ಜೋಧಪುರ: ಕೃಷ್ಣಮೃಗ ಭೇಟೆಯಾಡಿದ ಪ್ರಕರಣದಲ್ಲಿ 5 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಸಲ್ಮಾನ್ ಖಾನ್ ಮೊದಲ ದಿನ ಯಾವುದೇ ಆಹಾರ ಸೇವಿಸಿಲ್ಲ ಎನ್ನುವ ಮಾಹಿತಿ ಸಿಕ್ಕಿದೆ.
ಜೈಲಿನ ಮೊದಲ ರಾತ್ರಿ ಊಟ ದಾಲ್ ರೋಟಿಯನ್ನು 52 ವರ್ಷದ ಸಲ್ಮಾನ್ ಖಾನ್ ನಿರಾಕರಿಸಿದ್ದಾರೆ. ಅಷ್ಟೇ ಅಲ್ಲದೇ ಹೊರಗಿನಿಂದಲೂ ಊಟವನ್ನು ತರಿಸಿಕೊಂಡಿರಲಿಲ್ಲ ಎಂದು ತಿಳಿದು ಬಂದಿದೆ.
ಜೈಲಿಗೆ ಬಂದಾಗ ಸಲ್ಮಾನ್ಗೆ ರಕ್ತದ ಒತ್ತಡ ಹೆಚ್ಚಾಗಿತ್ತು. ಸ್ವಲ್ಪ ಸಮಯದ ನಂತರ ದೇಹ ಸಹಜ ಸ್ಥಿತಿಗೆ ಮರಳಿತು ಎಂದು ವೈದ್ಯರು ತಿಳಿಸಿದ್ದಾರೆ ಎಂದು ಜೈಲಿನ ಅಧೀಕ್ಷಕ ವಿಕ್ರಮ್ ಸಿಂಗ್ ತಿಳಿಸಿದರು. ಇದನ್ನೂ ಓದಿ: ಕೋಟಿ ಕೋಟಿ ಲಾಸ್ – ಸಲ್ಮಾನ್ ಗೆ ಶಿಕ್ಷೆ ಪ್ರಕಟವಾಗ್ತಿದ್ದಂತೆ ಬಾಲಿವುಡ್ ನಿರ್ಮಾಪಕರ ಎದೆಯಲ್ಲಿ ಢವ ಢವ!
ಸಲ್ಮಾನ್ ಖಾನ್ ಅವರಿಗೆ ಜೈಲಿನಲ್ಲಿ ವಿಶೇಷ ಸೌಲಭ್ಯಗಳು ಸಿಗುವುದಿಲ್ಲ. ಅವರ ಕೋಣೆಯಲ್ಲಿ ಒಂದು ಮರದ ಮಂಚ, ಒಂದು ಕಂಬಳಿ, ಒಂದು ಕೂಲರ್ ಇರುತ್ತದೆ. ಜೈಲಿನ ಆಹಾರ ಪದ್ಧತಿಯಂತೆ ದಾಲ್, ಚಪಾತಿ ಇರಲಿದೆ. ಬೆಳಗಿನ ಊಟದಲ್ಲಿ ಕಿಚಡಿ ಇರಲಿದೆ ಎಂದು ಸಿಂಗ್ ತಿಳಿಸಿದ್ದಾರೆ.
ಇವತ್ತಿನಿಂದ ಕೆಲವು ಕೈದಿಗಳು ಜೊತೆ ಸಲ್ಮಾನ್ರನ್ನು ಇರಿಸಲಾಗುತ್ತದೆ. ಬೆದರಿಕೆ ಇರುವ ಹಿನ್ನೆಲೆಯಲ್ಲಿ ಒಂಟಿ ಎಂದು ಭಾವಿಸುವ ಅಗತ್ಯ ಇಲ್ಲ ಎಂದು ಸಿಂಗ್ ತಿಳಿಸಿದ್ದಾರೆ.
ಎರಡು ದಶಕಗಳ ಹಿಂದಿನ ಕೃಷ್ಣ ಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್ ಖಾನ್ಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು 10 ಸಾವಿರ ದಂಡವನ್ನು ವಿಧಿಸಿ ಜೋಧಪುರ ಸಿಜೆಎಂ ಕೋರ್ಟ್ ಶಿಕ್ಷೆಯನ್ನುನಿನ್ನೆ ಪ್ರಕಟಮಾಡಿತ್ತು.