Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕಗೆ ಪರಮೇಶ್ವರ್ ಸನ್ಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕಗೆ ಪರಮೇಶ್ವರ್ ಸನ್ಮಾನ

Bengaluru City

ಪದ್ಮಶ್ರೀ ಪುರಸ್ಕೃತ ಸಾಲುಮರದ ತಿಮ್ಮಕ್ಕಗೆ ಪರಮೇಶ್ವರ್ ಸನ್ಮಾನ

Public TV
Last updated: March 18, 2019 11:42 am
Public TV
Share
2 Min Read
PARAM THIMMAKKA copy
SHARE

– ತಿಮ್ಮಕ್ಕರ ಸಂಪೂರ್ಣ ಜವಾಬ್ದಾರಿ ನೋಡಿಕೊಳ್ತಿದ್ದಾರೆ ಡಿಸಿಎಂ

ಬೆಂಗಳೂರು: ರಾಷ್ಟ್ರಪತಿಯಿಂದ ಪದ್ಮಶ್ರೀ ಪ್ರಶಸ್ತಿ ಪಡೆದಿರುವ ಸಾಲುಮರದ ತಿಮ್ಮಕ್ಕ ಅವರಿಗೆ ಇಂದು ಸದಾಶಿವನಗರ ಬಿಡಿಎ ಕಚೇರಿಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಅವರು ತಿಮ್ಮಕ್ಕ ಅವರನ್ನು ಸನ್ಮಾನಿಸಿದ್ರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ತಿಮ್ಮಕ್ಕ ಅವರನ್ನು ಚಿಕ್ಕಣ್ಣ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಆದ್ರೆ ಇವರಿಗೆ ಮಕ್ಕಳು ಆಗಿಲ್ಲ ಎಂದು ಮಾನಸಿಕವಾಗಿ ನೊಂದಿದ್ದ ವೇಳೆ ಗಿಡಗಳನ್ನು ಬೆಳೆಸುವ ಮೂಲಕ ನಿರಾಸೆಯನ್ನು ಸರಿದೂಗಿಸುವ ಕೆಲಸವನ್ನು ಮಾಡಿದ್ದಾರೆ. ಸುಮಾರು 4 ಕಿ.ಮೀ ರಸ್ತೆಯಲ್ಲಿ ಮರಗಳನ್ನು ಬೆಳೆಸಿ, ತಾವೇ ಸ್ವತಃ ತಲೆ ಮೇಲೆ ನೀರು ಹೊತ್ತುಕೊಂಡು ಹೋಗಿ ಆ ಗಿಡಗಳನ್ನು ಬೆಳೆಸಿ ಇಂದು ಅವೆಲ್ಲ ದೊಡ್ಡ ವೃಕ್ಷಗಳಾಗಿ ಇಡೀ ವಿಶ್ವಕ್ಕೆ ಮಾದರಿಯಾಗುವಂತಹ ಮಹಾನ್ ಕಾರ್ಯ ಮಾಡಿದ್ದಾರೆ ಅಂದ್ರು.

PARAM

ಇಡೀ ವಿಶ್ವದಲ್ಲಿ ಪರಿಸರಕ್ಕೆ ಪರಿಸರ ನಾಶವಾಗುವ ಸಂದರ್ಭದಲ್ಲಿ ಅವರು ಮಾಡಿರುವ ಈ ಕೆಲಸ ನಮ್ಮೆಲ್ಲರಿಗೂ ಮಾದರಿ. ಇದನ್ನು ಗುರುತಿಸಿರುವ ಭಾರತ ಸರ್ಕಾರ ಹಾಗೂ ರಾಷ್ಟ್ರಪತಿ ಒಬ್ಬ ಸಾಮಾನ್ಯ ಮಹಿಳೆ ವಿಶ್ವಕ್ಕೆ ಮಾದರಿಯಾಗುವಂತಹ ಕೆಲಸ ಮಾಡಿರುವುದರಿಂದ ಶ್ರೇಷ್ಠತೆಯನ್ನು ಕಂಡಿದ್ದಾರೆ. ಬಹುಶಃ ಈ ಪದ್ಮ ಶ್ರೀ ಪ್ರಶಸ್ತಿ ಅವರಿಗಷ್ಟೇ ಸಿಕ್ಕಿದೆ ಎಂದು ನಾನು ಅಂದುಕೊಳ್ಳಲ್ಲ, ಬದಲಾಗಿ ಅವರ ಮೂಲಕ ಪರಿಸರ ಪ್ರಜ್ಞೆ ಮೂಡಿಸುವಂತಹ ಕೆಲಸ ಆಗಿದೆ ಎಂದು ನಾನು ಭಾವಿಸುತ್ತೇನೆ ಎಂದರು.

