ಕೀವ್: ಉಕ್ರೇನ್ನಲ್ಲಿರುವ ಭಾರತೀಯರಿಗೆ ರಾಯಭಾರ ಕಚೇರಿ ತಕ್ಷಣವೇ ಖಾರ್ಕಿವ್ ತೊರೆಯುವಂತೆ ತುರ್ತು ಸಲಹೆ ನೀಡಿದೆ. ಇಂದು ಸಂಜೆ 6 ಗಂಟೆ(ಭಾರತೀಯ ಕಾಲಮಾನ ರಾತ್ರಿ 9:30) ಒಳಗಾಗಿ ಪೆಸೊಚಿನ್, ಬಾಬಾಯೆ ಅಥವಾ ಬೆಜ್ಲ್ಯುಡೋವ್ಕಾ ವಸಾಹತುಗಳನ್ನು ತಲುಪುವಂತೆ ರಾಯಭಾರ ಕಚೇರಿ ತಿಳಿಸಿದೆ.
ಖಾರ್ಕಿವ್ನಲ್ಲಿರುವ ಭಾರತೀಯರು ತಮ್ಮ ಸುರಕ್ಷತೆ ಹಾಗೂ ಭದ್ರತೆಗೆ ಈ ಕೂಡಲೇ ಖಾರ್ಕಿವ್ ಅನ್ನು ತೊರೆಯಬೇಕು. ಆದಷ್ಟು ಬೇಗ ಪೆಸೊಚಿನ್, ಬಾಬಾಯೆ ಅಥವಾ ಬೆಜ್ಲ್ಯುಡೋವ್ಕಾಗೆ ತಲುಪಿ ಎಂದು ಭಾರತೀಯ ರಾಯಭಾರಿ ಕಚೇರಿ ಟ್ವಿಟ್ಟರ್ನಲ್ಲಿ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್ ಯುದ್ಧ – ಭಾರತದ ಮತ್ತೊಬ್ಬ ವಿದ್ಯಾರ್ಥಿ ಸಾವು
URGENT ADVISORY TO ALL INDIAN NATIONALS IN KHARKIV.
FOR THEIR SAFETY AND SECURITY THEY MUST LEAVE KHARKIV IMMEDIATELY.
PROCEED TO PESOCHIN, BABAYE AND BEZLYUDOVKA AS SOON AS POSSIBLE.
UNDER ALL CIRCUMSTANCES THEY MUST REACH THESE SETTLEMENTS *BY 1800 HRS (UKRAINIAN TIME) TODAY*.
— India in Ukraine (@IndiainUkraine) March 2, 2022
ಈ ಹಿಂದೆ ಪೋಲೆಂಡ್ನಲ್ಲಿರುವ ರಾಯಭಾರಿ ಕಚೇರಿ ಉಕ್ರೇನ್ನಲ್ಲಿರುವ ಭಾರತೀಯರಿಗೆ ತುರ್ತು ಸಲಹೆ ನೀಡಿತ್ತು. ಪೋಲೆಂಡ್ಗೆ ತ್ವರಿತವಾಗಿ ಪ್ರವೇಶಿಸಲು ಬುಡೋಮಿಯಾರ್ಜ್ ಗಡಿಗೆ ತಕ್ಷಣ ಬರುವಂತೆ ಸಲಹೆ ನೀಡಿತ್ತು. ಇದನ್ನೂ ಓದಿ: ರಷ್ಯಾ- ಉಕ್ರೇನ್ ಯುದ್ಧ: ಕಚ್ಚಾ ತೈಲ ಬೆಲೆ ಭಾರೀ ಏರಿಕೆ
ಈಗಾಗಲೇ ರಷ್ಯಾ ಉಕ್ರೇನ್ನ ಮುಖ್ಯ ನಗರಗಳಾದ ಕೀವ್ ಹಾಗೂ ಖಾರ್ಕಿವ್ ನಗರಗಳನ್ನು ಮುತ್ತಿಗೆ ಹಾಕಿ ನಿರಂತರ ದಾಳಿ ನಡೆಸುತ್ತಿದೆ. ರಷ್ಯಾದ ಅಟ್ಟಹಾಸಕ್ಕೆ ಉಕ್ರೇನ್ನ 6 ಸಾವಿರ ಸೈನಿಕರು ಹಾಗೂ ಸ್ಥಳೀಯರು ಪ್ರಾಣ ಬಿಟ್ಟಿದ್ದು, ಅದರಲ್ಲಿ ಒಬ್ಬ ಕರ್ನಾಟಕದ ವಿದ್ಯಾರ್ಥಿಯೂ ಕೊನೆಯುಸಿರೆಳೆದಿದ್ದಾರೆ.