Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಕ್ಷಿಣ ಭಾರತೀಯರಿಗೆ ಯುದ್ಧದ ಅನುಭವವಾಯ್ತು- ನನಗೆ ಮಾತೃಭೂಮಿ ಮೇಲೆ ಪ್ರೀತಿ ಜಾಸ್ತಿಯಾಯ್ತು: ಅನೀಫ್ರೆಡ್ ಡಿಸೋಜಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದಕ್ಷಿಣ ಭಾರತೀಯರಿಗೆ ಯುದ್ಧದ ಅನುಭವವಾಯ್ತು- ನನಗೆ ಮಾತೃಭೂಮಿ ಮೇಲೆ ಪ್ರೀತಿ ಜಾಸ್ತಿಯಾಯ್ತು: ಅನೀಫ್ರೆಡ್ ಡಿಸೋಜಾ

Districts

ದಕ್ಷಿಣ ಭಾರತೀಯರಿಗೆ ಯುದ್ಧದ ಅನುಭವವಾಯ್ತು- ನನಗೆ ಮಾತೃಭೂಮಿ ಮೇಲೆ ಪ್ರೀತಿ ಜಾಸ್ತಿಯಾಯ್ತು: ಅನೀಫ್ರೆಡ್ ಡಿಸೋಜಾ

Public TV
Last updated: March 9, 2022 3:04 pm
Public TV
Share
3 Min Read
ANFID DISOJA
SHARE

ಉಡುಪಿ: ರಷ್ಯಾ-ಉಕ್ರೇನ್ ನಡುವಿನ ಯುದ್ಧದಿಂದ ದಕ್ಷಿಣ ಭಾರತೀಯರಿಗೆ ಯುದ್ಧದ ಅನುಭವವಾದರೆ, ನನಗೆ ಮಾತೃಭೂಮಿ ಮೇಲೆ ಪ್ರೀತಿ ಜಾಸ್ತಿಯಾಯ್ತು ಎಂದು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಕಹಿ ಅನುಭವಗಳನ್ನು ಉಡುಪಿಯ ಅನೀಫ್ರೆಡ್ ರೆಡ್ಲೀ ಡಿಸೋಜಾ ವಿವರಿಸಿದರು.

UKRANE AND RUSIA

ಪಬ್ಲಿಕ್ ಟಿವಿ ಜೊತೆ ಯುದ್ಧಭೂಮಿಯ ಅನುಭವ ಬಿಚ್ಚಿಟ್ಟ ಅವರು,ನಾವು ದಕ್ಷಿಣ ಭಾರತದವರು. ನಾವು ಯುದ್ಧ, ಬಾಂಬ್, ಶೆಲ್, ವಿಮಾನಗಳ ಓಡಾಟ ಯಾವುದನ್ನು ಕೂಡ ನಾವು ನೋಡಿಲ್ಲ. ಜೀವನದಲ್ಲಿ ಮೊದಲ ಬಾರಿಗೆ ಯುದ್ಧ ವಿಮಾನಗಳನ್ನು ನೋಡಿದ್ದೇನೆ. ಬಾಂಬ್‍ಗಳು ಶೆಲ್ ದಾಳಿ ಎಲ್ಲವೂ ಮೊದಲು. ಉತ್ತರ ಭಾರತದ ನನ್ನ ಫ್ರೆಂಡ್ಸ್ ಬಂಕರ್ ಒಳಗೆ ಇದ್ದಾಗಲೂ ಪಿಕ್ನಿಕ್ ರೀತಿಯಲ್ಲಿ ಇದ್ದರು. ಆದರೆ ನಾವು ಬಹಳ ಕಷ್ಟಪಟ್ಟು ಹತ್ತು ದಿನಗಳನ್ನು ಕಳೆದೆವು. ನಮಗೆ ಜೋರು ಹಸಿವಾಗ್ತಾ ಇದ್ರೂ ಸ್ವಲ್ಪ ಊಟ ಮಾಡಬೇಕಾಗಿತ್ತು. ಇಂದಿನ ಆಹಾರವನ್ನು ನಾಳೆ ಮತ್ತು ನಾಡಿದ್ದಿಗೆ ತೆಗೆದು ಇಡಬೇಕಾದ ಪರಿಸ್ಥಿತಿ ಎದುರಿಸಿದೆವು. ಏನೂ ಶಬ್ದ ಮಾಡದೆ ಸುಮ್ಮನೆ ಕುಳಿತುಕೊಳ್ಳುವುದೇ ನಮಗೆ ದೊಡ್ಡ ಶಿಕ್ಷೆಯ ಹಾಗೆ ಅನ್ನಿಸುತ್ತಿತ್ತು. ಹಗಲು ಮತ್ತು ರಾತ್ರಿ ನಾವು ಲೈಟ್ ಹಾಕದೆ ಕತ್ತಲಲ್ಲೇ ಕಳೆಯಬೇಕಾಗಿತ್ತು. ಇದು ನಮ್ಮ ಮನಸ್ಸಿಗೆ ಬಹಳ ಕಿರಿಕಿರಿಯಾಗುತ್ತಿತ್ತು ಎಂದು ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧದ ಕಹಿ ಅನುಭವಗಳನ್ನು ವಿವರಿಸಿದರು. ಇದನ್ನೂ ಓದಿ: ಹೋಟೆಲ್‍ನಲ್ಲಿ ಅತ್ಯಾಚಾರಕ್ಕೆ ಯತ್ನ – ಬಿಹಾರ ಕ್ರಿಕೆಟ್ ಮುಖ್ಯಸ್ಥನ ವಿರುದ್ಧ ಆರೋಪ