ವೈಯಕ್ತಿಕವಾಗಿ ಅವರ ಬಗ್ಗೆ ಅಪಾರ ಗೌರವ ಇದೆ. ಇಂದಿಗೂ ಕೂಡ ಬಡತನದಿಂದ ಹೊರಬಂದಿದ್ದಾರೆ ಎಂದು ನನಗನ್ನಿಸುತ್ತಿಲ್ಲ. ಅನೇಕ ಪ್ರಶಸ್ತಿಗಳನ್ನು ಸರ್ಕಾರ ಹಾಗೂ ಬೇರೆ ಬೇರೆ ಸಂಘ ಸಂಸ್ಥೆಗಳು ನೀಡಿದೆ. ಆದ್ರೆ ಅವೆಲ್ಲವೂ ಕೂಡ ಇಂದು ಅವರು ಮಾಡಿರುವ ಕೆಲಸದ ಬಗ್ಗೆ ಈ ಸಮಾಜಕ್ಕೆ ತಿಳಿ ಹೇಳುವಂತಹ ಪ್ರಯತ್ನ ಮಾಡಿವೆ ಎಂದು ಅನಿಸುತ್ತದೆ. ಕರ್ನಾಟಕ ಮತ್ತು ನಾವೆಲ್ಲರೂ ಕೂಡ ಬಹಳ ಹೆಮ್ಮೆಯಿಂದ ಅವರಿಗೆ ಅಭಿನಂದನೆ ಸಲ್ಲಿಸುವ ಜೊತೆಗೆ ಭಗವಂತ ಹೆಚ್ಚಿನ ಆಯುಷ್ಯ ನೀಡಿ ನಮ್ಮ ಜೊತೆಯಲ್ಲಿ ಇನ್ನೂ ಅನೇಕ ವರ್ಷಗಳು ಮಾದರಿಯಾಗಿ ಅವರು ನಮ್ಮೊಂದಿಗಿರಲಿ ಎಂದು ಆಶಿಸಿದ್ರು.

PARAM 1

ಅಜ್ಜಿಯ ಸಂಪೂರ್ಣ ಜವಾಬ್ದಾರಿ ಪರಮೇಶ್ವರ್:
ಪರಮೇಶ್ವರ್ ಅವರಿಗೂ ಸಾಲುಮರದ ತಿಮಕ್ಕ ಅವರಿಗೂ ಅವಿನಾಭಾವ ಸಂಬಂಧವಿದೆ. ತಿಮ್ಮಕ್ಕ ಅವರ ನೆರವಿಗೆ ಪರಮೇಶ್ವರ್ ಅವರು ಬರದೇ ಇದ್ದಲ್ಲಿ ಇಷ್ಟೆಲ್ಲಾ ಸಾಧನೆ ಹಾಗೂ ಪ್ರಶಸ್ತಿ ತೆಗೆದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಸಹಾಯ ಕೇಳದೇ ಇದ್ದರೂ ಅಜ್ಜಿಯವರನ್ನು ಮನೆಗೆ ಕರೆಸಿ ಅವರ ಸಂಕಷ್ಟಕ್ಕೆ ಸ್ಪಂದಿಸಿ ಬಹಳ ವರ್ಷಗಳಿಂದಲೂ ಅಜ್ಜಿಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ ಎಂದು ತಿಮ್ಮಕ್ಕರ ದತ್ತು ಪುತ್ರ ಹೇಳಿದ್ದಾರೆ.

