ದಕ್ಷಿಣದ ಖ್ಯಾತ ತಾರೆ ಸಾಯಿ ಪಲ್ಲವಿ (Sai Pallavi) ದೈವಭಕ್ತೆ. ಬಿಡುವಿನ ಸಮಯದಲ್ಲಿ ಅವರು ದೇವಸ್ಥಾನಗಳನ್ನು ಸುತ್ತುತ್ತಲೇ ಇರುತ್ತಾರೆ. ಸಾಯಿಬಾಬಾ ಅವರ ಪರಮ ಭಕ್ತೆಯೂ ಆಗಿರುವ ಸಾಯಿ ಪಲ್ಲವಿ ಇದೀಗ ತಂದೆ-ತಾಯಿ ಜೊತೆ ಅಮರನಾಥ ಯಾತ್ರೆ (Amarnath Yatra) ಕೈಗೊಂಡಿದ್ದರು. 60ರ ಆಸುಪಾಸಿನ ಪಾಲಕರೊಂದಿಗೆ ಅಮರನಾಥ ಯಾತ್ರೆ ಮುಗಿಸಿ, ಆ ಫೋಟೋ ಮತ್ತು ವಿಡಿಯೋಗಳನ್ನು ಅವರು ಶೇರ್ ಮಾಡಿದ್ದಾರೆ.
ಅಮ್ಮ ಅಪ್ಪನೊಂದಿಗೆ ಅಮರನಾಥ ಯಾತ್ರೆ ಮಾಡಿದ್ದು ಎಂದಿಗೂ ಮರೆಯದ ಅನುಭವ ನೀಡಿದೆ. ಅದನ್ನು ಪದಗಳಲ್ಲಿ ವರ್ಣಿಸುವುದಕ್ಕೆ ಆಗುವುದಿಲ್ಲ. ಇಂತಹ ಯಾತ್ರೆಯು ಸಾಧ್ಯವಾಗಿದ್ದು ತಂದೆ ತಾಯಿಗಳ ಆಶೀರ್ವಾದದಿಂದ ಎಂದು ಅವರು ಹೇಳಿಕೊಂಡಿದ್ದಾರೆ. ಯಾತ್ರೆಯ ಕೆಲವು ಅನುಭವಗಳನ್ನೂ ಅವರು ಹೇಳಿದ್ದಾರೆ. ಇದನ್ನೂ ಓದಿ:ರಿಷಬ್ ನಿರ್ಮಾಣದ ‘ಶಿವಮ್ಮ’ನಿಗೆ ಮತ್ತೆ ಅಂತಾರಾಷ್ಟ್ರೀಯ ಪ್ರಶಸ್ತಿ
ಇತ್ತೀಚಿನ ದಿನಗಳಲ್ಲಿ ಸಾಯಿ ಪಲ್ಲವಿ ಕಡಿಮೆ ಸಿನಿಮಾಗಳನ್ನು (Cinema) ಒಪ್ಪಿಕೊಳ್ಳುತ್ತಿದ್ದಾರೆ. ಪಾತ್ರಗಳ ಆಯ್ಕೆಯಲ್ಲಿ ತುಂಬಾನೇ ಕಾಳಜಿ ವಹಿಸುತ್ತಿದ್ದಾರೆ. ಅದಕ್ಕೆ ಕಾರಣ ಏನು ಎನ್ನುವುದನ್ನು ಈವರೆಗೂ ಅವರು ಹೇಳಿಕೊಂಡಿಲ್ಲ. ಅವರು ಸಿನಿಮಾ ರಂಗವನ್ನೇ ತೊರೆಯಲಿದ್ದಾರೆ ಎಂದು ಸುದ್ದಿಯಾಗಿತ್ತು. ಸಿನಿಮಾ ರಂಗದಿಂದ ದೂರವಾಗಿ ವೈದ್ಯ ವೃತ್ತಿಯನ್ನು ಮುಂದುವರೆಸಲಿದ್ದಾರೆ ಎಂದು ಅವರು ಆಪ್ತರು ಹೇಳಿಕೊಂಡಿದ್ದರು.
ಆದರೆ, ಸಾಯಿ ಪಲ್ಲವಿ ಮಾತ್ರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮುಂದಿನ ನಡೆಯುವನ್ನು ಗೌಪ್ಯವಾಗಿ ಇಟ್ಟುಕೊಂಡು ಬರುತ್ತಿದ್ದಾರೆ. ಹೆಚ್ಚೆಚ್ಚು ಸಿನಿಮಾಗಳನ್ನು ಒಪ್ಪಿಕೊಳ್ಳದೇ ಇರುವ ಕಾರಣಕ್ಕಾಗಿ ಈಗಲೂ ಅವರು ಸಿನಿಮಾ ರಂಗದಿಂದ ದೂರವಾಗುತ್ತಿದ್ದಾರೆ ಎಂದೇ ಹೇಳಲಾಗುತ್ತಿದೆ.
Web Stories