Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕಿಸ್ತಾನದೊಳಗೆ ಸೇರಿದ್ದ ಬಾಲಕಿಯನ್ನು ಕರೆತಂದ ಮಾತೃಹೃದಯಿ ಸುಷ್ಮಾ- ಡಿವಿಎಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಾಕಿಸ್ತಾನದೊಳಗೆ ಸೇರಿದ್ದ ಬಾಲಕಿಯನ್ನು ಕರೆತಂದ ಮಾತೃಹೃದಯಿ ಸುಷ್ಮಾ- ಡಿವಿಎಸ್

Bengaluru City

ಪಾಕಿಸ್ತಾನದೊಳಗೆ ಸೇರಿದ್ದ ಬಾಲಕಿಯನ್ನು ಕರೆತಂದ ಮಾತೃಹೃದಯಿ ಸುಷ್ಮಾ- ಡಿವಿಎಸ್

Public TV
Last updated: August 7, 2019 9:28 am
Public TV
Share
2 Min Read
sushma dvs
SHARE

– ಸುಷ್ಮಾರ ಸಾಧನೆಯನ್ನು ನೆನಪಿಸಿಕೊಂಡು ಸಂತಾಪ

ಬೆಂಗಳೂರು: ಕೇಂದ್ರ ರಾಸಾಯನಿಕ ಮತ್ತು ರಸ ಗೊಬ್ಬರ ಸಚಿವ ಡಿ.ವಿ ಸದಾನಂದ ಗೌಡ ಅವರು ಕೇಂದ್ರದ ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಕ್ಷಕ್ಕೆ ಹಾಗೂ ದೇಶಕ್ಕೆ ನೀಡಿರುವ ಕೊಡುಗೆಯನ್ನು ನೆನೆದು ಸಂತಾಪ ಸೂಚಿಸಿದ್ದಾರೆ.

ಸುಷ್ಮಾ ಸ್ವರಾಜ್ ಅವರ ಮಂಗಳವಾರ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದು, ಎಲ್ಲಾ ರಾಜಕಾರಣಿಗಳು ಹಾಗೂ ದೇಶದ ಜನತೆ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸುತ್ತಿದ್ದಾರೆ. ರಾಜಕಾರಣದಲ್ಲಿ ಸುಷ್ಮಾ ಅವರ ಸಾಧನೆ, ಸಹೋದರಿಯಾಗಿ ತಮ್ಮೊಂದಿಗೆ ಇದ್ದ ನೆನಪುಗಳನ್ನು ನೆನೆದು ಸದಾನಂದ ಗೌಡ ಅವರು ಸರಣಿ ಟ್ವೀಟ್ ಮಾಡಿ ದುಃಖಿಸಿದ್ದಾರೆ.

ನಮ್ಮದೇಶ ಕಂಡ ಪ್ರತಿಭಾವಂತ ಮಹಿಳಾ ರಾಜಕಾರಣಿಗಳಲ್ಲಿ ಸುಷ್ಮಾರ ಹೆಸರು ಅಗ್ರ ಸ್ಥಾನದಲ್ಲಿದೆ. ಅವರ ವಾಕ್ ಚಾತುರ್ಯ, ವಿಚಾರ ವಿಮರ್ಶೆ. ಬುದ್ದಿವಂತಿಕೆ. ದೈವ ಭಕ್ತಿ . ಸರಳ ಜೀವನ. ಎಲ್ಲವೂ ಅನುಕರಣೀಯ. ರಾಜಕೀಯವಾಗಿ ಅನೇಕ ಸ್ಥಾನ ಮಾನ ಪಡೆದ ಅವರು ವಿದೇಶಾಂಗ ಸಚಿವೆಯಾಗಿ ಸಲ್ಲಿಸಿದ ಸೇವೆ ಜನ ಮಾನಸದಲ್ಲಿ ಸ್ಥಿರ ಸ್ಥಾಯಿಯಾಗಿ ನಿಲ್ಲುವಂತದ್ದು.1/5

— Sadananda Gowda (@DVSadanandGowda) August 7, 2019

ಟ್ವೀಟ್‍ನಲ್ಲಿ ಏನಿದೆ?
ನಮ್ಮ ದೇಶ ಕಂಡ ಪ್ರತಿಭಾವಂತ ಮಹಿಳಾ ರಾಜಕಾರಣಿಗಳಲ್ಲಿ ಸುಷ್ಮಾರ ಹೆಸರು ಅಗ್ರ ಸ್ಥಾನದಲ್ಲಿದೆ. ಅವರ ವಾಕ್ ಚಾತುರ್ಯ, ವಿಚಾರ ವಿಮರ್ಶೆ, ಬುದ್ಧಿವಂತಿಕೆ, ದೈವ ಭಕ್ತಿ, ಸರಳ ಜೀವನ, ಎಲ್ಲವೂ ಅನುಕರಣೀಯ. ರಾಜಕೀಯವಾಗಿ ಅನೇಕ ಸ್ಥಾನ ಮಾನ ಪಡೆದ ಅವರು ವಿದೇಶಾಂಗ ಸಚಿವೆಯಾಗಿ ಸಲ್ಲಿಸಿದ ಸೇವೆ ಜನ ಮಾನಸದಲ್ಲಿ ಸ್ಥಿರ ಸ್ಥಾಯಿಯಾಗಿ ನಿಲ್ಲುವಂತದ್ದಾಗಿದೆ.

ಸುಷ್ಮಾರವರನ್ನು ಕರ್ನಾಟಕ ರಾಜಕೀಯಕ್ಕೆ ಕರೆತರುವಲ್ಲಿ ತೋರಿಸಿದ ಆಸ್ಥೆ ಅವರನ್ನು ಕನ್ನಡಿಗರ ಇನ್ನಷ್ಟು ಹತ್ತಿರ ಬರುವಂತೆ ಮಾಡಿತು . ನಮ್ಮೆಲ್ಲರ ಸಹೋದರಿಯಾಗಿ ಚಿರಕಾಲ ನಿಲ್ಲುವಂತೆ ಆಯಿತು.
ಅಮ್ಮಾ ನಿಮ್ಮ ದೇಹ ಇಲ್ಲಿ ಇಲ್ಲದೇ ಇರಬಹುದು ನೀವು ಬಿಟ್ಟು ಹೋದ ಆದರ್ಶಗಳು ಮುಂದಿನ ಪೀಳಿಗೆಯ ಜನತೆಗೆ ದಾರಿದೀಪ.
ಅಮ್ಮ ಇದೇ ನನ್ನ ನಮನ 🙏🙏 4/5

— Sadananda Gowda (@DVSadanandGowda) August 7, 2019

ನನ್ನ ರಾಜಕೀಯ ಜೀವನದಲ್ಲಿ ಅವರನ್ನು ತುಂಬಾ ಸಮೀಪದಿಂದ ಬಲ್ಲೆ. ತಾವು ನಂಬಿಕೊಂಡಿದ್ದ ಸಿದ್ಧಾಂತದಲ್ಲಿ ಎಂದಿಗೂ ರಾಜಿ ಮಾಡಿ ಕೊಂಡವರಲ್ಲ. ಸಾಮಾನ್ಯರ ಸಂಕಷ್ಟಕ್ಕೆ ಅವರು ಸ್ಪಂದಿಸುತ್ತಿದ್ದ ರೀತಿ, ಭಾರತದಿಂದ ತನಗರಿವಿಲ್ಲದೆ ಪಾಕಿಸ್ತಾನಕ್ಕೆ ಹೋಗಿ ಸೇರಿದ್ದ ಕಿವುಡ ಮತ್ತು ಮೂಗ ಬಾಲಕಿ ಗೀತಾಳನ್ನು ಮತ್ತೆ ನಮ್ಮ ದೇಶಕ್ಕೆ ಕರೆ ತರುವಲ್ಲಿ ತೋರಿಸಿದ ಮಾತೃ ಹೃದಯ, ಎಲ್ಲವೂ ನೆನಪಿನಂಗಳದಿಂದ ಎದ್ದು ನಿಲ್ಲುತ್ತಿವೆ.

ನನ್ನ ರಾಜಕೀಯ ಜೀವನದಲ್ಲಿ ಅವರನ್ನು ತುಂಬಾ ಸಮೀಪದಿಂದ ಬಲ್ಲೆ.ತಾವು ನಂಬಿಕೊಂಡಿದ್ದ ಸಿದ್ಧಾಂತದಲ್ಲಿ ಎಂದಿಗೂ ರಾಜಿ ಮಾಡಿ ಕೊಂಡವರಲ್ಲ.ಸಾಮಾನ್ಯರ ಸಂಕಷ್ಟಕ್ಕೆ ಅವರು ಸ್ಪಂದಿಸುತ್ತಿದ್ದ ರೀತಿ,ಭಾರತದಿಂದ ತನಗರಿವಿಲ್ಲದೆ ಪಾಕಿಸ್ತಾನಕ್ಕೆ ಹೋಗಿ ಸೇರಿದ್ದ ಕಿವುಡ ಮತ್ತು ಮೂಕಿ ಬಾಲಕಿ ಗೀತಾಳನ್ನು ಮತ್ತೆ ನಮ್ಮ ದೇಶಕ್ಕೆ ಕರೆ ತರುವಲ್ಲಿ ತೋರಿಸಿದ2/5

— Sadananda Gowda (@DVSadanandGowda) August 7, 2019

ದೇಶ ಕಂಡ ತುರ್ತು ಪರಿಸ್ಥಿತಿಯಲ್ಲಿ ಅವರು ಸಿಡಿದ್ದೆದ್ದ ರೀತಿ, ತಮ್ಮ ಕಿರಿಯ ವಯಸ್ಸಿನಲ್ಲೇ ಹರಿಯಾಣದ ಸಂಪುಟ ದರ್ಜೆ ಸಚಿವರಾಗಿ, ಮೊದಲ ಮಹಿಳಾ ವಕ್ತಾರರಾಗಿ, ದೆಹಲಿಯ ಮುಖ್ಯಮಂತ್ರಿಯಾಗಿ ಎಲ್ಲವೂ ಸಾಧನೆಯ ಪುಟಗಳಲ್ಲಿ ಸೇರಬೇಕಾದವು.

