ನವದೆಹಲಿ: ಕತಾರ್ನಲ್ಲಿ (Qatar) ಮರಣದಂಡನೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ (Former Navy Personnel) 8 ಮಂದಿ ಮಾಜಿ ಸಿಬ್ಬಂದಿ ಕುಟುಂಬಸ್ಥರನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್ (Jaishankar) ಭೇಟಿಯಾದರು.
ಕುಟುಂಬಸ್ಥರ ಕಳವಳ ಮತ್ತು ನೋವಿಗೆ ಸ್ಪಂದಿಸಿದ ಜೈಶಂಕರ್, ಅವರ ಬಿಡುಗಡೆಗೆ ಭಾರತವು ಎಲ್ಲಾ ಪ್ರಯತ್ನಗಳನ್ನು ಮಾಡುವುದನ್ನು ಮುಂದುವರಿಸುತ್ತದೆ ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಕತಾರ್ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ! – ಭಾರತಕ್ಕೆ ಆಘಾತ
Met this morning with the families of the 8 Indians detained in Qatar.
Stressed that Government attaches the highest importance to the case. Fully share the concerns and pain of the families.
Underlined that Government will continue to make all efforts to secure their release.…
— Dr. S. Jaishankar (@DrSJaishankar) October 30, 2023
ಈ ಕುರಿತು ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಜೈಶಂಕರ್, ಕತಾರ್ನಲ್ಲಿ ಬಂಧಿತರಾಗಿರುವ 8 ಭಾರತೀಯರ ಕುಟುಂಬಗಳನ್ನು ಭೇಟಿಯಾದೆ. ಪ್ರಕರಣಕ್ಕೆ ಸರ್ಕಾರ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತದೆ. ಅವರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುವುದನ್ನು ಮುಂದುವರಿಸುತ್ತದೆ. ಆ ನಿಟ್ಟಿನಲ್ಲಿ ಕುಟುಂಬಗಳೊಂದಿಗೆ ನಿಕಟವಾಗಿ ಸಮನ್ವಯ ಸಾಧಿಸುತ್ತದೆ ಎಂದು ತಿಳಿಸಿದ್ದಾರೆ.
ಕತಾರ್ನಲ್ಲಿ 1 ವರ್ಷಕ್ಕೂ ಹೆಚ್ಚು ಕಾಲ ಬಂಧಿತರಾಗಿರುವ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗೆ ಗುರುವಾರ ಕತಾರ್ನ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಈ ತೀರ್ಪಿಗೆ ಭಾರತ (India) ತೀವ್ರ ಆಘಾತ ವ್ಯಕ್ತಪಡಿಸಿದೆ. ಸಿಬ್ಬಂದಿ ಬಿಡುಗಡೆಗೆ ಸಾಧ್ಯವಿರುವ ಎಲ್ಲಾ ಕಾನೂನು ಕ್ರಮಗಳನ್ನು ಅನ್ವೇಷಿಸುತ್ತಿರುವುದಾಗಿ ಹೇಳಿತ್ತು. ಇದನ್ನೂ ಓದಿ: ಫೇಸ್ಬುಕ್ ಗೆಳೆಯನಿಗಾಗಿ ಪಾಕ್ಗೆ ತೆರಳಿದ್ದಾಕೆಗೆ ಈಗ ಮಕ್ಕಳನ್ನು ನೋಡುವ ಬಯಕೆ!
ನಾವು ಮರಣದಂಡನೆಯ ತೀರ್ಪಿನಿಂದ ತೀವ್ರ ಆಘಾತಕ್ಕೊಳಗಾಗಿದ್ದೇವೆ ಮತ್ತು ವಿವರವಾದ ತೀರ್ಪಿಗಾಗಿ ಕಾಯುತ್ತಿದ್ದೇವೆ. ನಾವು ಅವರ ಕುಟುಂಬ ಸದಸ್ಯರು ಮತ್ತು ಕಾನೂನು ತಂಡದೊಂದಿಗೆ ಸಂಪರ್ಕದಲ್ಲಿದ್ದೇವೆ. ಸಾಧ್ಯವಿರುವ ಎಲ್ಲಾ ಕಾನೂನು ಆಯ್ಕೆಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಅಧಿಕೃತ ಹೇಳಿಕೆಯಲ್ಲಿ ತಿಳಿಸಿತ್ತು.
Web Stories