Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮಾಜ್, ಪೂಜೆ ಮನೆಯಲ್ಲೇ ಮಾಡಿ: ಸಲ್ಮಾನ್ ಖಾನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಮಾಜ್, ಪೂಜೆ ಮನೆಯಲ್ಲೇ ಮಾಡಿ: ಸಲ್ಮಾನ್ ಖಾನ್

Cinema

ನಮಾಜ್, ಪೂಜೆ ಮನೆಯಲ್ಲೇ ಮಾಡಿ: ಸಲ್ಮಾನ್ ಖಾನ್

Public TV
Last updated: April 16, 2020 5:18 pm
Public TV
Share
3 Min Read
salman khan
SHARE

-ಕೊರೊನಾಗೆ ಜಾತಿ, ಧರ್ಮವಿಲ್ಲ

ನವದೆಹಲಿ: ಲಾಕ್‍ಡೌನ್ ಕುರಿತು ಬಾಲಿವುಡ್ ಭಾಯಿಜಾನ್ ಸಲ್ಮಾನ್ ಸಾಮಾಜಿಕ ಜಾಲತಾಣಗಳ ಮೂಲಕ ಆಗಾಗ ಎಚ್ಚರಿಸುತ್ತಿದ್ದು, ಸಾರ್ವಜನಿಕರು ಯಾವ ರೀತಿ ವರ್ತಿಸಬೇಕು ಎಂಬುದನ್ನು ಹೇಳುತ್ತಿದ್ದಾರೆ. ಈ ಕುರಿತು ಅವರದ್ದೇ ಉದಾಹರಣೆಯನ್ನು ನೀಡುತ್ತಿದ್ದು, ತಂದೆಯನ್ನು ನೋಡಲಿಕ್ಕಾಗದೆ ಪರಿತಪಿಸುತ್ತಿರುವ ಪರಿಯನ್ನು ಸಹ ವಿವರಿಸಿದ್ದಾರೆ. ಕೊರೊನಾ ವಾರಿಯರ್ಸ್ ನಮಗಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ ಗೌರವ ಕೊಡೋಣ, ಹಿಂದೂಸ್ಥಾನವನ್ನು ಕೊರೊನಾದಿಂದ ರಕ್ಷಿಸೋಣ ಎಂದು ಮನವಿ ಮಾಡಿದ್ದಾರೆ.

Salman Khan

ಹೌದು ಲಾಕ್‍ಡೌನ್ ಸಂದರ್ಭದಲ್ಲಿಯೂ ಹಗಲು ರಾತ್ರಿ ಎನ್ನದೆ ನಮಗಾಗಿ ದುಡಿಯುತ್ತಿರುವ ವೈದ್ಯರು, ಪೊಲೀಸರು, ನರ್ಸ್‍ಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ, ಕಲ್ಲು ತೂರುತ್ತಿದ್ದಾರೆ. ಈ ಕುರಿತು ಸಹ ಸಲ್ಮಾನ್ ಖಾನ್ ಬೇಸರ ವ್ಯಕ್ತಪಡಿಸಿದ್ದಾರೆ. ಇನ್‍ಸ್ಟಾಗ್ರಾಮ್‍ನಲ್ಲಿ ಈ ಕುರಿತು ಪೋಸ್ಟ್ ಮಾಡಿ ಕಿಕ್ ಸ್ಟಾರ್ ತರಾಟೆಗೆ ತೆಗೆದುಕೊಂಡಿದ್ದು, ಪರಿಸ್ಥಿತಿಯನ್ನು ಅರಿತು ಸಂಯಮದಿಂದ ವರ್ತಿಸಿ, ಮನೆಯಲ್ಲೇ ಇರಿ ಸುರಕ್ಷಿತವಾಗಿ ಎಂದು ಮನವಿ ಮಾಡಿದ್ದಾರೆ.

