ಚಿಕ್ಕಬಳ್ಳಾಪುರ: ʻಒಂದು ಜಗತ್ತು-ಒಂದು ಕುಟುಂಬʼ (One World- One Family) ಘೋಷ ವಾಕ್ಯದಡಿ ಶ್ರೀ ಸದ್ಗುರು ಮಧುಸೂದನಸಾಯಿ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯ ಬಳಿ ಶ್ರೀ ಸತ್ಯಸಾಯಿ ಗ್ರಾಮದಲ್ಲಿ ಕ್ರಿಕೆಟ್ ದಿಗ್ಗಜರ ಕಾಳಗ ನಡೆಯುತ್ತಿದೆ.
ಸತ್ಯಸಾಯಿ ಗ್ರಾಮದಲ್ಲಿ ನೂತನ ಸಾಯಿಕೃಷ್ಣನ್ ಸ್ಟೇಡಿಯಂ (Sai Krishnan Cricket Stadium) ಲೋಕಾರ್ಪಣೆ ಅಂಗವಾಗಿ ಒಂದು ಜಗತ್ತು ಹಾಗೂ ಒಂದು ಕುಟುಂಬ ಎಂಬ (ಒನ್ ವರ್ಲ್ಡ್-ಒನ್ ಫ್ಯಾಮಿಲಿ ಕಪ್) ಟಿ20 ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ. ಸಾಯಿಕೃಷ್ಣನ್ ಕ್ರೀಡಾಂಗಣವನ್ನು ಸದ್ಗುರು ಮಧುಸೂದನಸಾಯಿ ಜೊತೆ ಸಚಿನ್ ತೆಂಡೂಲ್ಕರ್ (Sachin Tendulkar) ಹಾಗೂ ಯುವರಾಜ್ ಸಿಂಗ್ (Yuvraj Singh) ಲೋಕಾರ್ಪಣೆ ಮಾಡಿದ್ದಾರೆ. ಈ ಟೂರ್ನಿಯಲ್ಲಿ ಕ್ರಿಕೆಟ್ ದೇವರು ಖ್ಯಾತಿಯ ಸಚಿನ್ ತೆಂಡೂಲ್ಕರ್ ಹಾಗೂ ಯುವರಾಜ್ ಸಿಂಗ್ ನಾಯಕತ್ವದಡಿ 8 ದೇಶಗಳ 24 ಮಂದಿ ಆಟಗಾರರು ಟೂರ್ನಿಯಲ್ಲಿ ಭಾಗವಹಿಸಿದ್ದಾರೆ. ಇದನ್ನೂ ಓದಿ: ನಾಯಕನಾಗಿ ಸಿಕ್ಸರ್ಗಳಿಂದಲೇ ಹೊಸ ದಾಖಲೆ – ನಂ.1 ಪಟ್ಟಕ್ಕೇರಿದ ರೋಹಿತ್ ಶರ್ಮಾ
ಟಾಸ್ ಗೆದ್ದ ಒನ್ ವರ್ಲ್ಡ್ ತಂಡದ ನಾಯಕ ಸಚಿನ್ ತೆಂಡೂಲ್ಕರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಯುವರಾಜ್ ಸಿಂಗ್ ನಾಯಕತ್ವದ ಒನ್ ಫ್ಯಾಮಿಲಿ ತಂಡ ಬ್ಯಾಟಿಂಗ್ ನಡೆಸಿತು. ಮೊದಲ ಇನ್ನಿಂಗ್ಸ್ನಲ್ಲಿ ಯುವಿ ನಾಯಕತ್ವದ ಒನ್ ಫ್ಯಾಮಿಲಿ ತಂಡ 20 ಒವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 180 ರನ್ ಗಳನ್ನ ಗಳಿಸಿದೆ. ಸಚಿನ್ ತೆಂಡೂಲ್ಕರ್ ನೇತೃತ್ವದ ಒನ್ ವರ್ಲ್ಡ್ ತಂಡಕ್ಕೆ 181 ರನ್ ಗಳ ಗುರಿ ನೀಡಲಾಗಿದೆ. ಅಂದಹಾಗೆ ವಸುಧೈವ ಕುಟುಂಬಕಂ ಅನ್ನೋ ಮಾತಿಗೆ ಸಾಕ್ಷಿಭೂತವೆಂಬಂತೆ ಭಾರತದ ಸನಾತನ ಸಂಸ್ಕೃತಿಯನ್ನ ಸಾರುವ ವಿಶ್ವಕ್ಕೆ ಮಾನವೀಯತೆಯ ಸಂದೇಶ ಸಾರುವ ಸಲುವಾಗಿ ಈ ಒಂದು ಟೂರ್ನಿಯನ್ನ ಆಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 2 ಸೂಪರ್ ಓವರ್ ಥ್ರಿಲ್ಲರ್ – ಟೀಂ ಇಂಡಿಯಾಗೆ ರೋಚಕ ಗೆಲುವು
ಒನ್ ಫ್ಯಾಮಿಲಿ ತಂಡದ ಸ್ಕೋರ್ ಕಾರ್ಡ್: ಡ್ಯಾರೆನ್ ಮ್ಯಾಡಿ 51 ರನ್ (41 ಎಸೆತ, 8 ಬೌಂಡರಿ), ರೋಮೇಶ್ ಕಲುವಿತಾರಣ 22 ರನ್ (15 ಎಸೆತ, 4 ಬೌಂಡರಿ), ಮೊಹಮ್ಮದ್ ಕೈಫ್ 9 ರನ್, ಪಾರ್ಥಿವ್ ಪಟೇಲ್ 19 ರನ್ (13 ಎಸೆತ, 3 ಬೌಂಡರಿ), ಯೂಸುಫ್ ಪಠಾಣ್ 38 ರನ್ (23, 4 ಸಿಕ್ಸರ್, 1 ಬೌಂಡರಿ), ಯುವರಾಜ್ ಸಿಂಗ್ 23 ರನ್ (10 ಎಸೆತ, 2 ಸಿಕ್ಸರ್, 2 ಬೌಂಡರಿ), ಜೇಸನ್ ಕ್ರೆಜ್ಜಾ 2 ರನ್ ಹಾಗೂ ಅಲೋಕ್ ಕಪಾಲಿ 1 ರನ್ ಗಳಿಸಿದ್ರೆ, ಹೆಚ್ಚುವರಿ 15 ರನ್ ತಂಡಕ್ಕೆ ಸೇರ್ಪಡೆಯಾಯಿತು. ಇದನ್ನೂ ಓದಿ: ರೋಹಿತ್ ಶತಕ, ರಿಂಕು ಹಾಫ್ ಸೆಂಚುರಿ, ವಿರಾಟ್ ಕೊಹ್ಲಿ 0- ಆಫ್ಘನ್ಗೆ 213 ರನ್ ಟಾರ್ಗೆಟ್