Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ ಅಯ್ಯಪ್ಪ ಭಕ್ತರೇ ಗಮನಿಸಿ.. ಶಬರಿಮಲೆ ದರ್ಶನಕ್ಕೆ ಸ್ಪಾಟ್‌ ಬುಕಿಂಗ್‌ ದಿನಕ್ಕೆ 5,000 ಜನರಿಗೆ ಮಾತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದ ಅಯ್ಯಪ್ಪ ಭಕ್ತರೇ ಗಮನಿಸಿ.. ಶಬರಿಮಲೆ ದರ್ಶನಕ್ಕೆ ಸ್ಪಾಟ್‌ ಬುಕಿಂಗ್‌ ದಿನಕ್ಕೆ 5,000 ಜನರಿಗೆ ಮಾತ್ರ

Bengaluru City

ಕರ್ನಾಟಕದ ಅಯ್ಯಪ್ಪ ಭಕ್ತರೇ ಗಮನಿಸಿ.. ಶಬರಿಮಲೆ ದರ್ಶನಕ್ಕೆ ಸ್ಪಾಟ್‌ ಬುಕಿಂಗ್‌ ದಿನಕ್ಕೆ 5,000 ಜನರಿಗೆ ಮಾತ್ರ

Public TV
Last updated: January 7, 2025 9:53 pm
Public TV
Share
2 Min Read
makarajyothi sabarimala
SHARE

ತಿರುವನಂತಪುರಂ: ಮಕರ ಸಂಕ್ರಾಂತಿಯಂದು ಕೇರಳದ ಶಬರಿಮಲೆಯಲ್ಲಿ (Sabarimala) ಸಂಭವಿಸುವ ಮಕರ ಜ್ಯೋತಿಯನ್ನು (ಮಕರವಿಳಕ್ಕು) ಕಣ್ತುಂಬಿಕೊಳ್ಳಲು ಅಯ್ಯಪ್ಪ ಭಕ್ತರು ಕಾತರರಾಗಿದ್ದಾರೆ. ಹೀಗಾಗಿ, ಶಬರಿಮಲೆಗೆ ಭಕ್ತರ ದಂಡೇ ಆಗಮಿಸುತ್ತಿದೆ. ಜನಸಂದಣಿಯನ್ನು ನಿಯಂತ್ರಿಸಲು ಶಬರಿಮಲೆ ದರ್ಶನಕ್ಕೆ ಬರುವ ಭಕ್ತರಿಗೆ ಸ್ಪಾಟ್‌ ಬುಕಿಂಗ್‌ ಅನ್ನು 5,000ಕ್ಕೆ ಮಿತಿಗೊಳಿಸಲಾಗಿದೆ.

ಮಕರ ಜ್ಯೋತಿಯನ್ನು (Makarajyothi) ಕಣ್ತುಂಬಿಕೊಳ್ಳಲು ಶಬರಿಮಲೆಗೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಆಗ, ಶಬರಿಮಲೆಯಲ್ಲಿ ಭಕ್ತಾದಿಗಳ ನೂಕುನುಗ್ಗಲು ತಪ್ಪಿಸುವ ನಿಟ್ಟಿನಲ್ಲಿ ಸನ್ನಿಧಾನಂನಲ್ಲಿ ಸ್ಪಾಟ್ ಬುಕ್ಕಿಂಗ್ ಸೌಲಭ್ಯವನ್ನು ನಾಳೆಯಿಂದ (ಜ.8) ಜನವರಿ 15ರ ವರೆಗೆ ದಿನಕ್ಕೆ 5000 ಜನರಿಗೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಸನ್ ಗ್ಲಾಸ್ ಕ್ಯಾಮೆರಾ ಬಳಸಿ ರಾಮಜನ್ಮಭೂಮಿಯ ಚಿತ್ರೀಕರಣ – ಆರೋಪಿ ಅರೆಸ್ಟ್‌

Sabarimala Temple

ಶಬರಿಮಲೆಯಲ್ಲಿ ಹಬ್ಬ ಹರಿದಿನಗಳಲ್ಲಿ ಜನಸಂದಣಿ ನಿರ್ವಹಣೆಗೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದೆ. ದೇವಸ್ವಂ ಬೋರ್ಡ್ ವೆಬ್‌ಸೈಟ್‌ನಲ್ಲಿ ಜ.12 ರಂದು 60,000, ಜ.13 ರಂದು 50,000 ಮತ್ತು ಜ.14 ರಂದು 40,000 ಎಂದು ವರ್ಚುವಲ್ ಕ್ಯೂ ಮೂಲಕ ಬುಕ್ಕಿಂಗ್ ಅನ್ನು ನಿಗದಿಪಡಿಸಲಾಗಿದೆ. ಮಕರ ಜ್ಯೋತಿ ದಿನ (ಜ.14) ಬೆಟ್ಟದ ಮೇಲೆ ಬಿಡಾರ ಹೂಡದಂತೆ ಭಕ್ತರಿಗೆ ಸಲಹೆ ನೀಡಲಾಗಿದೆ.

