Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು

Cinema

‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು

Public TV
Last updated: July 20, 2022 12:03 pm
Public TV
Share
2 Min Read
Sri Sathya Sai Avthara movie 2
SHARE

ಕನ್ನಡ ಚಿತ್ರರಂಗದಲ್ಲಿ ಓಂ ಸಾಯಿಪ್ರಕಾಶ್ ತಾಯಿ ಸೆಂಟಿಮೆಂಟ್, ಅಣ್ಣ ತಂಗಿ ಸೆಂಟಿಮೆಂಟ್ ಚಿತ್ರಗಳ ನಿರ್ದೇಶಕ ಎಂದೇ ಹೆಸರಾದವರು. ಅವರೀಗ ತಮ್ಮ ನೂರನೇ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ದೇವಮಾನವ  ಪುಟ್ಟಪರ್ತಿ ಸಾಯಿಬಾಬಾ ಅವರ ಮಹಿಮೆಗಳನ್ನು ಹೇಳುವ  ಕಥಾಹಂದರ ಇಟ್ಟುಕೊಂಡು ಶ್ರೀ ಸತ್ಯಸಾಯಿ ಅವತಾರ ಎಂಬ ಹೆಸರಿನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.   ಸಾಯಿವೇದಿಕ್ ಫಿಲಂಸ್ ಮೂಲಕ ಡಾ.ದಾಮೋದರ್ ಅವರು‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದನ್ನೂ ಓದಿ:ಡಾ.ಪುನೀತ್ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ : ಅಪ್ಪು ಕುಟುಂಬಕ್ಕೆ ಆಹ್ವಾನ

Sri Sathya Sai Avthara movie 3

ಕಳೆದ ಸೋಮವಾರ ಸಂಜೆ ಕಲಾವಿದರ ಸಂಘದ ಆವರಣದಲ್ಲಿ  ಈ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನೆರವೇರಿತು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ , ಮಹರ್ಷಿ ಆನಂದ ಗುರೂಜಿ ಚಿತ್ರದ ಶೀರ್ಷಿಕೆ  ಅನಾವರಣಗೊಳಿಸಿದರು. ಸಾಯಿಗೋಲ್ಡ್ ಸರವಣ , ನಿರ್ಮಾಪಕ  ಡಾ.ದಾಮೋದರ್, ಹಿರಿಯ ಸಾಹಿತಿ ದೊಡ್ಡರಂಗೇಗೌಡರು, ಡಿಂಗ್ರಿ ನಾಗರಾಜ್, ಗಣೇಶರಾವ್ ಕೇಸರಕರ್ ಮುಂತಾದವರು ಸಮಾರಂಭದ ಮುಖ್ಯ ಆತಿಥಿಗಳಾಗಿ ಪಾಲ್ಗೊಂಡಿದ್ದರು.       ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಎಂ. ಕೃಷ್ಣ, ಈಗಾಗಲೇ  ಸಾಯಿಪ್ರಕಾಶ್ ಅವರು ಶಿರಡಿ ಸಾಯಿಬಾಬಾರ ಮೇಲೆ ಸಿನಿಮಾ ಮಾಡಿದ್ದಾರೆ. ಜೊತೆಗೆ ಅವರೇ ಬಾಬಾನಾಗಿಯೂ ಕಾಣಿಸಿಕೊಂಡಿದ್ದಾರೆ. ಈಗ ಪುಟ್ಟಪರ್ತಿ ಸಾಯಿಬಾಬಾ ಅವರ ಬಗ್ಗೆ ಚಿತ್ರ ಮಾಡಲು ಸಿದ್ದರಾಗಿದ್ದಾರೆ. ಅವರಿಗೆ ಸಾಯಿಬಾಬಾರ ಆಶೀರ್ವಾದ ವಿದೆ. ನಾನು ಕೂಡ ಹತ್ತಾರುಬಾರಿ ಪುಟ್ಟಪರ್ತಿ ಗೆ ಹೋಗಿ ಸತ್ಯಸಾಯಿಬಾಬಾರ ದರ್ಶನ ಮಾಡಿ ಆಶೀರ್ವಾದ ಪಡೆದಿದ್ದೇನೆ. ಎಂಥವರನ್ನಾದರೂ ಮಂತ್ರಮುಗ್ಧಗೊಳಿಸುವ ಶಕ್ತಿ ಅವರಲ್ಲಿತ್ತು. ಯಾವ ಸಿಎಂ ಎದುರಿಸದಂಥ ಕಷ್ಟಕಾರ್ಪಣ್ಯಗಳು ನನ್ನ ಕಾಲದಲ್ಲಿ  ಎದುರಾಗಿದ್ದವು. ರಾಜ್ ಕುಮಾರ್ ಅಪಹರಣ, ವೀರಪ್ಪನ್ ಪ್ರಕರಣ, ಕಾವೇರಿ ವಿವಾದ ಹೀಗೆ ಎಲ್ಲವೂ ನನಗೇ ಎದುರಾಗಿತ್ತು. ಅಂಥಾ ಸಂದರ್ಭದಲ್ಲಿ ನೀನು ಹೆದರಬೇಡ ಧೈರ್ಯದಿಂದ ಮುನ್ನಡೆ ಎಂದು ಅಭಯ ನೀಡಿದವರು ಈ ಸತ್ಯ ಸಾಯಿಬಾಬಾ. ಅವರಲ್ಲಿದ್ದ ಮ್ಯಾಗ್ನಟಿಕ್ ಪರ್ಸನಾಲಿಟಿ ಯಾರಿಗೂ ಬರುವುದಿಲ್ಕ. ಕೆಲವೇ ದೈವಾಂಶ ಸಂಭೂತರಿಗೆ ಮಾತ್ರ ಆ ಪವರ್ ಇರುತ್ತದೆ. ಅವರೊಬ್ಬ ಪ್ರವಾದಿಗಳು, ಅವರನ್ನು ನೋಡಿದ ಕೂಡಲೇ ನಮಗೊಂದು ಎನರ್ಜಿ ಬರುತ್ತದೆ. ಅಂಥಾ ಮಹಾತ್ಮರ ಸಿನಿಮಾವನ್ನು ದೊಡ್ಡ ಪ್ರಮಾಣದಲ್ಲಿ ಮಾಡಲು ಹೊರಟಿದ್ದಾರೆ. ಅವರಿಗೆ ಯಶಸ್ಸಾಗಲಿದೆ ಎಂದರು.

Sri Sathya Sai Avthara movie 1

ನಂತರ ಮಾತನಾಡಿದ ಮಹರ್ಷಿ ಆನಂದ ಗುರೂಜಿ ಸತ್ಯ ಸಾಯಿಬಾಬಾ ಅವರು  ದೈವಾಂಶ ಸಂಭೂತರು. ಒಬ್ಬ  ಸಿಎಂ ಮಾಡುವುದಕ್ಕಿಂತಲೂ ಹೆಚ್ಚಿನ  ಜನಸೇವಾ ಕಾರ್ಯಗಳನ್ನು ಅವರು  ಮಾಡಿದ್ದಾರೆ. ಜನರಿಗಾಗಿ ಅವರು ಕಟ್ಟಿಸಿರುವ ಆಸ್ಪತ್ರೆ, ವೈದ್ಯಕೀಯ ಸೇವೆ, ಹಸಿದು ಬಂದಂಥವರಿಗೆ ಅನ್ನ ನೀಡುವ ಕಾಯಕ ತುಂಬಾ ದೊಡ್ಡದು. ಬಾಬಾರವರು ಬೆಳೆದುಬಂದಂಥ ಹಾದಿಯನ್ನು ಬೆಳ್ಳಿ ತೆರೆಯ ಮೇಲೆ ತರಲು ಹೊರಟಿರುವ ಈ ನಿರ್ಮಾಪಕರಿಗೆ ಬಾಬಾನ ಆಶೀರ್ವಾದವಿದೆ. ನಾನು ೨೧ ವರ್ಷದವನಿದ್ದಾಗ ಅವರನ್ನು ನೋಡಲು ಹೋಗಿದ್ದೆ, ನನ್ನನ್ನು ನೋಡಿದಾಗ ನಮ್ಮಜೊತೆ ಬಂದುಬಿಡು ಎಂದು ಆಗಲೇ  ಹೇಳಿದ್ದರು. ಅವರ ಮಾತಿನ ಮಹಿಮೆ ಎಂಥಾದ್ದೆಂದು ನನಗೀಗ ಅರ್ಥವಾಗಿದೆ ಎಂದು ಹೇಳಿದರು. ಸಾಯಿಪ್ರಕಾಶ್ ನನಗೆ ಬಹಳ ಆತ್ಮೀಯರು, ಅವರಲ್ಲಿ ಒಳ್ಳೆಯ ಕವಿಯೂ ಇದ್ದಾರೆ. ಭಕ್ತಿ ಪ್ರದಾನ ಚಿತ್ರಗಳನ್ನು ತುಂಬಾ ಚೆನ್ನಾಗಿ ತೆಗೆಯುವ ಕಲೆ ಅವರಲಗಲಿದೆ ಎಂದು ಹಿರಿಯ ಸಾಹಿತಿ ದೊಡ್ಡರಂಗೇಗೌಡರು ಹೇಳಿದರು. ಜೆಜಿ ಕೃಷ್ಣ ಈ ಚಿತ್ರಕ್ಕೆ ಛಾಯಾಗ್ರಹಣ ನಿರ್ವಹಿಸುತ್ತಿದ್ದು, ಗಣೇಶ್ ನಾರಾಯಣ್ ಸಂಗೀತ ಸಂಗೀತ ನಿರ್ದೇಶನ‌ ಮಾಡುತ್ತಿದ್ದಾರೆ. ದೀಪು ಎಸ್. ಕುಮಾರ್ ಸಂಕಲನ ಚಿತ್ರಕ್ಕಿದ್ದು,  ಕಲಾವಿದರ ಆಯ್ಕೆಪ್ರಕ್ರಿಯೆ ಮುಗಿದ ನಂತರ ಚಿತ್ರೀಕರಣ ಪ್ರಾರಂಭಿಸುವ ಯೋಜನೆ ಚಿತ್ರ ತಂಡಕ್ಕಿದೆ.

Live Tv
[brid partner=56869869 player=32851 video=960834 autoplay=true]

TAGGED:ananda gurujiPuttaparthisai babaSai PrakashsandalwoodSri Sathya Sai Avthara movieಆನಂದ ಗುರೂಜಿಪುಟ್ಟಪರ್ತಿಸಾಯಿ ಪ್ರಕಾಶ್ಸಾಯಿಬಾಬಾಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

Pavithra Gowda 1
ಪವಿತ್ರಗೌಡಗೆ ಮನೆ ಊಟ ನಿರಾಕರಿಸಿದ್ದು ಒಳ್ಳೆಯದು – ಅಲೋಕ್ ಕುಮಾರ್
Cinema Districts Karnataka Latest Sandalwood Shivamogga States Top Stories
CM Siddaramaiah congratulates Gilli Nata on winning Kannada Bigg Boss
ಬಿಗ್‌ಬಾಸ್‌ ಗೆದ್ದ ಗಿಲ್ಲಿಯನ್ನು ಅಭಿನಂದಿಸಿದ ಸಿಎಂ
Bengaluru City Cinema Districts Karnataka Latest Top Stories TV Shows
Payal Changappa
ʻಅಮೃತ ಅಂಜನ್‌ʼ ಸಿನಿಮಾದ ಫೀಲಿಂಗ್‌ ಸಾಂಗ್‌ ರಿಲೀಸ್‌
Cinema Latest Sandalwood
Life Ellind Ellige
`ಲೈಫ್ ಎಲ್ಲಿಂದ ಎಲ್ಲಿಗೆ’ ಅಂತ ಹಾಡಿದ ಟೀಮ್
Cinema Latest Sandalwood Top Stories

You Might Also Like

delhi rain snowfall in kashmir
Latest

ದೆಹಲಿ ಸೇರಿ NCR ಪ್ರದೇಶದಾದ್ಯಂತ ಮಳೆ; ಕಾಶ್ಮೀರದಲ್ಲಿ ಹಿಮಪಾತ

Public TV
By Public TV
17 minutes ago
AIR INDIA
Latest

ಅಹಮದಾಬಾದ್ ವಿಮಾನ ದುರಂತ ಬಳಿಕ ಏರ್ ಇಂಡಿಯಾಗೆ 15,000 ಕೋಟಿ ರೂ. ನಷ್ಟ

Public TV
By Public TV
35 minutes ago
bengaluru auto driver
Bengaluru City

ಮಹಿಳೆ ಬಿಟ್ಟು ಹೋಗಿದ್ದ ಪರ್ಸ್, ಐಫೋನ್ ಮರಳಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

Public TV
By Public TV
46 minutes ago
Gold Silver
Bengaluru City

ಚಿನ್ನ, ಬೆಳ್ಳಿ ಪ್ರಿಯರಿಗೆ ಗುಡ್‌ನ್ಯೂಸ್ – ಒಂದೇ ದಿನ ದರದಲ್ಲಿ ಭಾರೀ ಇಳಿಕೆ

Public TV
By Public TV
53 minutes ago
Jharkhand Maoist Killed
Latest

ಜಾರ್ಖಂಡ್‌ನಲ್ಲಿ ತಲೆಗೆ 1 ಕೋಟಿ ಬಹುಮಾನ ಹೊಂದಿದ್ದ ಮಾವೋವಾದಿ ಸೇರಿ 15 ನಕ್ಸಲರ ಹತ್ಯೆ

Public TV
By Public TV
1 hour ago
Belagavi Murder
Belgaum

ಮದುವೆ ಆಗಿ 3 ವರ್ಷಗಳಾದ್ರೂ ಮಕ್ಕಳಾಗಿಲ್ಲವೆಂದು ಹೆಂಡ್ತಿ ಕಾಟ – ಕಿರಿಕಿರಿಗೆ ಬೇಸತ್ತು ಉಸಿರುಗಟ್ಟಿಸಿ ಹತ್ಯೆಗೈದ ಪಾಪಿ ಪತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?