Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭೋರ್ಗರೆವ ತೀರದಲ್ಲಿ ಹೊಯ್ಗೆಯ ಅರಮನೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಭೋರ್ಗರೆವ ತೀರದಲ್ಲಿ ಹೊಯ್ಗೆಯ ಅರಮನೆ!

Dakshina Kannada

ಭೋರ್ಗರೆವ ತೀರದಲ್ಲಿ ಹೊಯ್ಗೆಯ ಅರಮನೆ!

Public TV
Last updated: March 7, 2023 4:05 pm
Public TV
Share
3 Min Read
SABELLARIA The Worm Engineers 2
SHARE

ಮಾನವ ಏನೇನೆಲ್ಲಾ ಕಂಡುಹಿಡಿದರೂ ರಕ್ಕಸ ತೆರೆಗಳಿಂದ ಸಮುದ್ರದ (Sea) ತೀರವನ್ನು ರಕ್ಷಿಸುವುದು ಹೇಗೆ ಎನ್ನುವುದು ಮಾತ್ರ ಸವಾಲಿನ ವಿಷಯವಾಗಿಯೇ ಉಳಿದಿದೆ. ಪ್ರತಿವರ್ಷ ಮೀಟರುಗಟ್ಟಲೆ ತೀರಗಳು ಸಮುದ್ರದ ಪಾಲಾಗುತ್ತಿದ್ದು, ತೀರದ ನಿವಾಸಿಗಳು ನಿರ್ವಸತಿಕರಾಗುತ್ತಿದ್ದಾರೆ. ಕಡಲ್ಕೊರೆತಕ್ಕೆ ಕಾರಣಗಳು ಹಲವಾರು ಇದ್ದರೂ ನಿರ್ವಹಣೆ ಮಾತ್ರ ಸರ್ಕಾರಗಳಿಗೆ ಸವಾಲಾಗಿಯೇ ಉಳಿದಿದೆ. ಬಂಡೆಗಳು, ಕಾಂಕ್ರೀಟ್ ತಡೆಗಲ್ಲುಗಳು, ಮರಳಿನ ಚೀಲಗಳು, ಅಲೆಗಳ ಶಕ್ತಿಯನ್ನು ಕಡಿಮೆಗೊಳಿಸಲು ಹಲವಾರು ತಂತ್ರಜ್ಞಾನಗಳನ್ನೂ ಬಳಸಿದ ನಂತರವೂ ಸಮುದ್ರದ ಹಸಿವೆಯು ತೀರಗಳನ್ನು ಇಂಚಿಂಚಾಗಿ ನುಂಗುತ್ತಲೇ ಇದೆ ಇವೆಲ್ಲದುದರ ಮಧ್ಯೆ ಸಬೆಲ್ಲಾರಿಯಾ ಎಂಬ ದುಂಡುಹುಳ ಮಾತ್ರ ನಿರ್ಲಿಪ್ತವಾಗಿ ಅರಮನೆಯನ್ನು ಕಟ್ಟಿಕೊಂಡು ಇನ್ನಿತರ ಜೀವವೈವಿಧ್ಯಕ್ಕೂ ಆಸರೆಯಾಗಿದೆ.

ಚಿಪ್ಪುಗಳು ಹಾಗೂ ಮರಳಿನ ಕಣಗಳಿಂದ ಕಟ್ಟಲ್ಪಟ್ಟ ಗೂಡಿನ ಸೂಕ್ಷ್ಮ ದರ್ಶಕ ನೋಟ
                            ಚಿಪ್ಪುಗಳು ಹಾಗೂ ಮರಳಿನ ಕಣಗಳಿಂದ ಕಟ್ಟಲ್ಪಟ್ಟ ಗೂಡಿನ ಸೂಕ್ಷ್ಮ ದರ್ಶಕ ನೋಟ

ಸಬೆಲ್ಲಾರಿಯಾವು(Sabellaria sp.) ದುಂಡು ಹುಳಗಳ ಗುಂಪಿಗೆ ಸೇರಿದ 30-40 ಎಂಎಂ ಗಾತ್ರಕ್ಕೆ ಬೆಳೆಯುವ ಸಮುದ್ರ ಜೀವಿ. ಸಾಮಾನ್ಯವಾಗಿ ಬಂಡೆಗಳಿಗೆ ಅಂಟಿಕೊಂಡು ಅಥವಾ ಸಾಗರದಾಳದಲ್ಲಿ ಕಂಡುಬರುವ ಇವು, ಸಣ್ಣ ಗೂಡುಗಳನ್ನು ಕಟ್ಟಿಕೊಂಡು ಅದರೊಳಗೆ ವಾಸವಾಗಿರುತ್ತವೆ. ಇವುಗಳು ಒಂದೊಂದಾಗಿ ಇರದೆ, ಅಸಂಖ್ಯಾತ ಸಂಖ್ಯೆಯಲ್ಲಿ ವಿಸ್ತಾರವಾಗಿ ಹಬ್ಬಿಕೊಂಡು ಮರಳಿನ ಮನೆಗಳನ್ನು ಕಟ್ಟಿಕೊಳ್ಳುತ್ತವೆ. ದೂರದಿಂದ ನೋಡಿದರೆ, ಬಂಡೆಗಳಿಗೆ ತೆಳುವಾದ ಮರಳಿನ ಹೊದಿಕೆ ಹಾಕಿದಂತೆ ಕಂಡರೂ, ಬಳಿ ಹೋಗಿ ನೋಡಿದರೆ ಇವುಗಳ ಸಂಕೀರ್ಣ ಜೀವ ವ್ಯವಸ್ಥೆ ಕಂಡುಬರುತ್ತದೆ. ಈ ಹುಳಗಳು ವಿವಿಧ ಗಾತ್ರದ ಮರಳಿನ ಕಣಗಳನ್ನು, ಸೂಕ್ಷ್ಮ ಚಿಪ್ಪುಗಳನ್ನು ತನ್ನ ವಿಶೇಷ ಅಂಟು ಸ್ರವಿಕೆಯ ಸಹಾಯದಿಂದ ಜೋಡಿಸಿಕೊಂಡು ಕೊಳವೆಯಾಕೃತಿಯಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ. ಪ್ರತಿಯೊಂದು ಗೂಡು ನೆರೆಯ ಗೂಡುಗಳೊಂದಿಗೆ ಗಟ್ಟಿಯಾಗಿ ಅಂಟಿಕೊಂಡು ಸಹಸ್ರಾರು ಸಂಖ್ಯೆಯಲ್ಲಿರುತ್ತವೆ. ಈ ಗೂಡುಗಳನ್ನು ಗಟ್ಟಿಯಾಗಿ ಹಿಡಿದಿಡುವ ಈ ಅಂಟು ಸ್ರವಿಕೆಯು, ಅಲೆಗಳ ಅಪ್ಪಳಿಕೆಯನ್ನು ಸಮರ್ಥವಾಗಿ ತಡೆಯುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಮರಳಿನ ದಿಬ್ಬಗಳು ಇತರೆ ಜೀವಿಗಳಿಗೂ ಆಶ್ರಯ ನೀಡಿ, ವೈವಿಧ್ಯ ಜೀವವ್ಯವಸ್ಥೆಗೆ ಆಸರೆಯಾಗಿ, ಸಹಬಾಳ್ವೆಯ ಸಂದೇಶವನ್ನೂ ನೀಡುತ್ತವೆ. ಕಡಲ ಸಸ್ಯಗಳು, ಮೀನಿನ ಮರಿಗಳು, ಸ್ಪಂಜು ಪ್ರಾಣಿಗಳು, ಕುಟುಕು ಕಣವಂತಗಳು, ಮೃದ್ವಂಗಿಗಳಂತಹ ಅನೇಕ ಅಕಶೇರುಕಗಳಿಗೂ ಈ ಗೂಡುಗಳು ಆಧಾರವಾಗಿರುತ್ತವೆ.