ಜ.10 ರಿಂದಲೇ ಪರ್ಣಶಾಲೆಗಳಲ್ಲಿ ಭಕ್ತರು ಕಾದು ಜ್ಯೋತಿ ದರ್ಶನ ಮಾಡುವುದು ವಾಡಿಕೆ. ಈ ಕಾರಣಕ್ಕಾಗಿ ಮಕರವಿಳಕ್ಕು ದಿನದಂದು ಉಂಟಾಗಬಹುದಾದ ಜನಸಂದಣಿ ತಪ್ಪಿಸಲು ಸಿದ್ಧತೆಗಳು ನಡೆಯುತ್ತಿವೆ. ಸ್ಪಾಟ್ ಬುಕ್ಕಿಂಗ್ ಅನ್ನು ಸೀಮಿತಗೊಳಿಸುವುದರ ಜೊತೆಗೆ ನಿಲಕ್ಕಲ್‌ನಲ್ಲಿ ಭಕ್ತರನ್ನು ಪಂಪಾ ನದಿಗೆ ಪ್ರವೇಶಿಸಲು ಅನುಮತಿಸುವ ಮೊದಲು ಪೊಲೀಸರು ತಪಾಸಣೆ ನಡೆಸುತ್ತಾರೆ. ಪರ್ಣಶಾಲೆಯಲ್ಲಿ ಕುಳಿತುಕೊಳ್ಳುವ ಭಕ್ತರ ಅಡುಗೆ ಮತ್ತು ಇತರ ಚಟುವಟಿಕೆಗಳನ್ನು ನಿಯಂತ್ರಿಸಲು ಪೊಲೀಸರು ಮಾರ್ಗಸೂಚಿಗಳನ್ನು ಜಾರಿಗೆ ತರಲಿದ್ದಾರೆ. ಜ್ಯೋತಿ ದರ್ಶನಕ್ಕೆ ಸಜ್ಜಾಗಿರುವ ವಿವಿಧೆಡೆ ಭದ್ರತೆಗಾಗಿ ನಾನಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ: ಪೆನ್ನಾರ್ ನದಿ ನೀರು ವಿವಾದ, ಭದ್ರಾ ಮೇಲ್ದಂಡೆ ಯೋಜನೆ – ಕೇಂದ್ರ ಸಚಿವ ಸೋಮಣ್ಣ ಜೊತೆ ಡಿಕೆಶಿ ಚರ್ಚೆ

Sabarimala

ಜ.12ರಂದು ಮಧ್ಯಾಹ್ನ 1 ಗಂಟೆಗೆ ಪಂದಳಂನ ವಲಿಯ ಕೊಯಿಕ್ಕಲ್ ದೇವಸ್ಥಾನದಿಂದ ಭಕ್ತರ ದರ್ಶನ ಹಾಗೂ ವಿವಿಧ ಕಾರ್ಯಕ್ರಮಗಳ ನಂತರ ತಿರುವಾಭರಣ ಮೆರವಣಿಗೆ ಶಬರಿಮಲೆಗೆ ತೆರಳಲಿದೆ. ವಿವಿಧ ದೇವಸ್ಥಾನಗಳನ್ನು ತಲುಪಿದ ಬಳಿಕ ದರ್ಶನ ಸೌಲಭ್ಯ ಪಡೆದು ರಾತ್ರಿ 9:30ಕ್ಕೆ ಅಯೂರು ಪುತಿಯಕಾವು ದೇವಸ್ಥಾನದಲ್ಲಿ ತಂಗಲಿದೆ. ಜ.13 ರಂದು ಮುಂಜಾನೆ 3 ಗಂಟೆಗೆ ಹೊರಡುವ ಮೆರವಣಿಗೆ ರಾತ್ರಿ 9 ಗಂಟೆಗೆ ಲಾಹಾದಲ್ಲಿ ತಂಗಲಿದೆ. 14ರಂದು ಮಕರವಿಳಕ್ಕು ದಿನ ಲಾಹದಿಂದ ಹೊರಟು ಪಂಡಿತಾವಲಂ, ಚೆರಿಯಾನವಟ್ಟಂ, ನೀಲಿಮಲ, ಅಪಾಚಿಮೇಡು ಮೂಲಕ ಸಂಜೆ 4 ಗಂಟೆಗೆ ಶಬರಿಪೀಠ ತಲುಪಲಿದೆ. ನಂತರ ಸಾರಂಕುತಿ ಮೂಲಕ ಸಂಜೆ 5.30ಕ್ಕೆ ಸನ್ನಿಧಾನಕ್ಕೆ ಬರಮಾಡಿಕೊಳ್ಳಲಾಗುವುದು. ಮೆರವಣಿಗೆ ಮಾರ್ಗಗಳಲ್ಲಿ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪೊಲೀಸರು ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದ್ದಾರೆ.

ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿರುವುದು ಪೊಲೀಸರ ಸಿದ್ಧತೆಗಳ ಯಶಸ್ಸಿಗೆ ಮತ್ತು ಸುಗಮ ಮತ್ತು ಸುರಕ್ಷಿತ ದರ್ಶನಕ್ಕೆ ಸಾಕ್ಷಿಯಾಗಿದೆ. ನ.15 ರಿಂದ ಈ ವರ್ಷ ಜ.5 ರವರೆಗೆ ತೀರ್ಥಯಾತ್ರೆ ಪ್ರಾರಂಭವಾದಾಗ ದಾಖಲೆಯ 39,02,610 ಅಯ್ಯಪ್ಪ ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರು. ಕಳೆದ ವರ್ಷ ಇದೇ ಅವಧಿಯಲ್ಲಿ 35,12,691 ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದರು. ಮಕರವಿಳಕ್ಕು ಆರಂಭವಾದ ಡಿ.30 ರಿಂದ ನಿನ್ನೆಯವರೆಗೆ 6,22,849 ಜನರು ದೇಗುಲಕ್ಕೆ ಭೇಟಿ ನೀಡಿದ್ದಾರೆ ಎಂದು ರಾಜ್ಯ ಪೊಲೀಸ್‌ ಮಾಧ್ಯಮ ಕೇಂದ್ರದ ಉಪ ನಿರ್ದೇಶಕ ಎಸ್‌.ಆರ್‌.ಪ್ರವೀಣ್‌ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ್‌ಪೋಲ್ ಪೋರ್ಟಲ್ ಲೋಕಾರ್ಪಣೆ ಮಾಡಿದ ಅಮಿತ್ ಶಾ

TAGGED:Ayyappa devoteeskeralaMakaraJyothiMakaravilakuSabarimalaಅಯ್ಯಪ್ಪಸ್ವಾಮಿ ಭಕ್ತರುಕೇರಳಮಕರಜ್ಯೋತಿಶಬರಿಮಲೆ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Social Welfare Department Assistant Director Mallikarjun
Districts

ಪಾವಗಡ | ಮೇಲಾಧಿಕಾರಿಗಳ ಕಿರುಕುಳ ಆರೋಪ – ವೀಡಿಯೋ ಮಾಡಿಟ್ಟು ಕಚೇರಿಯಲ್ಲೇ ನೇಣಿಗೆ ಶರಣಾದ ಅಧಿಕಾರಿ

Public TV
By Public TV
16 minutes ago
Strait of Hormuz 2
Latest

ಹಾರ್ಮುಜ್‌ ಜಲಸಂಧಿ ಬಳಿ ರಾಂಚಿ ವ್ಯಕ್ತಿ ಸಾವು – ಮೃತದೇಹ ತರಲು ಸಹಾಯ ಕೋರಿದ ಕುಟುಂಬ

Public TV
By Public TV
29 minutes ago
daily horoscope dina bhavishya
Astrology

ದಿನ ಭವಿಷ್ಯ 21-03-2026

Public TV
By Public TV
1 hour ago
Muslim leaders recommend four names for Davangere South Bypolls
Davanagere

ದಾವಣಗೆರೆಗೆ ನಾಲ್ವರ ಹೆಸರನ್ನು ಶಿಫಾರಸು ಮಾಡಿದ ಮುಸ್ಲಿಮ್‌ ನಾಯಕರು

Public TV
By Public TV
9 hours ago
NS Bosaraju
Bellary

ಟಿಬಿ ಡ್ಯಾಂಗೆ ಸಚಿವ ಬೋಸರಾಜು ಭೇಟಿ – ಕ್ರಸ್ಟ್ ಗೇಟ್‌ಗಳ ಅಳವಡಿಕೆ ಕಾಮಗಾರಿ ವೀಕ್ಷಣೆ

Public TV
By Public TV
10 hours ago
Bus hits woman at Lakshmeshwara bus stand woman dies
Districts

ಲಕ್ಷ್ಮೇಶ್ವರ ಬಸ್‌ ನಿಲ್ದಾಣದಲ್ಲಿ ಬಸ್ ಡಿಕ್ಕಿ – ಚಿಕಿತ್ಸೆ ಫಲಿಸದೇ ಮಹಿಳೆ‌ ಸಾವು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?