Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೋರ್ಗರೆವ ತೀರದಲ್ಲಿ ಹೊಯ್ಗೆಯ ಅರಮನೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಭೋರ್ಗರೆವ ತೀರದಲ್ಲಿ ಹೊಯ್ಗೆಯ ಅರಮನೆ!

Dakshina Kannada

ಭೋರ್ಗರೆವ ತೀರದಲ್ಲಿ ಹೊಯ್ಗೆಯ ಅರಮನೆ!

Public TV
Last updated: March 7, 2023 4:05 pm
Public TV
Share
3 Min Read
SABELLARIA The Worm Engineers 2
SHARE

ಮಾನವ ಏನೇನೆಲ್ಲಾ ಕಂಡುಹಿಡಿದರೂ ರಕ್ಕಸ ತೆರೆಗಳಿಂದ ಸಮುದ್ರದ (Sea) ತೀರವನ್ನು ರಕ್ಷಿಸುವುದು ಹೇಗೆ ಎನ್ನುವುದು ಮಾತ್ರ ಸವಾಲಿನ ವಿಷಯವಾಗಿಯೇ ಉಳಿದಿದೆ. ಪ್ರತಿವರ್ಷ ಮೀಟರುಗಟ್ಟಲೆ ತೀರಗಳು ಸಮುದ್ರದ ಪಾಲಾಗುತ್ತಿದ್ದು, ತೀರದ ನಿವಾಸಿಗಳು ನಿರ್ವಸತಿಕರಾಗುತ್ತಿದ್ದಾರೆ. ಕಡಲ್ಕೊರೆತಕ್ಕೆ ಕಾರಣಗಳು ಹಲವಾರು ಇದ್ದರೂ ನಿರ್ವಹಣೆ ಮಾತ್ರ ಸರ್ಕಾರಗಳಿಗೆ ಸವಾಲಾಗಿಯೇ ಉಳಿದಿದೆ. ಬಂಡೆಗಳು, ಕಾಂಕ್ರೀಟ್ ತಡೆಗಲ್ಲುಗಳು, ಮರಳಿನ ಚೀಲಗಳು, ಅಲೆಗಳ ಶಕ್ತಿಯನ್ನು ಕಡಿಮೆಗೊಳಿಸಲು ಹಲವಾರು ತಂತ್ರಜ್ಞಾನಗಳನ್ನೂ ಬಳಸಿದ ನಂತರವೂ ಸಮುದ್ರದ ಹಸಿವೆಯು ತೀರಗಳನ್ನು ಇಂಚಿಂಚಾಗಿ ನುಂಗುತ್ತಲೇ ಇದೆ ಇವೆಲ್ಲದುದರ ಮಧ್ಯೆ ಸಬೆಲ್ಲಾರಿಯಾ ಎಂಬ ದುಂಡುಹುಳ ಮಾತ್ರ ನಿರ್ಲಿಪ್ತವಾಗಿ ಅರಮನೆಯನ್ನು ಕಟ್ಟಿಕೊಂಡು ಇನ್ನಿತರ ಜೀವವೈವಿಧ್ಯಕ್ಕೂ ಆಸರೆಯಾಗಿದೆ.

ಚಿಪ್ಪುಗಳು ಹಾಗೂ ಮರಳಿನ ಕಣಗಳಿಂದ ಕಟ್ಟಲ್ಪಟ್ಟ ಗೂಡಿನ ಸೂಕ್ಷ್ಮ ದರ್ಶಕ ನೋಟ
                            ಚಿಪ್ಪುಗಳು ಹಾಗೂ ಮರಳಿನ ಕಣಗಳಿಂದ ಕಟ್ಟಲ್ಪಟ್ಟ ಗೂಡಿನ ಸೂಕ್ಷ್ಮ ದರ್ಶಕ ನೋಟ

