Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದ್ಯಾರ್ಥಿಗಳಲ್ಲಿ ಸಮಸಮಾಜದ ಹೆಮ್ಮೆ ಮೂಡಿಸುವುದು ಇಂದಿನ ಅಗತ್ಯ – ಸಿಎಂಗೆ ಸುರೇಶ್ ಕುಮಾರ್ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿದ್ಯಾರ್ಥಿಗಳಲ್ಲಿ ಸಮಸಮಾಜದ ಹೆಮ್ಮೆ ಮೂಡಿಸುವುದು ಇಂದಿನ ಅಗತ್ಯ – ಸಿಎಂಗೆ ಸುರೇಶ್ ಕುಮಾರ್ ಮನವಿ

Bengaluru City

ವಿದ್ಯಾರ್ಥಿಗಳಲ್ಲಿ ಸಮಸಮಾಜದ ಹೆಮ್ಮೆ ಮೂಡಿಸುವುದು ಇಂದಿನ ಅಗತ್ಯ – ಸಿಎಂಗೆ ಸುರೇಶ್ ಕುಮಾರ್ ಮನವಿ

Public TV
Last updated: February 18, 2022 12:44 pm
Public TV
Share
3 Min Read
SURESH KUMAR 1
SHARE

ಬೆಂಗಳೂರು: ನನ್ನ ಶಾಲೆ-ಕಾಲೇಜು, ನನ್ನ ಹೆಮ್ಮೆ, ನನ್ನ ಶಿಕ್ಷಣ, ನನ್ನ ಸಮವಸ್ತ್ರ, ನನ್ನದೇ ಭವಿಷ್ಯವೆನ್ನುವ ಭಾವನೆ ನಮ್ಮ ವಿದ್ಯಾರ್ಥಿಗಳಲ್ಲಿ ಬೆಳೆಯಬೇಕಾದರೆ ಶಿಕ್ಷಣ ಇಲಾಖೆಯ ಕೆಲಸ ಗಮನಾರ್ಹ ಶಿಕ್ಷಣ ಸಚಿವರಿಗೆ ಎಸ್.ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ.

ಹಿಜಬ್-ಸಮವಸ್ತ್ರಗಳ ಸಂಘರ್ಷದಲ್ಲಿ ವಿದ್ಯಾರ್ಥಿಗಳ ಭವಿಷ್ಯ ಕಾಯುವ ಕೆಲಸಕ್ಕೆ ಶಿಕ್ಷಣ ಇಲಾಖೆ ಹೊಸ ಕಾಯಕಲ್ಪದೊಂದಿಗೆ ಕೆಲಸ ಮಾಡಬೇಕಿದೆ ಎಂದು ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಪತ್ರ ಬರೆದು ಶಾಲಾ-ಕಾಲೇಜುಗಳ ಆವರಣದಲ್ಲಿ ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಆರೋಪ ಪ್ರತ್ಯಾರೋಪಗಳನ್ನು ಮೀರುವ, ಶಿಕ್ಷಣದ ಕಡೆಗೆ ಒಲವು ಹೆಚ್ಚುವ ಸಕಾರಾತ್ಮಕವಾದ ಕಾರ್ಯಕ್ರಮಗಳನ್ನು ರೂಪಿಸುವ ಕುರಿತಂತೆ ನಾವು ಹೆಚ್ಚಾಗಿ ಆಲೋಚಿಸಬೇಕಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹಿಜಬ್ ಬಳಿಕ ಸಿಂಧೂರ ವಿವಾದ – ಹಣೆಗೆ ಕುಂಕುಮ ಹಚ್ಚಿಕೊಂಡು ಬಂದ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ

CM basavaraj bommai

ಹಿಜಬ್ ಅಥವಾ ಸಮವಸ್ತ್ರ- ಅದರ ಸುತ್ತಲೂ ಭುಗಿಲೇಳುತ್ತಿರುವ ವಿವಾದ ಮೇಲ್ನೋಟದ್ದಲ್ಲ. ಅಲ್ಲಿನ ಆಂತರಿಕ ಸಂಘರ್ಷ, ಅದನ್ನು ಹುಟ್ಟುಹಾಕುತ್ತಿರುವವರ ಮನೋಧರ್ಮ, ಮೂಲಭೂತ ಅವಶ್ಯಕತೆಗಳನ್ನು ಮೀರಿರುವುದು ಗಮನೀಯವೆಂದು ನೆನಪಿಸಿದ್ದಾರೆ. ಘನ ನ್ಯಾಯಾಲಯವು ಸಾಂವಿಧಾನಿಕ ಅವಕಾಶಗಳನ್ನು ಅವಲೋಕಿಸುತ್ತಿರುವಾಗಲೂ ಶಾಂತಿ ಕದಡುವ ಪ್ರಯತ್ನಗಳಾಗುತ್ತಿರುವುದು ಇದರ ಹಿಂದಿನ ಉದ್ದೇಶವನ್ನು ಸ್ಪಷ್ಟ ಪಡಿಸುತ್ತದೆ. ಶಿಕ್ಷಣ ಇಲಾಖೆ ಕೂಡಲೇ ಕೆಲವು ಕ್ರಮಗಳಿಗೆ ಮುಂದಾಗಬೇಕೆಂದು ಸಲಹೆ ನೀಡಿದ್ದಾರೆ. ಅವರ ಅಭಿಪ್ರಾಯಗಳು ಕೆಳಕಂಡಂತಿವೆ.

B.C. Nagesh

1. ಪ್ರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ನಡುವೆ ಸೋದರತ್ವ, ಸೌಹಾರ್ದತೆಯನ್ನು ಕಾಪಾಡುವ, ಶೈಕ್ಷಣಿಕ ವಾತಾವರಣವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಶಾಲಾಭಿವೃದ್ದಿ ಮೇಲುಸ್ತುವಾರಿ ಸಮಿತಿಗಳಿಗೆ/ಶಾಲಾ,ಕಾಲೇಜು ಸಲಹಾ ಸಮಿತಿಗಳಿಗೆ ಹಿಂದೆಂದಿಗಿಂತಲೂ ಹೆಚ್ಚಿನ ಖಚಿತ ಜವಾಬ್ದಾರಿಯನ್ನು ನಿಗದಿ ಪಡಿಸಬೇಕಿದೆ.
2. ತರಗತಿವಾರು ಮಕ್ಕಳ ಸಭೆಗಳನ್ನು ನಿಗದಿಪಡಿಸಿ ಕೋಮು ಸಾಮರಸ್ಯದ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಮವಸ್ತ್ರದ ಆಶಯ, ಅದನ್ನು ಧರಿಸಿದಾಗ ಮೂಡಬೇಕಾದ ಸಮಸಮಾಜದ ಹೆಮ್ಮೆಯ ಕುರಿತಂತೆ ಮಕ್ಕಳಲ್ಲಿ ಅರಿವು ಮೂಡಿಸುವ ಪ್ರಯತ್ನಗಳು ಆಗಬೇಕು. ಅದಕ್ಕಾಗಿ ದಿನದ ಒಂದು ಅವಧಿ ಮೀಸಲಿಟ್ಟರೂ ತಪ್ಪಿಲ್ಲ.
3. ಶಾಲಾಭಿವೃದ್ಧಿ ಸಮಿತಿಗಳು, ಶಾಲಾ, ಕಾಲೇಜು ಸಲಹಾ ಸಮಿತಿಗಳು, ಪೋಷಕರ ಸಭೆಗಳನ್ನು ವಾರಕ್ಕೊಮ್ಮೆ ಕರೆದು ಈ ಪರಿಸ್ಥಿತಿ ತಿಳಿಯಾಗುವವರೆಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಸಾಧ್ಯವಾಗಬೇಕು. ಮಕ್ಕಳ ಭವಿಷ್ಯ ಕಟ್ಟುವ ಅನಿವಾರ್ಯತೆಯ ಕುರಿತಂತೆ ಮನನ ಮಾಡಿಸಿ ಸೌಹಾರ್ದ ವಾತಾವರಣ ಸೃಷ್ಟಿಸಬೇಕು.
4. ಶಾಲಾ ಮಟ್ಟದಲ್ಲಿ ಸ್ಥಳೀಯ ಕಲಾವಿದರ, ಸ್ಥಳೀಯ ಸಾಹಿತಿಗಳ, ಸಾಧಕರನ್ನು ಆಹ್ವಾನಿಸಿ ಮಕ್ಕಳ ಆರೋಗ್ಯಕರ ಚರ್ಚೆಗೆ ವೇದಿಕೆ ಸೃಷ್ಟಿಸಬೇಕು. ವಿದ್ಯಾರ್ಥಿಗೆ ಅವರಿಂದ ಒಳಿತಿನ ಪಾಠ ಮಾಡಿಸಬೇಕು, ಪ್ರಭಾವಿತರನ್ನಾಗಿಸುವ ಪ್ರಯತ್ನ ಆಗಬೇಕು.
5. ಸ್ಥಳೀಯವಾಗಿ ಇಂತಹ ವಿಭಿನ್ನ ಪ್ರಯತ್ನಗಳನ್ನು ಕೈಗೊಂಡ ಶಾಲೆಗಳನ್ನ ಗುರುತಿಸಿ, ಅಭಿನಂದಿಸುವ, ಪ್ರಯತ್ನಗಳನ್ನು ದಾಖಲಿಸುವ ವ್ಯವಸ್ಥೆ ಆಗಬೇಕು.
6. ರಾಜ್ಯಮಟ್ಟದ ಪ್ರಖ್ಯಾತ ಚಲನಚಿತ್ರಕಲಾವಿದರು, ವಿವಿಧ ಸಾಧಕರುಗಳನ್ನು ಪ್ರೇರೇಪಿಸಿ ಮಕ್ಕಳನ್ನು ಉದ್ದೇಶಿಸಿ ಸಮವಸ್ತ್ರದ ಪ್ರಾಮುಖ್ಯತೆಯನ್ನು ಅರ್ಥೈಸುವ ಕಿರುಚಿತ್ರಗಳನ್ನು ದೃಶೀಕರಿಸಿ ವೈರಲ್ ಮಾಡಬಹುದು. ಅಂತೆಯೇ ಖ್ಯಾತ ಹಿನ್ನೆಲೆ ಗಾಯಕರಿಂದ, ಗೀತ ಸಾಹಿತಿಗಳ ನೆರವನ್ನೂ ಪಡೆದು ವಿಶಿಷ್ಟ ಹಾಡುಗಳನ್ನು ರಚಿಸಿ ಚಿತ್ರೀಕರಿಸಬಹುದು. ಇದನ್ನೂ ಓದಿ: ಇವ್ರರನ್ನು ಅರೆಸ್ಟ್ ಮಾಡ್ರಿ – ವಿದ್ಯಾರ್ಥಿನಿಯರ ವಿರುದ್ಧ ಮಡಿಕೇರಿ ಪ್ರಿನ್ಸಿ ಕೆಂಡಾಮಂಡಲ

