ಮಡಿಕೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಷ್ಟ್ರಧ್ವಜದಲ್ಲಿ ಕೇಸರಿ, ಬಿಳಿ, ಹಸಿರು ಬಣ್ಣಗಳಿವೆ ಎಂದು ಗೊತ್ತಿಲ್ಲ. ಅದರ ಬದಲು ಕೆಂಪು ಬಣ್ಣ ಎಂದು ಹೇಳುತ್ತಾರೆ ಎಂದು ಶಿಕ್ಷಣ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಟೀಕಿಸಿದರು.
ಸಿದ್ದರಾಮಯ್ಯ ಅವರ ಹೇಳಿಕೆಯನ್ನು ವಿರೋಧಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಅಮೃತ ಮಹೋತ್ಸವ, ಕಾಲ್ನಡಿಗೆ ಜಾಥಾ ಮಾಡುತ್ತಿರುವ ವಿಚಾರದ ಹಿನ್ನೆಲೆ ಕಾಂಗ್ರೆಸ್ನವರು ಇದನ್ನು ಮಾಡುತ್ತಿದ್ದಾರೆ ಎನ್ನುವುದು ಒಳ್ಳೆಯ ಬೆಳವಣಿಗೆ. ಆದರೆ ಸಿದ್ದರಾಮಯ್ಯ ಅವರಿಗೆ ಇದುವರೆಗೆ ಧ್ವಜದಲ್ಲಿ ಯಾವ ಬಣ್ಣಗಳಿವೆ ಎನ್ನುವುದೇ ಗೊತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೆಂಪು, ಬಿಳಿ, ಹಸಿರು ಎಂದು ಬಾವುಟದ ಬಣ್ಣ ತಪ್ಪಾಗಿ ಹೇಳಿದ ಸಿದ್ದರಾಮಯ್ಯ
ಧ್ವಜದ ಬಣ್ಣ ಕೆಂಪು ಎನ್ನುತ್ತಾರೆ. ಅವರ ಮಾತುಗಳನ್ನು ಕೇಳಿ ನನಗೆ ದುಃಖವಾಯಿತು. ಹಾಗಾದರೆ ಕಾಂಗ್ರೆಸ್ನವರು ಇಷ್ಟು ವರ್ಷ ಧ್ವಜವನ್ನೇ ನೋಡಲಿಲ್ಲವೆ? ಎಂದು ಲೇವಡಿ ಮಾಡಿದರು.