ಸಬೆಲ್ಲಾರಿಯಾವು(Sabellaria sp.) ದುಂಡು ಹುಳಗಳ ಗುಂಪಿಗೆ ಸೇರಿದ 30-40 ಎಂಎಂ ಗಾತ್ರಕ್ಕೆ ಬೆಳೆಯುವ ಸಮುದ್ರ ಜೀವಿ. ಸಾಮಾನ್ಯವಾಗಿ ಬಂಡೆಗಳಿಗೆ ಅಂಟಿಕೊಂಡು ಅಥವಾ ಸಾಗರದಾಳದಲ್ಲಿ ಕಂಡುಬರುವ ಇವು, ಸಣ್ಣ ಗೂಡುಗಳನ್ನು ಕಟ್ಟಿಕೊಂಡು ಅದರೊಳಗೆ ವಾಸವಾಗಿರುತ್ತವೆ. ಇವುಗಳು ಒಂದೊಂದಾಗಿ ಇರದೆ, ಅಸಂಖ್ಯಾತ ಸಂಖ್ಯೆಯಲ್ಲಿ ವಿಸ್ತಾರವಾಗಿ ಹಬ್ಬಿಕೊಂಡು ಮರಳಿನ ಮನೆಗಳನ್ನು ಕಟ್ಟಿಕೊಳ್ಳುತ್ತವೆ. ದೂರದಿಂದ ನೋಡಿದರೆ, ಬಂಡೆಗಳಿಗೆ ತೆಳುವಾದ ಮರಳಿನ ಹೊದಿಕೆ ಹಾಕಿದಂತೆ ಕಂಡರೂ, ಬಳಿ ಹೋಗಿ ನೋಡಿದರೆ ಇವುಗಳ ಸಂಕೀರ್ಣ ಜೀವ ವ್ಯವಸ್ಥೆ ಕಂಡುಬರುತ್ತದೆ. ಈ ಹುಳಗಳು ವಿವಿಧ ಗಾತ್ರದ ಮರಳಿನ ಕಣಗಳನ್ನು, ಸೂಕ್ಷ್ಮ ಚಿಪ್ಪುಗಳನ್ನು ತನ್ನ ವಿಶೇಷ ಅಂಟು ಸ್ರವಿಕೆಯ ಸಹಾಯದಿಂದ ಜೋಡಿಸಿಕೊಂಡು ಕೊಳವೆಯಾಕೃತಿಯಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ. ಪ್ರತಿಯೊಂದು ಗೂಡು ನೆರೆಯ ಗೂಡುಗಳೊಂದಿಗೆ ಗಟ್ಟಿಯಾಗಿ ಅಂಟಿಕೊಂಡು ಸಹಸ್ರಾರು ಸಂಖ್ಯೆಯಲ್ಲಿರುತ್ತವೆ. ಈ ಗೂಡುಗಳನ್ನು ಗಟ್ಟಿಯಾಗಿ ಹಿಡಿದಿಡುವ ಈ ಅಂಟು ಸ್ರವಿಕೆಯು, ಅಲೆಗಳ ಅಪ್ಪಳಿಕೆಯನ್ನು ಸಮರ್ಥವಾಗಿ ತಡೆಯುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಮರಳಿನ ದಿಬ್ಬಗಳು ಇತರೆ ಜೀವಿಗಳಿಗೂ ಆಶ್ರಯ ನೀಡಿ, ವೈವಿಧ್ಯ ಜೀವವ್ಯವಸ್ಥೆಗೆ ಆಸರೆಯಾಗಿ, ಸಹಬಾಳ್ವೆಯ ಸಂದೇಶವನ್ನೂ ನೀಡುತ್ತವೆ. ಕಡಲ ಸಸ್ಯಗಳು, ಮೀನಿನ ಮರಿಗಳು, ಸ್ಪಂಜು ಪ್ರಾಣಿಗಳು, ಕುಟುಕು ಕಣವಂತಗಳು, ಮೃದ್ವಂಗಿಗಳಂತಹ ಅನೇಕ ಅಕಶೇರುಕಗಳಿಗೂ ಈ ಗೂಡುಗಳು ಆಧಾರವಾಗಿರುತ್ತವೆ.

ಬೆಲ್ಲಾರಿಯಾದ ಲಾರ್ವ (ಮರಿ ಹುಳ) - ಸೂಕ್ಷ್ಮ ದರ್ಶಕ ನೋಟ
                                                         ಬೆಲ್ಲಾರಿಯಾದ ಲಾರ್ವ (ಮರಿ ಹುಳ) – ಸೂಕ್ಷ್ಮ ದರ್ಶಕ ನೋಟ

ಈ ಅಂಟುದ್ರವವು ವಿಶೇಷ ಪ್ರೋಟೀನ್ ಕಿಣ್ವಗಲಿಂದ ಮಾಡಲ್ಪಟ್ಟಿದ್ದು, ಹುಳಗಳು ಅತಿ ತೆಳುವಾದ ಹೊದಿಕೆಯನ್ನು ತಮ್ಮ ಸುತ್ತಲೂ ಸ್ರವಿಸಿ, ಅದರ ಸುತ್ತಲೂ ಮರಳಿನ ಕಣಗನ್ನು ಪೋಣಿಸಿಕೊಳ್ಳುತ್ತವೆ. ಇವುಗಳು ತಮ್ಮ ಗೂಡಿನಬಳಿ ಬರುವ ಇತರೆ ಸಣ್ಣ ಜೀವಿಗಳನ್ನು ಹಿಡಿದು ತಿನ್ನುತ್ತವೆ. ಮೇಲ್ನೋಟಕ್ಕೆ ಈ ವ್ಯವಸ್ಥೆಯು, ಅಲೆಗಳ ಅಪ್ಪಳಿಕೆಯನ್ನು ತಡೆದುಕೊಳ್ಳುವ ಸಾಮರ್ಥ್ಯವಿದ್ದಂತೆ ಕಂಡುಬಂದರೂ, ಆ ಪ್ರದೇಶದ ಬಂಡೆ ಕಲ್ಲುಗಳನ್ನು ಈ ಹುಳಗಳು ಸಂಪೂರ್ಣವಾಗಿ ಆಕ್ರಮಿಸಿ, ಅಲ್ಲಿನ ಮೂಲ ಪ್ರಬೇಧಗಳಿಗೆ ಕಂಟಕಪ್ರಾಯವಾಗುತ್ತದೋ?,ಅಥವಾ, ಸುತ್ತಲಿನ ಮರಳನ್ನು ಅಸ್ಥಿರಗೊಳಿಸುತ್ತವೋ?, ಇವುಗಳ ಸ್ರವಿಕೆಯು ಒಳಗಿಂದೊಳಗೆ ಕಲ್ಲುಗಳ ಸವಕಳಿಗೆ ಕಾರಣವಾಗಿ ತಲೆನೋವಾಗಿ ಪರಿಣಮಿಸುತ್ತದೋ? ಎಂದು ತಿಳಿಯಲು ಇವುಗಳ ಮೇಲೆ ಕಣ್ಣಿಟ್ಟು, ಸೂಕ್ತ ವೈಜ್ಞಾನಿಕ ಸಂಶೋಧನೆಯನ್ನು ಕೈಗೊಳ್ಳುವ ಅಗತ್ಯವಿದೆ.

ಸಬೆಲ್ಲಾರಿಯಾ ಗೂಡುಗಳ ಮಾದರಿಯನ್ನು ಅಧ್ಯಯನಕ್ಕೆಂದು ಸಲಿಕೆಯಿಂದ ತೆಗೆದುಕೊಂಡಿರುವುದು
                                          ಸಬೆಲ್ಲಾರಿಯಾ ಗೂಡುಗಳ ಮಾದರಿಯನ್ನು ಅಧ್ಯಯನಕ್ಕೆಂದು ಸಲಿಕೆಯಿಂದ ತೆಗೆದುಕೊಂಡಿರುವುದು

ಮಂಗಳೂರಿನ ಕರಾವಳಿ ಪ್ರದೇಶಗಳಲ್ಲಿ ಈ ಹುಳಗಳು ಕಂಡುಬಂದಿದ್ದು, ಉಳ್ಳಾಲ, ಸುರತ್ಕಲ್ (Ullala, Surathkal) ತೀರಗಳ ಬಂಡೆ ಕಲ್ಲುಗಳ ಮೇಲೆ ಕಾಣಸಿಗುತ್ತವೆ. ಮಂಗಳೂರಿನ ಸಂತ ಅಲೋಶಿಯಸ್ (Mangaluru St aloysius College) ಕಾಲೇಜಿನ, ಅನ್ವಯಿಕ ಜೀವಶಾಸ್ತ್ರ ಪ್ರಯೋಗಾಲಯವು, ಸಮುದ್ರ ಸಸ್ಯಗಳ ಮೇಲೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಸಂಶೋಧನೆಯಲ್ಲಿ ತೊಡಗಿದ್ದು, ಈ ವಿಶಿಷ್ಟ ಹುಳಗಳು ಸಂಶೋಧಕರ ಗಮನ ಸೆಳೆದು, ಈ ನಿಟ್ಟಿನಲ್ಲಿ, ಆಧುನಿಕ ತಂತ್ರಜ್ಞಾನದ ಸಹಾಯದಿಂದ ಈ ಬಗ್ಗೆ ಹೆಚ್ಚಿನ ಅಧ್ಯಯನ ನಡೆಯುತ್ತಿದೆ. ಡಾ. ಲಿಯೋ ಡಿಸೋಜಾ ಹಾಗೂ ಡಾ. ಶಶಿಕಿರಣ್ ನಿವಾಸ್ ಅವರ ಮಾರ್ಗದರ್ಶನದಲ್ಲಿ, ಸುಧೀಕ್ಷಾ ಕಿರಣ್, ಸಚಿನ್ ಪಟವರ್ಧನ್, ಜೇನ್ ಜೇಮ್ಸ್, ಸುಲಕ್ಷಣಾ ಕಾರ್ಕಳ ಅವರನ್ನೊಳಗೊಂಡ ಸಂಶೋಧನಾ ತಂಡ ಈ ವಿಷಯದ ವಿವಿಧ ಆಯಾಮಗಳ ಪರಿಶೀಲನೆ ನಡೆಸುತ್ತಿದೆ.

– ಸಚಿನ್ ಪಟವರ್ಧನ್

TAGGED:MangaluruSabellariaseaStudyಮರಳುಸಬೆಲ್ಲಾರಿಯಾಸಮುದ್ರ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Haveri Samavesha
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Public TV
By Public TV
8 minutes ago
railway track
Bellary

ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Public TV
By Public TV
13 minutes ago
Online Game
Explainer

Explainer | ಪಬ್‌ಜಿ, ಬ್ಲೂ ವೇಲ್‌, ಕೊರಿಯನ್‌ ಲವ್‌ ಗೇಮ್‌ – ಮಕ್ಕಳ ಜೀವ ಕಸಿಯುತ್ತಿದೆ ಆನ್‌ಲೈನ್‌ ಗೇಮಿಂಗ್‌ ಗೀಳು

Public TV
By Public TV
16 minutes ago
Mumbai Vande Bharat Express Train Man Arrested For Releasing Snake in Washroom
Latest

ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಾವು ಬಿಟ್ಟ ವ್ಯಕ್ತಿ ಅರೆಸ್ಟ್

Public TV
By Public TV
32 minutes ago
HDK 2 1
Bengaluru City

ರಾಜ್ಯದಲ್ಲಿರೋ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯೋದು ನನ್ನ ಅಜೆಂಡಾ – ಹೆಚ್‌ಡಿಕೆ

Public TV
By Public TV
37 minutes ago
Mumbai metro 2
Latest

ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್‌ ಕುಸಿದು ದುರಂತ – ಆಟೋ, ಕಾರು ಅಪ್ಪಚ್ಚಿ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?