ದಯವಿಟ್ಟು ನನ್ನನ್ನು ಭಾರತಕ್ಕೆ ಕರೆಸಿಕೊಳ್ಳಿ: ಉಕ್ರೇನ್‍ನಲ್ಲಿ ಗುಂಡು ತಗುಲಿದ ವಿದ್ಯಾರ್ಥಿ

Public TV
1 Min Read
harjot ukraine student

ಕೀವ್: ಉಕ್ರೇನ್‍ನಲ್ಲಿ ಗುಂಡು ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿ ಇದೀಗ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿ ಮೂಲದ ವಿದ್ಯಾರ್ಥಿ ಹರ್ಜೋತ್ ಸಿಂಗ್ ಗುಂಡು ತಗುಲಿದ ಭೀಕರ ಸನ್ನಿವೇಶದ ಬಗ್ಗೆ ಆಸ್ಪತ್ರೆಯಲ್ಲಿ ವಿವರಿಸಿದ್ದಾರೆ.

ಇದು ಫೆಬ್ರವರಿ 27ರಂದು ನಡೆದ ಘಟನೆ. ನಾನು ಹಾಗೂ ನನ್ನ ಇಬ್ಬರು ಸ್ನೇಹಿತರು ಕ್ಯಾಬ್‍ನಲ್ಲಿ ಪ್ರಯಾಣಿಸುತ್ತಿದ್ದಾಗ 3 ರಿಂದ 4 ಜನರು ನಮ್ಮ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಇದರಿಂದ ನನಗೆ ಅನೇಕ ಗುಂಡುಗಳು ತಗುಲಿ ಗಾಯಗಳಾಗಿದ್ದವು ಎಂದು ಹರ್ಜೋತ್ ತಿಳಿಸಿದರು. ಇದನ್ನೂ ಓದಿ: ಮತ್ತೊಬ್ಬ ಭಾರತೀಯ ವಿದ್ಯಾರ್ಥಿಗೆ ಗುಂಡೇಟು- ಆಸ್ಪತ್ರೆಗೆ ದಾಖಲು

ನನಗೆ ಮಾರ್ಚ್ 2ರಂದು ಪ್ರಜ್ಞೆ ಬಂದಿತ್ತು. ಪ್ರಜ್ಞೆ ಬಂದ ತಕ್ಷಣ ನಾನು ನನ್ನ ಮನೆಯವರಿಗೆ ಕರೆ ಮಾಡಿದ್ದೆ. ಸದ್ಯ ದೇವರು ನನಗೆ ಹೊಸ ಜೀವನವನ್ನು ನೀಡಿದ್ದಾರೆ. ನಾನು ಭಾರತಕ್ಕೆ ಹಿಂದಿರುಗಲು ಬಯಸುತ್ತೇನೆ. ಈ ಅಮೂಲ್ಯ ಜೀವನವನ್ನು ನನ್ನ ಕುಟುಂಬದೊಂದಿಗೆ ಕಳೆಯಲು ಬಯಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಮೋದಿ 5ನೇ ಸಭೆ – ಉಕ್ರೇನ್‍ನಿಂದ 18 ಸಾವಿರ ಮಂದಿ ಸ್ವದೇಶಕ್ಕೆ

ಹರ್ಜೋತ್ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಉಕ್ರೇನ್‍ನಿಂದ ತವರಿಗೆ ಕರೆಸಿಕೊಳ್ಳುವಂತೆ ಹರ್ಜೋತ್ ಭಾರತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Share This Article