Salman Khan 1

ಇನ್‍ಸ್ಟಾಗ್ರಾಮ್‍ನಲ್ಲಿ ಸುದೀರ್ಘ ವಿಡಿಯೋ ಪೋಸ್ಟ್ ಮಾಡಿರುವ ಅವರು, ಕೊರೊನಾ ಸೋಂಕು ತಗುಲಿರಬಹುದು ಎಂದು ಆರೋಗ್ಯ ತಪಾಸಣೆ ಮಾಡಲು ಬಂದಿದ್ದ ವೈದ್ಯಕೀಯ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣದ ಕುರಿತು ಕಿಡಿಕಾರಿದ್ದಾರೆ. ಡಾಕ್ಟರ್ ಮತ್ತು ನರ್ಸ್‍ಗಳು ನಿಮ್ಮ ಪ್ರಾಣ ಉಳಿಸಲು ಬಂದಿದ್ದಾರೆ. ಅಂಥವರ ಮೇಲೆ ನೀವು ಕಲ್ಲು ತೂರುತ್ತೀರಿ, ಸೋಂಕು ತಗುಲಿಸಿಕೊಂಡವರು ಆಸ್ಪತ್ರೆಯಿಂದ ಓಡಿ ಹೋಗುತ್ತಿದ್ದೀರಿ. ಎಲ್ಲಿಗೆ ಓಡುತ್ತೀರಿ? ಜೀವನದ ಕಡೆಗೆ ಓಡುತ್ತೀರಾ ಅಥವಾ ಸಾವಿನ ಕಡೆಗೆ ಓಡುತ್ತೀರಾ? ಎಂದು ಸಲ್ಲು ಖಾರವಾಗಿ ಪ್ರಶ್ನಿಸಿದ್ದಾರೆ.

 

View this post on Instagram

 

A post shared by Salman Khan (@beingsalmankhan) on Apr 15, 2020 at 11:07am PDT

ಅಲ್ಲದೆ ಪೊಲೀಸರು, ವೈದ್ಯರಿಗೆ, ಬ್ಯಾಂಕ್‍ನಲ್ಲಿ ಕೆಲಸ ಮಾಡುವವರಿಗೆ ಕುಟುಂಬ, ಜೀವನ ಇಲ್ಲವೆಂದುಕೊಂಡಿದ್ದೀರಾ, ಅವರು ನಿಮಗಾಗಿ ಕೆಲಸ ಮಾಡುತ್ತಿದ್ದಾರೆ. ಅವರೊಂದಿಗೆ ಗೌರವದಿಂದ ನಡೆದುಕೊಳ್ಳಿ. ಇಲ್ಲವಾದಲ್ಲಿ ಪರಿಸ್ಥಿತಿ ಗಂಭೀರವಾಗುತ್ತದೆ ಎಂದು ಹೇಳಿದ್ದಾರೆ.

ನಮಾಜ್, ಪೂಜೆ ಮಾಡುವುದಿದ್ದರೆ ಮನೆಯಲ್ಲೇ ಮಾಡಿ, ದೇವರು ನಮ್ಮೊಳಗೆ ಇದ್ದಾನೆ ಎಂದು ಬಾಲ್ಯದಲ್ಲಿ ನಮಗೆ ಹೇಳಿಕೊಟ್ಟಿದ್ದಾರೆ. ಹೀಗಾಗಿ ಹೊರಗೆ ಹೋಗುವುದೇಕೆ? ನೀವು ಪರಿವಾರ ಸಮೇತರಾಗಿ ದೇವರ ಪಾದ ಸೇರಬೇಕೆಂದರೆ, ಅಲ್ಲಾನಲ್ಲಿಗೆ ತೆರಳಬೇಕೆಂದರೆ ಮನೆಯಿಂದ ಹೊರಗೆ ಬನ್ನಿ. ಎಲ್ಲರೂ ಸಾಯಲೇಬೇಕು, ಆದರೆ ಯಾರಾದರೂ ಈಗಲೇ ಸಾಯಲು ಬಯಸುತ್ತಾರಾ? ನೀವೆಲ್ಲ ಸತ್ತು, ದೇಶದ ಜನಸಂಖ್ಯೆ ಕಡಿಮೆ ಮಾಡಬೇಕು ಎಂದುಕೊಂಡಿದ್ದೀರಾ? ಆ ಕಾರ್ಯವನ್ನು ನಿಮ್ಮಿಂದ, ನಿಮ್ಮ ಕುಟುಂಬದಿಂದಲೇ ಆರಂಭಿಸಬೇಕು ಎಂದುಕೊಂಡಿದ್ದೀರಾ ಯೋಚಿಸಿ ಎಂದು ಕಟುವಾಗಿ ಹೇಳಿದ್ದಾರೆ.

Corona 1 1

ಅಗತ್ಯ ವಸ್ತುಗಳನ್ನು ಖರೀದಿಸಲು ಯಾರಿಗೂ ನಿರ್ಬಂಧ ಇಲ್ಲ. ಆದರೆ ಮಾಸ್ಕ್ ಧರಿಸಿ ಹೊರಗೆ ಹೋಗಿ, ಗುಂಪು ಸೇರಬೇಡಿ. ನಿಯಮ ಪಾಲಿಸಿದರೆ ಪೊಲೀಸರು ನಿಮ್ಮ ಮೇಲೆ ಲಾಠಿಯನ್ನೇಕೆ ಬೀಸುತ್ತಾರೆ, ಅವರೇನು ಮಜಾ ತೆಗೆದುಕೊಳ್ಳುತ್ತಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ ಸರ್ಕಾರ, ಪೊಲೀಸರು, ವೈದ್ಯರಿಗೆ ನಾವು ಸಹಕಾರ ನೀಡಬೇಕಿದೆ. ನಿಯನಮಗಳನ್ನು ಪಾಲಿಸಬೇಕಿದೆ. ಸರಿಯಾಗಿ ಲಾಕ್‍ಡೌನ್ ನಿಯಮ ಪಾಲಿಸಿದರೆ ಮಾತ್ರ ಇದು ಬೇಗ ಮುಕ್ತಾಯ ಆಗುತ್ತದೆ. ಇಲ್ಲದಿದ್ದರೆ ಹೀಗೆಯೇ ಮುಂದುವರಿಯುತ್ತದೆ. ನಿಮ್ಮಿಂದ ಇತರರಿಗೆ ವೈರಸ್ ಹರಡಿಸಬೇಡಿ ಎಂದಿದ್ದಾರೆ.

Coronavirus in India

ಈ ಹಿಂದೆ ಸಲ್ಲು ಭಾಯ್ ಬಾಲಿವುಡ್ ಸಿನಿಮಾ ಕಾರ್ಮಿಕರ ನೆರವಿಗೆ ನಿಂತಿದ್ದರು. ಸಾವಿರಾರು ಕುಟುಂಬಗಳಿಗೆ ಹಣ ನೀಡುವ ಮೂಲಕ ನೆರವಾಗಿದ್ದರು. ಈ ಮೂಲಕ ಇತರರಿಗೆ ಮಾದರಿಯಾಗಿದ್ದರು. ಅದೇ ರೀತಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಗೇಡಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ, ಎಚ್ಚರಿಸಿದ್ದಾರೆ.

salman khan 4 e1559795351909

ಎರಡು ದಿನಗಳ ರಜೆ ಕಳೆಯಲು ಸಲ್ಮಾನ್ ಖಾನ್ ಫಾರ್ಮ್‍ಹೌಸ್‍ಗೆ ಬಂದಿದ್ದರು. ಅಷ್ಟರಲ್ಲೇ ಲಾಕ್‍ಡೌನ್ ಘೋಷಣೆ ಆಯಿತು. ಹೀಗಾಗಿ ತಂದೆಯೊಬ್ಬರನ್ನೇ ಮನೆಯಲ್ಲಿ ಬಿಟ್ಟು ಅಲ್ಲಿಯೇ ಉಳಿದುಕೊಂಡರು. ಈ ಮೂಲಕ ಲಾಕ್‍ಡೌನ್ ನಿಯಮಗಳನ್ನು ಅವರು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಇತ್ತೀಚೆಗೆ ಅವರ ಸೋದರಳಿಯ ಅಬ್ದುಲ್ಲಾ ಖಾನ್ ನಿಧನರಾದರು. ಈ ವೇಳೆಯೂ ಸಲ್ಲು ಅಂತ್ಯಕ್ರಿಯೆಗೆ ಹೋಗಲಿಲ್ಲ. ಹೀಗಾಗಿ ಲಾಕ್‍ಡೌನ್ ನಿಯಮಗಳನ್ನು ಪಾಲಿಸುವ ಕುರಿತು ಇತರರಿಗೆ ಮಾದರಿಯಾಗಿದ್ದಾರೆ.

TAGGED:AwarenessCorona VirusLockdownPublic TVsalman khanಕೊರೊನಾ ವೈರಸ್ಜಾಗೃತಿಪಬ್ಲಿಕ್ ಟಿವಿಲಾಕ್‍ಡೌನ್ಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
2 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
3 hours ago
01 25
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-1

Public TV
By Public TV
3 hours ago
02 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-2

Public TV
By Public TV
3 hours ago
03 23
Big Bulletin

ಬಿಗ್‌ ಬುಲೆಟಿನ್‌ 30 April 2026 ಭಾಗ-3

Public TV
By Public TV
3 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?