TIMMAKKA

ಪ್ರಶಸ್ತಿ ಬಂದ ಕೂಡಲೇ ನಾನು ಪರಮೇಶ್ವರ್ ಸರ್ ಅವರ ಮನೆಗೆ ಹೋಗಬೇಕು ಎಂದು ಮಧ್ಯರಾತ್ರಿ 1 ಗಂಟೆಗೆ ದೆಹಲಿಯಲ್ಲಿ ಹೇಳಿದ್ರು. ನಾವು ಹೊಗುವ ಮೊದಲೇ ಪರಮೇಶ್ವರ್ ಅವರು ಎಲ್ಲೇ ಇದ್ದರೂ ಮನೆಗೆ ಬಾರಪ್ಪ ಎಂದು ಫೋನ್ ಮಾಡಿದ್ದರು. ನಮ್ಮ ಕಷ್ಟ ಏನೇ ಇದ್ದರೂ ಪರನಮೇಶ್ವರ್ ಅವರೇ ನಮ್ಮ ಸಂಪೂರ್ಣ ಜವಾಬ್ದಾರಿ ಹೊತ್ತುಕೊಂಡಿದ್ದರು. ಒಟ್ಟಿನಲ್ಲಿ ಈ ಸಮಾಜದಲ್ಲಿ ಅಜ್ಜಿ ಇಂದು ಇಷ್ಟು ಆರೋಗ್ಯವಾಗಿದ್ದಾರೆ ಎಂಬುದಕ್ಕೆ ಪರಮೇಶ್ವರ್ ಅವರೇ ಕಾರಣರಾಗಿದ್ದು, ಅವರಿಗೆ ಯಾವತ್ತೂ ನಾವು ಅಭಾರಿಯಾಗಿರುತ್ತೇವೆ ಎಂದು ಹೇಳಿತ್ತಾ ಕೃತಜ್ಞತಾ ಪತ್ರವೊಂದನ್ನು ಡಿಸಿಎಂಗೆ ನೀಡಿದ್ರು.

ರಾಷ್ಟ್ರಪತಿಗಳಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ತಾಯಿಯಂತೆ ಆಶೀರ್ವದಿಸಿ ನಮ್ಮೆಲ್ಲರ ಕಣ್ತುಂಬಿಸಿದ ಸಾಲುಮರದ ತಿಮ್ಮಕ್ಕರನ್ನು ಭೇಟಿ ಮಾಡುವ ಸೌಭಾಗ್ಯ ನನ್ನದಾಗಿತ್ತು. ಅವರನ್ನು ಅಭಿನಂದಿಸಿ, ಸತ್ಕರಿಸಿ, ಆಶೀರ್ವಾದ ಪಡೆದೆನು

ತಾಪಮಾನ ಏರಿಕೆ, ಹವಾಮಾನ ಬದಲಾವಣೆಯನ್ನು ಎದುರಿಸಲು ಇಂತಹ ಸಾಧಕರು ನಮ್ಮ ಮಾರ್ಗದರ್ಶಕರಾಗಬೇಕಿದ್ದಾರೆ. pic.twitter.com/HrLpBEoBzQ

— Dr. G Parameshwara (@DrParameshwara) March 18, 2019

ಪದ್ಮ ಪುರಸ್ಕಾರ ಸಮಾರಂಭದಲ್ಲಿ ಭಾರತದ ಸರ್ವೋತ್ತಮ ಮತ್ತು ಅರ್ಹ ಸಾಧಕರನ್ನು ಗೌರವಿಸುವ ಸುಯೋಗ ರಾಷ್ಟ್ರಪತಿಗಳದಾಗಿತ್ತು. ಕರ್ನಾಟಕದ ಪರಿಸರವಾದಿ 107 ವರ್ಷ ವಯಸ್ಸಿನ ಈ ವರ್ಷದ ಪದ್ಮ ಪುರಸ್ಕೃತರಲ್ಲಿಯೇ ಹಿರಿಯರಾದ ಸಾಲು ಮರದ ತಿಮ್ಮಕ್ಕ ಅವರು ನನ್ನನ್ನು ಆಶೀರ್ವದಿಸಿದ್ದು ನನ್ನ ಮನದಾಳವನ್ನು ತಟ್ಟಿತು. pic.twitter.com/0M3qXpcqUZ

— President of India (@rashtrapatibhvn) March 16, 2019

TAGGED:bengaluruDCMG Parameshwarpadma sriPublic TVSalumarada Thimmakkaಜಿ.ಪರಮೇಶ್ವರ್ಡಿಸಿಎಂಪದ್ಮಶ್ರೀಪಬ್ಲಿಕ್ ಟಿವಿಬೆಂಗಳೂರುಸಾಲುಮರದ ತಿಮ್ಮಕ್ಕ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
14 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
28 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
49 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Match Rain RR vs RCB
Cricket

IPL 2026 | RR Vs RCB ಪಂದ್ಯಕ್ಕೆ ಮಳೆ ಅಡ್ಡಿ, ಟಾಸ್‌ ವಿಳಂಬ

Public TV
By Public TV
2 hours ago
Bengaluru Rain 2
Bengaluru City

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭ – ಬೆಂಗಳೂರಲ್ಲಿ ಬಿರುಗಾಳಿ ಸಹಿತ ಮಳೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?