ಜೈಪುರ: ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದಲ್ಲಿ ಆಕ್ರಮಣಕಾರಿ ರಾಜಕೀಯ ಪ್ರಾರಂಭವಾಗಿದೆ ಎಂದು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವವು ವಿಭಿನ್ನ ವಿಚಾರಧಾರೆಗಳು ಮತ್ತು ಚಿಂತನೆಯ ಜನರು ತಮ್ಮದೇ ಆದ ಮಾತುಗಳನ್ನು ಮಾತನಾಡುವ ವೇದಿಕೆಯಾಗಿದೆ. ಇಲ್ಲಿ ಯಾರು ಸರಿ ಮತ್ತು ಯಾರು ತಪ್ಪು ಎಂದು ಸಾರ್ವಜನಿಕರು ನಿರ್ಧರಿಸುತ್ತಾರೆ ಎಂದರು.
ನಾವು ಪರಸ್ಪರ ವಿರೋಧಿಸುವುದು ಆರೋಗ್ಯಕರ ಸಂಪ್ರದಾಯವಾಗಿದೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದರೂ ನಾವು ಸುಸಂಸ್ಕೃತ ಭಾಷೆಯನ್ನು ಬಳಸಬೇಕು ಮತ್ತು ರಾಜಕೀಯದಲ್ಲಿ ಹಿಂಸೆಗೆ ಯಾವುದೇ ಸ್ಥಾನವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕೇಸರಿ ಪೇಟ, ಕೇಸರಿ ಶಾಲಿನೊಂದಿಗೆ ಕಾಲೇಜಿಗೆ ಬಂದ ಎಂಜಿಎಂ ವಿದ್ಯಾರ್ಥಿಗಳು!
ರಾಜಸ್ಥಾನದಲ್ಲಿ ಬಾಕಿ ಉಳಿದಿರುವ ರಾಜಕೀಯ ನೇಮಕಾತಿಗಳ ಕುರಿತು ಮಾತನಾಡಿದ ಅವರು, ಎಲ್ಲರಿಗೂ ಮಂತ್ರಿ ಅಥವಾ ಇತರ ದೊಡ್ಡ ಹುದ್ದೆಯನ್ನು ನೀಡಲಾಗುವುದಿಲ್ಲ. ಆದರೆ ಸರ್ಕಾರದಲ್ಲಿ ಅವರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಬಡವರಿಗೆ ಸಹಾಯ ಮಾಡಬಾರದೇ?- ಮೋದಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ
ಇತ್ತೀಚೆಗಿನ ಎರಡು-ಮೂರು ತಿಂಗಳಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಸರಿಯಾದ ದಿಕ್ಕಿನಲ್ಲಿ ಕೆಲವು ಹೆಜ್ಜೆಗಳನ್ನು ಇಟ್ಟಿದ್ದು, 2023ರಲ್ಲಿ ವಿಧಾನಸಭಾ ಚುನಾವಣೆ ನಡೆದಾಗ ಮತ್ತೆ ಕಾಂಗ್ರೆಸ್ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದರು.