Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಗೋಡ್ಸೆ ದೇಶಭಕ್ತ ಎಂದಿದ್ದಕ್ಕೆ ಕ್ಷಮೆ ಕೇಳಿದ ಸಾಧ್ವಿ ಪ್ರಜ್ಞಾ

Public TV
Last updated: November 29, 2019 3:39 pm
Public TV
Share
2 Min Read
sadhvi pragya 1560775767
SHARE

– ರಾಹುಲ್ ಕ್ಷಮೆಯಾಚಿಸುವಂತೆ ಬಿಜೆಪಿ ಪಟ್ಟು

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನು ಕೊಂದ ನಾಥೂರಾಮ್ ಗೋಡ್ಸೆ ಒಬ್ಬ ದೇಶ ಭಕ್ತ ಎಂದು ಹೇಳಿ ವಿವಾದ ಸೃಷ್ಟಿ ಮಾಡಿದ್ದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಅವರು ಕ್ಷಮೆಯಾಚಿಸಿದ್ದಾರೆ.

ಬುಧವಾರ ಲೋಕಸಭೆಯಲ್ಲಿ ಮಾತನಾಡಿದ್ದ ಸಾಧ್ವಿ ಪ್ರಜ್ಞಾ ನಾಥುರಾಮ್ ಗೋಡ್ಸೆ ಓರ್ವ ದೇಶಭಕ್ತ ಎಂದು ಹೇಳಿದ್ದರು. ಈ ಹೇಳಿಕೆಯಿಂದ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ಮಾಡಿ ವಿರೋಧ ವ್ಯಕ್ತಪಡಿಸಿದ್ದವು. ಅಲ್ಲದೇ ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಸಾಧ್ವಿ ಪ್ರಜ್ಞಾ ಟೆರರಿಸ್ಟ್ ಪ್ರಜ್ಞಾ ಅವರು ಟೆರರಿಸ್ಟ್ ಗೋಡ್ಸೆಯನ್ನು ದೇಶಭಕ್ತ ಎಂದು ಕರೆದಿದ್ದಾರೆ ಎಂದು ಕಿಡಿಕಾರಿದ್ದರು.

BJP MP Pragya Thakur in Lok Sabha: On 27 Nov, during discussion on Special Protection Group (Amendment) Bill, 2019, I did not call Nathuram Godse a 'deshbhakt'. I did not even mention his name. I apologise again if I have hurt any sentiments. pic.twitter.com/FJvtJ5JS3S

— ANI (@ANI) November 29, 2019

ಈ ಹೇಳಿಕೆ ವಿಚಾರವಾಗಿ ಸ್ವಪಕ್ಷ ಬಿಜೆಪಿ ಕೂಡ ಸಾಧ್ವಿ ಪ್ರಜ್ಞಾಗೆ ತಪರಾಕಿ ಹಾಕಿ ಕ್ಷಮೆ ಕೋರುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಸತ್ತಿನಲ್ಲಿ ಮಾತನಾಡಿದ ಸಾಧ್ವಿ ಪ್ರಜ್ಞಾ, ನನ್ನ ಹೇಳಿಕೆಯಿಂದ ಯಾರಿಗಾದರು ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ. ಆದರೆ ನಾನು ಸಂಸತ್ತಿನಲ್ಲಿ ಹೇಳಿದ ಹೇಳಿಕೆಯನ್ನು ತಿರುಚಿ ಅದಕ್ಕೆ ಬೇರೆ ರೂಪ ನೀಡಿದ್ದಾರೆ. ನಾನು ಗಾಂಧೀಜಿ ಅವರು ದೇಶಕ್ಕಾಗಿ ಮಾಡಿರುವ ತ್ಯಾಗವನ್ನು ಗೌರವಿಸುತ್ತೇನೆ ಎಂದು ಹೇಳಿದ್ದಾರೆ.

