ಬಿಗ್ ಬಾಸ್ (Bigg Boss Season 9) ಮನೆ ಒಳಗೆ ಪ್ರವೇಶ ಮಾಡುವಾಗ ಪ್ರತಿ ಸ್ಪರ್ಧಿಗೂ ಸುದೀಪ್ (Sudeep) ಒಂದೊಂದು ಬ್ಯಾಂಡ್ ಕೊಟ್ಟು ಮನೆ ಒಳಗೆ ಕಳುಹಿಸಿದ್ದರು. ಬಿಗ್ ಬಾಸ್ ಆದೇಶ ಮಾಡೋ ತನಕ ಈ ಪಟ್ಟಿ ನಿಮ್ಮ ಬಳಿ ಇರಲಿ ಎಂದು ಎಚ್ಚರಿಕೆಯನ್ನೂ ಕೊಟ್ಟು ಕಳುಹಿಸಿದ್ದರು. ಬಿಗ್ ಬಾಸ್ ಆದೇಶದ ನಂತರ ನಿಮಗೆ ಇಷ್ಟವಾದ ಸದಸ್ಯರಿಗೆ ಈ ಪಟ್ಟಿಯನ್ನು ಕೈಗೆ ಕಟ್ಬೇಕು, ಅದಕ್ಕೆ ಕಾರಣವನ್ನೂ ತಿಳಿಸಬೇಕು ಎಂದು ಹೇಳಲಾಗಿತ್ತು. ಇದೀಗ ಆ ಬ್ಯಾಂಡ್ (Band) ಕಟ್ಟುವ ಸಮಯ ಬಂದಿದೆ.
ಮನೆಯ ಸದಸ್ಯರು ತಮಗೆ ಸಿಕ್ಕಿರುವ ಬ್ಯಾಂಡ್ ಅನ್ನು ತಮಗಿಷ್ಟದ ವ್ಯಕ್ತಿಗಳಿಗೆ ಕಟ್ಟಿದ್ದಾರೆ. ಅದಕ್ಕೆ ಕಾರಣವನ್ನೂ ಕೊಟ್ಟಿದ್ದಾರೆ. ಆದರೆ, ಆರ್ಯವರ್ಧನ್ (Aryavardhan) ಗುರೂಜಿ ಆಯ್ಕೆ ಮಾಡಿಕೊಂಡ ವ್ಯಕ್ತಿ ಮತ್ತು ಅವರು ಕೊಟ್ಟ ಕಾರಣದಿಂದಾಗಿ ಬಿಗ್ ಬಾಸ್ ಮನೆಯ ಸದಸ್ಯರು ಕೆಲ ನಿಮಿಷಗಳ ಕಾಲ ಭಾವುಕತೆಗೆ ಸಾಕ್ಷಿಯಾದರು. ಸ್ವತಃ ಗುರೂಜಿ (Guruji) ಕಣ್ಣೀರಿಟ್ಟು ಆ ಬ್ಯಾಂಡ್ ಅನ್ನು ವ್ಯಕ್ತಿಗೆ ನೀಡಿದರು. ಇದನ್ನೂ ಓದಿ: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಆಸ್ಪತ್ರೆ ದಾಖಲು: ಅಭಿಮಾನಿಗಳಿಗೆ ಹೆಚ್ಚಿದೆ ಆತಂಕ
ನಾನು ಸೋತ ವೇಳೆಯಲ್ಲಿ, ಹತಾಶನಾದ ಟೈಮ್ನಲ್ಲಿ ನನ್ನ ಜೊತೆ ನಿಂತವನು ರೂಪೇಶ್ ಶೆಟ್ಟಿ (Rupesh Shetty), ನಾನು ನನ್ನ ಮಗನನ್ನು ಎಷ್ಟು ಪ್ರೀತಿಸುತ್ತೇನೋ ಅಷ್ಟೇ ಪ್ರೀತಿಯನ್ನು ರೂಪೇಶ್ ಗೆ ಕೊಡುವೆ. ಅವನು ನನ್ನ ಮಗನಿದ್ದಂತೆ ಎಂದು ಘೋಷಿಸಿದರು. ಈ ವೇಳೆಯಲ್ಲಿ ಭಾವುಕರೂ ಆದರು. ಭಾವುಕತೆಯ ತೀವ್ರ ಎಷ್ಟಿತ್ತು ಅಂದರೆ, ರೂಪೇಶ್ ಹೆಸರಿನ ಬದಲಾಗಿ ರಾಕೇಶ್ (Rakesh Adiga) ಎಂದು ಹೇಳಿದರು. ಈ ಮಾತು ಕೇಳಿ ರಾಕೇಶ್ ಅಚ್ಚರಿ ವ್ಯಕ್ತ ಪಡಿಸಿದರು. ಕೊನೆಗೆ ರಾಕೇಶ್ ಅಲ್ಲ ರೂಪೇಶ್ ಎಂದು ತಿದ್ದಿಕೊಂಡು ರೂಪೇಶ್ ಗೆ ಬ್ಯಾಂಡ್ ಕಟ್ಟಿದರು ಗುರೂಜಿ.
ಬಿಗ್ ಬಾಸ್ ಮನೆಯಲ್ಲಿ ರೂಪೇಶ್ ರಕ್ಷಣಾತ್ಮಕವಾಗಿ ಆಟ ಆಡುತ್ತಿದ್ದಾರೆ. ಬಿಗ್ ಬಾಸ್ ಓಟಿಟಿಯಲ್ಲಿಯ ಅನುಭವವನ್ನೂ ಈ ಮನೆಯಲ್ಲೂ ಉಪಯೋಗಿಸ್ತಿದ್ದಾರೆ. ಹಾಗಾಗಿ ರೂಪೇಶ್ ಎಲ್ಲರ ನೆಚ್ಚಿನ ಡಾರ್ಲಿಂಗ್ ಆಗಿದ್ದಾರೆ. ಅದರಲ್ಲೂ ಸದಾ ಗುರೂಜಿಯ ಬೆನ್ನಿಗೆ ನಿಂತ ಕಾರಣದಿಂದಾಗಿ ಪ್ರೀತಿಯ ಬ್ಯಾಂಡ್ ಅನ್ನು ಪಡೆದಿದ್ದಾರೆ.