ANFIRD DIZOJA

ಖಾರ್ಕಿವ್‍ನ ಬಂಕರ್‍ನಲ್ಲಿ ನಾವು 10 ದಿನ ಕಳೆಯಬೇಕಾಯಿತು. ಸರಿಯಾಗಿ ನಿದ್ದೆ ಇಲ್ಲ ಊಟ ಇಲ್ಲ ಅದರ ಜೊತೆಗೆ ಜೀವಭಯ. ನಮಗೆ ರಾಯಭಾರಿ ಕಚೇರಿಯಿಂದ ಸಂದೇಶ ಬಂತು. ಕೂಡಲೇ ಬಂಕರ್ ಖಾಲಿ ಮಾಡಿ ಎಂದು. ಹೊರಬಂದು ನಾವು ಬಸ್‍ಗಾಗಿ ಬಹಳ ಕಾದೆವು. ಪ್ರೈವೇಟ್ ವಾಹನಗಳನ್ನು ಮಾಡಲು ಪ್ರಯತ್ನಪಟ್ಟೆವು. ಅದು ಸಾಧ್ಯವಾಗದಿದ್ದಾಗ ಸುಮಾರು ಎಂಟು ಕಿಲೋಮೀಟರ್‌ಗಳ ದೂರವನ್ನು ನಡೆದುಕೊಂಡು ಹೋಗಲು ನಿರ್ಧಾರ ಮಾಡಿದೆವು. ಶೆಲ್ ದಾಳಿ, ಬಾಂಬ್ ಸದ್ದು ವಿಮಾನಗಳ ಹೋರಾಟಗಳ ನಡುವೆ ನಡೆದುಕೊಂಡು ರೈಲು ನಿಲ್ದಾಣ ಸೇರಿದೆವು. ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಅವರ ‘ಮಿಷನ್ ಮಜ್ನು’ ಬರ್ತಿದ್ದಾನೆ, ದಾರಿ ಬಿಡಿ

ವಿಮಾನಗಳ ಓಡಾಟದ ಶಬ್ದ ಬಾಂಬ್‍ಗಳ ಶಬ್ದ ಕೇಳಿಸಿಕೊಂಡು ನಾವು ವಾಪಸ್ ಬರುತ್ತೇವೆ ಅಂತ ಅಂದುಕೊಂಡಿರಲಿಲ್ಲ. ನನ್ನ ಮನಸ್ಸಿನಲ್ಲಿ ನಾವು ವಾಪಸ್ ಬರಬೇಕು, ನಾನು ವಾಪಸ್ ಇಂಡಿಯಾಕ್ಕೆ ತಲುಪಬೇಕು. ನನ್ನ ಕುಟುಂಬವನ್ನು ಸೇರಿಕೊಳ್ಳಬೇಕು ಎಂದು ಗಟ್ಟಿ ನಿರ್ಧಾರ ಮಾಡಿದ ಕಾರಣ ನನಗೆ ವಾಪಸ್ ಬರಲು ಸಾಧ್ಯವಾಯಿತು. ನಾನು ವಾಪಸ್ ಉಡುಪಿಗೆ ಹೋಗಿ ತಂದೆ ತಾಯಿಯ ಮುಖ ನೋಡಬೇಕು ಎಂದು ಮನಸ್ಸಿನಲ್ಲಿ ಇದ್ದ ಕಾರಣ ನಾವು ವಾಪಸ್ ಬಂದೆ. ಇಲ್ಲದಿದ್ದರೆ ಅಲ್ಲೇ ಬಾಕಿಯಾಗಬೇಕಾಗಿತ್ತು ಎಂದು ನೆನಪು ಮಾಡಿಕೊಂಡರು.

