ಮಹಿಳಾ ಅಧಿಕಾರಿಗಳು ಅನ್ನೋದೆ ಕೆಲವರಿಗೆ ಅಡ್ವಾಂಟೇಜ್ : ಸಾ.ರಾ ಮಹೇಶ್

Public TV
2 Min Read
SARAMAHESH 1 1

– ಸದನದಲ್ಲಿ ಬ್ಯಾಗ್ ಪ್ರದರ್ಶಿಸಿ ವಾಗ್ದಾಳಿ
– ರೋಹಿಣಿ ಸಿಂಧೂರಿ ವಿರುದ್ಧ ಪರೋಕ್ಷ ಕಿಡಿ

ಬೆಂಗಳೂರು: ಕೋವಿಡ್ ಕಾಲದಲ್ಲಿ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ನಿಕಟ ಪೂರ್ವ ಮುಖ್ಯಮಂತ್ರಿಗಳೂ ಸಾಕಷ್ಟು ಸಹಕಾರ ಕೊಟ್ಟಿದ್ದಾರೆ. ಆದರೆ ಕೆಲವು ಅಧಿಕಾರಿಗಳು ಮಾತ್ರಾ ಭ್ರಷ್ಟರಾಗಿ ಬದುಕುತ್ತಿದ್ದಾರೆ. ಕೇವಲ ಒಂದು ಬ್ಯಾಗ್ ವಿಚಾರದಲ್ಲಿ ಆರೂವರೆ ಕೋಟಿ ರೂಪಾಯಿ ನುಂಗಿದ್ದಾರೆ. ಎಂದು ಜೇಬಿನಲ್ಲಿ ಬ್ಯಾಗ್ ಇಟ್ಟುಕೊಂಡು ಬಂದಿದ್ದ ಜೆಡಿಎಸ್ ಶಾಸಕ ಸಾ.ರಾ ಮಹೇಶ್, ಸದನದಲ್ಲಿ ಬ್ಯಾಗ್ ಪ್ರದರ್ಶನ ಮಾಡಿ ರೋಹಿಣಿ ಸಿಂಧೂರಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

SARAMHESH

20 ವರ್ಷದಿಂದ 40 ವರ್ಷದೊಳಗಿನ ಮಹಿಳಾ ಅಧಿಕಾರಿಗಳು ಇದ್ದರೆ ನಮ್ಮವರೇ ನಮಗೆ ವಿಲನ್ ಆಗುತ್ತಾರೆ. ಮಹಿಳಾ ಅಧಿಕಾರಿಗಳು ಅನ್ನೋದೆ ಕೆಲವರಿಗೆ ಅಡ್ವಾಂಟೇಜ್ ಆಗಿದೆ ಎಂದು ಸಾ.ರಾ ಮಹೇಶ್ ಭಾವುಕರಾಗಿ ನುಡಿದರು. ಇದನ್ನೂ ಓದಿ: ರಾಯಚೂರಿನಲ್ಲಿ ಮಕ್ಕಳನ್ನು ಕಾಡುತ್ತಿದೆ ವೈರಲ್ ಫೀವರ್: ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆ

ವಿಧಾನಸಭಾ ಅಧಿವೇಶನದಲ್ಲಿ ಪಿಡಿ ಖಾತೆಗಳ ಬಗ್ಗೆ ಎಚ್.ಡಿ ಕುಮಾರಸ್ವಾಮಿ ಪ್ರಸ್ತಾಪ ಮಾಡುತ್ತಿದ್ದಂತೆ ಎದ್ದು ನಿಂತು ಸಾ.ರಾ ಮಹೇಶ್, ರೋಹಿಣಿ ಸಿಂಧೂರಿ ವಿರುದ್ಧ ಆರೋಪ ಮಾಡಲು ಪ್ರಾರಂಭಿಸಿದರು. ಕೆಲ ಅಧಿಕಾರಿಗಳು ಜನರ ತೆರಿಗೆ ಹಣದಲ್ಲಿ ಶೋಕಿ ಮಾಡಿಕೊಂಡು ಬದುಕುತ್ತಿದ್ದಾರೆ. ಬ್ಯಾಗ್ ಖರೀದಿಯಲ್ಲಿ 6.5 ಕೋಟಿ ರೂ. ಅಕ್ರಮ ನಡೆದಿದೆ. ಆ ಅಧಿಕಾರಿ ಮೈಸೂರಿನಲ್ಲಿ ಲೂಟಿ ಮಾಡಿದ್ದಾರೆ ಎಂದು ಹೆಸರು ಹೇಳದೇ ರೋಹಿಣಿ ಸಿಂಧೂರಿ ವಿರುದ್ಧ ಸಾ.ರಾ ಮಹೇಶ್ ಕಿಡಿ ಕಾರಿದ್ದಾರೆ.

