ದಾವಣಗೆರೆ: ಚುನಾವಣೆಯಲ್ಲಿ ನಾವೇ ಸೋತು ಸುಣ್ಣ ಆಗಿದ್ದೀವಿ, ನೀನು ನಮ್ಮ ಅಪ್ಪನ ಬಗ್ಗೆ ಮಾತಾಡ್ತಿಯ ಅಂತ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರ ಪುತ್ರ ಹಾಗೂ ಮಾಜಿ ಸಚಿವರಾಗಿದ್ದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಗೃಹ ಸಚಿವ ಎಂ.ಬಿ ಪಾಟೀಲ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಮನೆಗೆ ಊಟಕ್ಕೆಂದು ಎಂ.ಬಿ ಪಾಟೀಲ್ ತೆರಳಿದ್ದರು. ಈ ವೇಳೆ ಚುನಾವಣೆಯಲ್ಲಿ ನಾವೇ ಸೋತು ಸುಣ್ಣ ಆಗಿದ್ದೀವಿ. ನೀನು ನಮ್ಮ ಅಪ್ಪನ ಬಗ್ಗೆ ಮಾತಾಡ್ತಿಯ ಎಂದು ಪ್ರಶ್ನಿಸಿ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ಕಾಂಗ್ರೆಸ್ ಆಫೀಸ್ ಹೋಗಬೇಕು ಬಾ ಅಂತ ಎಂ.ಬಿ ಪಾಟೀಲ್ ಅವರು ಮಲ್ಲಿಕಾರ್ಜುನ್ ಅವರನ್ನು ಕರೆದಿದ್ದಾರೆ. ಇಷ್ಟಕ್ಕೆ ಅವರು ಅಲ್ಲಿ ನಮ್ಮದೇನು ಕೆಲಸ ಇಲ್ಲ. ನಾನು ಯಾಕೆ ಬರಲಿ? ನಾವು ಹಿದಕ್ಕೆ ಸರಿದಿದ್ದೇವೆ. ನಾವು ಚುನಾವಣೆಯಲ್ಲಿ ಸೋತು ಸುಣ್ಣ ಆಗಿದ್ದೀವಿ. ನೀನು ಮಂತ್ರಿಯಾಗಿದೀಯಾ ಅಂತ ಹೇಳಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ಮಲ್ಲಿಕಾರ್ಜುನ್ ಅವರ ಕೆಂಗಣ್ಣಿಗೆ ಗುರಿಯಾಗಿ ಎಂ.ಬಿ.ಪಾಟೀಲ್ ಅವರು ಸಪ್ಪೆಮೊರೆ ಹಾಕಿಕೊಂಡು ಸುಮ್ಮನಾದರು. ಈ ವೇಳೆ ಶಾಮನೂರು ಶಿವಶಂಕರಪ್ಪ ಮಧ್ಯ ಪ್ರವೇಶಿಸಿ ಮಲ್ಲಿಕಾರ್ಜುನ್ ಅವರನ್ನು ಸಮಾಧಾನ ಮಾಡಿದರು. ಬಳಿಕ ಶಾಮನೂರು ಅವರ ಜೊತೆ ಎಂ.ಬಿ.ಪಾಟೀಲ್ ಊಟಕ್ಕೆ ತೆರಳಿದರು.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಂ.ಬಿ ಪಾಟೀಲ್, ಮಲ್ಲಿಕಾರ್ಜುನ್ ನಾನು ಸಹೋದರರು. ಪದೇ ಪದೇ ನಮ್ಮ ನಡುವೆ ಈ ರೀತಿ ಗಲಾಟೆ ನಡೆಯುತ್ತಲೇ ಇರುತ್ತವೆ. ದಾವಣಗೆರೆಗೆ ಎಸ್.ಎಸ್.ಮಲ್ಲಿಕಾರ್ಜುನ್ ನಿಲ್ಲದೇ ಇದ್ದರೆ ಹಿರಿಯರು ಶಾಮನೂರು ಶಿವಶಂಕರಪ್ಪನವರು ನಿಲ್ಲುತ್ತಾರೆ. ಅವರ ಪರವಾಗಿ ನಾನು ಚುನಾವಣಾ ಪ್ರಚಾರಕ್ಕೆ ಬರುತ್ತೇನೆ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv