ಶಬರಿಮಲೆಗೆ ತೆರಳಿದ ಕರ್ನಾಟಕದ ಟಿಟಿ ವಾಹನ ಅಪಘಾತ – 3 ಸಾವು, 11 ಜನರಿಗೆ ಗಾಯ

Public TV
1 Min Read
ACCIDENT 2

ತಿರುವನಂತಪುರಂ: ಶಬರಿಮಲೆ ದೇವರ ದರ್ಶನಕ್ಕೆ ತೆರಳಿದ ಕರ್ನಾಟಕದ ಟಿಟಿ ವಾಹವೊಂದು ಭೀಕರ ಅಪಘಾತಕ್ಕಿಡಾಗಿ ಮೂವರು ಮರಣ ಹೊಂದಿರುವ ಘಟನೆ ಕೇರಳದ ಕೋಝಿಕ್ಕೋಡ್‍ನ ಪುರಕ್ಕಾಟ್ಟಿರಿಯಲ್ಲಿ ನಡೆದಿದೆ.

ACCIDENT 1 1

ಕರ್ನಾಟಕ ಮೂಲದ ಭಕ್ತರು ಟಿಟಿ ವಾಹನದಲ್ಲಿ ಶಬರಿ ಮಲೆಗೆ ತೆರಳುತ್ತಿದ್ದಾಗ ಪುರಕ್ಕಾಟ್ಟಿರಿಯ ಪುಲದಿಕುನ್ನು ಬೈಪಾಸ್ ಬಳಿ ಟಿಪ್ಪರ್ ಲಾರಿ ಮತ್ತು ಟಿಟಿ ನಡುವೆ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮರಣ ಹೊಂದಿದ್ದು 11 ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: 7 ರಾಜ್ಯಗಳಲ್ಲಿ 14 ಮಹಿಳೆಯರನ್ನು ಮದುವೆಯಾಗಿದ್ದ ಭೂಪ ಅರೆಸ್ಟ್

ACCIDENT 2 1

ಗಾಯಾಳುಗಳನ್ನು ಸ್ಥಳೀಯ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರನ್ನು ಕರ್ನಾಟಕ ಮೂಲದ ಶಿವಣ್ಣ ಮತ್ತು ನಾಗರಾಜ ಎಂದು ಗುರುತಿಸಲಾಗಿದ್ದು, ಟಿಪ್ಪರ್ ಚಾಲಕ ಎರ್ನಾಕುಲಂ ಮೂಲದವರಾಗಿದ್ದಾರೆ. ಇದನ್ನೂ ಓದಿ: 13ರ ಬಾಲಕಿ ಮೇಲೆ 16 ಮಂದಿಯಿಂದ ಸಾಮೂಹಿಕ ಅತ್ಯಾಚಾರ – ನೋವಿನ ಕಥೆ ಬಿಚ್ಚಿಟ್ಟ ತಂದೆ!

Share This Article
Leave a Comment

Leave a Reply

Your email address will not be published. Required fields are marked *