ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ – ಜನವರಿ 17 ಕ್ಕೆ ವಕೀಲರ ಸಭೆ

Public TV
2 Min Read
SHABARIMALA SUPREME COURT

-ಮೂರು ವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ಶಬರಿಮಲೆ ಪ್ರಕರಣದಲ್ಲಿರುವ ವಕೀಲರ ಸಭೆ ಕರೆದು ವಿಚಾರಣೆ ಸಂಬಂಧ ಅಂತಿಮ ತಯಾರಿ ಮಾಡಿಕೊಳ್ಳುವಂತೆ ಸುಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ಸಿಜೆಐ ಎಸ್.ಎ ಬೋಬ್ಡೆ ಸೂಚಿಸಿದ್ದಾರೆ.

ಶಬರಿಮಲೆ ತೀರ್ಪು ಮರು ಪರಿಶೀಲಿಸುವಂತೆ ಸಲ್ಲಿಸಿದ್ದ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ, ಜನವರಿ 17ಕ್ಕೆ ವಕೀಲರ ಸಭೆ ದಿನಾಂಕ ನಿಗದಿಪಡಿಸಿ, ಮೂರು ವಾರಕ್ಕೆ ವಿಚಾರಣೆ ಮುಂದೂಡಿದೆ.

ಸಿಜೆಐ ಎಸ್.ಎ ಬೋಬ್ಡೆ ನೇತೃತ್ವದ ಒಂಬತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಶಬರಿಮಲೆ ದೇವಸ್ಥಾನ ಪರ ವಾದ ಮಂಡಿಸಿದ ವಕೀಲರು, ಮಹಿಳೆಯರ ಪ್ರವೇಶ ಸಂಬಂಧ ಈ ಹಿಂದೆ ನೀಡಿರುವ ಆದೇಶವನ್ನು ಸುಪ್ರೀಂಕೋರ್ಟ್ ಪರಿಶೀಲಿಸಬೇಕು ಎಂದು ಮನವಿ ಮಾಡಿದರು. ಆದರೆ ಇದಕ್ಕೆ ನಿರಾಕರಿಸಿದ ಸಿಜೆಐ, ನಾವು ಶಬರಿಮಲೆ ಆದೇಶವನ್ನು ಇಲ್ಲಿ ಪರಿಶೀಲಿಸುವುದಿಲ್ಲ. ಬದಲಿಗೆ ಈ ಪ್ರಕರಣದಲ್ಲಿ ಉದ್ಭವವಾಗಿರುವ ಏಳು ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು. ಇದಕ್ಕೆ ಸಂಬಂಧಿತ ವಿಚಾರಣೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಶಬರಿಮಲೆಗೆ ಹೋಗ್ತಿದ್ದ ಮಹಿಳೆ ಮೇಲೆ ಪೆಪ್ಪರ್ ಸ್ಪ್ರೇ

ಈ ವೇಳೆ ಮಧ್ಯ ಪ್ರವೇಶಿಸಿದ ಹಿರಿಯ ವಕೀಲೆ ಇಂದಿರಾ ಜೈಸಿಂಗ್, ಪ್ರಕರಣದಲ್ಲಿ ಮತ್ತಷ್ಟು ವಿಚಾರಗಳು ಸೇರ್ಪಡೆಯಾಗಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಹೆಚ್ಚುವರಿಯಾಗಿ ವಾದ ಮಂಡಿಸಿದ ವಕೀಲ ಅಭಿಷೇಕ ಮನುಸಿಂಘ್ವಿ, ಈ ಪ್ರಕರಣವನ್ನ ಸಾಕಷ್ಟು ಕಠಿಣ ಮತ್ತು ವಿಸತರಿಸಲಾಗಿದೆ. ಇದನ್ನು ಕೊಂಚ ಸರಳಿಕರಿಸಬೇಕಿದೆ ಎಂದು ಮನವಿ ಮಾಡಿದರು. ಇದನ್ನೂ ಓದಿ: ಸರ್ಕಾರ ರಕ್ಷಣೆ ನೀಡದಿದ್ರೂ ಶಬರಿಮಲೆಗೆ ಭೇಟಿ ನೀಡ್ತೇವೆ- ತೃಪ್ತಿ ದೇಸಾಯಿ