ಬೆಲ್ಲಾರಿಯಾದ ಲಾರ್ವ (ಮರಿ ಹುಳ) - ಸೂಕ್ಷ್ಮ ದರ್ಶಕ ನೋಟ
                                                         ಬೆಲ್ಲಾರಿಯಾದ ಲಾರ್ವ (ಮರಿ ಹುಳ) – ಸೂಕ್ಷ್ಮ ದರ್ಶಕ ನೋಟ

ಈ ಅಂಟುದ್ರವವು ವಿಶೇಷ ಪ್ರೋಟೀನ್ ಕಿಣ್ವಗಲಿಂದ ಮಾಡಲ್ಪಟ್ಟಿದ್ದು, ಹುಳಗಳು ಅತಿ ತೆಳುವಾದ ಹೊದಿಕೆಯನ್ನು ತಮ್ಮ ಸುತ್ತಲೂ ಸ್ರವಿಸಿ, ಅದರ ಸುತ್ತಲೂ ಮರಳಿನ ಕಣಗನ್ನು ಪೋಣಿಸಿಕೊಳ್ಳುತ್ತವೆ. ಇವುಗಳು ತಮ್ಮ ಗೂಡಿನಬಳಿ ಬರುವ ಇತರೆ ಸಣ್ಣ ಜೀವಿಗಳನ್ನು ಹಿಡಿದು ತಿನ್ನುತ್ತವೆ. ಮೇಲ್ನೋಟಕ್ಕೆ ಈ ವ್ಯವಸ್ಥೆಯು, ಅಲೆಗಳ ಅಪ್ಪಳಿಕೆಯನ್ನು ತಡೆದುಕೊಳ್ಳುವ ಸಾಮರ್ಥ್ಯವಿದ್ದಂತೆ ಕಂಡುಬಂದರೂ, ಆ ಪ್ರದೇಶದ ಬಂಡೆ ಕಲ್ಲುಗಳನ್ನು ಈ ಹುಳಗಳು ಸಂಪೂರ್ಣವಾಗಿ ಆಕ್ರಮಿಸಿ, ಅಲ್ಲಿನ ಮೂಲ ಪ್ರಬೇಧಗಳಿಗೆ ಕಂಟಕಪ್ರಾಯವಾಗುತ್ತದೋ?,ಅಥವಾ, ಸುತ್ತಲಿನ ಮರಳನ್ನು ಅಸ್ಥಿರಗೊಳಿಸುತ್ತವೋ?, ಇವುಗಳ ಸ್ರವಿಕೆಯು ಒಳಗಿಂದೊಳಗೆ ಕಲ್ಲುಗಳ ಸವಕಳಿಗೆ ಕಾರಣವಾಗಿ ತಲೆನೋವಾಗಿ ಪರಿಣಮಿಸುತ್ತದೋ? ಎಂದು ತಿಳಿಯಲು ಇವುಗಳ ಮೇಲೆ ಕಣ್ಣಿಟ್ಟು, ಸೂಕ್ತ ವೈಜ್ಞಾನಿಕ ಸಂಶೋಧನೆಯನ್ನು ಕೈಗೊಳ್ಳುವ ಅಗತ್ಯವಿದೆ.