ಉಕ್ರೇನಿಗರು ಥಳಿಸಿದರು:
ಹೊರಗೆ ನಾವು ರೈಲು ಹತ್ತುವಾಗ ಉಕ್ರೇನಿನ ಸ್ಥಳೀಯರು ನಮ್ಮ ಗುಂಪಿನ ಮೇಲೆ ಪೆಪ್ಪರ್ ಸ್ಪ್ರೇ ಮಾಡಿದರು. ರೈಲು ಹತ್ತಲು ಬಿಡಲಿಲ್ಲ. ಬಾಗಿಲಿನಲ್ಲಿ ತಳ್ಳಿದರು, ಹೊಡೆದರು. ನೀವು ಭಾರತೀಯರು ನಿಮ್ಮ ದೇಶಬಿಟ್ಟು ಇಲ್ಲಿ ಬಂದದ್ದು ಯಾಕೆ? ನೀವು ಇಲ್ಲೇ ಸತ್ತುಹೋಗಿ ಎಂದು ನಮ್ಮನ್ನು ರೈಲು ಹತ್ತಲು ಬಿಡುತ್ತಿರಲಿಲ್ಲ. ನಾವು ಅಲ್ಲಿನ ಪ್ರಜೆಗಳಿಗೆ ಸರಿಯಾಗಿ ಉತ್ತರಕೊಟ್ಟು ಅವರನ್ನು ತಳ್ಳಿ ರೈಲಿನಲ್ಲಿ ಜಾಗ ಮಾಡಿಕೊಂಡು ವಾಪಸ್ ಬಂದಿದ್ದೇವೆ ಎಂದು ಅನೀಫ್ರೆಡ್ ಡಿಸೋಜಾ ಅನುಭವ ಹಂಚಿಕೊಂಡರು.

ಖಾರ್ಕಿವ್ ಅಥವಾ ಕೀವ್‍ಗೆ ಹೆಲಿಕಾಪ್ಟರ್ ಅಥವಾ ವಿಮಾನವನ್ನು ತೆಗೆದುಕೊಂಡು ಭಾರತ ದೇಶ ಅಲ್ಲಿಗೆ ಬರಲು ಸಾಧ್ಯವಿರಲಿಲ್ಲ. ನಿರಂತರವಾಗಿ ಏರ್‍ಸ್ಟ್ರೈಕ್, ಮಿಸೈಲ್ ದಾಳಿ ಮತ್ತು ಬಾಂಬಿಂಗ್ ನಡೆಯುತ್ತಿರುವುದರಿಂದ ಹೊರದೇಶದವರು ಯಾರು ಉಕ್ರೇನಿಗೆ ಬರಲು ಸಾಧ್ಯವಿರಲಿಲ್ಲ. ಇಲ್ಲಿ ಬಂದು ಹೇಳಿದಷ್ಟು ಸುಲಭ ಇಲ್ಲ. ರಾಯಭಾರ ಕಚೇರಿ ಸಲಹೆಗಳನ್ನು ಕೊಟ್ಟು, ಬಂಕರ್‌ನಲ್ಲಿ ನಮ್ಮನ್ನು ಕಾಪಾಡಿದೆ. ಹಂಗೇರಿಯಿಂದ ನಮ್ಮನ್ನು ಸೇಫಾಗಿ ಸರ್ಕಾರ ಮನೆಗೆ ತಲುಪಿಸಿದೆ. ನಮಗೆ ನಮ್ಮ ಮಾತೃಭೂಮಿಯ ಮೇಲೆ ಮೊದಲೇ ಪ್ರೀತಿಯಿತ್ತು. ಈಗ ದೇಶದ ಮೇಲೆ ಪ್ರೀತಿ ಜಾಸ್ತಿಯಾಗಿದೆ ಎಂದರು. ಇದನ್ನೂ ಓದಿ: ಡ್ರಗ್ಸ್ ನಶೆಯಲ್ಲಿ ಕಲರ್ ಲೈಟ್ ನೋಡಿದ್ರೆ ಮತ್ತಷ್ಟು ಕಿಕ್ ಸಿಕ್ತಿತ್ತು