ಈ ಸಂಸತ್ತಿನ ಒಬ್ಬ ಸದಸ್ಯರು ನನ್ನನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ. ಅದು ನನ್ನ ಘನತೆಗೆ ಮತ್ತು ವ್ಯಕ್ತಿತ್ವಕ್ಕೆ ಧಕ್ಕೆ ತಂದಿದೆ. ನನ್ನ ವಿರುದ್ಧ ನ್ಯಾಯಾಲಯದಲ್ಲಿ ಯಾವುದೇ ಆರೋಪಗಳು ಸಾಬೀತಾಗದೆ ಇದ್ದರೂ ಅವರು ಹೀಗೆ ಹೇಳಿರುವುದು ಒಬ್ಬ ಮಹಿಳಾ ಸಂಸದೆ ಮತ್ತು ಸನ್ಯಾಸಿಗೆ ಮಾಡಿರುವ ಅವಮಾನ ಎಂದು ಹೇಳುವ ಮೂಲಕ ರಾಹುಲ್ ಗಾಂಧಿ ಮೇಲೆ ವಾಗ್ದಾಳಿ ಮಾಡಿದರು.

Sadhvi Pragya

ಇದರ ಜೊತೆಗೆ ಸಾಧ್ವಿ ಪ್ರಜ್ಞಾ ಅವರು ಈ ರಾಷ್ಟ್ರಕ್ಕಾಗಿ ಗಾಂಧೀಜಿ ಅವರ ಕೊಡುಗೆಯನ್ನು ನಾನು ಶ್ಲಾಘಿಸುತ್ತೇನೆ. ಒಂದು ಪಕ್ಷ ನನ್ನನ್ನು ಗುರಿಯಾಗಿಸಿಕೊಂಡು ನನಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಮೇಲೆ ಗಂಭೀರ ಆರೋಪ ಮಾಡಿದರು.

ಈ ಆರೋಪದ ನಂತರ ಲೋಕಸಭೆಯಲ್ಲಿ ಕೆಲಕಾಲ ಕಾಂಗ್ರೆಸ್ ಸಂಸದರು ಸಾಧ್ವಿ ಪ್ರಜ್ಞಾ ವಿರುದ್ಧ ಘೋಷಣೆ ಕೂಗಿದರು. ಈ ವೇಳೆ ಮಾತನಾಡಿದ ಬಿಜೆಪಿ ಸಂಸದ ನಿಷ್ಕಾಂತ್ ದುಬೆ, ಈಗ ಸಾಧ್ವಿ ಪ್ರಜ್ಞಾ ಅವರು ಕ್ಷಮೆ ಕೇಳಿದ್ದಾರೆ. ಆದರೆ ಒಬ್ಬ ಸಂಸದೆಯನ್ನು ಟೆರರಿಸ್ಟ್ ಎಂದು ಹೇಳಿದ ರಾಹುಲ್ ಗಾಂಧಿ ಅವರು ಕ್ಷಮೆ ಕೇಳಬೇಕು. ಇಲ್ಲವಾದರೆ ಸ್ಪೀಕರ್ ಅವರ ಅವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಅಗ್ರಹಿಸಿದರು.

ಏನಿದು ವಿವಾದ?
ಬುಧವಾರ ಸಂಸತಿನಲ್ಲಿ ಡಿಎಂಕೆ ಸಂಸದ ಎ.ರಾಜಾ ಅವರು ವಿಶೇಷ ಭದ್ರತಾ ಪಡೆ (ಎಸ್‍ಪಿಜಿ) ತಿದ್ದುಪಡಿ ಮಸೂದೆಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಗೋಡ್ಸೆ ಮಹಾತ್ಮಾ ಗಾಂಧಿಯವರನ್ನು ಏಕೆ ಕೊಲೆ ಮಾಡಿದರು ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಸಾಧ್ವಿ ಪ್ರಜ್ಞಾ ಸಿಂಗ್ ಮಧ್ಯೆ ಪ್ರವೇಶಿಸಿ, ದೇಶಭಕ್ತನ ಉದಾಹರಣೆಯನ್ನು ನೀವು ಈ ಸಂದರ್ಭದಲ್ಲಿ ಕೊಡಬೇಡಿ ಎಂದು ಕಿಡಿಕಾರಿದ್ದರು.

