ಇಂದು ಬಂಡೀಪುರದಲ್ಲಿ ಪ್ರವಾಸಿಗರಿಗೆ ಸಫಾರಿ ಬಂದ್

Public TV
1 Min Read
cng bandipura 2

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಹುಲಿಸಂರಕ್ಷಿತಾರಣ್ಯ ಬಂಡೀಪುರದಲ್ಲಿ (Bandipura) ಇಂದು (ಬುಧವಾರ) ಒಂದು ದಿನದ ಮಟ್ಟಿಗೆ ಸಫಾರಿ ಬಂದ್ ಮಾಡಲಾಗಿದೆ.

ಇಂದು (ಸೆ.20) ಸಫಾರಿ ಪಾಯಿಂಟ್ ಮೇಲುಕಾಮನಹಳ್ಳಿಯಲ್ಲಿ ಬಂಡೀಪುರದ ಅರಣ್ಯ ಮುಂಚೂಣಿ ಸಿಬ್ಬಂದಿಗಳ ದಿನಾಚರಣೆ ಆಚರಿಸಲಾಗುತ್ತಿದೆ. ಆ ಹಿನ್ನೆಲೆ ಬಂಡೀಪುರದ ಅರಣ್ಯ ಸಿಬ್ಬಂದಿ ಸೇವೆ, ಸಾಧನೆ ಸ್ಮರಿಸಿ ಗೌರವ ಸಲ್ಲಿಕೆ ಮಾಡಲಾಗುತ್ತದೆ. ಇದನ್ನೂ ಓದಿ: ಹಾಲಶ್ರೀ ಬಂಧಿಸಲು ಅರ್ಚಕರ ವೇಷದಲ್ಲಿ ಫೀಲ್ಡ್‌ಗಿಳಿದಿದ್ದ ಅಧಿಕಾರಿಗಳು!

ಈ ವೇಳೆ ಬಂಡೀಪುರದ ಬಹುತೇಕ ಎಲ್ಲಾ ಸಿಬ್ಬಂದಿ ಕೂಡ ಪಾಲ್ಗೊಳ್ಳುತ್ತಾರೆ. ಅರಣ್ಯ ಸಿಬ್ಬಂದಿಗಳಿಗೆ ಮೊದಲ ಬಾರಿಗೆ ಗೌರವ ಕೊಡಲು ಇಂತಹ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಹೀಗಾಗಿ ಪ್ರವಾಸಿಗರಿಗೆ ಸಫಾರಿ ಬಂದ್ ಮಾಡಿರುವ ಕುರಿತು ಬಂಡೀಪುರ ಹುಲಿಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಮಾಹಿತಿ ಕೊಟ್ಟಿದ್ದಾರೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article