ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಎದುರಲ್ಲೇ ಶಾಸಕಿ ರೂಪಾಲಿ ನಾಯ್ಕ್ ಗರಂ

Public TV
1 Min Read
rupali nayka 1

– ಪ್ರವಾಸೋದ್ಯಮ ಇಲಾಖೆಯಿಂದ ಆಹ್ವಾನ ನೀಡದೇ ನಿರ್ಲಕ್ಷ್ಯ

ಕಾರವಾರ: ಜಿಲ್ಲಾ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಡೆಯುತ್ತಿದ್ದ, ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ಬಹಿರಂಗ ವೇದಿಕೆಯಲ್ಲೇ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್ ಎದುರು ಶಾಸಕಿ ರೂಪಾಲಿ ನಾಯ್ಕ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

rupali nayka 12ಕಾರವಾರದ ಶಾಸಕಿಯಾಗಿರುವ ರೂಪಾಲಿ ನಾಯ್ಕ್, ಕಾರ್ಯಕ್ರಮಕ್ಕೆ ನನಗೆ ಆಹ್ವಾನ ನೀಡಿಲ್ಲ, ಶಾಸಕಿಯಾಗಿರುವ ನನಗೆ ಅಗೌರವ ತೋರಿದ್ದಾರೆ ಎಂದು ಅಧಿಕಾರಿಗಳನ್ನು ಕಾರ್ಯಕ್ರಮ ವೇದಿಕೆಯಲ್ಲೇ ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ರಾಜ್ಯದ ಆರು ನಗರಗಳಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳ ಸ್ಥಾಪನೆ: ಬೊಮ್ಮಾಯಿ

rupali nayka 132018ರಿಂದ ಕಾರವಾರ ಕ್ಷೇತ್ರಕ್ಕೆ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ಪ್ರವಾಸೋದ್ಯಮ ಇಲಾಖೆಯವರು ನನ್ನ ಕ್ಷೇತ್ರದಲ್ಲಿ ಏನೇ ಅಭಿವೃದ್ಧಿ ಕಾರ್ಯ ನಡೆಸಿದರೂ ಅದರ ಯಾವುದೇ ಮಾಹಿತಿ ನೀಡುವುದಿಲ್ಲ. ನಾನೊಬ್ಬಳು ಕ್ಷೇತ್ರದ ಶಾಸಕಿ ಎಂಬುದನ್ನು ಮರೆತು ಆಧಿಕಾರಿಗಳು ತಮ್ಮ ಇಚ್ಛೆಗೆ ತಾವು ನಡೆದುಕೊಳ್ಳುತ್ತಿದ್ದಾರೆ ಎಂದು ಗರಂ ಆದರು. ಇದನ್ನೂ ಓದಿ: ನಾನು 35 ಅಂಕದ ಕೆಟಗೆರಿಯವರು ಅದಕ್ಕೆ ಕೈಗಾರಿಕಾ ಸಚಿವನಾದೆ: ಮುರುಗೇಶ್ ನಿರಾಣಿ

rupali naykaನನ್ನ ಕ್ಷೇತ್ರದಲ್ಲಿ ಕೋಟಿಗಟ್ಟಲೇ ಹಣ ಹಾಕಿ ನಿರ್ಮಿಸಿದ ಗಾರ್ಡನ್‍ಗಳು ಸೇರಿದಂತೆ ಇತರೆ ಕಾಮಗಾರಿಗಳ ಕಾರ್ಯ ನಿಂತುಹೋಗಿದೆ. ಇದಕ್ಕೆಲ್ಲಾ ಅಧಿಕಾರಿಗಳು ಕಾರಣ ಎಂದು ಕಿಡಿಕಾರಿದರು.

 

Share This Article
Leave a Comment

Leave a Reply

Your email address will not be published. Required fields are marked *