Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

Bengaluru City

ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

Public TV
Last updated: June 18, 2025 9:34 pm
Public TV
Share
2 Min Read
safari EV bus
SHARE

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ದೇಶದ ಪ್ರಥಮ ವಿದ್ಯುತ್ ಚಾಲಿತ ಸಫಾರಿ ಬಸ್‌ನ ಪ್ರಾಯೋಗಿಕ ಸಂಚಾರಕ್ಕೆ ವಿಕಾಸಸೌಧದಿಂದ ವರ್ಚುವಲ್ ಮೂಲಕ ಚಾಲನೆ ನೀಡಲಾಯಿತು.

ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮಾತನಾಡಿ, ಮುಂದಿನ 4-5 ತಿಂಗಳಲ್ಲಿ ಹಂಟಿಂಗ್ ಚೀತಾ, ಕ್ಯಾಪಚಿನ್ ಕೋತಿಯನ್ನು ದಕ್ಷಿಣ ಅಮೆರಿಕದಿಂದ ವಿನಿಮಯ ಮಾಡಿಕೊಳ್ಳಲಾಗುವುದು. ಮುಂದಿನ ವರ್ಷ ಚಿಂಪಾಂಜಿ, ಜಾಗ್ವಾರ್, ಪೂಮಾ (ಉತ್ತರ ಅಮೆರಿಕ ಸಿಂಹ) ಸೇರಿದಂತೆ ಒಟ್ಟು 10 ವಿದೇಶಿ ವನ್ಯಜೀವಿಗಳು ಬನ್ನೇರುಘಟ್ಟಕ್ಕೆ ಆಗಮಿಸಲಿವೆ ಎಂದು ತಿಳಿಸಿದರು.

safari EV bus 1

ಬನ್ನೇರುಘಟ್ಟದಲ್ಲಿ ಸೀಮಿತ ಆವರಣ ಪ್ರದೇಶದೊಳಗೆ ರೂಪಿಸಿರುವ ವನ್ಯಜೀವಿ ಸಫಾರಿಯಲ್ಲಿ ಹುಲಿ, ಚಿರತೆ, ಸಿಂಹ, ಕರಡಿಗಳ ದರ್ಶನ ಪ್ರವಾಸಿಗರಿಗೆ ನಿಶ್ಚಿತವಾಗಿ ಆಗುತ್ತದೆ. ಈ ಸಫಾರಿಗಳಿಗೆ ಪ್ರಸ್ತುತ ಡೀಸೆಲ್ ವಾಹನಗಳನ್ನು ಬಳಸಲಾಗುತ್ತಿದ್ದು, ಈ ವಾಹನಗಳಿಂದ ಹೊರಹೊಮ್ಮುವ ಇಂಗಾಲದ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ದೇಶದಲ್ಲೇ ವಿದ್ಯುತ್ ಚಾಲಿತ ವಾಹನ ಪರಿಚಯಿಸಲಾಗುತ್ತಿದೆ ಎಂದರು.

ಬಸ್‌ ವಿಶೇಷತೆ ಏನು?
ವಿದ್ಯುತ್ ಚಾಲಿತ ಬಸ್, 22 ಆಸನಗಳನ್ನು ಹೊಂದಿದ್ದು, 100 ಕೆ.ವಿ. ಬ್ಯಾಟರಿ ಸಾಮರ್ಥ್ಯದ್ದಾಗಿದೆ. 2 ಗಂಟೆ ಚಾರ್ಜ್ ಮಾಡಿದರೆ 160 ಕಿ.ಮೀ. ಅಂದರೆ 8 ಟ್ರಿಪ್ ಸಂಚರಿಸಲಿದೆ. ಹಾಲಿ ಒಂದು ಬಸ್ ಮಾತ್ರವೇ ಕಾರ್ಯಾರಂಭ ಮಾಡಲಿದ್ದು, 2027 ರೊಳಗೆ ಬನ್ನೇರುಘಟ್ಟ ಉದ್ಯಾನವನ್ನು (ಟ್ರ್ಯಾಕ್ಟರ್‌ ಇತ್ಯಾದಿ ಉಪಯೋಗಿ ವಾಹನ ಹೊರತುಪಡಿಸಿ) ಪಳೆಯುಳಿಕೆ ಇಂಧನ ರಹಿತ ವಾಹನ ವಲಯವಾಗಿ ಪರಿವರ್ತಿಸಲಾಗುವುದು ಎಂದು ತಿಳಿಸಿದರು.

ಬನ್ನೇರುಘಟ್ಟ ಮೃಗಾಲಯ ಮತ್ತು ಸಫಾರಿ ವೀಕ್ಷಣೆಗೆ ವಾರಂತ್ಯದಲ್ಲಿ ಮತ್ತು ಸರ್ಕಾರಿ ರಜಾ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವನ್ಯಜೀವಿ ಪ್ರಿಯರು ಮತ್ತು ಪ್ರವಾಸಿಗರು ಆಗಮಿಸುವ ಕಾರಣ, ಇಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಗಿದೆ. ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಹೇಳಿದರು.

safari EV bus 2

ದಾಖಲೆಯ ಪ್ರವಾಸಿಗರ ಆಗಮನ
ಕಳೆದ ತಿಂಗಳು ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಸುಮಾರು 2,85,000 ಪ್ರವಾಸಿಗರು ಆಗಮಿಸಿದ್ದು, ಇದು ದಾಖಲೆಯಾಗಿದೆ. ಚಿರತೆ ಸಫಾರಿ ಈಗ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದೆ ಎಂದರು. ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಇನ್ನು ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಬೇಟೆ ಚೀತಾ, ಜಾಗ್ವಾರ್ ಸೇರಿದಂತೆ 10 ವಿದೇಶೀ ವನ್ಯಜೀವಿಗಳ ಸೇರ್ಪಡೆ ಆಗಲಿದೆ ಎಂದು ತಿಳಿಸಿದರು.