ಸಬೆಲ್ಲಾರಿಯಾ ಗೂಡುಗಳ ಮಾದರಿಯನ್ನು ಅಧ್ಯಯನಕ್ಕೆಂದು ಸಲಿಕೆಯಿಂದ ತೆಗೆದುಕೊಂಡಿರುವುದು
                                          ಸಬೆಲ್ಲಾರಿಯಾ ಗೂಡುಗಳ ಮಾದರಿಯನ್ನು ಅಧ್ಯಯನಕ್ಕೆಂದು ಸಲಿಕೆಯಿಂದ ತೆಗೆದುಕೊಂಡಿರುವುದು

ಮಂಗಳೂರಿನ ಕರಾವಳಿ ಪ್ರದೇಶಗಳಲ್ಲಿ ಈ ಹುಳಗಳು ಕಂಡುಬಂದಿದ್ದು, ಉಳ್ಳಾಲ, ಸುರತ್ಕಲ್ (Ullala, Surathkal) ತೀರಗಳ ಬಂಡೆ ಕಲ್ಲುಗಳ ಮೇಲೆ ಕಾಣಸಿಗುತ್ತವೆ. ಮಂಗಳೂರಿನ ಸಂತ ಅಲೋಶಿಯಸ್ (Mangaluru St aloysius College) ಕಾಲೇಜಿನ, ಅನ್ವಯಿಕ ಜೀವಶಾಸ್ತ್ರ ಪ್ರಯೋಗಾಲಯವು, ಸಮುದ್ರ ಸಸ್ಯಗಳ ಮೇಲೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಸಂಶೋಧನೆಯಲ್ಲಿ ತೊಡಗಿದ್ದು, ಈ ವಿಶಿಷ್ಟ ಹುಳಗಳು ಸಂಶೋಧಕರ ಗಮನ ಸೆಳೆದು, ಈ ನಿಟ್ಟಿನಲ್ಲಿ, ಆಧುನಿಕ ತಂತ್ರಜ್ಞಾನದ ಸಹಾಯದಿಂದ ಈ ಬಗ್ಗೆ ಹೆಚ್ಚಿನ ಅಧ್ಯಯನ ನಡೆಯುತ್ತಿದೆ. ಡಾ. ಲಿಯೋ ಡಿಸೋಜಾ ಹಾಗೂ ಡಾ. ಶಶಿಕಿರಣ್ ನಿವಾಸ್ ಅವರ ಮಾರ್ಗದರ್ಶನದಲ್ಲಿ, ಸುಧೀಕ್ಷಾ ಕಿರಣ್, ಸಚಿನ್ ಪಟವರ್ಧನ್, ಜೇನ್ ಜೇಮ್ಸ್, ಸುಲಕ್ಷಣಾ ಕಾರ್ಕಳ ಅವರನ್ನೊಳಗೊಂಡ ಸಂಶೋಧನಾ ತಂಡ ಈ ವಿಷಯದ ವಿವಿಧ ಆಯಾಮಗಳ ಪರಿಶೀಲನೆ ನಡೆಸುತ್ತಿದೆ.

– ಸಚಿನ್ ಪಟವರ್ಧನ್

TAGGED:MangaluruSabellariaseaStudyಮರಳುಸಬೆಲ್ಲಾರಿಯಾಸಮುದ್ರ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
4 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
7 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
33 minutes ago
Narendra Modi
Latest

ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್ ಸಾಧನೆ ನಿಶ್ಚಿತ: ಪ್ರಧಾನಿ ಮೋದಿ ವಿಶ್ವಾಸ

Public TV
By Public TV
53 minutes ago
PM Modi Shivakumar Shri
Districts

ಕರುಣೆ, ವಿನಯದ ಪ್ರತಿರೂಪವಾಗಿ ನಮ್ಮೆಲ್ಲರ ಸ್ಮರಣೆಯಲ್ಲಿ ಸದಾ ಜೀವಂತ – ಶಿವಕುಮಾರ ಶ್ರೀಗಳಿಗೆ ಮೋದಿ ಭಾವಪೂರ್ಣ ನಮನ

Public TV
By Public TV
1 hour ago
Kalaburagi Khamenei Condolence 1
Districts

ಕಲಬುರಗಿ ಮಹಾನಗರ ಪಾಲಿಕೆ ಬಜೆಟ್‌ಗೂ ಮುನ್ನ ಖಮೇನಿ ಹತ್ಯೆಗೆ ಸಂತಾಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?