ಈಗ ಮತ್ತೊಮ್ಮೆ ಅನಂತ ಕುಮಾರ್ ನೆನಪಾಗುತ್ತಿದ್ದಾರೆ. ಸುಷ್ಮಾರವರನ್ನು ಕರ್ನಾಟಕ ರಾಜಕೀಯಕ್ಕೆ ಕರೆತರುವಲ್ಲಿ ತೋರಿಸಿದ ಆಸ್ಥೆ ಅವರನ್ನು ಕನ್ನಡಿಗರ ಇನ್ನಷ್ಟು ಹತ್ತಿರ ಬರುವಂತೆ ಮಾಡಿತು. ನಮ್ಮೆಲ್ಲರ ಸಹೋದರಿಯಾಗಿ ಚಿರಕಾಲ ನಿಲ್ಲುವಂತೆ ಆಯಿತು. ಅಮ್ಮಾ ನಿಮ್ಮ ದೇಹ ಇಲ್ಲಿ ಇಲ್ಲದೇ ಇರಬಹುದು. ನೀವು ಬಿಟ್ಟು ಹೋದ ಆದರ್ಶಗಳು ಮುಂದಿನ ಪೀಳಿಗೆಯ ಜನತೆಗೆ ದಾರಿದೀಪ. ಅಮ್ಮ ಇದೇ ನನ್ನ ನಮನ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

ಮಾತೃಹೃದಯ,ಎಲ್ಲವೂ ನೆನಪಿನಂಗಳದಿಂದ ಎದ್ದು ನಿಲ್ಲುತ್ತಿವೆ.ದೇಶ ಕಂಡ ತುರ್ತು ಪರಿಸ್ಥಿತಿಯಲ್ಲಿ ಅವರು ಸಿಡಿದ್ದೆದ್ದ ರೀತಿ,ತಮ್ಮ ಕಿರಿ ವಯಸ್ಸಿನಲ್ಲೇ ಹರಿಯಾಣದ ಸಂಪುಟ ದರ್ಜೆ ಸಚಿವರಾಗಿ,ಮೊದಲ ಮಹಿಳಾ ವಕ್ತಾರರಾಗಿ,ದೆಹಲಿಯ ಮುಖ್ಯಮಂತ್ರಿಯಾಗಿ ಎಲ್ಲವೂ ಸಾಧನೆಯ ಪುಟಗಳಲ್ಲಿ ಸೇರಬೇಕಾದವು.ಈಗ ಮತ್ತೊಮ್ಮೆ ಅನಂತ್ ಕುಮಾರ್ ನೆನಪಾಗುತ್ತಿದ್ದಾರೆ.3/5

— Sadananda Gowda (@DVSadanandGowda) August 7, 2019

ಮಂಗಳವಾರ ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿರುವ ಸುಷ್ಮಾ ಸ್ವರಾಜ್(67) ಅವರ ಪಾರ್ಥಿವ ಶರೀರವನ್ನು ಜನಪತ್ ರಸ್ತೆಯ ಧವನ್ ದೀಪ್ ಕಟ್ಟಡದ ನಿವಾಸದಲ್ಲಿ ಇರಿಸಲಾಗಿದೆ. ಇಂದು ಬೆಳಗ್ಗೆ 8ರಿಂದ 11 ಗಂಟೆವರೆಗೆ ಜಂತರ್ ಮಂತರ್‍ನಲ್ಲಿ ನಂತರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2:30ರ ವರೆಗೆ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುವುದು. ಆ ಬಳಿಕ 3 ಗಂಟೆಗೆ ಲೋಧಿ ರಸ್ತೆಯ ಶವಾಗಾರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

https://www.youtube.com/watch?v=uGE9Fw-zTrg

TAGGED:bengaluruCondolencesD.V.Sadananda GowdaPublic TVSushma swarajtweetಟ್ವೀಟ್ಡಿ.ವಿ.ಸದಾನಂದ ಗೌಡಪಬ್ಲಿಕ್ ಟಿವಿಬೆಂಗಳೂರುಸಂತಾಪಸುಷ್ಮಾ ಸ್ವರಾಜ್
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 hour ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
1 hour ago
01 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-1

Public TV
By Public TV
2 hours ago
03 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-2

Public TV
By Public TV
2 hours ago
02 2
Big Bulletin

ಬಿಗ್‌ ಬುಲೆಟಿನ್‌ 3 April 2026 ಭಾಗ-3

Public TV
By Public TV
2 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?