HIJAB

ನನ್ನ ಶಾಲೆ, ನನ್ನ ಕಾಲೇಜು, ನನ್ನ ಹೆಮ್ಮೆ, ನನ್ನ ಶಿಕ್ಷಣ, ನನ್ನ ಸಮವಸ್ತ್ರ ಮತ್ತು ನನ್ನದೇ ಭವಿಷ್ಯವೆನ್ನುವ ಭಾವನೆ ಪ್ರತಿ ವಿದ್ಯಾರ್ಥಿಯಲ್ಲಿಯೂ ಮೂಡುವ ಪ್ರಯತ್ನ ನಡೆಸಿ ಭಾವೈಕ್ಯತೆಯ ಸಂದೇಶವನ್ನು ಸಾರುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯ ವಿಶೇಷ ಪ್ರಯತ್ನದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ತಾವು ಸಂಬಂಧಿತರಿಗೆ ಸೂಕ್ತ ನಿರ್ದೇಶನವನ್ನು ನೀಡುವ ಮೂಲಕ ಸರ್ಕಾರದ ಜನಪರ ನಿಲುವನ್ನು ಸಾರ್ವತ್ರಿಕರಣಗೊಳಿಸಲು ಮುಂದಾಗಬೇಕೆಂದು ಕೋರುತ್ತೇನೆ ಎಂದು ಮುಖ್ಯಮಂತ್ರಿಗಳಲ್ಲಿ ಹಾಗೂ ಶಿಕ್ಷಣ ಸಚಿವರಲ್ಲಿ ಮನವಿ ಮಾಡಿದ್ದಾರೆ.

TAGGED:B.C. NageshbengaluruHijabS. Suresh Kumarಎಸ್. ಸುರೇಶ್ ಕುಮಾರ್ಬಿ.ಸಿ.ನಾಗೇಶ್ಬೆಂಗಳೂರುಹಿಜಬ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
1 hour ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
2 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
2 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
2 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
3 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?