ಬೃಹತ್ ಮತ್ಯಾಗಾರ ನಿರ್ಮಾಣ
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಕ್ಕೆ ಮತ್ತೊಂದು ಆಕರ್ಷಣೆಯಾಗಿ ಬೃಹತ್ ಮತ್ಸ್ಯಾಗಾರ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ ಟೆಂಡರ್ ಕರೆಯಲಾಗುವುದು. ಬನ್ನೇರುಘಟ್ಟ ಉದ್ಯಾನದ ವ್ಯಾಪ್ತಿಯಲ್ಲಿ 7 ಕೆರೆಗಳಿವೆ. ಜೊತೆಗೆ ಈಗ ಉದ್ಯಾನಕ್ಕೆ ಬರುವ ಪ್ರವಾಸಿಗರಿಗೆ ಹಾಗೂ ಪ್ರಾಣಿಗಳಿಗಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಿಂದಲೂ ನೀರು ಪಡೆಯಲಾಗುತ್ತಿದ್ದು, ಮತ್ಯಾಗಾರಕ್ಕೆ ನೀರಿನ ಕೊರತೆ ಇರುವುದಿಲ್ಲ ಎಂದೂ ತಿಳಿಸಿದರು.

ಜೀಬ್ರಾ ಸಾವಿನ ಬಗ್ಗೆ ತನಿಖೆಗೆ ಆದೇಶ
ಇತ್ತೀಚೆಗೆ ಬನ್ನೇರುಘಟ್ಟ ಉದ್ಯಾನದಲ್ಲಿ ಜೀಬ್ರಾ ಮತ್ತು ನೀಲಗಾಯ್ ಸಾವಿಗೀಡಾಗಿರುವುದು ಅತ್ಯಂತ ನೋವಿನ ಸಂಗತಿ. ಈ ಬಗ್ಗೆ ತನಿಖೆ ಮಾಡಿ ವರದಿ ನೀಡಲು ಸಿಸಿಎಫ್ ಅವರಿಗೆ ತಿಳಿಸಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಇನ್ಮುಂದೆ ಮೃಗಾಲಯದಲ್ಲಿ ಮತ್ತು ಜೈವಿಕವನದಲ್ಲಿ ಯಾವುದೇ ವನ್ಯಜೀವಿ ಅಸಹಜವಾಗಿ ಸಾವನ್ನಪ್ಪದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗ ಗುಲ್ಬರ್ಗಾದಲ್ಲಿ ನೂತನವಾಗಿ ಮೃಗಾಲಯ ನಿರ್ಮಿಸಲಾಗುತ್ತಿದ್ದು, ಬರುವ ಡಿಸೆಂಬರ್ ಹೊತ್ತಿಗೆ ಸಿದ್ಧವಾಗಲಿದೆ ಎಂದರು.

TAGGED:Bannerghatta Biological ParkbengaluruEshwara KhandreSafari EV Busಈಶ್ವರ ಖಂಡ್ರೆಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನಬೆಂಗಳೂರುಸಫಾರಿ ಇವಿ ಬಸ್‌
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

Byrati Basavaraj 1
Bengaluru City

ಇಸಿಜಿಯಲ್ಲಿ ವ್ಯತ್ಯಾಸ – ಶಾಸಕ ಬೈರತಿ ಬಸವರಾಜ್‌ಗೆ ಜಯದೇವದಲ್ಲಿ ಆಂಜಿಯೋಗ್ರಾಂ?

Public TV
By Public TV
3 minutes ago
LOVE LETTER 1
Latest

ಹೂ ಅರಳೋಕೆ ಶುಭ ಅಶುಭಗಳ ಮುಹೂರ್ತವೇ ಇಲ್ಲ..!

Public TV
By Public TV
39 minutes ago
Youngest Organ Donor 2
Latest

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ

Public TV
By Public TV
39 minutes ago
five arrested for trying to sell drugs in hassan
Crime

ಹಾಸನ | ಮಾದಕವಸ್ತು ಸಾಗಾಟ – ಐವರು ವಶಕ್ಕೆ

Public TV
By Public TV
1 hour ago
Shivaratri 2
Districts

ಶಿವರಾತ್ರಿ ಸಂಭ್ರಮಕ್ಕೆ ಅರಮನೆ ಸಜ್ಜು – ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರು ಕಾತರ

Public TV
By Public TV
1 hour ago
Chamarajanagara
Chamarajanagar

16 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಅಪರಾಧಿ ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?