saramahesh 3

ಕಲಾಪದಲ್ಲಿ ರೋಷಾವೇಶದಿಂದ ಮಾತನಾಡಿದ ಸಾ.ರಾ ಮಹೇಶ್, ಇಂಥ ಅಧಿಕಾರಿಗಳಿಂದ ನಮ್ಮ ರಕ್ಷಣೆಗೆ ಬನ್ನಿ. ಸರ್ಕಾರಕ್ಕೆ ಕ್ರಮ ತೆಗೆದುಕೊಳ್ಳುವ ತಾಕತ್ ಇದ್ಯಾ? ಐಎಎಸ್, ಐಪಿಎಸ್ ಮನೆಗಳ ಮೇಲೆ ಐಟಿ ರೇಡ್ ಆಗುತ್ತಾ? ಎಂಜಿನಿಯರ್, ಸಣ್ಣಪುಟ್ಟ ಅಧಿಕಾರಿಗಳ ಮೇಲೆ ಮಾತ್ರ ಐಟಿ ರೇಡ್ ಆಗುತ್ತದೆ ಎಂದು ಸದನದಲ್ಲಿ ಭಾವೋದ್ವೇಗದಿಂದ ಗದ್ಗದಿತರಾದರು. ಇದನ್ನೂ ಓದಿ: ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ಅರ್ಜಿ

KUMARWAMY

ನೆರವಿಗೆ ಧಾವಿಸಿದ ಎಚ್‍ಡಿಕೆ
ಒಬ್ಬ ಸರ್ಕಾರಿ ಅಧಿಕಾರಿ ಶಾಸಕರ ಮೇಲೆ ಮಾಧ್ಯಮಗಳ ಎದುರು ಹೋಗಿದ್ದು ಯಾಕೆ? ಇವರಿಗೆ ಅಧಿಕಾರ ಯಾರು ಕೊಟ್ರು? ಅವರು ಐಎಎಸ್ ಇರಲಿ, ಬೇರೆ ಇರಲಿ ಎಂದು ಕುಮಾರಸ್ವಾಮಿ ಹೇಳಿದರು. ಈ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತನಾಡಿ, ನಾನೂ ಸಹ ಸಿಎಸ್ ಜೊತೆ ಈ ಬಗ್ಗೆ ಮಾತನಾಡಿದ್ದೇನೆ ರೂಲ್ಸ್ ನಲ್ಲಿ ಹೀಗೆ ಅಧಿಕಾರಿಗಳು ಹೋಗಿ ಮಾತಾಡೋದು ಸರಿಯಲ್ಲ. ಸಿಎಸ್ ಸೂಚನೆ ಕೊಟ್ಟಿರಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕಬ್ಬಿನ ಗದ್ದೆಗೆ ಬೆಂಕಿ- ನೂರಾರು ಟನ್ ಕಬ್ಬು ಬೆಂಕಿಗಾಹುತಿ

R ASHOK 3

ಈ ವಿಷಯದ ಬಗ್ಗೆ ಮಾತನಾಡಿದ ಆರ್.ಅಶೋಕ್, ಸಾ.ರಾ ಮಹೇಶ್ ಇದನ್ನು ನಮ್ಮ ಗಮನಕ್ಕೆ ತಂದಿದ್ದಾರೆ. ಸಿಎಸ್ ಜೊತೆ ನಾನೂ ಮಾತಾಡಿದ್ದೇನೆ. ಸರ್ಕಾರಿ ಅಧಿಕಾರಿಗಳು ಮಾಧ್ಯಮಗಳೆದುರು ಹೋಗಿ ಮಾತಾಡುವಂತಿಲ್ಲ. ಕೆಲವು ಅಧಿಕಾರಿಗಳು ಓವರ್ ಆ್ಯಕ್ಟಿಂಗ್ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಿಎಸ್‍ಗೆ ನಾವು ಸೂಚಿಸುತ್ತೇವೆ ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *