ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಈಗಾಗಲೇ ಮುಂಬೈ ಪೊಲೀಸರು ಸಾಕಷ್ಟು ಭದ್ರತೆ ನೀಡಿದ್ದಾರೆ. ಸಲ್ಮಾನ್ ಖಾನ್, ಅವರ ನಿವಾಸ ಹಾಗೂ ಸಲ್ಮಾನ್ ತಂದೆಗೆ ಪ್ರತ್ಯೇಕ ಭದ್ರತೆಯನ್ನು ನೀಡಲಾಗಿದೆ. ಆದರೂ, ಅತ್ಯಾಧುನಿಕ ಬುಲೆಟ್ ಪ್ರೂಫ್ ಕಾರು (Bullet Proof Car) ಖರೀದಿಸಿ ಎಂದು ಸಲಹೆ ಬಂದ ಹಿನ್ನೆಲೆಯಲ್ಲಿ ಎಸ್ ಯುವಿ ನಿಸ್ಸಾನ್ ಕಾರನ್ನು ಸಲ್ಮಾನ್ ಖರೀದಿಸಿದ್ದಾರೆ. ಈ ಕಾರಿನ ಬೆಲೆ 5 ರಿಂದ 6 ಕೋಟಿ ಎಂದು ಅಂದಾಜಿಸಲಾಗಿದೆ.
- Advertisement 2
ಈಗಾಲೇ ಸಲ್ಮಾನ್ ಅವರ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಮುಂಬೈ ಪೊಲೀಸರು ಟೈಟ್ ಸೆಕ್ಯೂರಿಟಿ ನೀಡಿದ್ದಾರೆ. ರವಿವಾರದಿಂದ ಮನೆ ಸುತ್ತಮುತ್ತ ತಪಾಸಣೆ ಕಾರ್ಯವನ್ನೂ ಪೊಲೀಸರು ಆರಂಭಿಸಿದ್ದು, ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ತಿಳಿಸಿದ್ದಾರೆ. ಸಲ್ಮಾನ್ ಖಾನ್ ಅವರನ್ನು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಕೊಲ್ಲುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಕ್ರಮಗಳನ್ನು ತಗೆದುಕೊಳ್ಳಲು ಮುಂದಾಗಿದ್ದಾರೆ. ಇದನ್ನೂ ಓದಿ:ಸಿಡ್ನಿ ವರನ ಜೊತೆ ನಟಿ ಸುಕೃತಾ ನಾಗ್ ಮದುವೆ ಫಿಕ್ಸ್
- Advertisement 3
- Advertisement 4
ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ಸ್ಟರ್ (gangster) ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮತ್ತು ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan) ನಡುವಿನ ಕಾಳಗ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು (Death Threats) ಬಿಷ್ಣೋಯ್ ಮತ್ತು ಟೀಮ್ ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಈ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಸ್ವತಃ ಬಿಷ್ಣೋಯ್ ಜೈಲಿನಲ್ಲೇ ಇದ್ದಾನೆ. ಜೈಲಿನಿಂದಲೇ ಮತ್ತೆ ಸಲ್ಮಾನ್ ಬಗ್ಗೆ ಮಾತನಾಡಿದ್ದಾನೆ.
ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಅವನ ಈ ಮಾತು ಬಾಲಿವುಡ್ ನಲ್ಲಿ ಭಾರೀ ಆತಂಕ ಸೃಷ್ಟಿ ಮಾಡಿದೆ.
ಸಲ್ಮಾನ್ ಖಾನ್ ಜೀವ ಉಳಿಯಬೇಕು ಎಂದರೆ, ತನ್ನ ಮಾತನ್ನು ಕೇಳಲೇಬೇಕು ಎಂದು ಲಾರೆನ್ಸ್ ಹೇಳಿಕೊಂಡಿದ್ದಾನೆ. ಯಾವುದೋ ಜಾಗದಲ್ಲಿ ನಿಂತು ಕ್ಷಮೆ ಕೇಳಿದರೆ ನಾವು ಒಪ್ಪುವುದಿಲ್ಲ. ಬಿಕಾನೇರ್ ನಲ್ಲಿರುವ ಅವರ ದೇವಸ್ಥಾನಕ್ಕೆ ಹೋಗಿ ಕ್ಷಮೆ ಕೇಳಬೇಕು ಎಂದು ಲಾರೆನ್ಸ್ ಮಾತನಾಡಿದ್ದಾನೆ. ಸಲ್ಮಾನ್ ಖಾನ್ ಗೆ ತುಂಬಾ ಅಹಂ ಇದೆ. ಆ ನಟನಿಗೆ ಅಂಗರಕ್ಷಕರು ಇಲ್ಲದಿದ್ದರೆ ಇಷ್ಟೊತ್ತಿಗೆ ಪ್ರಾಣ ಹೋಗಿರುತ್ತಿತ್ತು ಎಂದಿದ್ದಾನೆ.