ಈ ವಾದಗಳನ್ನು ಆಲಿಸಿದ ಸಿಜೆಐ ನೇತೃತ್ವದ ಪೀಠ, ಜನವರಿ 17ರಂದು ಪ್ರಕರಣ ವಕೀಲರೊಂದಿಗೆ ಪ್ರಧಾನ ಕಾರ್ಯದರ್ಶಿ ಜೊತೆ ಸಭೆಗೆ ದಿನಾಂಕ ನಿಗದಿ ಪಡಿಸಿದರು. ಪ್ರಕರಣಕ್ಕೆ ಹೆಚ್ಚುವರಿ ಅಂಶಗಳ ಸೇರ್ಪಡೆ ಮಾಡುವ ಬಗ್ಗೆ ವಿಚಾರಣೆ ನಡೆಯಬೇಕಿರುವ ಅಂಶಗಳನ್ನು ವಿಂಗಡಿಸುವುದು, ಅರ್ಜಿದಾರ ಪರ ವಕೀಲರಿಗೆ ವಾದ ಮಂಡಿಸಲು ಸಮಯ ನಿಗದಿ ಮಾಡುವುದು, ಯಾವ ಅಂಶಗಳನ್ನು ಯಾವ ವಕೀಲರು ವಾದ ಮಂಡಿಸುತ್ತಾರೆ ಎನ್ನುವುದನ್ನು ಸಭೆಯಲ್ಲಿ ನಿಗದಿಪಡಿಸಿ ಮಾಹಿತಿ ನೀಡುವಂತೆ ಸುಪ್ರೀಂಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದರು. ಇದನ್ನೂ ಓದಿ: ಶಬರಿಮಲೆ ಪ್ರವೇಶಿಸಿದ ಮಹಿಳೆಯರಿಗೆ ಮ್ಯಾಗಜಿನಲ್ಲಿ ವಿಶೇಷ ಗೌರವ- ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

sabarimala 5

ಧಾರ್ಮಿಕ ಸ್ವಾತಂತ್ರ್ಯವನ್ನು ನಿರ್ಬಂಧಿಸಲು ಸಾಧ್ಯವಿಲ್ಲ. ನನ್ನ ಧರ್ಮ ಯಾವುದು ಮತ್ತು ಅದನ್ನು ಹೇಗೆ ಅನುಸರಿಸಬೇಕು ಎಂದು ಹೇಳುವುದು ನ್ಯಾಯಾಲಯದ ಕೆಲಸವಲ್ಲ ಎಂದು ಹಿರಿಯ ವಕೀಲ ರಾಜೀವ್ ಧವನ್ ಆಕ್ಷೇಪ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ನಿಮ್ಮ ಆಕ್ಷೇಪಣೆಯಲ್ಲಿ ಹುರಿಳಿಲ್ಲ ಎಂದು ತಳ್ಳಿಹಾಕಿದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಬಹುಪತ್ನಿತ್ವದ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತದೆಯೇ ಎಂದು ಸ್ಪಷ್ಟನೆ ಕೇಳಿದರು ಇದಕ್ಕೆ ಉತ್ತರಿಸಿದ ಪೀಠ ನವೆಂಬರ್ 14 ರ ಆದೇಶದಲ್ಲಿ ಉಲ್ಲೇಖಿಸಿದ ಪ್ರಶ್ನೆಗಳನ್ನ ಮಾತ್ರ ವಿಚಾರಣೆ ನಡೆಸುತ್ತೇವೆ ಎಂದು ಸ್ಪಷ್ಟಪಡಿಸಿದರು.

Share This Article
Leave a Comment

Leave a Reply

Your email address will not be published. Required fields are marked *