ನನ್ನ ಮಗಳಿಗೆ ಆರೋಗ್ಯ ಸಮಸ್ಯೆ ಇತ್ತು. ಡಸ್ಟ್ ಅಲರ್ಜಿ ಮತ್ತು ಆಸ್ತಮಾ ಇದ್ದ ಕಾರಣ ನಮಗೆ ಬಹಳ ಆತಂಕ ಆಗುತ್ತಿತ್ತು. ಯುದ್ಧ ಆರಂಭವಾಗಿದೆ ಎಂದು ತಿಳಿದ ಕೂಡಲೇ ನಾವು ಇಡೀ ದಿನ ಪ್ರಾರ್ಥನೆ ಮಾಡುತ್ತಿದ್ದೆವು. ದಿನಕ್ಕೆ ಎರಡು ಮೂರು ಬಾರಿ ಚರ್ಚಿಗೆ ಹೋಗಿ ದೇವರಲ್ಲಿ ಪೂಜೆ ಸಲ್ಲಿಸುತ್ತಿದ್ದೆವು. ಮಗಳ ಫೋನಿಗಾಗಿ ಕಾಯುವುದು ಮತ್ತು ಅವಳಿಗೆ ಕೆಲವು ಸಲಹೆಗಳನ್ನು ಕೊಡುವುದು ನಮ್ಮ ದಿನಚರಿಯಾಗಿತ್ತು. ಕಳೆದ ಹತ್ತು ದಿನಗಳಲ್ಲಿ ನಾವು ಬೇರೆ ಏನನ್ನು ಮಾಡಿಲ್ಲ. ನಮ್ಮ ಪ್ರಾರ್ಥನೆಯ ಫಲ ಮಗಳು ನಮ್ಮ ಮನೆಗೆ ಬಂದಿದ್ದಾಳೆ. ನಮಗೆ ಸರ್ಕಾರ ಮತ್ತು ರಾಯಭಾರ ಕಚೇರಿ ಬಹಳ ಸಹಾಯ ಆಗಿದೆ. ಕ್ಷಣಕ್ಷಣಕ್ಕೂ ಅಲ್ಲಿನ ಬೆಳವಣಿಗೆಗಳನ್ನು ನಮಗೆ ತಿಳಿಸಿದ್ದಾರೆ. ಮಕ್ಕಳಿಗೆ ಸರಿಯಾಗಿ ಮಾರ್ಗದರ್ಶನ ಮಾಡಿದ್ದಾರೆ. ಚಾನಲ್‌ ಮತ್ತು ವೆಬ್‌ಸೈಟ್‌ಗಳ ಮೂಲಕ ನಮಗೆ ನಿರಂತರ ಮಾಹಿತಿಗಳನ್ನು ಕೊಡುತ್ತಿದ್ದರು ಇದು ನಮಗೆ ಬಹಳ ಉಪಕಾರವಾಯಿತು ಎಂದು ತಾಯಿ ಶೋಭಾ ಡಿಸೋಜಾ ಹೇಳಿದರು.

TAGGED:russiarussia ukraine warSouth IndianudupiUkraineಉಕ್ರೇನ್ಉಡುಪಿಭಾರತ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Rahul Gandhi Gym Trainer Mohammad Deepak
Latest

ನಿಮ್ಮ ಜಿಮ್‌ಗೆ ಸೇರುತ್ತೇನೆ: ಜಿಮ್ ಟ್ರೈನರ್ ಮೊಹಮ್ಮದ್ ದೀಪಕ್ ಭೇಟಿಯಾದ ರಾಹುಲ್ ಗಾಂಧಿ

Public TV
By Public TV
7 minutes ago
Indias Big Decolonisation Move Chakravarti Rajagopalachari replaces Lutyens at Rashtrapati Bhavan Delhi 1
Latest

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ – ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ

Public TV
By Public TV
46 minutes ago
School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
2 hours ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
2 hours ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
2 hours ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?