ವಿಚಾರಗಳನ್ನು ಮನದಟ್ಟು ಮಾಡಿಕೊಂಡಿದ್ದಾರೆ. ಎಲ್ಲ ಭ್ರಮೆಗಳನ್ನು ಕಳಚಿಟ್ಟು ಇಷ್ಟೂ ವರ್ಷಗಳ ಕಾಲ ನಿಖರವಾದ ಅನುಭವವನ್ನು ದಕ್ಕಿಸಿಕೊಂಡಿದ್ದಾರೆ. ನಿರ್ದೇಶನ ಎಂದರೆ ಕಥೆಯೊಂದಕ್ಕೆ ದೃಶ್ಯರೂಪ ನೀಡುವ ಕುಸುರಿ ಕಲೆ ಅನ್ನೋದು ನಿಜ. ಆದರೆ, ನಿಜವಾದ ನಿರ್ದೇಶನವೆಂಬುದು ಬರೀ ಅಷ್ಟಕ್ಕೆ ಮಾತ್ರವೇ ಸೀಮಿತವಾದುದಲ್ಲ. ಶೇಖಡಾ ತೊಂಬತೈದು ಪರ್ಸೆಂಟಿನಷ್ಟು ಎಲ್ಲವನ್ನೂ ಸಂಭಾಳಿಸೋ ಕಲೆ ಸಿದ್ಧಿಸಿರಬೇಕಾಗುತ್ತೆ. ಅದು ಸಾಧ್ಯವಾದರೆ ನಿರ್ದೇಶನ ಎನ್ನುವುದು ಬರಿ ಐದು ಪರ್ಸೆಂಟ್ ಕೆಲಸವಷ್ಟೇ ಎಂಬ ಪ್ರಸಿದ್ಧ ಹಾಲಿವುಡ್ ನಿರ್ದೇಶಕರೊಬ್ಬರ ಮಾತಿನಿಂದ ಪ್ರಭಾವಿತರಾದವರು ನಂದೀಶ್. ಇದನ್ನೂ ಓದಿ: ಬಿಡುಗಡೆಯಾಯ್ತು `ರುದ್ರ ಗರುಡ ಪುರಾಣ’ದ ನಶೆಯೇರಿಸೋ ಸಾಂಗು!

ಈ ಕಾರಣದಿಂದಲೇ ಬಂಡವಾಳ ಹಾಕಿದ ನಿರ್ಮಾಪಕರಿಗೂ ಮೋಸವಾಗದಂತೆ, ಸಿನಿಮಾ ಕೂಡಾ ಒಳ್ಳೇ ರೀತಿಯಲ್ಲಿ ಬ್ಯುಸಿನೆಸ್ ಮಾಡುವಂತೆ ಮಾಡಬಲ್ಲ ಫಾರ್ಮುಲಾಗಳನ್ನು ಕರತಲಾಮಲಕ ಮಾಡಿಕೊಂಡಿದ್ದಾರೆ. ಸಿನಿಮಾ ಪ್ರೊಡಕ್ಷನ್, ಡಿಸ್ಟ್ರಿಬ್ಯೂಷನ್ ಸೇರಿದಂತೆ ಅನೇಕ ವಲಯಗಳಲ್ಲಿ ಕಾರ್ಯ ನಿರ್ವಹಿಸಿರುವ ನಂದೀಶ್, ಥಿಯೇಟರ್ ಗುತ್ತಿಗೆ ಪಡೆದು ನಡೆಸುವ ಮೂಲಕವೂ ಸಿನಿಮಾ ವ್ಯವಹಾರವನ್ನು ಪ್ರಾಕ್ಟಿಕಲ್ ಆಗಿಯೇ ಮನನ ಮಾಡಿಕೊಂಡಿದ್ದಾರೆ. ಹಾಸನದ ಹಳ್ಳಿಯೊಂದರಿಂದ ಬಂದಿರುವ ನಂದೀಶ್, ಜೇಕಬ್ ವರ್ಗೀಸ್ ಅವರೊಂದಿಗೆ ಸೇರಿ ನಾನಾ ಪ್ರಯೋಗಗಳಿಗೆ ಒಡ್ಡಿಕೊಳ್ಳುತ್ತಾ ಬಂದಿದ್ದರು. ಹಲವಾರು ಸಿನಿಮಾ, ಡಾಕ್ಯುಮೆಂಟರಿಗಳ ಮೂಲಕ ತಮ್ಮ ಪ್ರತಿಭೆಯನ್ನು ಸಾಣೆ ಹಿಡಿದು ಹೊಳಪುಗಟ್ಟಿಸಿಕೊಂಡಿದ್ದರು.

