ಬೆಂಗಳೂರು: ಸ್ಯಾಂಡಲ್ವುಡ್ ನಟ, ಖ್ಯಾತ ನಿರ್ದೇಶಕ ಎಸ್. ನಾರಾಯಣ್ ಅವರ ಕುಟುಂಬದಲ್ಲಿ ಶುಭ ಸಮಾರಂಭ ನೆರವೇರಿದೆ. ಇತ್ತೀಚೆಗೆ ಎರಡನೇ ಮಗ ಪವನ್ ಅವರ ಮದುವೆ ನಡೆದಿತ್ತು, ಈಗ ಪಂಕಜ್ ಅವರ ಮದುವೆ ನಡೆದಿದೆ.
ಮೈಸೂರಿನಲ್ಲಿರುವ ಸ್ಪೆಕ್ಟ್ರಾ ಕನ್ವೆನ್ಷನ್ ಹಾಲ್ನಲ್ಲಿ ಪಂಕಜ್ ಅವರ ಮದುವೆ ನಡೆದಿದೆ. ಪಂಕಜ್ ಅವರನ್ನು ಮದುವೆ ಆಗಿರುವ ಹುಡುಗಿಯ ಹೆಸರು ರಕ್ಷಿತಾ ಸುರೇಂದರ್. ಕಳೆದ ತಿಂಗಳು ಪಂಕಜ್ ಮತ್ತು ರಕ್ಷಿತಾ ನಿಶ್ಚಿತಾರ್ಥ ನಡೆದಿತ್ತು. ಇದೀಗ ಇಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದನ್ನೂ ಓದಿ: ಅಪ್ಪು ಪುತ್ಥಳಿಗೆ ಮುತ್ತಿಟ್ಟು ರಾಘವೇಂದ್ರ ರಾಜ್ಕುಮಾರ್ ಭಾವುಕ
ಗುರುಹಿರಿಯರು ಮತ್ತು ಕುಟುಂಬದವರ ಸಮ್ಮುಖದಲ್ಲಿ ಈ ಮದುವೆ ನಡೆದಿದೆ. ಸ್ಯಾಂಡಲ್ವುಡ್ ಸೆಲೆಬ್ರಿಟಿಗಳು ಮದುವೆಯಲ್ಲಿ ಭಾಗಿಯಾಗಿ ನವ ವಧು, ವರರನ್ನು ಆಶಿರ್ವದಿಸಿದ್ದಾರೆ. ಪಂಕಜ್ ಮತ್ತು ರಕ್ಷಿತಾ ದಂಪತಿಗೆ ಶುಭ ಕೋರಿ, ಆಶೀರ್ವಾದ ಮಾಡಲು ಕನ್ನಡ ಚಿತ್ರರಂಗದ ಗಣ್ಯರು ಮತ್ತು ಇಬ್ಬರ ಸ್ನೇಹಿತರು ಮತ್ತು ಕುಟುಂಬದವರು ಮದುವೆಗೆ ಬಂದು ಶುಭ ಕೋರಿದ್ದಾರೆ. ಇದನ್ನೂ ಓದಿ: ನಿಕ್ ಜೊತೆಗಿನ ವಿಚ್ಛೇದನ ಗಾಸಿಪ್ಗೆ ಬ್ರೇಕ್ ಹಾಕಿದ ಪ್ರಿಯಾಂಕ ಚೋಪ್ರಾ
ಪಂಕಜ್ ಅವರು ಚಂದನವನದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಪಂಕಜ್ ಮದುವೆಯ ಸುಂದರ ಕ್ಷಣದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.