A Raja, DMK on reports of BJP's Pragya Thakur referring to Nathuram Godse as 'deshbhakt' in Lok Sabha: When I said Nathuram Godse who committed a brutal act of killing Gandhi, Sadhvi Pragya stood & said that he was a nationalist. It is condemnable. pic.twitter.com/377dAjPVgd

— ANI (@ANI) November 27, 2019

ಇದನ್ನು ಸ್ವತಃ ಗೋಡ್ಸೆ ಒಪ್ಪಿಕೊಂಡಿದ್ದಾರೆ. 32 ವರ್ಷಗಳಿಂದ ಗಾಂಧಿ ಮೇಲೆ ದ್ವೇಷ ಇತ್ತು ಹೀಗಾಗಿ ಹತ್ಯೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಮಹಾತ್ಮಾ ಗಾಂಧಿಯವರ ವಿಚಾರಧಾರೆಗಳು ಪ್ರತ್ಯೇಕವಾಗಿದ್ದರಿಂದ ಗೋಡ್ಸೆ ಅವರನ್ನು ಹತ್ಯೆ ಮಾಡಿದ ಎಂದು ರಾಜಾ ಅವರು ಲೋಕಸಭೆಯ ಕಲಾಪದಲ್ಲಿ ತಿಳಿಸಿದ್ದರು. ರಾಜಾ ಅವರು ಮಾತನಾಡುತ್ತಿದ್ದ ವೇಳೆ ಸಾಧ್ವಿ ಪ್ರಜ್ಞಾ ಸಿಂಗ್ ಮಧ್ಯ ಪ್ರವೇಶಿಸಿದ್ದಕ್ಕೆ ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆ ನಡೆಸಲು ಪ್ರಾರಂಭಿಸಿದರು. ಆಗ ಬಿಜೆಪಿ ಸಂಸದರು ಸಾಧ್ವಿಯವರಿಗೆ ಕುಳಿತುಕೊಳ್ಳುವಂತೆ ಸೂಚಿಸಿದ್ದರು.

TAGGED:apologyGandhijiNathuram GodseNew DelhiPatriotPublic TVSadhvi Pragyaಕ್ಷೆಮೆಗಾಂಧೀಜಿದೇಶಭಕ್ತನವದೆಹಲಿನಾಥೂರಾಮ್ ಗೋಡ್ಸೆಪಬ್ಲಿಕ್ ಟಿವಿಸಾಧ್ವಿ ಪ್ರಜ್ಞಾ
Share This Article
Facebook Whatsapp Whatsapp Telegram

You Might Also Like

Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
37 seconds ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
5 minutes ago
Koppal nava brindavana
Districts

ರಘುವರ್ಯ ತೀರ್ಥರ ಮಧ್ಯಾರಾಧನೆ ಮಹೋತ್ಸವ ಸಂಪನ್ನ

Public TV
By Public TV
22 minutes ago
WTC SA 3
Cricket

ದ. ಆಫ್ರಿಕಾ ಈಗ ʻವಿಶ್ವ ಟೆಸ್ಟ್‌ ಚಾಂಪಿಯನ್‌ʼ – 27 ವರ್ಷಗಳ ಬಳಿಕ ಐಸಿಸಿ ಪ್ರಶಸ್ತಿ ಬರ ನೀಗಿಸಿಕೊಂಡ ಹರಿಣರು

Public TV
By Public TV
27 minutes ago
Chikkodi Crime
Belgaum

ಅಣ್ಣ ಶ್ರೀಮಂತ ಆಗ್ಬಿಟ್ಟ ಅಂತ ತಮ್ಮ ಮಾಡಿದ್ದೆಂತ ನೀಚ ಕೆಲ್ಸ ಗೊತ್ತಾ? – ಹಂತಕ ಸಿಕ್ಕಿಬಿದ್ದಿದ್ದೇ ರೋಚಕ!

Public TV
By Public TV
30 minutes ago
Untitled 1 copy
Latest

11A ಸೀಟ್ ಮಿಸ್ಟರಿ – 2 ವಿಮಾನ ಪತನ, ಒಂದೇ ಕಡೆ ಕುಳಿತಿದ್ದ ಇಬ್ಬರು ಮೃತ್ಯುಂಜಯರು!

Public TV
By Public TV
58 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?