ಈ ಹಿಂದೆ ಡಿಯರ್ ವಿಕ್ರಮ್ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದ ನಂದೀಶ್, ಈ ಬಾರಿ ಹಾರರ್ ಧಾಟಿಯ ಮಿಸ್ಟ್ರಿ ಥ್ರಿಲ್ಲರ್ ಕಥನದ ಮೂಲಕ ರುದ್ರ ಗರುಡ ಪುರಾಣ ಚಿತ್ರವನ್ನು ನಿರ್ದೇಶನ ಮಾಡಿದ್ದಾರಂತೆ. ಇಪ್ಪತೈದು ವರ್ಷದ ಹಿಂದೆ ಬಸ್ ಅಪಘಾತದಲ್ಲಿ ಅಸುನೀಗಿದ್ದವರೆಲ್ಲ, ಅಷ್ಟು ವರ್ಷಗಳ ನಂತರ ವಾಸ್ತವಿಕವಾಗಿ ಕಾಣಿಸಿಕೊಳ್ಳುವ ರಣರೋಚಕ ಕಥನ ಈ ಸಿನಿಮಾದಲ್ಲಡಗಿದೆಯಂತೆ. ಹಾಗಂತ ಇದು ಮಾಮೂಲು ಶೈಲಿಯ ಹಾರರ್ ಸಿನಿಮಾವಲ್ಲ. ಆ ವಿಚಾರ ಈಗಾಗಲೇ ಬಿಡುಗಡೆಗೊಂಡಿರುವ ಟೀಸರ್ ಮೂಲಕ ಋಜುವಾತಾಗಿದೆ. ಕ್ಷಣ ಕ್ಷಣವೂ ಥ್ರಿಲ್ ಆಗುವಂತೆ, ಮನೋರಂಜನೆ ಸೇರಿದಂತೆ ಯಾವುದಕ್ಕೂ ಕೊರತೆ ಇಲ್ಲದಂತೆ ಈ ಚಿತ್ರವನ್ನು ರೂಪಿಸಿರುವ ತುಂಬು ಖುಷಿ ನಂದೀಶ್ ಅವರಲ್ಲಿದೆ. ಈ ಮೂಲಕ ನಿರ್ದೇಶಕನಾಗಿ ತಮ್ಮ ವೃತ್ತಿ ಬದುಕು ಮತ್ತಷ್ಟು ಮಿರುಗಲಿದೆ ಎಂಬ ಗಾಢ ನಂಬಿಕೆಯೂ ಅವರಲ್ಲಿದೆ. ಇದನ್ನೂ ಓದಿ: ‘ರುದ್ರ ಗರುಡ ಪುರಾಣ’ದಲ್ಲಿ ಮಿಸ್ ಆದ ವಿಮಾನದ ಕಥೆ ಹೇಳಲಿದ್ದಾರೆ ರಿಷಿ

rudra garuda purana movie team

ಈ ಹಿಂದೆ ತೆಲುಗಿನಲ್ಲಿ 9 ಅವರ್ಸ್ ಎಂಬ ವೆಬ್ ಸೀರೀಸ್ ನಿರ್ದೇಶನ ಮಾಡುವ ಮೂಲಕ ನಂದೀಶ್ ಗಮನ ಸೆಳೆದಿದ್ದರು. ಈ ಸಮಾಜದಲ್ಲಿ ಬದಲಾವಣೆ ತರುವಂಥಾ ಕಥನಗಳಿಗೆ ದೃಶ್ಯರೂಪ ಕೊಡಬೇಕೆಂಬ ತುಡಿತ ಹೊಂದಿರುವವರು ನಂದೀಶ್. ಜೇಕಬ್ ವರ್ಗೀಸ್ ನಿರ್ದೇಶನದ ಪೃಥ್ವಿ ಚಿತ್ರ ಭ್ರಷಾಚಾರದ ವಿರುದ್ಧ ಈ ಸಮಾಜವನ್ನು ಸೆಟೆದು ನಿಲ್ಲುವಂತೆ ಮಾಡಿತ್ತು. ಅದರ ಭಾಗವಾಗಿ ಅನುಭವ ಹೊಂದಿರುವ ನಂದೀಶ್ ಆ ಬಗೆಯ ಚಿತ್ರಗಳತ್ತ ವಿಶೇಷ ಒಲವು ಹೊಂದಿದ್ದಾರೆ. ರುದ್ರ ಗರುಡ ಪುರಾಣದ ಮೂಲಕ ಮತ್ತೊಂದು ದಿಕ್ಕಿನ ಕಥೆ ಹೇಳಿದ್ದಾರೆ.

rudra garuda purana nandish 1

ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ವಿಜಯ್ ಲೋಹಿತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದೊಂದು ಮಿಸ್ಟ್ರಿ ಥ್ರಿಲ್ಲರ್ ಬಗೆಯ ಸಿನಿಮಾ. ಒಂದು ಘಟನೆಯ ಬಗ್ಗೆ ತನಿಖೆಗಿಳಿಯುತ್ತಾ, ಪ್ರೇಕ್ಷಕರೆದುರು ಹೊಸ ಜಗತ್ತೊಂದು ತೆರೆದುಕೊಂಡು ಹೋಗುವಂತೆ ಈ ಚಿತ್ರವನ್ನು ರೂಪಿಸಲಾಗಿದೆಯಂತೆ. ಈಗಿರುವ ಕ್ರೇಜ್ ಅನ್ನು ಆಧರಿಸಿ ಹೇಳೋದಾದರೆ, ರುದ್ರ ಗರುಡ ಪುರಾಣ ಈ ವರ್ಷದ ಆರಂಭವನ್ನು ಗೆಲುವಿನ ಮೂಲಕ ಕಳೆಗಟ್ಟಿಸುವ ಲಕ್ಷಣಗಳು ಕಾಣಿಸಲಾರಂಭಿಸಿವೆ. ವಿನೋದ್ ಆಳ್ವಾ, ಅವಿನಾಶ್, ಶಿವರಾಜ್ ಕೆ.ಆರ್ ಪೇಟೆ, ಗಿರೀಶ್ ಶಿವಣ್ಣ ಮುಂತಾದವರು ಪ್ರಧಾನ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಸಂದೀಪ್ ಕುಮಾರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ಕೃಷ್ಣ ಪ್ರಸಾದ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

TAGGED:NandishRudra Garuda Puranasandalwoodರುದ್ರ ಗರುಡ ಪುರಾಣ
Share This Article
Facebook Whatsapp Whatsapp Telegram

Cinema news

Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories

You Might Also Like

WPL RCB vs DC
Cricket

WPL 2026: ಆರ್‌ಸಿಬಿ ಗೆಲುವಿನ ಓಟಕ್ಕೆ ಬ್ರೇಕ್‌ – ಡೆಲ್ಲಿಗೆ 7 ವಿಕೆಟ್‌ಗಳ ಜಯ

Public TV
By Public TV
6 hours ago
infant selling case
Chamarajanagar

ತಂದೆ-ತಾಯಿ ಮಾರಾಟ ಮಾಡಿದ್ದ 6 ತಿಂಗಳ ಮಗು ಪತ್ತೆ; ಐವರು ಆರೋಪಿಗಳು ಅರೆಸ್ಟ್‌

Public TV
By Public TV
7 hours ago
Minor son stabbing father then commits suicide shooting himself in Dakshina Kannada
Crime

ತಂದೆಗೆ ಚಾಕು ಇರಿದು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಮಗ

Public TV
By Public TV
7 hours ago
towing
Bengaluru City

ಬೆಂಗಳೂರಿನಲ್ಲಿ ಶೀಘ್ರದಲ್ಲೇ ಮತ್ತೆ ಟೋಯಿಂಗ್ – ಟ್ರಾಫಿಕ್ ಕಂಟ್ರೋಲ್‌ಗೆ ಮಾಸ್ಟರ್ ಪ್ಲ್ಯಾನ್‌

Public TV
By Public TV
8 hours ago
serial accident near nelamangala toll plaza
Bengaluru Rural

ಸಾಲು ಸಾಲು ರಜೆ, ಟ್ರಾಫಿಕ್ ಬಿಸಿ – ನೆಲಮಂಗಲ ಟೋಲ್‌ ಬಳಿ ಸರಣಿ ಅಪಘಾತ

Public TV
By Public TV
8 hours ago
H.D Kumaraswamy
Districts

ರಾಜ್ಯದಲ್ಲಿರೋದು ಬ್ರೋಕರ್‌ಗಳ ಸರ್ಕಾರ – ಹೆಚ್‌ಡಿಕೆ ವಾಗ್ದಾಳಿ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?